ವಿಷಯಕ್ಕೆ ಹೋಗಿ

ಭಾರತ ಹಿಂದೂ ಸಂಸ್ಕೃತಿಯ ಪ್ರತೀಕ : ಕೆ.ಎಸ್.ಕೆ

 ಪ್ರಚಂಚದ ಇನ್ನಿತರ ರಾಷ್ಟ್ರಗಳಿಗೆ ಹೋಲಿಸಿದರೆ ಹಿಂದೂ ಸಂಸ್ಕೃತಿಯ ಆಚಾರ, ವಿಚಾರಗಳು ವೈಭವಯುತವಾಗಿದ್ದು ಎಲ್ಲರನ್ನು ತಮ್ಮತ್ತ ಆಕರ್ಷಿಸುತ್ತವೆ. ಆ ನಿಟ್ಟಿನಲ್ಲಿ ನಮ್ಮ ಭಾರತ ದೇಶ ಹಿಂದೂ ಸಂಸ್ಕೃತಿಯ ಪ್ರತೀಕವಾಗಿದೆ ಎಂದು ಮಾಜಿ ಶಾಸಕ ಕೆ.ಎಸ್.ಕಿರಣ್ ಕುಮಾರ್ ತಿಳಿಸಿದರು.
ಹುಳಿಯಾರಿನ ಹಿಂದೂ ಜಾಗೃತ ಛಾರಿಟಬಲ್ ಟ್ರಸ್ಟ್ ವತಿಯಿಂದ ಪಟ್ಟಣದ ಶ್ರೀಬನಶಂಕರಿ ದೇವಾಲಯದಲ್ಲಿ ಬುಧವಾರ ಪ್ರಾರಂಭವಾದ ಸಂಗೀತ ಶಾಲೆಯ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
ಹುಳಿಯಾರಿನ ಹಿಂದೂ ಜಾಗೃತ ಛಾರಿಟಬಲ್ ಟ್ರಸ್ಟ್ ವತಿಯಿಂದ ಬನಶಂಕರಿ ದೇವಾಲಯದಲ್ಲಿ ಪ್ರಾರಂಭವಾದ ಸಂಗೀತ ಶಾಲೆಯನ್ನು ಮಾಜಿಶಾಸಕ ಕೆ.ಎಸ್.ಕಿರಣ್ ಕುಮಾರ್ ಉದ್ಘಾಟಿಸಿ ಮಾತನಾಡಿದರು.
ಹುಳಿಯಾರು ಭಾಗಕ್ಕೆ ಇಂತಹ ಸಂಗೀತ ಶಾಲೆಯ ಅವಶ್ಯಕತೆಯಿದ್ದು ಅದೀಗ ಈಡೇರಿರುವುದು ಹರ್ಷದಾಯಕವಾಗಿದ್ದು,ಸಂಗೀತ ಶಾಲೆಗೆ ನನ್ನಿಂದ ಎಲ್ಲಾ ರೀತಿಯ ಬೆಂಬಲ ನೀಡಲಾಗುವುದೆಂದ ಅವರು ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಸೇರುವ ಮೂಲಕ ಸಂಗೀತಾಭ್ಯಾಸದಲ್ಲಿ ತೊಡಗುವಂತೆ ತಿಳಿಸಿದರು. ಸಂಗೀತ ಎಂಬುದು ಮನಸ್ಸಿಗೆ ಮುದುನೀಡುವಂತದ್ದಾಗಿದ್ದು, ನಿರಾಶಾದಾಯಕರಾದವರನ್ನು ಜಾಗೃತ ಮಾಡುವಂತಹ ಗುಣ ಸಂಗೀತಕ್ಕಿದ್ದು, ಇದರ ಆಸ್ವಾದನೆಗೆ ಯಾವುದೇ ವಯಸ್ಸಿನ ಅಂತರವಿರುವುದಿಲ್ಲ, ಎಲ್ಲಾ ವಯೋಮಾನದವರು ಸಂಗೀತ ಕಲಿಯಬಹುದಾಗಿದೆ ಎಂದರು.
ಹಿಂದೂಗಳೇ ಜಾಗೃತರಾಗಿ : ಹಿಂದೂ ಧರ್ಮದಲ್ಲಿ ಅನೇಕ ಸಮುದಾಯದವರಿದ್ದು ಇಂದು ತಂತಮ್ಮ ಸಮುದಾಯದಲ್ಲೇ ಗೊಂದಲಗಳನ್ನು ಸೃಷ್ಠಿಸಿಕೊಂಡು ಹಿಂದೂಧರ್ಮದ ಒಗ್ಗಟ್ಟು ಕ್ಷೀಣಿಸುವಂತಾಗುತ್ತಿದೆ. ಇದೇ ರೀತಿ ಮುಂದುವರೆದರೆ ಇತರ ಧರ್ಮದವರಿಂದ ನಾವು ತುಳಿತಕ್ಕೊಳಗಾಗಬೇಕಾಗುತ್ತದೆ. ಹಿಂದೂ ಧರ್ಮದ ಅಭಿವೃದ್ದಿಯ ನಿಟ್ಟಿನಲ್ಲಿ ಹಿಂದುಗಳಲ್ಲಿ ಜಾಗೃತಿಯನ್ನುಂಟುಮಾಡುವ ಕಾರ್ಯವಾಗಬೇಕಿದೆ. ಇಂತಹ ಕಾರ್ಯ ಮಾಡಲು ಪಟ್ಟಣದಲ್ಲಿ ಹಿಂದೂ ಜಾಗೃತ ಛಾರಿಟಬಲ್ ಟ್ರಸ್ಟ್ ಸ್ಥಾಪನೆಯಾಗಿರುವುದು ಸಂಗತಸದ ಸಂಗತಿಯಾಗಿದೆ ಎಂದರು. ಅಮೇರಿಕಾದಲ್ಲೂ ನಮ್ಮ ಸಂಸ್ಕೃತಿಯನ್ನು ಪ್ರತಿಪಾದಿಸಿದ ಪ್ರಧಾನಿ ಮೋದಿಯವರಿಂದಾಗಿ ಇಡಿ ಪ್ರಚಂಚವೇ ಭಾರತದತ್ತ ತಿರುಗಿನೋಡುವಂತಾಗಿದ್ದು, ಮುಂದಿನ ದಿನಗಳಲ್ಲಿ ಭಾರತ ಮತ್ತಷ್ಟು ಅಭಿವೃದ್ದಿಯಾಗಲು ಸಹಕಾರಿಯಾಗಿದೆ ಎಂದರು.
ಹುಳಿಯಾರಿನ ಶ್ರೀಬನಶಂಕರಿ ದೇವಾಲಯದಲ್ಲಿ ನೂತನವಾಗಿ ಪ್ರಾರಂಭವಾದ ಸಂಗೀತ ಶಾಲೆಗೆ ಸಂಗೀತ ಶಿಕ್ಷಕ ಸುಭಾಷ್ ಪಾಟೀಮ್ ಹಾಡೊಂದನ್ನು ಗಾಯನ ಮಾಡುವ ಚಾಲನೆ ನೀಡಿದರು.
ಪಿಎಸೈ ಘೋರ್ಪಡೆ ಮಾತನಾಡಿ, ಪ್ರಸ್ತುತದಲ್ಲಿ ಅರ್ಕೇಸ್ಟ್ರಾ, ನಂಗನಾಚ್,ಡಿಸ್ಕೋ, ಬ್ರೇಕ್ ಡ್ಯಾನ್ಸ್ ನಿಂದಾಗಿ ನಾಟಕ,ಸಂಗೀತ,ಜಾನಪದ ನೃತ್ಯದಂತಹ ಕಲೆಗಳು ಕಣ್ಮರೆಯಾಗುವಂತಾಗಿದೆ. ಪೋಷಕರು ಮಕ್ಕಳಿಗೆ ಶಿಕ್ಷಣಕೊಡಿಸುವುದರ ಜೊತೆಗೆ ಸಹಪಠ್ಯಚಟುವಟಿಕೆಗಳಲ್ಲಿ ಮಕ್ಕಳನ್ನು ತೊಡಗಿಕೊಳ್ಳುವಂತೆ ಮಾಡುವುದರಿಂದ ನಮ್ಮ ಸಂಸ್ಕೃತಿಯ ಅರಿವನ್ನು ಮೂಡಿಸಬೇಕೆಂದರು.

ಟ್ರಸ್ಟ್ ನ ಅಧ್ಯಕ್ಷ ಕೆ.ಎಂ.ರಾಮಯ್ಯ ಅಧ್ಯಕ್ಷತೆವಹಿಸಿದ್ದು, ಸಂಗೀತ ಶಿಕ್ಷಕರಾದ ಸುಭಾಷ್ ಪಾಟಿಲ್ ಹಾಗೂ ಶಂಕರ್,ಗ್ರಾಮಲೆಖ್ಖಿಗ ಶ್ರೀನಿವಾಸ್, ಎಸ್ಸಾರೆಸ್ ದಯಾನಂದ್, ಭವಾನಿರಮೇಶ್,ದಾಸಪ್ಪ , ಮೀಸೆರಂಗಪ್ಪ,ಅನಂತಕುಮಾರ್, ಹೆಚ್.ಕೆ.ವಿಶ್ವನಾಥ್,ಧನಂಜಯಮೂರ್ತಿ ಸೇರಿದಂತೆ ಸಾರ್ವಜನಿಕರು, ದೇವಾಲಯ ಸಮಿತಿಯವರು ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...