ವಿಷಯಕ್ಕೆ ಹೋಗಿ

ಹೋಬಳಿಯಾದ್ಯಂತ ಉತ್ತಮ ಮಳೆ

ಕಳದೊಂದು ವಾರದಿಂದ ಹೋಬಳಿಯಾದ್ಯಂತ ಉತ್ತಮ ಮಳೆಯಾಗುತ್ತಿದ್ದು ಬಹುದಿನಗಳಿಂದ ಮಳೆ ನಿರೀಕ್ಷೆಯಲ್ಲಿದ್ದ ರೈತರು ಮಳೆಯಿಂದ ಸಂತಸಗೊಂಡಿದ್ದಾರೆ. ಹುಳಿಯಾರು ಪಟ್ಟಣದ ಅಸುಪಾಸಿನಲ್ಲಂತೂ ಕಳೆದ ಐದಾರು ವರ್ಷಗಳಿಂದ ಮಳೆ ಕಾಣದೆ ಕಂಗಾಲಾಗಿದ್ದ ಈ ಭಾಗದ ರೈತರಿಗೆ ಸದ್ಯ ಸುರಿಯುತ್ತಿರುವ ಮಳೆ ಜೀವಸೆಲೆ ತಂದಂತಾಗಿದೆ.
ಹುಳಿಯಾರು ಹೋಬಳಿ ಚಿಕ್ಕಬಿದರೆ ಭಾಗದಲ್ಲಿ ಮಳೆಗೆ ಕಟ್ಟೆಗಳಲೆಲ್ಲಾ ನೀರು ತುಂಬಿದೆ.
ಬೋರನಕಣಿವೆ ವ್ಯಾಪ್ತಿಯಲ್ಲಿ ಬುಧವಾರ 62.4 ಮೀ.ಮೀ ಹಾಗೂ ಗುರುವಾರ 55.4 ಮೀ.ಮೀ ಮಳೆ ಪ್ರಯಾಣ ದಾಖಲಾಗಿದ್ದರೆ. ಹುಳಿಯಾರು ಭಾಗದಲ್ಲಿ ಬುಧವಾರದಂದು 24.3 ಮೀಮೀ ಹಾಗೂ ಗುರುವಾರದಂದು 45.1 ಮೀಮೀ ಮಳೆ ದಾಖಲಾಗಿದೆ. ಭಾರಿ ಮಳೆಯಾಗದಿದ್ದರು ರಾತ್ರಿ ಸಮಯ ಬರುತ್ತಿರುವ ಮಳೆಯಿಂದಾಗಿ ತೋಟತುಡಿಕೆಗಳು ನೀರು ತುಂಬಿ ಕೆರೆಕಟ್ಟೆಗಳಿಗೆ ನೀರಿನ ಹರಿವು ಬರುತ್ತಿದೆ. ಆವಳಗೆರೆ,ಚಿಕ್ಕಬಿದರೆ,ದೊಡ್ಡಬಿದರೆ,ಪೋಚಕಟ್ಟೆ ಕೆರೆಗಳಿಗೆ ಎರಡು ದಿನಗಳಿಂದ ಹರಿದು ಬರುತ್ತಿರುವ ನೀರಿನ ಪ್ರಮಾಣ ಏರುತ್ತಿದ್ದು, ಇದೇ ರೀತಿ ಇನ್ನೆರಡು ದಿನ ಮಳೆ ಬಂದಲ್ಲಿ ಕೋಡಿಬೀಳುವ ಸಾಧ್ಯತೆಗಳಿವೆ.
ಗಾಣಧಾಳು, ಹೊಯ್ಸಳಕಟ್ಟೆ, ದಸೂಡಿ, ದಬ್ಬಗುಂಟೆ, ಬೆಳ್ಳಾರ, ಕೆಂಕೆರೆ, ಯಳನಡು, ಕೋರಗೆರೆ, ಸೀಗೇಬಾಗಿ, ಶಿಡ್ಲಕಟ್ಟೆ,ಬರಕನಹಾಲ್ ಸೇರಿದಂತೆ ಇನ್ನಿತರ ಹಳ್ಳಿಗಳಲ್ಲಿ ಉತ್ತಮ ಮಳೆಯಾಗಿದ್ದು ರಾಗಿ ಬೆಳೆಗೆ ಅನುಕೂಲವಾಗಲಿದ್ದು, ಜೊತೆಗೆ ನೀರಿ ಕೊರತೆಯಿಂದ ಸೊರಗಿದ್ದ ಅಡಿಕೆ ಚೇತರಿಸಿಕೊಳ್ಳಲಿದೆ. ಕಳೆದ ಐದಾರು ವರ್ಷಗಳಿಂದ ನೀರಿಲ್ಲದೆ ತೆಂಗಿನ ಮರಗಳು ಸುಳಿ ಒಣಗಿ ಬೀಳುತ್ತಿದ್ದವು ಇದೀಗ ಉತ್ತಮ ಮಳೆ ಬಂದು ತೋಟಗಳೆಲ್ಲಾ ತುಂಬಿರುವುದರಿಂದ ಒಣಗಿ ಹೋಗುತ್ತಿದ್ದ ತೆಂಗು ತಕ್ಕಮಟ್ಟಿಗೆ ಉಳಿಯುವಂತಾಗಿದೆ.
ಕಳೆದ ವರ್ಷದಂತೆ ದನಕರುಗಳಿಗೆ ಮೇವಿಲ್ಲದೆ, ಕುಡಿಸಲು ನೀರಿಲ್ಲದೆ ಪರಿತಪಿಸಬೇಕೆಂಬ ಆತಂಕದಲ್ಲಿದ್ದ ರೈತರಿಗೆ ಈ ಮಳೆ ತುಸು ಚೇತರಿಕೆ ತಂದುಕೊಟ್ಟಿದ್ದು ದನಕರುಗಳಿಗೆ ಉತ್ತಮ ಮೇವು ಬರುತ್ತದೆ ಎಂಬ ನಂಬಿಕೆ ಅನ್ನದಾತನದ್ದಾಗಿದೆ.

ಮಳೆಯೋನೋ ಉತ್ತಮವಾಗಿದೆ ಆದರೆ ಈ ಮಳೆ ರಾಗಿ ಬಿತ್ತನೆ ಮಾಡಿದಾಗಿನಿಂದಲೇ ಬರುತ್ತಿದ್ದರೆ ಹಿಂಗಾರು ಚೆನ್ನಾಗಿ ಆಗುತ್ತಿತ್ತು ಆದರೆ ಈಗ ರಾಸುಗಳಿಗೆ ಮೇವಿನ ಭಯವೇನು ಇಲ್ಲ ಆದರೆ ರಾಗಿ ಮಾತ್ರ ಕಡಿಮೆ ಎನ್ನುತ್ತಾರೆ ರೈತರು. ಒಟ್ಟಾರೆ ಮಳೆ ಬರುತ್ತಿರುವುದರಿಂದ ರೈತರಲ್ಲಿ ನೆಮ್ಮದಿಭಾವ ಮೂಡಿದೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...