ವಿಷಯಕ್ಕೆ ಹೋಗಿ

ನೆಲಸಮವಾಯ್ತು ಶತಮಾನದ ಮುಸಾಫಿರ್ ಖಾನೆ ಕಟ್ಟಡ

         ಹುಳಿಯಾರು ಪಟ್ಟಣದ ಸರ್ಕಾರಿ ಆಸ್ಪತ್ರೆಯ ಎದುರಿಗಿದ್ದ ಸುಮಾರು ಒಂದು ಶತಮಾನದಷ್ಟು ಹಳೆಯದಾದ ಮುಸಾಫಿರ್ ಖಾನೆ ಕಟ್ಟಡ ಅನ್ಯ ಉದ್ದೇಶಕ್ಕಾಗಿ ನೆಲಸಮವಾಗುವುದರ ಮುಖಾಂತರ ಪಟ್ಟಣದ ಇತಿಹಾಸಕ್ಕೆ ತಳುಕು ಹಾಕಿಕೊಂಡು ಸಾಕ್ಷಿಯಾಗಿದ್ದ ಕಟ್ಟಡವೊಂದು ನೆನಪಿನ ಪುಟ ಸೇರಿತು.
ಹುಳಿಯಾರಿನಲ್ಲಿದ್ದ ಶತಮಾನ ದಾಟಿದ್ದ ಮುಸಾಫಿರ್ ಖಾನೆ ನೆಲಸಮವಾಗಿರುವುದು.

               ಆ ಕಾಲದಲ್ಲಿ ಮುಸಾಫಿರ್ ಖಾನೆ ಎಂದರೆ ಪರಸ್ಥಳದವರು ಊರಿಂದೂರಿಗೆ ಬಂದಾಗ ಉಳಿದು ಕೊಳ್ಳಲು ಮಾಡಿದ್ದ ತಂಗುದಾಣವಾಗಿದ್ದು, ಅದನ್ನು ಹೀಗಿನ ಪ್ರವಾಸಿ ಮಂದಿರಗಳಿಗೆ ಹೋಲಿಸಬಹುದಾಗಿದೆ. ಈ ಕಟ್ಟಡ 1910ರ ಅಜುಬಾಜಿನಲ್ಲಿ ಬ್ರಿಟಿಷರ ಕಾಲದಲ್ಲಿ ನಿರ್ಮಾಣವಾಗಿದ್ದು, ಇಂದಿಗೂ ಗಟ್ಟಿಮುಟ್ಟಾಗಿದ್ದ ಕಟ್ಟಡ ಊರಿನ ಅನೇಕ ಮಹತ್ತರ ಘಟನೆಗಳಿಗೆ ಸಾಕ್ಷಿಯಾಗಿತ್ತು.
             ಪರಸ್ಥಳದವರಿಗೆ ಛತ್ರವಾಗಿ ಉಪಯೋಗವಾಗಿದ್ದ ಕಟ್ಟಡ 45-46 ನೇ ಸಾಲಿನಲ್ಲಿ ಈ ಊರಿನ ಮೊಟ್ಟಮೊದಲ ಹೈಸ್ಕೂಲ್ ಪ್ರಾರಂಭಕ್ಕೆ ಕಾರಣವಾಯಿತು. ಈ ಹೈಸ್ಕೂಲ್ ಮೊದಲು ಜಿಲ್ಲಾಡಳಿತದ ವಶದಲ್ಲಿದ್ದರಿಂದ ಡಿಸ್ಟಿಕ್ ಬೋರ್ಡ್ ಹೈಸ್ಕೂಲ್ ಎಂದು ನಂತರ ತಾಲ್ಲೂಕು ಆಡಳಿತಕ್ಕೆ ಕೊಟ್ಟ ಮೇಲೆ ತಾಲ್ಲೂಕ್ ಬೋರ್ಡ್ ಹೈಸ್ಕೂಲ್ ಎಂದು ಕರೆಯಲಾಗುತ್ತಿತ್ತು.
            ಈ ಕಟ್ಟಡ ನೋಡಲು ಛತ್ರದಂತೆ ಇದ್ದು ,ಇದನ್ನು ನಿಂಗಣ್ಣ ಎಂಬಾತ ನೋಡಿಕೊಳ್ಳುತ್ತದ್ದರಿಂದ ನಿಂಗಣ್ಣನ ಛತ್ರ ಎಂದು ಸಹ ಕರೆಯುತ್ತಿದ್ದರು. ಇಲ್ಲಿ ಅನೇಕ ಬಡ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡಿದ್ದಾರೆ, ನಿತ್ಯ ಪ್ರಾರ್ಥನೆಯ ಜಾಗ, 3 ಕೊಠಡಿಗಳಿದ್ದು ಅದರಲ್ಲೆ ಶಿಕ್ಷಕರು, ವಿಜ್ಞಾನ ಪ್ರಯೋಗಾಲಯವಿದ್ದು ಅಲ್ಲೆಯೇ ಮಕ್ಕಳಿಗೆ ಪಾಠಬೋಧನೆ ನಡೆಯುತ್ತಿತ್ತು. ವಿದ್ಯಾರ್ಥಿಗಳು ಹೆಚ್ಚಾಗಿದ್ದರಿಂದ ತೆಂಗಿನ ಗರಿಯ ಗುಡಿಸಲನ್ನು ಹಾಕಿ ಅದರಲ್ಲಿ ಮಕ್ಕಳನ್ನು ಕೂರಿಸಿ ಪಾಠಕಲಿಸಲಾಗುತ್ತಿತ್ತು, ಮಳೆಗಾಲದ ಗಾಳಿಯಿಂದಾಗಿ ಹೆಚ್ಚಿನ ಸಮಸ್ಯೆಗಳು ಉಂಟಾಗಿ ಮಕ್ಕಳ ಕಲಿಕೆಗೆ ಸಾಕಷ್ಟು ತೊಂದರೆಯಾಗುತ್ತಿತ್ತು ಎಂದು ಈ ಶಾಲೆಯಲ್ಲೇ ಅಭ್ಯಾಸ ಮಾಡಿದ ಹುಳಿಯಾರಿನ ಪ್ರಕಾಶ್ ತಮ್ಮ ನೆನಪುಗಳನ್ನು ಬಿಚ್ಚಿಡುತ್ತಾರೆ.
         ವಿದ್ಯಾರ್ಥಿಗಳ ಸಂಖ್ಯೆ ದಿನೇ ದಿನೆ ಏರುತ್ತಿದ್ದರಿಂದ ಈ ಕಟ್ಟಡದಲ್ಲಿ ನಡೆಯುತ್ತಿದ್ದ ಹೈಸ್ಕೂಲ್‍ಗೆ ನೂತನ ಕಟ್ಟಡವನ್ನು ಹುಳಿಯಾರು-ಕೆಂಕೆರೆ ಮಧ್ಯ ಭಾಗದಲ್ಲಿ ನಿರ್ಮಿಸಲು 1951ರಲ್ಲಿ ಖುದ್ದು ಮೈಸೂರಿನ ಮಹಾರಾಜರಾದ ಶ್ರೀಜಯಚಾಮರಾಜ ಒಡೆಯರ್ ಅವರೇ ಆಗಮಿಸಿ ಶಂಕುಸ್ಥಾಪನೆ ನೆರವೇರಿಸಿದ್ದು, ಆ ಸಮಯದಲ್ಲಿ ಬಂದಾಗ ಈ ಕಟ್ಟಡದಲ್ಲಿ ಉಳಿದಿದ್ದರು. ಹುಳಿಯಾರು-ಕೆಂಕೆರೆ ಮಧ್ಯ ಭಾಗದಲ್ಲಿದ್ದ ಹೈಸ್ಕೂಲ್ 1963ರಲ್ಲಿ ಪೂರ್ಣಗೊಂಡು 1964ರಲ್ಲಿ ಸರ್ಕಾರಕ್ಕೆ ಹಸ್ತಾಂತರವಾಗುವರೆಗೂ ಮುಸಾಫಿರ್ ಖಾನೆಯಲ್ಲಿ ಹೈಸ್ಕೂಲ್ ನಡೆಯುತ್ತಿತ್ತು.
       ನೂರಾರು ಮಂದಿ ವಿದ್ಯಾರ್ಥಿಗಳು ಇಲ್ಲಿ ವ್ಯಾಸಾಂಗ ಮಾಡಿದ್ದು, ಇಲ್ಲಿನ ಅನೇಕ ವಿದ್ಯಾರ್ಥಿಗಳು ಹೊರ ರಾಜ್ಯ ಹಾಗೂ ವಿದೇಶದಲ್ಲೂ ಕೂಡ ಉನ್ನತ ಹುದ್ದೆಯಲ್ಲಿದ್ದು , ಅವರೆಲ್ಲರಿಗೂ ಈ ಕಟ್ಟಡವೆಂದರೆ ಬಲು ಅಚ್ಚುಮೆಚ್ಚು.
 ಉನ್ನತ ಹುದ್ದೆಯಲ್ಲಿದ್ದು ನಿವೃತ್ತನಾಗಿರುವ ನನಗೆ ನನ್ನೂರಿನ ನನ್ನ ಬಾಲ್ಯದಲ್ಲಿ ಅಕ್ಷರ ಕಲಿಸಿದ ಶಾಲೆಯ ನೆನಪು ಮರೆಯಲಾಗದಿದ್ದು , ಸ್ಮಾರಕವಾಗಿ ಉಳಿಸಿಕೊಳ್ಳಬೇಕಾಗಿದ್ದ ಕಟ್ಟಡ ನೆಮಸಮ ಮಾಡಿರುವುದು ಬೇಸರದ ವಿಚಾರ:  ಸೂರ್ಯಪ್ರಕಾಶ್, ಈ ಶಾಲೆಯ ಹಳೆ ವಿದ್ಯಾರ್ಥಿ.
         ಈ ಕಟ್ಟಡದಲ್ಲಿ ನಡೆಯುತ್ತಿದ್ದ ಹೈಸ್ಕೂಲ್ ಸ್ಥಳಾಂತರವಾದ ಮೇಲೆ ಇದು ಶಾಲಾ ಮಕ್ಕಳಿಗೆ ಉಪ್ಪಿಟ್ಟು ತಯಾರಿಸುವ ಕೊಠಡಿಯಾಗಿ, ಶಿಶುವಿಹಾರ, ಹಾಸ್ಟೆಲ್ ನಂತರ ಆಸ್ಪತ್ರೆಯ ಹೆರಿಗೆ ಕೋಣೆಯಾಗಿ ಸಹ ಬಳಸಿಕೊಳ್ಳಲಾಗಿತ್ತು. ಆದರೆ ಕಳೆದ ಕೆಲ ವರ್ಷಗಳಿಂದ ಇದರ ಸಮರ್ಪಕ ನಿರ್ವಹಣೆಯಿಲ್ಲದೆ ಯಾರಿಗೂ ಬೇಡವಾಗಿ ಉಳಿದಿತ್ತು. ಇದೀಗ ಈ ಕಟ್ಟಡವನ್ನು ಆಸ್ಪತ್ರೆಯ ಸಿಬ್ಬಂದಿಗಳಿಗೆ ಕ್ವಾರ್ಟಸ್ ನಿರ್ಮಿಸುವ ನಿಟ್ಟಿನಲ್ಲಿ ನೆಲಸಮ ಮಾಡಲಾಗಿದ್ದು, ಬೋಳುಬೋಳಾಗಿರುವ ಜಾಗ ತನ್ನ ಗತಕಾಲದ ಕಥೆ ಹೇಳುತ್ತಾ ಇತಿಹಾಸದ ಪುಟಕ್ಕೆ ಸೇರಿದೆ.

         ಒಟ್ಟಾರೆ ಆಧುನಿಕತೆಯ ಬೆಳವಣಿಗೆಯ ನಡುವೆ ಪಟ್ಟಣದಲ್ಲಿದ್ದ ಶತಮಾನದಷ್ಟು ಹಳೆಯದಾದ ಅಂದಿನ ಇತಿಹಾಸಕ್ಕೆ ಸಾಕ್ಷಿಯಾಗಿದ್ದ ಕಟ್ಟಡವೊಂದು ಧರೆಗುರುಳಿದ್ದು, ಇಲ್ಲಿ ಅಭ್ಯಾಸಿಸಿದವರ ಹಾಗೂ ಸಾರ್ವಜನಿಕರಲ್ಲಿ ಬೇಸರವನ್ನುಂಟು ಮಾಡಿದೆ.
-------

          



        ಮುಸಾಫಿರ್ ಖಾನ್ ಕಟ್ಟಡದಲ್ಲಿ ಪಟ್ಟಣ ಸೇರಿದಂತೆ ಸಾವಿರಾರು ಮಂದಿ ಓದಿದ್ದಾರೆ.ಅದರಲ್ಲಿ ತಾನು ಸಹ ಒಬ್ಬರಾಗಿದ್ದು ಇಲ್ಲಿ ನೀಡುತ್ತಿದ್ದ ಉಪಹಾರ ನೆನಪು ಮಾತ್ರ ಹಾಗೇ ಇದೆ : 
ಗ್ರಾ.ಪಂ.ಸದಸ್ಯ ಗಂಗಾಧರ ರಾವ್.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...