ವಿಷಯಕ್ಕೆ ಹೋಗಿ

ಹುಳಿಯಾರಿನಲ್ಲಿ ವೈಭವದ ಶರನ್ನವರಾತ್ರಿ

ಹುಳಿಯಾರು  ಪಟ್ಟಣದ ವಿವಿಧ ದೇವಾಲಯಗಳಲ್ಲಿ ಕಳೆದ ಹತ್ತುದಿನಗಳಿಂದ ಶರನ್ನವರಾತ್ರಿ ಪೂಜಾ ಮಹೋತ್ಸವ ವೈಭಯುತವಾಗಿ ಜರುಗಿತು.
ನವರಾತ್ರಿ ಅಂಗವಾಗಿ ಒಂಭತ್ತು ದಿನಗಳ ಕಾಲ ಎಲ್ಲಾ ದೇವರುಗಳಿಗೂ ನಿತ್ಯ ಕುಂಕುಮಾರ್ಚನೆ , ಪಂಚಾಮೃತಾಭಿಷೇಕ , ದುರ್ಗಿಪಾರಾಯಣ ಹಾಗೂ ವಿಶೇಷ ಅಲಂಕಾರ ನೆರವೇರಿತು. ನಿತ್ಯ ರಾತ್ರಿ ಭಕ್ತಾಧಿಗಳ ಸಮ್ಮುಖದಲ್ಲಿ ಭಜನೆ ಹಾಗೂ ಅಷ್ಟಾವಧಾನ ನಡೆದು ಮಹಾಮಂಗಳಾರತಿ ನಂತರ ಪ್ರಸಾದ ವಿನಿಯೋಗ ಮಾಡಲಾಗಿತ್ತು.
 ಹುಳಿಯಾರಿನಲ್ಲಿ ನವರಾಟ್ರಿ ಪ್ರಯುಕ್ತ ಕಾಳಮ್ಮ,ಬನಶಂಕರಿ ಹಾಗೂ ದುರ್ಗಾಪರಮೇಶ್ವರಿ ದೇವರುಗಳಿಗೆ ಮಾಡಿರುವ ಅಲಂಕಾರ.
ಬನಶಂಕರಿ ದೇವಾಲಯದಲ್ಲಿ ದೇವಾಂಗಮಂಡಳಿಯಿಂದ ಬನಶಂಕರಿ ಅಮ್ಮನವರ 17 ನೇ ವರ್ಷದ ಪೂಜಾಮಹೋತ್ಸವ ನಡೆದು ಅಮ್ಮನವರಿಗೆ ದುರ್ಗೆಯ ನಾನಾ ಅವತಾರಗಳಾದ ಅರಿಶಿನ ಕುಂಕುಮ,ಬ್ರಹ್ಮಚಾರಿಣಿ, ಗಜಲಕ್ಷ್ಮಿ,ಕಾತ್ಯಾಯನಿ,ಸ್ಕಂದಮಾತಾ, ಮಹಾಗೌರಿ,ಹಂಸವಾಹಿನಿ ಸರಸ್ವತಿ,ವನದುರ್ಗಿ,ಕಾಳರಾತ್ರಿ,ಸರ್ವಾವಂಕೃತ ಬನಶಂಕರಿ ಅಲಂಕಾರ ಮಾಡಲಾಗಿತ್ತು.
ವಿಶ್ವಕರ್ಮ ಸಮಾಜದಿಂದ ಕಾಳಿಕಾಂಭ ದೇವಾಲಯದಲ್ಲಿ ಕಾಳಿಮಾತೆಯನ್ನು ಗಜಲಕ್ಷ್ಮಿ,ಬ್ರಹ್ಮಚಾರಿಣಿ,ಹಿಮಕಾಳಿ,ಲಲಿತಾಪರಮೇಶ್ವರಿ, ಕಾಮಾಕ್ಷ್ಮಿ,ಸ್ಕಂದಮಾತಾ, ಸರಸ್ವತಿ,ವನದುರ್ಗಿ, ರಾಜರಾಜೇಶ್ವರಿಯಾಗಿ ಅಲಂಕಾರಿಸಲಾಗಿತ್ತು.
ಗ್ರಾಮದೇವತೆ ದುರ್ಗಮ್ಮ ದೇವಾಲಯದಲ್ಲಿ ಅಮ್ಮನವರನ್ನು ಒಂಭತ್ತು ದಿನಗಳಕಾಲ ಪಟ್ಟಕ್ಕೆ ಕೂರಿಸಿ ನಿತ್ಯ ನಾನಾ ಅಲಂಕಾರ ಹಾಗೂ ದುರ್ಗಿಪಾರಾಯಣ ಮಾಡುವ ಮೂಲಕ ಸರ್ವಾಲಂಕಾರ ಸೇವೆ ಸಲ್ಲಿಸಲಾಯಿತು.

ಗ್ರಾಮದೇವತೆ ಹುಳಿಯಾರಮ್ಮ,ಅನಂತಶಯನ ರಂಗನಾಥಸ್ವಾಮಿ,ಆರ್ಯವೈಶ್ಯಸಮಾಜದ ಕನ್ನಿಕಾ ಪರಮೇಶ್ವರಿ ಹಾಗೂ ಲಕ್ಷ್ಮಿ ದೇವಾಲಯದಲ್ಲೂ ಕೂಡ ಒಂಭತ್ತು ದಿನಗಳ ಕಾಲ ಅಲಂಕಾರ ಹಾಗೂ ವಿಶೇಷ ಪೂಜೆ ನೆರವೇರಿತು.ಎಲ್ಲಾ ದೇವಾಲಯಗಳಲ್ಲು ಮಾಡಿದ ಅಲಂಕಾರಗಳು ಭಕ್ತರ ಕಣ್ಮನ ಸೆಳೆಯಿತು. ನಿತ್ಯ ಎಲ್ಲಾ ದೇವಾಲಯಗಳಲ್ಲೂ ಅಪಾರ ಸಂಖ್ಯೆಯ ಭಕ್ತಾಧಿಗಳು ಹಾಜರಿದ್ದು ದೇವಿಯ ದರ್ಶನ ಪಡೆದು ಕೃತಾರ್ಥರಾದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.