ವಿಷಯಕ್ಕೆ ಹೋಗಿ

ಜೀವನ ಜೆಂಜಾಟದಲ್ಲಿ ಮನಸ್ಸಿನ ಸ್ವಾಸ್ಥ್ಯ ಹದಗೆಡುತ್ತಿದೆ : ವೈದ್ಯ ಸಿದ್ದರಾಮಯ್ಯ

         ಆಧುನಿಕ ಜಗತ್ತಿನಲ್ಲಿ ನಾವುಗಳು ಸದಾಕಾಲ ಒತ್ತಡದ ಜೀವನ ಸಾಗಿಸುತ್ತಾ ನಮ್ಮ ಮನಸ್ಸಿನ ಸ್ವಾಸ್ಥ್ಯ ವನ್ನು ಹತೋಟಿಯಲ್ಲಿಟ್ಟುಕೊಳ್ಳುವಲ್ಲಿ ವಿಫಲವಾಗುತ್ತಿದ್ದು, ಮನಸ್ಸಿನ ಸ್ವಾಸ್ಥ್ಯ ವನ್ನು ಹದಗೆಡಿಸಿಕೊಳ್ಳುತ್ತಿದ್ದೇವೆಂದು ಸಿದ್ಧಶ್ರೀ ಕ್ಲಿನಿಕ್ ನ ವೈದ್ಯ ಸಿದ್ಧರಾಮಯ್ಯ ವಿಷಾಧಿಸಿದರು.
ಪಟ್ಟಣದ ಗ್ರಾ.ಪಂ.ಕಛೇರಿಯಲ್ಲಿ ನಡೆದ ಮಾನಸಿಕ ಸ್ವಾಸ್ಥ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಮಾನಸಿಕ ಸ್ವಾಸ್ಥ್ಯ ಕುರಿತು ಅವರು ಉಪನ್ಯಾಸನೀಡಿದರು.
ಹುಳಿಯಾರಿನಲ್ಲಿ ನಡೆದ ಮಾನಸಿಕ ಸ್ವಾಸ್ಥ್ಯ ದಿನಾಚರಣೆಯಲ್ಲಿ ವೈದ್ಯ ಸಿದ್ದರಾಮಯ್ಯ ಉಪನ್ಯಾಸ ನೀಡಿದರು.
       ವ್ಯಕ್ತಿಯ ಮನಸ್ಸು ಸೂಕ್ಷ್ಮವಾಗಿದ್ದು , ಸ್ವಲ್ಪ ಘಾಸಿಯಾದರೂ ಸಾಕು ಆತನ ವರ್ತನೆಯಲ್ಲಿ ಬದಲಾವಣೆಗಳು ಉಂಟಾಗುತ್ತವೆ ಇದರಿಂದ ಅನೇಕ ತೊಂದರೆಗಳು ಸಹ ಉಂಟಾಗಿ ವ್ಯಕ್ತಿ ಮಾನಸಿಕ ರೋಗಿಯಾಗುವ ಸಂಭವಗಳು ಹೆಚ್ಚಾಗಿರುತ್ತವೆ ಎಂದರು.
         ದೈಹಿಕವಾಗಿ ತೊಂದರೆಯಾದರೆ ಶೀಘ್ರವೇ ಚಿಕಿತ್ಸೆ ಪಡೆದು ಗುಣಮುಖರಾಗಬಹುದು ಆದರೆ ಮಾನಸಿಕವಾಗಿ ತೊಂದರೆಗೊಳಗಾದರೆ ಅದರಿಂದ ಹೊರಬರುವುದು ಸುಲಭದ ಮಾತಲ್ಲ, ಇದರಿಂದ ವ್ಯಕ್ತಿಯ ಸಂಪೂರ್ಣ ಜೀವನವೇ ಅಸ್ಥವ್ಯಸ್ಥವಾಗುವ ಸಂಭವವಿರುತ್ತದೆ ಎಂದರು.
ಮಾನಸಿಕ ಅಸ್ವಾಸ್ಥ್ಯ ಕ್ಕೆ ಕಾರಣ: ಮಾನಸಿಕ ರೋಗಮೆದುಳಿಗೆ ಸಂಬಂಧಿಸಿದ್ದಾಗಿದ್ದು , ಹೆಚ್ಚು ಧೂಮಪಾನ,ಮದ್ಯಪಾನ, ಮಾದಕ ವ್ಯಸನಿಗಳಾಗುವುದರಿಂದ ಮನಸ್ಸಿನ ಸ್ಥಿಮಿತತೆಯನ್ನು ಕಳೆದುಕೊಳ್ಳುತ್ತೇವೆ. ಕೆಲವರಿಗೆ ವಂಶಪಾರಂಪರ್ಯವಾಗಿಯೂ , ಸಾಂಸಾರಿಕ ತೊಂದರೆಯಿಂದ, ಸಮಾಜದಲ್ಲಿ ಒತ್ತಡದಿಂದಾಗಿ ಮಾನಸಿಕ ಅಸ್ವಸ್ಥರಾಗುವ ಸಾಧ್ಯತೆಗಳು ಹೆಚ್ಚಿವೆ ಎಂದರು.
              ಪರಿಹಾರ : ದಿನದಲ್ಲಿ ಕೆಲ ಗಂಟೆಗಳಾದರೂ ದೇಹ ದಂಡನೆ ಮಾಡುವುದರ ಜೊತೆಗೆ ವ್ಯಾಯಾಮ, ಧ್ಯಾನ ಮಾಡುವುದು ಹಾಗೂ ದುಶ್ಚಟಗಳಿಂದ ದೂರವಿರುವುದು, ಪ್ರಕೃತಿಯೊಂದಿಗೆ ಸಮರಸದಿಂದ ನಡೆಯುವುದು, ಶುದ್ಧಗಳಿಕೆಯ ಕಡೆ ಗಮನ ಕೊಡುವುದರಿಂದ ಮನಸ್ಸು ಸಹ ಶುಭ್ರವಾಗಿರುವುದರ ಜೊತೆಗೆ ಯಾವುದೇ ರೋಗಗಳು ಸುಳಿಯುವುದಿಲ್ಲ ಎಂದರು.

              ಗ್ರಾ.ಪಂ.ಅಧ್ಯಕ್ಷೆ ಕಾಳಮ್ಮ ಅಧ್ಯಕ್ಷತೆವಹಿಸಿದ್ದು, ಚಿ.ನಾ.ಹಳ್ಳಿ ನ್ಯಾಯಾಲಯದ ಎನ್.ವೀಣಾ, ಸರ್ಕಾರಿ ಅಭಿಯೋಜಕರಾದ ರವೀಂದ್ರ,ಸಂತೋಷ್, ವಕೀಲ ಸಂಘದ ಅಧ್ಯಕ್ಷ ಕೃಷ್ಣಮೂರ್ತಿ, ವಕೀಲರಾದ ವಿಶ್ವನಾಥ್, ಹನುಮಂತಯ್ಯ,ಸದಾಶಿವು,ಚಿಕ್ಕಣ ಸೇರಿದಂತೆ ಇತರರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.