ವಿಷಯಕ್ಕೆ ಹೋಗಿ

ಹುಳಿಯಾರು : ಮೋದಿ ಭಾಷಣ ಕೇಳಿದ ವಿದ್ಯಾರ್ಥಿಗಳು

             ಶಿಕ್ಷಕರ ದಿನಾಚರಣೆ ಪ್ರಯುಕ್ತ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೇಶದ ಮಕ್ಕಳನ್ನು ಉದ್ದೇಶಿಸಿ ಮಾಡಿದ ಭಾಷಣದ ನೇರಪ್ರಸಾವನ್ನು ಹುಳಿಯಾರು-ಕೆಂಕೆರೆ ಸರ್ಕಾರಿ ಪ್ರೌಢಶಾಲೆಯ ನೂರಾರು ವಿದ್ಯಾರ್ಥಿಗಳು ಶುಕ್ರವಾರ ಮಧ್ಯಾಹ್ನ ನಿಶಬ್ದವಾಗಿ ವೀಕ್ಷಿಸಿದರು.
ಹುಳಿಯಾರು-ಕೆಂಕೆರೆ ಸರ್ಕಾರಿ ಪ್ರೌಢಶಾಲೆಯಲ್ಲಿ ಪ್ರಧಾನಿಯವರ ಭಾಷಣ ವೀಕ್ಷಿಸುತ್ತಿರುವ ಶಾಲಾ ಮಕ್ಕಳು.
             ದೆಹಲಿಯ ಮಾಣಿಕ್ ಷಾ ಸಭಾಂಗಣದಲ್ಲಿ ನಡೆದ ಮೋದಿ ಭಾಷಣವನ್ನು ಟಿ.ವಿಯ ಮೂಲಕ ವೀಕ್ಷಿಸಲು ಹಾಗೂ ಧ್ವನಿವರ್ಧಕದಲ್ಲಿ ಆಲಿಸಲು ಈ ಶಾಲೆಯಲ್ಲಿ ಅಚ್ಚುಕಟ್ಟಾದ ವ್ಯವಸ್ಥೆ ಮಾಡಲಾಗಿತ್ತು. ಶಾಲೆಯ ಒಳಗಡೆ ಅಷ್ಟು ಮಕ್ಕಳನ್ನು ಕೂರಿಸಲು ಸ್ಥಳಾವಕಾಶ ಲಭ್ಯವಿಲ್ಲದಿದ್ದರಿಂದ ಎಲ್ಲಾ ಮಕ್ಕಳನ್ನು ಶಾಲಾ ಮೈದಾನದಲ್ಲಿ ಒಂದೆಡೆ ಕೂರಿಸಿ ಪ್ರಧಾನಿಯವರ ಭಾಷಣ ವೀಕ್ಷಿಸುವಂತೆ ವ್ಯವಸ್ಥೆ ಮಾಡಲಾಗಿತ್ತು. ಭಾಷಣದ ನೇರಪ್ರಸಾರದ ವ್ಯವಸ್ಥೆ ಮಾಡುವಂತೆ ಶಿಕ್ಷಣ ಇಲಾಖೆಯಿಂದ ಸುತ್ತೋಲೆ ಬಂದಿದ್ದರಿಂದ ಮುಂಚಿತವಾಗಿಯೇ ಶಿಕ್ಷಕರು ಈ ಬಗ್ಗೆ ವ್ಯವಸ್ಥೆ ಮಾಡಿಕೊಂಡಿದ್ದರು.
              ಟಿ.ವಿ, ಬ್ಯಾಟರಿ ಹಾಗೂ ಸಂಪರ್ಕಕ್ಕಾಗಿ ಡಿಶ್ ನೆಟ್ ವರ್ಕನ್ನು ಬಾಡಿಗೆ ತಂದಿದ್ದಲ್ಲದೆ , ಎಲ್ಲಾ ಮಕ್ಕಳಿಗೆ ಕೇಳಿಸಲು ಅನುವು ಮಾಡಿಕೊಡಲು ಧ್ವನಿವರ್ಧಕದ ವ್ಯವಸ್ಥೆ ಕೂಡ ಕಲ್ಪಿಸಲಾಗಿತ್ತು. ಮಕ್ಕಳು ಆಸಕ್ತಿಯಿಂದ ಮೋದಿ ಭಾಷಣ ಕೇಳಿದ್ದು ಶಿಕ್ಷಕರ ಈ ಶ್ರಮ ಸಾರ್ಥಕವಾಯಿತು.
         ಶಾಲೆಗೆ ರಜೆ : ಶಿಕ್ಷಕರ ದಿನಾಚರಣೆ ಪ್ರಯುಕ್ತ ಹೆಚ್ಚಿನ ಶಿಕ್ಷಕರು ತಾಲ್ಲೂಕಿನಲ್ಲಿ ನಡೆಯುವ ಸಮಾರಂಭಕ್ಕೆ ತೆರಳ ಬೇಕಾದ್ದರಿಂದ ಹೆಚ್ಚಿನ ಶಾಲೆಗಳು ಇಂದು ರಜೆ ಘೋಷಿಸಿದ್ದವು. ಈ ಬಗ್ಗೆ ಮುಖ್ಯ ಶಿಕ್ಷಕರನ್ನು ಸಂಪರ್ಕಿಸಿದಾಗ ಪ್ರಧಾನಿಯವರ ಭಾಷಣ ನೇರಪ್ರಸಾರಕ್ಕೆ ವ್ಯವಸ್ಥೆ ಮಾಡಬೇಕೆಂದು ಸೂಚನೆ ಬಂದಿತ್ತು , ಆದರೆ ವ್ಯವಸ್ಥೆ ಕಡ್ಡಾಯವಲ್ಲ ಎಂದು ತಿಳಿಸಿದ್ದರಿಂದ ಹಾಗೂ ಶಾಲೆಗಳಲ್ಲಿ ಈ ಬಗ್ಗೆ ಸೂಕ್ತ ವ್ಯವಸ್ಥೆಯಿಲ್ಲವಾದ್ದರಿಂದ ನೇರಪ್ರಸಾರ ಕಲ್ಪಿಸಲು ಸಾಧ್ಯವಾಗಿಲ್ಲ , ಹಾಗಿದ್ದು ಕೂಡ ಪ್ರಧಾನಿಯವರ ಪ್ರಸಾರದ ನಾಳೆಯ ದಿನ ವಿದ್ಯಾರ್ಥಿಗಳು ವೀಕ್ಷಿಸಲು ಅನುವು ಮಾಡಿಕೊಡುತ್ತೇವೆ ಎಂದರು.
ತೊಡಕು : ಮೋದಿ ಭಾಷಣವನ್ನು ಶಾಲಾಮಕ್ಕಳಿಗೆ ತೋರಿಸಬೇಕೆನ್ನುವ ಉದ್ದೇಶದಿಂದ ಅದಕ್ಕೆ ಬೇಕಾದ ಟಿ.ವಿ, ಕೇಬಲ್ , ಸ್ವೀಕರ್ ಸೇರಿದಂತೆ ಇನ್ನಿತರ ಪರಿಕರಗಳ ವ್ಯವಸ್ಥೆಯನ್ನು ಹೋಬಳಿಯ ಕೆಲ ಶಾಲೆಗಳಲ್ಲಿ ಒಂದು ದಿನ ಮುಂಚಿತವಾಗಿಯೇ ಮಾಡಿಕೊಂಡರೆ, ಮತ್ತೆಕೆಲ ಶಾಲೆಗಳಲ್ಲಿ ಶುಕ್ರವಾರ ಬೆಳಿಗ್ಗೆ ತರಾತುರಿಯಲ್ಲಿ ಪರಿಕರಗಳನ್ನು ವ್ಯವಸ್ಥೆ ಮಾಡಿಕೊಂಡು ಮಧ್ಯಾಹ್ನ ಪ್ರಾರಂಭವಾದ ಮೋದಿ ಭಾಷಣವನ್ನು ಶಾಲಾಮಕ್ಕಳಿಗೆ ತೋರಿಸಲಾಯಿತು.
ಗ್ರಾಮೀಣ ಭಾಗದ ಮಕ್ಕಳಿಗೆ ಹಿಂದೆ ಭಾಷೆ ಅರ್ಥವಾಗದೆ ಇದ್ದುದ್ದು ಪ್ರಧಾನಿಯವರ ಮಾತಿನ ಅರ್ಥ ಗ್ರಹಿಸಲು ಸಾಧ್ಯವಾಗಲಿಲ್ಲ. ನೇರಪ್ರಸಾರವಾದ್ದರಿಂದ ಅದರ ಭಾಷಾನುವಾದ ಕೂಡ ಮಾಡಲಾಗದೆ , ವೀಕ್ಷಿಸಿದ ವಿದ್ಯಾರ್ಥಿಗಳಿಂದ ಯಾವುದೇ ಪ್ರತಿಕ್ರಿಯೆ ಕಂಡುಬರಲಿಲ್ಲ.
--------------------

        ಪ್ರಧಾನಿಯವರೆಂದರೆ ಏನೋ ಎಂಬ ಭಾವವಿದ್ದ ಮಕ್ಕಳಿಗೆ ಇಂದು ಪ್ರಧಾನಿಯವರು ಮಕ್ಕಳೊಡನೆ ಮಾಡಿದ ಸಮಾಲೋಚನೆ ವೀಕ್ಷಿಸಿದ್ದರಿಂದ ಮುಂದೊಂದು ದಿನ ಎಲ್ಲ ಮಕ್ಕಳು ಸಹ ಪ್ರಧಾನಿಗಳೊಡನೆ ಸಂವಾದಿಸಬಹುದೆಂಬ ಆತ್ಮವಿಶ್ವಾಸ ಬಂದಂತಾಗಿದೆ : ವಿದ್ಯಾಕುಂಚನೂರು ವಿಜ್ಞಾನಶಿಕ್ಷಕಿ.
ಪ್ರಧಾನಿಯವರ ಮಾತು ಖುಷಿತಂತು ಆದರೆ ಹಿಂದಿಯಲ್ಲಿ ಮತಾಡಿದ್ದರಿಂದ ಏನು ಅರ್ಥವಾಗಲಿಲ್ಲ , ಪ್ರಧಾನಿಯವರ್ ಮಾತಿನ ದಾಟಿ, ಹಾವಭಾವ ಇದೇ ಮೊದಲ ಬಾರಿಗೆ ನೋಡಿದ್ದಂತಾಯಿತು. ಕನ್ನಡಲ್ಲಿ ಅನುವಾದ ಮಾಡಿದ್ದರೆ ಹೆಚ್ಚಿನ ಮಾಹಿತಿ ತಿಳಿಯುತ್ತಿತ್ತು : ಪ್ರವೀಣ್ , ಹತ್ತನೇತರಗತಿ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್...

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...