ವಿಷಯಕ್ಕೆ ಹೋಗಿ

ಹುಳಿಯಾರು : ಶಾಲಾ ಮಕ್ಕಳಿಂದ ಸ್ವಚ್ಚತಾ ಆಂದೋಲನ

ಸ್ವಚ್ಚ ಭಾರತ ಅಭಿಯಾನದಡಿ ಪಟ್ಟಣದ ವಿದ್ಯಾವಾರಿಧಿ ಇಂಟರ್ ನ್ಯಾಷನಲ್ ಸ್ಕೂಲ್ ನ ಮಕ್ಕಳು ಪಟ್ಟಣದ ಬಸ್ ನಿಲ್ದಾಣದಲ್ಲಿ ಸ್ವಚ್ಚತಾ ಕಾರ್ಯ ಕೈಗೊಂಡರೆ, ವಾಸವಿ ಶಾಲೆಯ ಮಕ್ಕಳು ರಾಜ್ ಕುಮಾರ್ ರಸ್ತೆಯಲ್ಲಿ ಶ್ರಮದಾನ ನಡೆಸಿದರು.
ಹುಳಿಯಾರು ಪಟ್ಟಣದ ಬಸ್ ನಿಲ್ದಾಣದಲ್ಲಿ ವಿದ್ಯಾವಾರಿಧಿ ಶಾಲಾಮಕ್ಕಳು ಕಾರ್ಯದರ್ಶಿ ಕವಿತಾಕಿರಣ್ ಅವರ ಮಾರ್ಗದರ್ಶನದಲ್ಲಿ ಸ್ವಚ್ಚತಾ ಕಾರ್ಯ ನಡೆಸಿದರು.

ಹುಳಿಯಾರಿನ ವಿದ್ಯಾವಾರಿಧಿ ಶಾಲೆಯ ಮಕ್ಕಳು ಕಾರ್ಯದರ್ಶಿ ಕವಿತಾ ನೇತೃತ್ವದಲ್ಲಿ ಹುಳಿಯಾರು ಸ್ವಚ್ಚತೆ ವಿದ್ಯಾವಾರಿಧಿ ಕನಸು ಎಂದು ಘೋಷವಾಕ್ಯ ಕೂಗುತ್ತಾ ಸ್ಚಚ್ಚತಾ ಆಂದೋಲನ ನಡೆಸಿದರು. 

ಗಾಂಧಿಜೀಯವರ ಜನ್ಮ ದಿನದಂದು ಸ್ವಚ್ಚ ಭಾರತ ಅಭಿಯಾನಕ್ಕೆ ಪ್ರಧಾನಿ ನರೇಂದ್ರಮೋದಿ ಕರೆ ನೀಡಿದ್ದರ ಹಿನ್ನಲೆಯಲ್ಲಿ ಪ್ರತಿ ಶಾಲೆಗಳಲ್ಲೂ ಮಕ್ಕಳು ಶ್ರಮದಾನಕ್ಕೆ ಮುಂದಾಗಿದ್ದರು. ಪ್ರತಿ ಶಾಲೆಗಳಲ್ಲಿ ಮಕ್ಕಳು ಶಾಲಾವರಣದ ಸ್ವಚ್ಚತೆ ಮಾಡಿಕೊಂಡರೆ ಪಟ್ಟಣದ ವಿದ್ಯಾವಾರಿಧಿ ಶಾಲೆ ಹಾಗೂ ವಾಸವಿ ಶಾಲಾ ಮಕ್ಕಳು ವಿಭಿನ್ನವಾಗಿ ಪಟ್ಟಣದ ಬಸ್ ನಿಲ್ದಾಣ ಹಾಗೂ ರಸ್ತೆಯಲ್ಲಿ ಬಿದ್ದ ಕಸಕಡ್ಡಿಯನ್ನು ಬೇರೆಡೆ ತೆರವು ಮಾಡುವ ಮೂಲಕ ತಮ್ಮ ಶ್ರಮದಾನ ಕೈಗೊಂಡರು.
ಶಾಲೆಯಲ್ಲಿ ಗಾಂಧಿಜಯಂತಿ ಮುಗಿಸಿಕೊಂಡು ನಂತರ ಬಸ್ ನಿಲ್ದಾಣದಲ್ಲಿಗೆ ಆಗಮಿಸಿದ ವಿದ್ಯಾವಾರಿಧಿ ಶಾಲಾಮಕ್ಕಳು "ಹುಳಿಯಾರಿನ ಸ್ವಚ್ಚತೆ ವಿದ್ಯಾವಾರಿಧಿಯ ಕನಸು" ಎಂಬ ಸ್ಲೋಗನ್ ಘೋಷಣೆ ಕೂಗುತ್ತಾ ಕೈಯ್ಯಲ್ಲಿ ಪೊರಕೆ, ಬಾಂಡ್ಲಿ, ಗುದ್ದಲಿ ಹಿಡಿದು ಬಸ್ ನಿಲ್ದಾಣದಲ್ಲಿ ಬಿದ್ದಿದ್ದ ಪ್ಲಾಸ್ಟಿಕ್ , ಪೇಪರ್, ಕೊಳೆತ ತ್ಯಾಜ್ಯ ಸೇರಿದಂತೆ ಇನ್ನಿತರ ವಸ್ತುಗಳನ್ನು ತೆರವು ಮಾಡಿ, ಟ್ಯಾಕ್ಟರ್ ಮೂಲಕ ಸಾಗಿಸಿದರು. ಅಲ್ಲದೆ ಮಳೆ ಬಂದಾಗ ಸದಾ ನೀರು ನಿಂತು ಕೆಸರು ಗದ್ದೆಯಾಗುತ್ತಿದ್ದ ಬಸ್ ನಿಲ್ದಾಣಕ್ಕೆ ಜೆಲ್ಲಿ,ಮಣ್ಣು ಹಾಕಿ ನೀರು ಹರಿದು ಹೋಗುವಂತಹ ವ್ಯವಸ್ಥೆ ಮಾಡಿದರಲ್ಲದೆ, ಅಲ್ಲಿನ ಅಂಗಡಿಯವರಿಗೆ ಸ್ವಚ್ಚತೆ ಕಾಪಾಡಿಕೊಳ್ಳುವುದರಿಂದ ಆಗುವ ಉಪಯೋಗಗಳ ಬಗ್ಗೆ ಅರಿವು ಮೂಡಿಸಿದರು. ಈ ಕಾರ್ಯದಲ್ಲಿ ಸಂಸ್ಥೆಯ ಅಧ್ಯಕ್ಷ ಕೆ.ಎಸ್.ಕಿರಣ್ ಕುಮಾರ್, ಕಾರ್ಯದರ್ಶಿ ಕವಿತಾಕಿರಣ್, ಪ್ರಾಂಶುಪಾಲ ರವಿ ಸೇರಿದಂತೆ ಶಾಲಾ ಶಿಕ್ಷಕರು ಇಂಬು ನೀಡಿದ್ದರಲ್ಲದೆ, ಗ್ರಾ.ಪಂ.ನ ಪಿಡಿಓ ಅಡವೀಶ್, ಕಂದಾಯ ಇಲಾಖೆಯ ನಾರಾಯಣ್, ಶ್ರೀನಿವಾಸ್, ತಾಲ್ಲೂಕು ಬಿಜೆಪಿ ಅಧ್ಯಕ್ಷ ಜಗದೀಶ್, ತಾ.ಪಂ.ಸದಸ್ಯರಾದ ಕೆಂಕೆರೆ ನವೀನ್,ವಸಂತಯ್ಯ, ಗ್ರಾ.ಪಂ.ಸದಸ್ಯರಾದ ರಾಘವೇಂದ್ರ ಸೇರಿದಂತೆ ಇತರರು ಮಕ್ಕಳೊಂದಿಗೆ ಕೈಜೋಡಿಸುವ ಮೂಲಕ ಸುಮಾರು ಎರಡು ತಾಸು ಸ್ವಚ್ಚತಾ ಕಾರ್ಯ ನಡೆಸಿದರು.
ವಾಸವಿ ಶಾಲೆಯ ಸ್ಕೌಟ್ ಅಧಿಕಾರಿ ಗಂಗಾಧರಯ್ಯ ನೇತೃತ್ವದಲ್ಲಿ ವಾಸವಿ ಶಾಲಾ ಮಕ್ಕಳು ರಾಜ್ ಕುಮಾರ್ ರಸ್ತೆಯಲ್ಲಿ ಸ್ವಚ್ಚತಾಕಾರ್ಯ ಪ್ರಾರಂಭಿಸಿ ರಸ್ತೆ ಬದಿಯಲ್ಲಿ,ಅಂಗಡಿ ಮುಂದೆ ಬಿದಿದ್ದ ಕಸವನ್ನು ಚೀಲಕ್ಕೆ ಹಾಕಿಕೊಳ್ಳುತ್ತಿದ್ದಲ್ಲದೆ ಸಾರ್ವಜನಿಕರಿಂದಲೂ ತ್ಯಾಜ್ಯವಸ್ತುಗಳನ್ನು ಪಡೆಯುತ್ತಾ ಅದನ್ನು ಬೇರೆಡೆಗೆ ಹಾಕುವ ಕಾರ್ಯದಲ್ಲಿ ತೊಡಗಿದ್ದರು. ಈ ವೇಳೆ ಮುಖ್ಯಶಿಕ್ಷಕ ರಮೇಶ್, ದೈಹಿಕಶಿಕ್ಷಕ ಮಂಜುನಾಥ್ ಹಾಗೂ ಸಹಶಿಕ್ಷಕರಿದ್ದರು.

ಎಪಿಎಂಸಿಯಲ್ಲಿ : ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಮಾಜಿಶಾಸಕರಾದ ಜೆ.ಸಿ.ಮಾಧುಸ್ವಾಮಿ ಹಾಗೂ ಕೆ.ಎಸ್.ಕಿರಣ್ ಕುಮಾರ್ ಹಾಗೂ ಎಪಿಎಂಸಿ ಅಧ್ಯಕ್ಷ ಸಣ್ಣಯ್ಯ,ಕಾರ್ಯದರ್ಶಿ ನಾಗರಾಜು ಸೇರಿದಂತೆ ಸದಸ್ಯರುಗಳೊಂದಿಗೆ ಮಾರುಕಟ್ಟೆಯ ಆವರಣದಲ್ಲಿನ ತ್ಯಾಜ್ಯವನ್ನು ತೆರವು ಗೊಳಿಸುವ ಮೂಲಕ ಸ್ವಚ್ಚತಾ ಕಾರ್ಯದಲ್ಲಿ ತೊಡಗಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್...

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...