ವಿಷಯಕ್ಕೆ ಹೋಗಿ

ನೆಲಸಮವಾಯ್ತು ಶತಮಾನದ ಮುಸಾಫಿರ್ ಖಾನೆ ಕಟ್ಟಡ

         ಹುಳಿಯಾರು ಪಟ್ಟಣದ ಸರ್ಕಾರಿ ಆಸ್ಪತ್ರೆಯ ಎದುರಿಗಿದ್ದ ಸುಮಾರು ಒಂದು ಶತಮಾನದಷ್ಟು ಹಳೆಯದಾದ ಮುಸಾಫಿರ್ ಖಾನೆ ಕಟ್ಟಡ ಅನ್ಯ ಉದ್ದೇಶಕ್ಕಾಗಿ ನೆಲಸಮವಾಗುವುದರ ಮುಖಾಂತರ ಪಟ್ಟಣದ ಇತಿಹಾಸಕ್ಕೆ ತಳುಕು ಹಾಕಿಕೊಂಡು ಸಾಕ್ಷಿಯಾಗಿದ್ದ ಕಟ್ಟಡವೊಂದು ನೆನಪಿನ ಪುಟ ಸೇರಿತು.
ಹುಳಿಯಾರಿನಲ್ಲಿದ್ದ ಶತಮಾನ ದಾಟಿದ್ದ ಮುಸಾಫಿರ್ ಖಾನೆ ನೆಲಸಮವಾಗಿರುವುದು.

               ಆ ಕಾಲದಲ್ಲಿ ಮುಸಾಫಿರ್ ಖಾನೆ ಎಂದರೆ ಪರಸ್ಥಳದವರು ಊರಿಂದೂರಿಗೆ ಬಂದಾಗ ಉಳಿದು ಕೊಳ್ಳಲು ಮಾಡಿದ್ದ ತಂಗುದಾಣವಾಗಿದ್ದು, ಅದನ್ನು ಹೀಗಿನ ಪ್ರವಾಸಿ ಮಂದಿರಗಳಿಗೆ ಹೋಲಿಸಬಹುದಾಗಿದೆ. ಈ ಕಟ್ಟಡ 1910ರ ಅಜುಬಾಜಿನಲ್ಲಿ ಬ್ರಿಟಿಷರ ಕಾಲದಲ್ಲಿ ನಿರ್ಮಾಣವಾಗಿದ್ದು, ಇಂದಿಗೂ ಗಟ್ಟಿಮುಟ್ಟಾಗಿದ್ದ ಕಟ್ಟಡ ಊರಿನ ಅನೇಕ ಮಹತ್ತರ ಘಟನೆಗಳಿಗೆ ಸಾಕ್ಷಿಯಾಗಿತ್ತು.
             ಪರಸ್ಥಳದವರಿಗೆ ಛತ್ರವಾಗಿ ಉಪಯೋಗವಾಗಿದ್ದ ಕಟ್ಟಡ 45-46 ನೇ ಸಾಲಿನಲ್ಲಿ ಈ ಊರಿನ ಮೊಟ್ಟಮೊದಲ ಹೈಸ್ಕೂಲ್ ಪ್ರಾರಂಭಕ್ಕೆ ಕಾರಣವಾಯಿತು. ಈ ಹೈಸ್ಕೂಲ್ ಮೊದಲು ಜಿಲ್ಲಾಡಳಿತದ ವಶದಲ್ಲಿದ್ದರಿಂದ ಡಿಸ್ಟಿಕ್ ಬೋರ್ಡ್ ಹೈಸ್ಕೂಲ್ ಎಂದು ನಂತರ ತಾಲ್ಲೂಕು ಆಡಳಿತಕ್ಕೆ ಕೊಟ್ಟ ಮೇಲೆ ತಾಲ್ಲೂಕ್ ಬೋರ್ಡ್ ಹೈಸ್ಕೂಲ್ ಎಂದು ಕರೆಯಲಾಗುತ್ತಿತ್ತು.
            ಈ ಕಟ್ಟಡ ನೋಡಲು ಛತ್ರದಂತೆ ಇದ್ದು ,ಇದನ್ನು ನಿಂಗಣ್ಣ ಎಂಬಾತ ನೋಡಿಕೊಳ್ಳುತ್ತದ್ದರಿಂದ ನಿಂಗಣ್ಣನ ಛತ್ರ ಎಂದು ಸಹ ಕರೆಯುತ್ತಿದ್ದರು. ಇಲ್ಲಿ ಅನೇಕ ಬಡ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡಿದ್ದಾರೆ, ನಿತ್ಯ ಪ್ರಾರ್ಥನೆಯ ಜಾಗ, 3 ಕೊಠಡಿಗಳಿದ್ದು ಅದರಲ್ಲೆ ಶಿಕ್ಷಕರು, ವಿಜ್ಞಾನ ಪ್ರಯೋಗಾಲಯವಿದ್ದು ಅಲ್ಲೆಯೇ ಮಕ್ಕಳಿಗೆ ಪಾಠಬೋಧನೆ ನಡೆಯುತ್ತಿತ್ತು. ವಿದ್ಯಾರ್ಥಿಗಳು ಹೆಚ್ಚಾಗಿದ್ದರಿಂದ ತೆಂಗಿನ ಗರಿಯ ಗುಡಿಸಲನ್ನು ಹಾಕಿ ಅದರಲ್ಲಿ ಮಕ್ಕಳನ್ನು ಕೂರಿಸಿ ಪಾಠಕಲಿಸಲಾಗುತ್ತಿತ್ತು, ಮಳೆಗಾಲದ ಗಾಳಿಯಿಂದಾಗಿ ಹೆಚ್ಚಿನ ಸಮಸ್ಯೆಗಳು ಉಂಟಾಗಿ ಮಕ್ಕಳ ಕಲಿಕೆಗೆ ಸಾಕಷ್ಟು ತೊಂದರೆಯಾಗುತ್ತಿತ್ತು ಎಂದು ಈ ಶಾಲೆಯಲ್ಲೇ ಅಭ್ಯಾಸ ಮಾಡಿದ ಹುಳಿಯಾರಿನ ಪ್ರಕಾಶ್ ತಮ್ಮ ನೆನಪುಗಳನ್ನು ಬಿಚ್ಚಿಡುತ್ತಾರೆ.
         ವಿದ್ಯಾರ್ಥಿಗಳ ಸಂಖ್ಯೆ ದಿನೇ ದಿನೆ ಏರುತ್ತಿದ್ದರಿಂದ ಈ ಕಟ್ಟಡದಲ್ಲಿ ನಡೆಯುತ್ತಿದ್ದ ಹೈಸ್ಕೂಲ್‍ಗೆ ನೂತನ ಕಟ್ಟಡವನ್ನು ಹುಳಿಯಾರು-ಕೆಂಕೆರೆ ಮಧ್ಯ ಭಾಗದಲ್ಲಿ ನಿರ್ಮಿಸಲು 1951ರಲ್ಲಿ ಖುದ್ದು ಮೈಸೂರಿನ ಮಹಾರಾಜರಾದ ಶ್ರೀಜಯಚಾಮರಾಜ ಒಡೆಯರ್ ಅವರೇ ಆಗಮಿಸಿ ಶಂಕುಸ್ಥಾಪನೆ ನೆರವೇರಿಸಿದ್ದು, ಆ ಸಮಯದಲ್ಲಿ ಬಂದಾಗ ಈ ಕಟ್ಟಡದಲ್ಲಿ ಉಳಿದಿದ್ದರು. ಹುಳಿಯಾರು-ಕೆಂಕೆರೆ ಮಧ್ಯ ಭಾಗದಲ್ಲಿದ್ದ ಹೈಸ್ಕೂಲ್ 1963ರಲ್ಲಿ ಪೂರ್ಣಗೊಂಡು 1964ರಲ್ಲಿ ಸರ್ಕಾರಕ್ಕೆ ಹಸ್ತಾಂತರವಾಗುವರೆಗೂ ಮುಸಾಫಿರ್ ಖಾನೆಯಲ್ಲಿ ಹೈಸ್ಕೂಲ್ ನಡೆಯುತ್ತಿತ್ತು.
       ನೂರಾರು ಮಂದಿ ವಿದ್ಯಾರ್ಥಿಗಳು ಇಲ್ಲಿ ವ್ಯಾಸಾಂಗ ಮಾಡಿದ್ದು, ಇಲ್ಲಿನ ಅನೇಕ ವಿದ್ಯಾರ್ಥಿಗಳು ಹೊರ ರಾಜ್ಯ ಹಾಗೂ ವಿದೇಶದಲ್ಲೂ ಕೂಡ ಉನ್ನತ ಹುದ್ದೆಯಲ್ಲಿದ್ದು , ಅವರೆಲ್ಲರಿಗೂ ಈ ಕಟ್ಟಡವೆಂದರೆ ಬಲು ಅಚ್ಚುಮೆಚ್ಚು.
 ಉನ್ನತ ಹುದ್ದೆಯಲ್ಲಿದ್ದು ನಿವೃತ್ತನಾಗಿರುವ ನನಗೆ ನನ್ನೂರಿನ ನನ್ನ ಬಾಲ್ಯದಲ್ಲಿ ಅಕ್ಷರ ಕಲಿಸಿದ ಶಾಲೆಯ ನೆನಪು ಮರೆಯಲಾಗದಿದ್ದು , ಸ್ಮಾರಕವಾಗಿ ಉಳಿಸಿಕೊಳ್ಳಬೇಕಾಗಿದ್ದ ಕಟ್ಟಡ ನೆಮಸಮ ಮಾಡಿರುವುದು ಬೇಸರದ ವಿಚಾರ:  ಸೂರ್ಯಪ್ರಕಾಶ್, ಈ ಶಾಲೆಯ ಹಳೆ ವಿದ್ಯಾರ್ಥಿ.
         ಈ ಕಟ್ಟಡದಲ್ಲಿ ನಡೆಯುತ್ತಿದ್ದ ಹೈಸ್ಕೂಲ್ ಸ್ಥಳಾಂತರವಾದ ಮೇಲೆ ಇದು ಶಾಲಾ ಮಕ್ಕಳಿಗೆ ಉಪ್ಪಿಟ್ಟು ತಯಾರಿಸುವ ಕೊಠಡಿಯಾಗಿ, ಶಿಶುವಿಹಾರ, ಹಾಸ್ಟೆಲ್ ನಂತರ ಆಸ್ಪತ್ರೆಯ ಹೆರಿಗೆ ಕೋಣೆಯಾಗಿ ಸಹ ಬಳಸಿಕೊಳ್ಳಲಾಗಿತ್ತು. ಆದರೆ ಕಳೆದ ಕೆಲ ವರ್ಷಗಳಿಂದ ಇದರ ಸಮರ್ಪಕ ನಿರ್ವಹಣೆಯಿಲ್ಲದೆ ಯಾರಿಗೂ ಬೇಡವಾಗಿ ಉಳಿದಿತ್ತು. ಇದೀಗ ಈ ಕಟ್ಟಡವನ್ನು ಆಸ್ಪತ್ರೆಯ ಸಿಬ್ಬಂದಿಗಳಿಗೆ ಕ್ವಾರ್ಟಸ್ ನಿರ್ಮಿಸುವ ನಿಟ್ಟಿನಲ್ಲಿ ನೆಲಸಮ ಮಾಡಲಾಗಿದ್ದು, ಬೋಳುಬೋಳಾಗಿರುವ ಜಾಗ ತನ್ನ ಗತಕಾಲದ ಕಥೆ ಹೇಳುತ್ತಾ ಇತಿಹಾಸದ ಪುಟಕ್ಕೆ ಸೇರಿದೆ.

         ಒಟ್ಟಾರೆ ಆಧುನಿಕತೆಯ ಬೆಳವಣಿಗೆಯ ನಡುವೆ ಪಟ್ಟಣದಲ್ಲಿದ್ದ ಶತಮಾನದಷ್ಟು ಹಳೆಯದಾದ ಅಂದಿನ ಇತಿಹಾಸಕ್ಕೆ ಸಾಕ್ಷಿಯಾಗಿದ್ದ ಕಟ್ಟಡವೊಂದು ಧರೆಗುರುಳಿದ್ದು, ಇಲ್ಲಿ ಅಭ್ಯಾಸಿಸಿದವರ ಹಾಗೂ ಸಾರ್ವಜನಿಕರಲ್ಲಿ ಬೇಸರವನ್ನುಂಟು ಮಾಡಿದೆ.
-------

          



        ಮುಸಾಫಿರ್ ಖಾನ್ ಕಟ್ಟಡದಲ್ಲಿ ಪಟ್ಟಣ ಸೇರಿದಂತೆ ಸಾವಿರಾರು ಮಂದಿ ಓದಿದ್ದಾರೆ.ಅದರಲ್ಲಿ ತಾನು ಸಹ ಒಬ್ಬರಾಗಿದ್ದು ಇಲ್ಲಿ ನೀಡುತ್ತಿದ್ದ ಉಪಹಾರ ನೆನಪು ಮಾತ್ರ ಹಾಗೇ ಇದೆ : 
ಗ್ರಾ.ಪಂ.ಸದಸ್ಯ ಗಂಗಾಧರ ರಾವ್.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.