ವಿಷಯಕ್ಕೆ ಹೋಗಿ

ಹುಳಿಯಾರು : ಶಾಲಾ ಮಕ್ಕಳಿಂದ ಸ್ವಚ್ಚತಾ ಆಂದೋಲನ

ಸ್ವಚ್ಚ ಭಾರತ ಅಭಿಯಾನದಡಿ ಪಟ್ಟಣದ ವಿದ್ಯಾವಾರಿಧಿ ಇಂಟರ್ ನ್ಯಾಷನಲ್ ಸ್ಕೂಲ್ ನ ಮಕ್ಕಳು ಪಟ್ಟಣದ ಬಸ್ ನಿಲ್ದಾಣದಲ್ಲಿ ಸ್ವಚ್ಚತಾ ಕಾರ್ಯ ಕೈಗೊಂಡರೆ, ವಾಸವಿ ಶಾಲೆಯ ಮಕ್ಕಳು ರಾಜ್ ಕುಮಾರ್ ರಸ್ತೆಯಲ್ಲಿ ಶ್ರಮದಾನ ನಡೆಸಿದರು.
ಹುಳಿಯಾರು ಪಟ್ಟಣದ ಬಸ್ ನಿಲ್ದಾಣದಲ್ಲಿ ವಿದ್ಯಾವಾರಿಧಿ ಶಾಲಾಮಕ್ಕಳು ಕಾರ್ಯದರ್ಶಿ ಕವಿತಾಕಿರಣ್ ಅವರ ಮಾರ್ಗದರ್ಶನದಲ್ಲಿ ಸ್ವಚ್ಚತಾ ಕಾರ್ಯ ನಡೆಸಿದರು.

ಹುಳಿಯಾರಿನ ವಿದ್ಯಾವಾರಿಧಿ ಶಾಲೆಯ ಮಕ್ಕಳು ಕಾರ್ಯದರ್ಶಿ ಕವಿತಾ ನೇತೃತ್ವದಲ್ಲಿ ಹುಳಿಯಾರು ಸ್ವಚ್ಚತೆ ವಿದ್ಯಾವಾರಿಧಿ ಕನಸು ಎಂದು ಘೋಷವಾಕ್ಯ ಕೂಗುತ್ತಾ ಸ್ಚಚ್ಚತಾ ಆಂದೋಲನ ನಡೆಸಿದರು. 

ಗಾಂಧಿಜೀಯವರ ಜನ್ಮ ದಿನದಂದು ಸ್ವಚ್ಚ ಭಾರತ ಅಭಿಯಾನಕ್ಕೆ ಪ್ರಧಾನಿ ನರೇಂದ್ರಮೋದಿ ಕರೆ ನೀಡಿದ್ದರ ಹಿನ್ನಲೆಯಲ್ಲಿ ಪ್ರತಿ ಶಾಲೆಗಳಲ್ಲೂ ಮಕ್ಕಳು ಶ್ರಮದಾನಕ್ಕೆ ಮುಂದಾಗಿದ್ದರು. ಪ್ರತಿ ಶಾಲೆಗಳಲ್ಲಿ ಮಕ್ಕಳು ಶಾಲಾವರಣದ ಸ್ವಚ್ಚತೆ ಮಾಡಿಕೊಂಡರೆ ಪಟ್ಟಣದ ವಿದ್ಯಾವಾರಿಧಿ ಶಾಲೆ ಹಾಗೂ ವಾಸವಿ ಶಾಲಾ ಮಕ್ಕಳು ವಿಭಿನ್ನವಾಗಿ ಪಟ್ಟಣದ ಬಸ್ ನಿಲ್ದಾಣ ಹಾಗೂ ರಸ್ತೆಯಲ್ಲಿ ಬಿದ್ದ ಕಸಕಡ್ಡಿಯನ್ನು ಬೇರೆಡೆ ತೆರವು ಮಾಡುವ ಮೂಲಕ ತಮ್ಮ ಶ್ರಮದಾನ ಕೈಗೊಂಡರು.
ಶಾಲೆಯಲ್ಲಿ ಗಾಂಧಿಜಯಂತಿ ಮುಗಿಸಿಕೊಂಡು ನಂತರ ಬಸ್ ನಿಲ್ದಾಣದಲ್ಲಿಗೆ ಆಗಮಿಸಿದ ವಿದ್ಯಾವಾರಿಧಿ ಶಾಲಾಮಕ್ಕಳು "ಹುಳಿಯಾರಿನ ಸ್ವಚ್ಚತೆ ವಿದ್ಯಾವಾರಿಧಿಯ ಕನಸು" ಎಂಬ ಸ್ಲೋಗನ್ ಘೋಷಣೆ ಕೂಗುತ್ತಾ ಕೈಯ್ಯಲ್ಲಿ ಪೊರಕೆ, ಬಾಂಡ್ಲಿ, ಗುದ್ದಲಿ ಹಿಡಿದು ಬಸ್ ನಿಲ್ದಾಣದಲ್ಲಿ ಬಿದ್ದಿದ್ದ ಪ್ಲಾಸ್ಟಿಕ್ , ಪೇಪರ್, ಕೊಳೆತ ತ್ಯಾಜ್ಯ ಸೇರಿದಂತೆ ಇನ್ನಿತರ ವಸ್ತುಗಳನ್ನು ತೆರವು ಮಾಡಿ, ಟ್ಯಾಕ್ಟರ್ ಮೂಲಕ ಸಾಗಿಸಿದರು. ಅಲ್ಲದೆ ಮಳೆ ಬಂದಾಗ ಸದಾ ನೀರು ನಿಂತು ಕೆಸರು ಗದ್ದೆಯಾಗುತ್ತಿದ್ದ ಬಸ್ ನಿಲ್ದಾಣಕ್ಕೆ ಜೆಲ್ಲಿ,ಮಣ್ಣು ಹಾಕಿ ನೀರು ಹರಿದು ಹೋಗುವಂತಹ ವ್ಯವಸ್ಥೆ ಮಾಡಿದರಲ್ಲದೆ, ಅಲ್ಲಿನ ಅಂಗಡಿಯವರಿಗೆ ಸ್ವಚ್ಚತೆ ಕಾಪಾಡಿಕೊಳ್ಳುವುದರಿಂದ ಆಗುವ ಉಪಯೋಗಗಳ ಬಗ್ಗೆ ಅರಿವು ಮೂಡಿಸಿದರು. ಈ ಕಾರ್ಯದಲ್ಲಿ ಸಂಸ್ಥೆಯ ಅಧ್ಯಕ್ಷ ಕೆ.ಎಸ್.ಕಿರಣ್ ಕುಮಾರ್, ಕಾರ್ಯದರ್ಶಿ ಕವಿತಾಕಿರಣ್, ಪ್ರಾಂಶುಪಾಲ ರವಿ ಸೇರಿದಂತೆ ಶಾಲಾ ಶಿಕ್ಷಕರು ಇಂಬು ನೀಡಿದ್ದರಲ್ಲದೆ, ಗ್ರಾ.ಪಂ.ನ ಪಿಡಿಓ ಅಡವೀಶ್, ಕಂದಾಯ ಇಲಾಖೆಯ ನಾರಾಯಣ್, ಶ್ರೀನಿವಾಸ್, ತಾಲ್ಲೂಕು ಬಿಜೆಪಿ ಅಧ್ಯಕ್ಷ ಜಗದೀಶ್, ತಾ.ಪಂ.ಸದಸ್ಯರಾದ ಕೆಂಕೆರೆ ನವೀನ್,ವಸಂತಯ್ಯ, ಗ್ರಾ.ಪಂ.ಸದಸ್ಯರಾದ ರಾಘವೇಂದ್ರ ಸೇರಿದಂತೆ ಇತರರು ಮಕ್ಕಳೊಂದಿಗೆ ಕೈಜೋಡಿಸುವ ಮೂಲಕ ಸುಮಾರು ಎರಡು ತಾಸು ಸ್ವಚ್ಚತಾ ಕಾರ್ಯ ನಡೆಸಿದರು.
ವಾಸವಿ ಶಾಲೆಯ ಸ್ಕೌಟ್ ಅಧಿಕಾರಿ ಗಂಗಾಧರಯ್ಯ ನೇತೃತ್ವದಲ್ಲಿ ವಾಸವಿ ಶಾಲಾ ಮಕ್ಕಳು ರಾಜ್ ಕುಮಾರ್ ರಸ್ತೆಯಲ್ಲಿ ಸ್ವಚ್ಚತಾಕಾರ್ಯ ಪ್ರಾರಂಭಿಸಿ ರಸ್ತೆ ಬದಿಯಲ್ಲಿ,ಅಂಗಡಿ ಮುಂದೆ ಬಿದಿದ್ದ ಕಸವನ್ನು ಚೀಲಕ್ಕೆ ಹಾಕಿಕೊಳ್ಳುತ್ತಿದ್ದಲ್ಲದೆ ಸಾರ್ವಜನಿಕರಿಂದಲೂ ತ್ಯಾಜ್ಯವಸ್ತುಗಳನ್ನು ಪಡೆಯುತ್ತಾ ಅದನ್ನು ಬೇರೆಡೆಗೆ ಹಾಕುವ ಕಾರ್ಯದಲ್ಲಿ ತೊಡಗಿದ್ದರು. ಈ ವೇಳೆ ಮುಖ್ಯಶಿಕ್ಷಕ ರಮೇಶ್, ದೈಹಿಕಶಿಕ್ಷಕ ಮಂಜುನಾಥ್ ಹಾಗೂ ಸಹಶಿಕ್ಷಕರಿದ್ದರು.

ಎಪಿಎಂಸಿಯಲ್ಲಿ : ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಮಾಜಿಶಾಸಕರಾದ ಜೆ.ಸಿ.ಮಾಧುಸ್ವಾಮಿ ಹಾಗೂ ಕೆ.ಎಸ್.ಕಿರಣ್ ಕುಮಾರ್ ಹಾಗೂ ಎಪಿಎಂಸಿ ಅಧ್ಯಕ್ಷ ಸಣ್ಣಯ್ಯ,ಕಾರ್ಯದರ್ಶಿ ನಾಗರಾಜು ಸೇರಿದಂತೆ ಸದಸ್ಯರುಗಳೊಂದಿಗೆ ಮಾರುಕಟ್ಟೆಯ ಆವರಣದಲ್ಲಿನ ತ್ಯಾಜ್ಯವನ್ನು ತೆರವು ಗೊಳಿಸುವ ಮೂಲಕ ಸ್ವಚ್ಚತಾ ಕಾರ್ಯದಲ್ಲಿ ತೊಡಗಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...