ವಿಷಯಕ್ಕೆ ಹೋಗಿ

ಸೂಕ್ತ ನಿರ್ವಹಣೆಯಿಲ್ಲದ ಜೋಡಿತಿರುಮಲಾಪುರ ಕೆರೆತೂಬುಗಳು

ಹುಳಿಯಾರು : ಸಮೀಪದ ಜೋಡಿತಿರುಮಲಾಪುರ ಕೆರೆಯಲ್ಲಿನ ತೂಬುಗಳ ಸೂಕ್ತ ನಿರ್ವಹಣೆಯಿಲ್ಲದೆ ಕೆರೆಗೆ ಬಂದಿದ್ದ ಅಲ್ಪಸ್ವಲ್ಪ ನೀರು ಕೂಡ ಕಳೆದೆರಡು ದಿನ ತೂಬಿನ ಮೂಲಕ ಹರಿದುಪೋಲಾಗಿದ್ದು ಈ ಬಗ್ಗೆ ನೀರಾವರಿ ಇಲಾಖೆಯವರ ನಿರ್ಲಕ್ಷ ಎದ್ದುಕಾಣುತ್ತಿದೆ.
ಕೆರೆ ತೂಬಿನಲ್ಲಿ ಪ್ಲೇಟ್ ಕಾಣೆಯಾಗಿರುವುದು.


ಜೋಡಿತಿರುಮಲಾಪುರಕ್ಕೆ ಈ ಕೆರೆಯ ನೀರೆ ಆಸರೆಯಾಗಿದ್ದು, ಈ ಕೆರೆ ತುಂಬಿದಲ್ಲಿ ಈ ಭಾಗದ ಜನರ ಭತ್ತ ಬೆಳೆಯುವ ಕನಸು ಚಿಗುರೊಡೆಯುತ್ತದೆ. ಅಲ್ಲದೆ ಅಂತರ್ಜಲದ ಮಟ್ಟ ಏರಿಕೆಯಾಗಿ ಭತ್ತಿಹೋಗಿರುವ ಕೊಳವೆಬಾವಿಗಳು ಕೂಡ ಉತ್ತಮಗೊಳ್ಳುತ್ತದೆ.
ಕಳೆದ ಕೆಲ ದಿನಗಳಿಂದ ಈ ಭಾಗದಲ್ಲಿ ಉತ್ತಮ ಮಳೆಯಾದ ಹಿನ್ನಲೆಯಲ್ಲಿ ಕೆರೆಗೆ ನೀರು ಬರುತ್ತಿದ್ದು, ಕೆರೆ ಒಳಗಿನ ಗುಂಡಿಗೊಟರುಗಳೆಲ್ಲಾ ತುಂಬಿದ್ದು ಇನ್ನೊಂದೆರಡು ದಿನ ಭರ್ತಿ ಮಳೆಯಾದಲ್ಲಿ ಕೆರೆ ತುಂಬುವ ಸ್ಥಿತಿಯಲ್ಲಿದೆ . ಇಂತಹ ಸಂದರ್ಭದಲ್ಲಿ ಕೆರೆ ತೂಬೂ ಸರಿಯಾಗಿ ನಿರ್ವಹಿಸದ ಪರಿಣಾಮ ನೀರು ವ್ಯರ್ಥವಾಗಿ ಹರಿದು ಹೋಗುತ್ತಿದ್ದು, ತೊಡಕಾಗಿ ಪರಿಣಮಿಸಿದೆ.
ಹೋಬಳಿಯಲ್ಲಿ ಉತ್ತಮ ಮಳೆಯಾದಲ್ಲಿ ಗೋಪಾಲಪುರದ ನಂತರ ಮೊದಲಿಗೆ ತುಂಬುತ್ತಿದ್ದ ಕೆರೆ ಇದಾಗಿದ್ದು ಈ ಹಿಂದೆ ವರ್ಷ ವರ್ಷವೂ ತುಂಬುತ್ತಿದ್ದ ಕೆರೆಯಿಂದಾಗಿ ಈ ಭಾಗ ಭತ್ತದ ಬೆಳೆಗೆ ಹೆಸರುವಾಸಿಯಾಗಿತ್ತು. ಕಳೆದ ನಾಲ್ಕುವರ್ಷಗಳ ಹಿಂದೆ ತುಂಬಿದ ಕೆರೆ ಇತ್ತೀಚೆಗೆ ಒಣಗಿ ನಿಂತಿತ್ತು. ಕೆರೆಯಲ್ಲಿ 5 ತೂಬುಗಳಿದ್ದು, ಕೆರೆ ಉಸ್ತುವಾರಿಗೆ ಯಾರು ಇಲ್ಲದ್ದರಿಂದ ಕೆಲವೊಂದು ತೂಬುಗಳ ಕೊಂತದ ರಾಡು ಮತ್ತು ಪ್ಲೇಟನ್ನು ಕದೊಯ್ದಿದ್ದರು ಸಹ ಇಲಾಖೆಯವರು ಇದುವರಗೂ ಈ ಬಗ್ಗೆ ಗಮನಹರಿಸಿರಲಿಲ್ಲ.
ಭಾನುವಾರ ಬಂದ ಉತ್ತಮ ಮಳೆಯಿಂದಾಗಿ ಕೆರೆಗೆ ನೀರಿನ ಹರಿವು ಹೆಚ್ಚಿ ಕೆರೆ ತುಂಬುವ ಲಕ್ಷಣಗಳು ಗೋಚರಿಸಿದರೆ ಮತ್ತೊಂದೆಡೆ ತೂಬಿನ ಮೂಲಕ ಸ್ವಲ್ಪ ಮಟ್ಟಿನ ನೀರು ಹರಿದು ವ್ಯರ್ಥವಾಯಿತು. ಇದನ್ನು ಆಕೂಡಲೇ ಗಮನಿಸಿದ ಗ್ರಾಮಸ್ಥರು ತಾತ್ಕಾಲಿಕವಾಗಿ ಮರಳಿನ ಚೀಲ ಮತ್ತೊಂದು ಹಾಕಿ ತೂಬಿನಿಂದ ಹರಿದು ಹೋಗುವ ನೀರನ್ನು ತಡೆದಿದ್ದಾರೆ.
ಸದ್ಯ ಮಳೆ ಬಿಡುವು ಕೊಟ್ಟಿದ್ದು ಕೆರೆಯಲ್ಲಿ ತೂಬಿನ ಬಳಿ ನೀರಿನ ಪ್ರಮಾಣ ಕಡಿಮೆಯಿದ್ದು ಈ ಕೂಡಲೇ ಅಧಿಕಾರಿಗಳು ತೂಬುಗಳನ್ನು ಸರಿ ಮಾಡುವ ಕಾರ್ಯವನ್ನು ಕೈಗೊಳ್ಳಬೇಕಿದೆ ಇಲ್ಲವಾದರೆ ಮಳೆಬಂದು ತೂಬಿನ ಬಳಿ ನೀರು ನಿಂತು ಯಾವುದೇ ದುರಸ್ಥಿಕಾರ್ಯ ಮಾಡಲು ಅವಕಾಶವಾಗುವುದಿಲ್ಲ.
ಜೋಡಿತಿರುಮಲಾಪುರ ಕೆರೆಏರಿಮೇಲೆ ಮುಳ್ಳುಗಿಡಗಳು ದಟ್ಟವಾಗಿ ಬೆಳೆದು ಸಂಚಾರಕ್ಕೆ ಅಡ್ಡಿಯಾಗಿರುವುದು.
ಕೆರೆಏರಿ ತುಂಬೆಲ್ಲಾ ಜಾಲಿಗಿಡ : ಜನಸಂಚಾರಕ್ಕೆ ಯೋಗ್ಯವಾಗಿದ್ದ ಹಾಗೂ ವಾಯುವಿಹಾರಕ್ಕೆ ಸೂಕ್ತವಾಗಿದ್ದ ತಿರುಮಲಾಪುರ ಕೆರೆಏರಿ ಮೇಲೆ ಜಾಲಿಗಿಡ , ಪೊದೆ, ಬೇಲಿ ಬೆಳೆದು ಇಲ್ಲಿ ತಿರುಗಾಡುವವರಿಗೆ ಹೆಚ್ಚಿನ ತೊಂದರೆಯಾಗಿದೆ. ಕೆರೆ ಅಕ್ಕಪಕ್ಕದ ತೋಟಗಳಿಗೆ ಹೋಗುವವರಿಗೂ ಸಹ ತೊಂದರೆಯಾಗಿದೆ. ಕಳೆದ ಕೆಲ ದಿನಗಳಹಿಂದೆ ಸೂರಗೊಂಡನಹಳ್ಳಿ ಕಡೆಯ ಕೆರೆಕೋಡಿ ಕಡೆಯಿಂದ ಅಡ್ಡೇರಿಯವರೆಗೆ ಮಾತ್ರ ಮುಳ್ಳುಗಿಡಗಳನ್ನು ಅಲ್ಲಲ್ಲಿ ತೆರವು ಮಾಡಿ ಅಲ್ಲಿಂದ ಮುಂದೆ ಹುಳಿಯಾರುಕಡೆಯ ಕೋಡಿಯವರೆಗಿನ ಏರಿ ಮೇಲಿನ ಒಂದು ಗಿಡವನ್ನು ತೆರವು ಮಾಡದೆ ಕೈಬಿಟ್ಟಿದ್ದಾರೆ,
ಕೆರೆತುಂಬಿದಾಗ ಮಾತ್ರ ನಾಲ್ಕು ತಿಂಗಳ ಕಾಲ ನೀರುಗಂಟಿಯನ್ನು ನೇಮಕ ಮಾಡುವ ಇಲಾಖೆ ನಂತರ ವರ್ಷಾನುಗಟ್ಟಲೇ ಇತ್ತ ತಿರುಗಿ ನೋಡದಿರುವುದು ಸಮಸ್ಯೆಗೆ ಕಾರಣವಾಗಿದೆ.
ಒಂದೆಡೆ ತೂಬುಗಳ ನಿರ್ವಹಣೆಯಿಲ್ಲದೆ ಕೆರೆಯಲ್ಲಿ ನಿಲ್ಲಬೇಕಾಗಿದ್ದ ನೀರು ವ್ಯರ್ಥವಾಗುತ್ತಿದ್ದರೆ, ಕೆರೆ ಏರಿ ಮೇಲೆ ದಟ್ಟವಾಗಿ ಬೆಳೆದಿರುವ ಮುಳ್ಳುಗಿಡಗಳು ಸಂಚಾರಕ್ಕೆ ತೊಂದರೆಯಾಗುತ್ತಿರುವುದು ಸ್ಥಳಿಯರಲ್ಲಿ ಹಾಗೂ ಇಲ್ಲಿ ವಾಯುವಿಹಾರ ಮಾಡುವವರಲ್ಲಿ ಇಲಾಖೆಯ ಬಗ್ಗೆ ಬೇಸರ ಮೂಡುವಂತೆ ಮಾಡಿದೆ.
ಇನ್ನಾದರೂ ಕೆರೆಅಭಿವೃದ್ದಿಗೆ ಸಂಬಂಧಿಸಿದಂತ ನೀರಾವರಿ ಇಲಾಖೆ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಮುಂದಾಗಲಿ ಎಂಬುದು ಇಲ್ಲಿನ ರೈತರ,ಸಾರ್ವಜನಿಕರ, ಅಚ್ಚುಕಟ್ಟುದಾರರ ಒಕ್ಕೊರಲಿನ ಬೇಡಿಕೆಯಾಗಿದೆ. ಈ ಬೇಡಿಕೆಗೆ ಅಧಿಕಾರಿಗಳು ಸ್ಪಂದಿಸುತ್ತಾರೋ,ಇಲ್ಲವೋ ಎಂಬುದನ್ನು ಕಾದುನೋಡಬೇಕಿದೆ.
__________

ಕೆರೆ ದುವ್ರ್ಯವಸ್ಥೆ ನೋಡಿದರೆ ಕಳೆದೆರಡು ವರ್ಷಗಳ ಹಿಂದೆ ಲಕ್ಷಾಂತರ ರೂ ಕೆರೆ ಅಭಿವೃದ್ಧಿಗೆ ಖರ್ಚು ಮಾಡಿದ್ದಾಗಿ ಹೇಳುವ ಇಲಾಖೆ ಕಾರ್ಯವೈಖರಿ ಬಗ್ಗೆ ಅನುಮಾನ ಮೂಡುತ್ತದೆ. ಕೆರೆಗೆ ನೀರು ಬಂದಾಗ ಎಚ್ಚೆತ್ತುಕೊಳ್ಳುವ ಇಲಾಖೆ, ನೀರು ಬರುವ ಮೊದಲೇ ಕಾಮಗಾರಿಗಳನ್ನು ನಡೆಸಿದರೆ ಒಳಿತು: ಮೋಹನ್.





ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.