ವಿಷಯಕ್ಕೆ ಹೋಗಿ

ಹುಳಿಯಾರು : ಮಾತಿನಚಕಮಕಿಯಲ್ಲೇ ನಡೆದ ಗ್ರಾಮ ಸಭೆ

         ಗ್ರಾ.ಪಂ.ಗೆ ಅಂಟಿದ ಶಾಪವೇನೋ ಎಂಬಂತೆ ಇಲ್ಲಿ ನಡೆಯುವ ಯಾವುದೇ ಸಭೆಗಳು ಎಂದೂ ಶಾಂತ ರೀತಿಯಲ್ಲಿ ನಡೆಯುವುದಿಲ್ಲ. ಅದೇ ರೀತಿ ಮಂಗಳವಾರದಂದು ಪಂಚಾಯ್ತಿ ಆವರಣದಲ್ಲಿ ನಡೆದ ಗ್ರಾಮಸಭೆಯೂ ಕೂಡ ಇದಕ್ಕೆ ಹೊರತಾಗದೆ ಗಲಾಟೆ,ಗದ್ದಲ ಮಾತಿನಚಕಮಕಿಯಲ್ಲೇ ನಡೆದಿದ್ದು ಇದಕ್ಕೆ ಇಂಬು ನೀಡುವಂತಿತ್ತು.
ಹುಳಿಯಾರು ಗ್ರಾ.ಪಂ ಗ್ರಾಮಸಭೆಯಲ್ಲಿ ಪಿಡಿಓ ಹಾಗೂ ಗ್ರಾ.ಪಂ.ಸದಸ್ಯರ ನಡುವೆ ಮಾತಿನಜಟಾಪಟಿ ನಡೆಯಿತು.
           2014-15 ನೇ ಸಾಲಿನ ಇಂದಿರಾ ಅವಾಸ್ ವಸತಿ ಯೋಜನೆಯಡಿ ಮಂಜೂರಾಗಿದ್ದ ಒಟ್ಟು 26 ಮನೆಗಳಲ್ಲಿ ಎಸ್.ಸಿ-8 , ಎಸ್.ಟಿ-3, ಅಲ್ಪಸಂಖ್ಯಾತರಿಗೆ-5, ಇತರೆ ವರ್ಗದವರಿಗೆ-10 ಮನೆಗಳ ಹಂಚಿಕೆ ಮಾಡಲು ಅರ್ಹ ಫಲಾನುಭವಿಗಳನ್ನು ಗುರ್ತಿಸುವ ನಿಟ್ಟಿನಲ್ಲಿ ಗ್ರಾಮಸಭೆ ಆಯೋಜಿಸಲಾಗಿತ್ತು. ಪ್ರಾರಂಭದಲ್ಲೇ ಆಹ್ವಾನಿತ ಇಲಾಖೆ ಅಧಿಕಾರಿಗಳು ಗೊತ್ತು ಪಡಿಸಿದ ಸಮಯಕ್ಕೆ ಬಂದಿಲ್ಲ ಎಂದು ಪ್ರಾರಂಭವಾದ ಗದ್ದಲ ಅಂತ್ಯದವರೆಗೂ ಒಂದಲ್ಲ ಒಂದು ಕಾರಣಕ್ಕೆ ಕೂಗಾಟದಲ್ಲೇ ಕೊನೆಗೊಂಡಿತು.
          ನಿಗದಿತ ಸಮಯಕ್ಕೆ ಬಾರದ ಅಧಿಕಾರಿಗಳ ಬಗ್ಗೆ ಗ್ರಾ.ಪಂ.ಸದಸ್ಯರುಗಳು ಗರಂ ಆಗಿ ಇಲಾಖೆ ಅಧಿಕಾರಿಗಳು ಬರುವವರೆಗೂ ಸಭೆ ಮಾಡದಂತೆ ಪಟ್ಟು ಹಿಡಿದಿದ್ದರು. ನಂತರ ಒಂದುಗಂಟೆ ತಡವಾಗಿ ಆಗಮಿಸಿದ ನೋಡಲ್ ಅಧಿಕಾರಿ ರಾಜೇಂದ್ರ ಅವರನ್ನು ಪ್ರಶ್ನಿಸಲು ಮುಂದಾದರು.
          ಸಮಸ್ಯೆಯಲ್ಲೇ ಶುರುವಾರ ಸಭೆ : ನಿಗದಿಯಂತೆ ಆಗಮಿಸಬೇಕಾಗಿದ್ದ ನೋಡಲ್ ಅಧಿಕಾರಿ ಗೈರು ಹಾಜರಿಯಲ್ಲಿ ಆಗಮಿಸಿದ ಬೇರೊಬ್ಬ ನೋಡಲ್ ಅಧಿಕಾರಿ ರಾಜೇಂದ್ರ ಅವರನ್ನು ಗ್ರಾ.ಪಂ.ಸದಸ್ಯರುಗಳು ಪ್ರಶ್ನಿಸಲು ಮುಂದಾದರು. ನಂತರ ಕರ್ಕಶವಾದ ಮೈಕ್ ಬಗ್ಗೆ ತರಾಟೆಗೆ ತೆಗೆದುಕೊಂಡು ಬೇರೆ ಮೈಕ್ ತಂದು ಹಾಕಿ ಸಭೆ ಮುಂದುವರಿಸಿ ಎಂದಿದ್ದರಿಂದ ಸಭೆ ಮುಂದುವರಿಸಲು ಕೆಲ ಕಾಲ ತಡವಾಯಿತು.
         ಆಯ್ಕೆ ಸಮಂಜಸವಾಗಿಲ್ಲ : ಪಂಚಾಯ್ತಿಯ ಹತ್ತನೇ ವಾರ್ಡ್ ನಲ್ಲಿ ಫಲಾನುಭವಿಗಳ ಆಯ್ಕೆ ಸಮಂಜಸವಾಗಿಲ್ಲ ಅರ್ಜಿ ಕೊಟ್ಟವರ ಬಗ್ಗೆ ಸರಿಯಾಗಿ ಪರಿಶೀಲಿಸದೆ, ಎಲ್ಲೋಕುಳಿತು ಫಲಾನುಭವಿಗಳ ಆಯ್ಕೆ ಮಾಡಿದ್ದಾರೆಂದು ಪ್ರಸನ್ನಕುಮಾರ್, ಮೋಹನ್ ಕುಮಾರ್ ರೈ ಪ್ರತಿಭಟಿಸಿ, ಮಾತಿನಚಕಮಕಿಗೆ ಮುಂದಾಗಿದ್ದರಿಂದ ಪೋಲಿಸರು ಮಧ್ಯೆ ಪ್ರವೇಶಿಸುವಂತಾಯಿತು. ಕೆಲವೊಂದು ವಾರ್ಡ್ ಸದಸ್ಯರುಗಳಲ್ಲಿ ತಾವು ಹೇಳಿದವರಿಗೆ ಕೊಡಬೇಕೆಂದು ಪಟ್ಟು ಹಿಡಿದಿದ್ದರಿಂದ ಸಭೆಯಲ್ಲಿ ಗೊಂದಲ ಉಂಟಾಗಿತ್ತು. ಅರ್ಹ ಫಲಾನುಭವಿಗಳನ್ನು ಸರಿಯಾಗಿ ಗುರ್ತಿಸದೆ ತಮಗೆ ಬೇಕಾದವರಿಗೆ ಕೊಡಮಾಡಿದ್ದಾರೆಂಬ ಮಾತು ಕೇಳಿಬಂತು.
          ಹಾಜರಿಲ್ಲದ ಜನಪ್ರತಿನಿಧಿಗಳು : ಶಿಷ್ಟಾಚಾರಪಾಲನೆಗೋಸ್ಕರ ಆಹ್ವಾನ ಪತ್ರಿಕೆಯಲ್ಲಿ ಅಚ್ಚಾಗಿದ್ದ ಸಂಸದರಾಗಲಿ, ಶಾಸಕರಾಗಲಿ, ವಿಧಾನಪರಿಷತ್ ಸದಸ್ಯರಾಗಲಿ, ತಾ.ಪಂ.ಅಧ್ಯಕ್ಷರು ಮತ್ತು ಉಪಾಧ್ಯಕ್ಷರಾಗಲಿ ಹಾಗೂ ಕಾರ್ಯನಿರ್ವಹಣ ಅಧಿಕಾರಿಗಳಾಗಲಿ ಹಾಜರಿರಲಿಲ್ಲ. ಕೇವಲ ಗ್ರಾ.ಪಂ ಸದಸ್ಯರುಗಳು ಮಾತ್ರ ಹಾಜರಿದ್ದರು.
ಪ್ರಾರಂಭದಿಂದ ಅಂತ್ಯದವರೆಗೆ ಇಡಿ ಸಭೆ ಗದ್ದಲ , ಕೂಗಾಟಗಳ ನಡುವೆಯೇ ನಡೆದಿದ್ದು ವಿಪರ್ಯಾಸ. ಫಲಾನುಭವಿಗಳಿಗಿಂತ ಗ್ರಾ.ಪಂ.ಸದಸ್ಯರ ನಡುವೆಯೇ ಮಾತಿನಚಕಮಕಿ ನಡೆದಿದ್ದು ಅವ್ಯಾಹತವಾಗಿ ಗ್ರಾ.ಪಂ.ಸದಸ್ಯರುಗಳೇ ಪರಸ್ಪರ ಮಾತಿನ ಚಕಮಕಿ ನಡೆಸಿದರು.
ಪ್ರತಿ ಬಾರಿ ಎಂಬಂತೆ ಈ ಬಾರಿಯೂ ಸಹ ಸಾರ್ವಜನಿಕರ ಉಪಸ್ಥಿತಿ ಮಾತ್ರ ವಿರಳವಾಗಿತ್ತು. ಇದಕ್ಕೆ ಪ್ರಚಾರದ ಕೊರತೆಯೊ, ಜನರಲ್ಲಿ ಗ್ರಾಮಸಭೆಯ ಬಗ್ಗೆ ಇರುವ ಅಸಮಾದಾನವೋ ಎಂಬುದು ಯಕ್ಷಪ್ರಶ್ನೆಯಾಗಿದೆ.
          ಗ್ರಾ.ಪಂ.ಅಧ್ಯಕ್ಷೆ ಕಾಳಮ್ಮ ಸಭೆಯ ಅಧ್ಯಕ್ಷತೆವಹಿಸಿದ್ದು , ಜಿ.ಪಂ.ಸದಸ್ಯೆ ಮಂಜುಳಾ, ತಾ.ಪಂ.ಸದಸ್ಯೆ ಬೀಬಿಫಾತಿಮಾ, ನೋಡೆಲ್ ಅಧಿಕಾರಿ ರಾಜೇಂದ್ರ, ತಾ.ಪಂ.ಸಹಾಯಕ ನಿರ್ದೇಶಕ ರವೀಂದ್ರಕುಮಾರ್, ಗ್ರಾ.ಪಂ.ಉಪಾಧ್ಯಕ್ಷೆ ಅಬಿದುನ್ನಿಸಾ, ಸದಸ್ಯರಾದ ಅಶೋಕ್ ಬಾಬು,ಧನುಷ್ ರಂಗನಾಥ್,ಜಹೀರ್ ಸಾಬ್,ಸೈಯ್ಯದ್ ಅನ್ಸರ್ ಅಲಿ, ಭೈರೇಶ್, ಗೀತಾಬಾಬು,ರಾಘವೇಂದ್ರ, ಹೇಮಂತ್, ವೆಂಕಟಮ್ಮ, ಗಂಗಾಧರರಾವ್,ಬಾಲಣ್ಣ,ಬಡ್ಡಿಪುಟ್ಟಣ್ಣ,ಪಟಾಕಿಶಿವಣ್ಣ,ಡಿಶ್ ಬಾಬು,ಸಿದ್ದಗಂಗಮ್ಮ ಸೇರಿದಂತೆ ಇತರ ಸದಸ್ಯರು ಉಪಸ್ಥಿತರಿದ್ದರು.
---------------------------------------
ಹುಳಿಯಾರು ಗ್ರಾ.ಪಂ. ಸಭೆಯ ಕೆಲವು ಚಿತ್ರಗಳು






















         ಹತ್ತನೇ ವಾರ್ಡ್ ಸಭೆ ಸರಿಯಾಗಿ ನಡೆಸದೆ ಅವೈಜ್ಞಾನಿಕವಾಗಿ ಫಲಾನುಭವಿಸಗಳ ಆಯ್ಕೆ ನಡೆಸಿದ್ದು ಈ ಬಗ್ಗೆ ತಾ.ಪಂ. ಕಾರ್ಯನಿರ್ವಹಣಾಧಿಕಾರಿಯವರಿಗೆ ದೂರು ಸಲ್ಲಿಸಲಿದ್ದೇನೆ : ಪ್ರಸನ್ನ ಕುಮಾರ್.
ಇಂದಿರಾ ಅವಾಸ್ ಯೋಜನೆಯಡಿ ಮಂಜೂರಾಗಿದ್ದ 26 ವಸತಿ ಮನೆಗಳಿಗೆ ಅರ್ಹ ಫಲಾನುಭವಿಗಳ ಆಯ್ಕೆಗಾಗಿ ಇಂದು ಗ್ರಾಮ ಸಭೆ ಕರೆಯಲಾಗಿದ್ದು ಮೀಸಲು ಅನುಗುಣವಾಗಿ ಫಲಾನುಭವಿ ಆಯ್ಕೆ ಮಾಡಲಾಗಿದೆ .ಎಲ್ಲಾ ಅರ್ಜಿದಾರರ ಬಗ್ಗೆ ಸ್ಥಳದಲ್ಲೇ ಪರಿಶಿಲನೆ ಮಾಡಿ ಅರ್ಹರನ್ನು ಗುರ್ತಿಸಲಾಗಿದೆ : ಪಿಡಿಓ ಅಡವೀಶ್ ಕುಮಾರ್.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...