ವಿಷಯಕ್ಕೆ ಹೋಗಿ

ಜೀವನ ಜೆಂಜಾಟದಲ್ಲಿ ಮನಸ್ಸಿನ ಸ್ವಾಸ್ಥ್ಯ ಹದಗೆಡುತ್ತಿದೆ : ವೈದ್ಯ ಸಿದ್ದರಾಮಯ್ಯ

         ಆಧುನಿಕ ಜಗತ್ತಿನಲ್ಲಿ ನಾವುಗಳು ಸದಾಕಾಲ ಒತ್ತಡದ ಜೀವನ ಸಾಗಿಸುತ್ತಾ ನಮ್ಮ ಮನಸ್ಸಿನ ಸ್ವಾಸ್ಥ್ಯ ವನ್ನು ಹತೋಟಿಯಲ್ಲಿಟ್ಟುಕೊಳ್ಳುವಲ್ಲಿ ವಿಫಲವಾಗುತ್ತಿದ್ದು, ಮನಸ್ಸಿನ ಸ್ವಾಸ್ಥ್ಯ ವನ್ನು ಹದಗೆಡಿಸಿಕೊಳ್ಳುತ್ತಿದ್ದೇವೆಂದು ಸಿದ್ಧಶ್ರೀ ಕ್ಲಿನಿಕ್ ನ ವೈದ್ಯ ಸಿದ್ಧರಾಮಯ್ಯ ವಿಷಾಧಿಸಿದರು.
ಪಟ್ಟಣದ ಗ್ರಾ.ಪಂ.ಕಛೇರಿಯಲ್ಲಿ ನಡೆದ ಮಾನಸಿಕ ಸ್ವಾಸ್ಥ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಮಾನಸಿಕ ಸ್ವಾಸ್ಥ್ಯ ಕುರಿತು ಅವರು ಉಪನ್ಯಾಸನೀಡಿದರು.
ಹುಳಿಯಾರಿನಲ್ಲಿ ನಡೆದ ಮಾನಸಿಕ ಸ್ವಾಸ್ಥ್ಯ ದಿನಾಚರಣೆಯಲ್ಲಿ ವೈದ್ಯ ಸಿದ್ದರಾಮಯ್ಯ ಉಪನ್ಯಾಸ ನೀಡಿದರು.
       ವ್ಯಕ್ತಿಯ ಮನಸ್ಸು ಸೂಕ್ಷ್ಮವಾಗಿದ್ದು , ಸ್ವಲ್ಪ ಘಾಸಿಯಾದರೂ ಸಾಕು ಆತನ ವರ್ತನೆಯಲ್ಲಿ ಬದಲಾವಣೆಗಳು ಉಂಟಾಗುತ್ತವೆ ಇದರಿಂದ ಅನೇಕ ತೊಂದರೆಗಳು ಸಹ ಉಂಟಾಗಿ ವ್ಯಕ್ತಿ ಮಾನಸಿಕ ರೋಗಿಯಾಗುವ ಸಂಭವಗಳು ಹೆಚ್ಚಾಗಿರುತ್ತವೆ ಎಂದರು.
         ದೈಹಿಕವಾಗಿ ತೊಂದರೆಯಾದರೆ ಶೀಘ್ರವೇ ಚಿಕಿತ್ಸೆ ಪಡೆದು ಗುಣಮುಖರಾಗಬಹುದು ಆದರೆ ಮಾನಸಿಕವಾಗಿ ತೊಂದರೆಗೊಳಗಾದರೆ ಅದರಿಂದ ಹೊರಬರುವುದು ಸುಲಭದ ಮಾತಲ್ಲ, ಇದರಿಂದ ವ್ಯಕ್ತಿಯ ಸಂಪೂರ್ಣ ಜೀವನವೇ ಅಸ್ಥವ್ಯಸ್ಥವಾಗುವ ಸಂಭವವಿರುತ್ತದೆ ಎಂದರು.
ಮಾನಸಿಕ ಅಸ್ವಾಸ್ಥ್ಯ ಕ್ಕೆ ಕಾರಣ: ಮಾನಸಿಕ ರೋಗಮೆದುಳಿಗೆ ಸಂಬಂಧಿಸಿದ್ದಾಗಿದ್ದು , ಹೆಚ್ಚು ಧೂಮಪಾನ,ಮದ್ಯಪಾನ, ಮಾದಕ ವ್ಯಸನಿಗಳಾಗುವುದರಿಂದ ಮನಸ್ಸಿನ ಸ್ಥಿಮಿತತೆಯನ್ನು ಕಳೆದುಕೊಳ್ಳುತ್ತೇವೆ. ಕೆಲವರಿಗೆ ವಂಶಪಾರಂಪರ್ಯವಾಗಿಯೂ , ಸಾಂಸಾರಿಕ ತೊಂದರೆಯಿಂದ, ಸಮಾಜದಲ್ಲಿ ಒತ್ತಡದಿಂದಾಗಿ ಮಾನಸಿಕ ಅಸ್ವಸ್ಥರಾಗುವ ಸಾಧ್ಯತೆಗಳು ಹೆಚ್ಚಿವೆ ಎಂದರು.
              ಪರಿಹಾರ : ದಿನದಲ್ಲಿ ಕೆಲ ಗಂಟೆಗಳಾದರೂ ದೇಹ ದಂಡನೆ ಮಾಡುವುದರ ಜೊತೆಗೆ ವ್ಯಾಯಾಮ, ಧ್ಯಾನ ಮಾಡುವುದು ಹಾಗೂ ದುಶ್ಚಟಗಳಿಂದ ದೂರವಿರುವುದು, ಪ್ರಕೃತಿಯೊಂದಿಗೆ ಸಮರಸದಿಂದ ನಡೆಯುವುದು, ಶುದ್ಧಗಳಿಕೆಯ ಕಡೆ ಗಮನ ಕೊಡುವುದರಿಂದ ಮನಸ್ಸು ಸಹ ಶುಭ್ರವಾಗಿರುವುದರ ಜೊತೆಗೆ ಯಾವುದೇ ರೋಗಗಳು ಸುಳಿಯುವುದಿಲ್ಲ ಎಂದರು.

              ಗ್ರಾ.ಪಂ.ಅಧ್ಯಕ್ಷೆ ಕಾಳಮ್ಮ ಅಧ್ಯಕ್ಷತೆವಹಿಸಿದ್ದು, ಚಿ.ನಾ.ಹಳ್ಳಿ ನ್ಯಾಯಾಲಯದ ಎನ್.ವೀಣಾ, ಸರ್ಕಾರಿ ಅಭಿಯೋಜಕರಾದ ರವೀಂದ್ರ,ಸಂತೋಷ್, ವಕೀಲ ಸಂಘದ ಅಧ್ಯಕ್ಷ ಕೃಷ್ಣಮೂರ್ತಿ, ವಕೀಲರಾದ ವಿಶ್ವನಾಥ್, ಹನುಮಂತಯ್ಯ,ಸದಾಶಿವು,ಚಿಕ್ಕಣ ಸೇರಿದಂತೆ ಇತರರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...