ವಿಷಯಕ್ಕೆ ಹೋಗಿ

ದೊಡ್ಡಬಿದರೆ ಕೆರೆ ತೂಬಲ್ಲಿ ಸೋರಿಕೆಯಾಗುತ್ತಿರುವ ನೀರು

ಹುಳಿಯಾರು ಹೋಬಳಿಯ ದೊಡ್ಡಬಿದರೆ ಕೆರೆಯ ತೂಬಲ್ಲಿ ನೀರು ಸೋರಿಕೆಯಾಗಿ ಗದ್ದೆಬಯಲಲ್ಲಿ ವ್ಯರ್ಥವಾಗಿ ಹರಿದು ಹೋಗುತ್ತಿದ್ದು ಈ ಬಗ್ಗೆ ಯಾರೊಬ್ಬರು ಗಮನ ನೀಡಿಲ್ಲವೆಂದು ಗ್ರಾಮಸ್ಥರು ದೂರಿದ್ದಾರೆ.
ತೂಬಿನ ಮೂಲಕ ವ್ಯರ್ಥವಾಗಿ ಹೊರ ಹೋಗುತ್ತಿರುವ ನೀರು.

ತೂಬಿನ ಕಾಲುವೆ ಮೂಲಕ ಹರಿದ ನೀರು ಗದ್ದೆಯೆಲ್ಲಾ ಆವರಿಸಿರುವುದು

ಕಳೆದ ನಾಲ್ಕೈದು ವರ್ಷದಿಂದ ಬರಿದಾಗಿದ್ದ ದೊಡ್ಡಬಿದರೆ ಕೆರೆ ಭಾನುವಾರ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಸೋಮವಾರದಂದು ಕೆರೆ ಕೋಡಿ ಬಿದ್ದಿದ್ದು ಇಲ್ಲಿನ ಜನರಲ್ಲಿ ಹರ್ಷವನ್ನುಂಟು ಮಾಡಿತ್ತು. ಆದರೆ ಈಗ ಅದರ ಬೆನ್ನಲೇ ತೂಬಿನ ಮೂಲಕ ನೀರು ಸೋರಿಕೆಯಾಗುತ್ತಿದ್ದು, ಒಂದುವಾರದಿಂದ ನೀರು ಹರಿಯುತ್ತಲೇ ಇದ್ದು ಕೆರೆನೀರು ವ್ಯರ್ಥವಾಗಿ ಹರಿಯುತ್ತಿದೆ ಎಂಬ ಆತಂಕ ಗ್ರಾಮಸ್ಥರಲ್ಲಿ ಮನೆ ಮಾಡಿದೆ.
ತೂಬಿನಿಂದ ಹೊರ ಬರುವ ನೀರು ಗದ್ದೆಬಯಲಿನ ಮೂಲಕ ಹರಿದು ಪೋಚಕಟ್ಟೆ ಕೆರೆಗೆ ಹೋಗುತ್ತಿರುವುದರಿಂದ ದಿನೇ ದಿನೇ ಕೆರೆಯಲ್ಲಿನ
ನೀರಿನ ಪ್ರಮಾಣ ಕ್ಷಿಣಿಸುತ್ತಿದೆ, ಹೊರ ಹೋಗುವ ನೀರಿನಿಂದ ಯಾವುದೇ ಪ್ರಯೋಜನವಾಗುತ್ತಿಲ್ಲ. ಈ ಬಗ್ಗೆ ನೀರುಗಂಟಿ ಮುಖಾಂತರ ಇಲಾಖೆಗೆ ತಿಳಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎನ್ನುತ್ತಾರೆ ನಿವಾಸಿಗಳು.
ಬೇಸಿಗೆ ಸಮಯದಲ್ಲಿ ಕೆರೆಏರಿ ಹಾಗೂ ತೂಬುಗಳ ದುರಸ್ಥಿ ಕೆಲಸ ಮಾಡಬೇಕಾಗಿದ್ದ ನೀರಾವರಿ ಇಲಾಖೆಯವರು ಯಾವುದೇ ಕಾರ್ಯಗಳನ್ನು ಮಾಡದೆ ಕೈಕಟ್ಟಿ ಕೂತಿದ್ದರ ಪರಿಣಾಮ ಇಂತಹ ಅವಗಢಗಳು ಉಂಟಾಗುತ್ತಿವೆ. ಇದರಿಂದ ರೈತರಿಗೆ ಹೆಚ್ಚಿನ ನಷ್ಟ ಉಂಟಾಗುವಂತಾಗಿದೆ.
ಇಲಾಖೆ ನಿರ್ಲಕ್ಷ: ನೀರಾವರಿ ಇಲಾಖೆಯವರ ನಿರ್ಲಕ್ಷವೇ ಇದಕ್ಕೆ ಕಾರಣವಾಗಿದ್ದು ಹೋಬಳಿಯಲ್ಲಿನ ಅನೇಕ ಕೆರೆಗಳಲ್ಲಿ ಇಂತಹ ಸಮಸ್ಯೆಗಳು ಎದುರಾಗುತ್ತಿವೆ. ಅದಕ್ಕೆ ಉದಾಹರಣೆ ಎಂಬಂತೆ ಜೋಡಿತಿರುಮಲಾಪುರ ಕೆರೆಯ ತೂಬನ್ನು ದುರಸ್ಥಿ ಮಾಡದ ಪರಿಣಾಮ ಕೆರೆಗೆ ಬರುವ ನೀರೆಲ್ಲಾ ತೂಬಿನ ಮೂಲಕ ವ್ಯರ್ಥವಾಗುವಂತಾಗಿದೆ. ಕೆರೆ ಅಭಿವೃದ್ದಿಗೆ ಅಂತ ಲಕ್ಷಾಂತರ ರೂ ವೆಚ್ಚಮಾಡಿರುವುದಾಗಿ ತಿಳಿಸುತ್ತಾರಾದೂ ಯಾವುದೇ ಕಾರ್ಯಗಳು ಆಗಿರುವುದು ಕಂಡುಬರುತ್ತಿಲ್ಲ.

ಕೆರೆಯಲ್ಲಿ ನೀರು ಶೇಖರಣೆಯಾಗುವುದರಿಂದ ಬೇಸಿಗೆಕಾಲದಲ್ಲಿ ದನಕರುಗಳಿಗೆ ನೀರುಕುಡಿಸಲು ನೆರವಾಗುವುದರ ಜೊತೆಗೆ ಅಂತರ್ಜಲವೃದ್ದಿಗೆ ಸಹಕಾರಿಯಾಗಲಿದೆ. ಆದರೆ ಈರೀತಿ ತೂಬಿನ ಮೂಲಕ ನೀರು ಹರಿದರೆ ಯಾವುದಕ್ಕೂ ಪ್ರಯೋಜನವಿಲ್ಲದಂತಾಗುತ್ತದೆ. ಈಗಲಾದರೂ ಇದಕ್ಕೆ ಸಂಬಂಧಪಟ್ಟವರು ಎಚ್ಚೆತು ತೂಬಿನ ದುರಸ್ಥಿ ಕಾರ್ಯ ಮಾಡುವ ಮೂಲಕ ಕೆರೆನೀರು ಪೋಲಾಗುವುದನ್ನು ತಪ್ಪಿಸಬೇಕಿದೆ ಎಂದು ರೈತರು ಒತ್ತಾಯಿಸಿದ್ದಾರೆ.      

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...