ವಿಷಯಕ್ಕೆ ಹೋಗಿ

ಮನೆಗೆ ಸಿಡಿಲು ಬಡಿದು : ಯುವಕ ಬಲಿ

ಮನೆಯೊಂದಕ್ಕೆ ಸಿಡಿಲು ಅಪ್ಪಳಿಸಿದ ಪರಿಣಾಮ ಬೆಂಕಿ ಆವರಿಸಿಕೊಂಡು ಮನೆಯಲ್ಲಿದ್ದ ಮೂವರಲ್ಲಿ ಇಬ್ಬರು ಪಾರಾಗಿ ನತದೃಷ್ಟ ಯುವಕನೊಬ್ಬ ಬೆಂಕಿಯಲ್ಲಿ ಸಿಲುಕಿ ಸಾವನಪ್ಪಿರುವ ದುರ್ಘಟನೆ ಹೋಬಳಿಯ ಕೆಂಕೆರೆ ಗ್ರಾಮದ ಪುರದಮಠ ಗೇಟ್ ನಲ್ಲಿ ಸೋಮವಾರ ನಸುಕಿನಲ್ಲಿ ಘಟಿಸಿದೆ.
ಹುಳಿಯಾರು ಹೋಬಳಿ ಕೆಂಕೆರೆ ಪುರದಮಠ ಗೇಟ್ ನಲ್ಲಿ ಸೋಮವಾರ ಮುಂಜಾನೆ ಸಿಡಿಲು ತಾಕಿದ ಮನೆ.
ಕಾಯಿತಿಮ್ಮನಹಳ್ಳಿಯ ನರಸಿಂಹಯ್ಯ(22) ಎಂಬಾತ ಮೃತಪಟ್ಟ ದುರ್ದೈವಿಯಾಗಿದ್ದು ಈತ ತನ್ನ ಸಂಬಂಧಿಕರ ಮನೆಯಾದ ಪುರದಮಠ ಗೇಟ್ ನಲ್ಲಿರುವ ರಾಜಣ್ಣ ಎಂಬುವರ ಮನೆಯಲ್ಲಿ ಕೆಲಸ ಮಾಡಿಕೊಂಡಿಕೊಂಡಿದ್ದನು.
ಭಾನುವಾರ ರಾತ್ರಿಯಿಂದಲ್ಲೂ ಮಳೆಯಾಗುತ್ತಿದ್ದು ಸೋಮವಾರ ಬೆಳಗಿನಜಾವ ಸುಮಾರು 2 ರಿಂದ 3ರ ಸಮಯದಲ್ಲಿ ಆಗಸದಲ್ಲಿ ಮೂಡಿದ ಸಿಡಿಲು ರಾಜಣ್ಣ ಅವರ ಮನೆಯ ಪಡಸಾಲೆಯ ಭಾಗಕ್ಕೆ ಅಪ್ಪಳಿಸಿದ್ದು ಆ ಸಮಯದಲ್ಲಿ ಉಂಟಾದ ಬೆಂಕಿಯ ಕಿಡಿಗೆ ಪಡಸಾಲೆಯಲಿದ್ದ ಬೈಕ್ ಗಳೂ ಹತ್ತಿಕೊಂಡಿವೆ. ಅಲ್ಲದೆ ಮತ್ತೊಮ್ಮೆ ಎರಡೆ ನಿಮಿಷದ ಅಂತರದಲ್ಲಿ ಮನೆಯ ಮಧ್ಯ ಭಾಗಕ್ಕೂ ಮತ್ತೊಮ್ಮೆ ಸಿಡಲು ತಗುಲಿದ್ದು ಮನೆಯ ತೀರು,ಜವೆ, ಅಟ್ಟದ ಹಲಗೆಗಳೆಲ್ಲಾ ಸುಟ್ಟು ಕರಕಲಾಗಿವೆ.ಅಲ್ಲಿಯೇ ಮಲಗಿದ್ದ ನರಸಿಂಹ ಸಿಡಲಿನ ಅಘಾತಕ್ಕೆ ಬಲಿಯಾಗಿದ್ದಾನೆ.ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ, ಸುಟ್ಟುಕರಕಲಾಗಿದ್ದಾನೆ. ಅಷ್ಟರಲ್ಲಾಗಲೆ ಮನೆಯಲ್ಲಿ ಮಲಗಿದ್ದ ರಾಜಣ್ಣ , ಪತ್ನಿ ಮಂಗಳಮ್ಮ, ಮಕ್ಕಳಾದ ಪುನೀತ್ , ಮನೋಜ್ ಮನೆಯ ಹಿಂಬದಿಯ ಬಾಗಿಲಿನಿಂದ ಹೊರಬಂದಿದ್ದಾರೆ.ಬೆಂಕಿ ಬಲುಬೇಗ ಪಸರಿಸಿ , ಮನೆಯನ್ನೆಲ್ಲಾ ಆಕ್ರಮಿಸಿಕೊಂಡಿದೆ. ಆ ಸಮಯದಲ್ಲೂ ಕೂಡ ನರಸಿಂಹನನ್ನು ರಕ್ಷಿಸಲು ಹೋದ ರಾಜಣ್ಣನಿಗೂ ಬೆಂಕಿ ತಗುಲಿದ್ದು ಕೈ,ಕಾಲುಗಳಿಗೆ ಗಂಭೀರ ಗಾಯಗಳಾಗಿವೆ. ಅಕ್ಕಪಕ್ಕದ ಮನೆಯವರು ಬೆಂಕಿನಂದಿಸಲು ಮುಂದಾದಿದ್ದಲ್ಲದೆ, ಕೂಡಲೇ ಅಗ್ನಿಶಾಮಕದಳದವರಿಗೆ ವಿಷಯ ಮುಟ್ಟಿಸಿದ್ದಾರೆ. ಕೆಲವೇ ನಿಮಿಷಗಳಲ್ಲಿ ಅಗ್ನಿಶಾಮಕದಳದವರು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದರಿಂದ ಹೆಚ್ಚಿನ ಅನಾಹುತ ತಪ್ಪಿದೆ. ಒಟ್ಟಾರೆ ಸಿಡಿಲಿನಿಂದಾಗಿ ವ್ಯಕ್ತಿಯೊಬ್ಬ ಬಲಿಯಾಗಿದ್ದಲ್ಲದೆ, ಎರಡು ಬೈಕ್, ಗೃಹೋಪಯೋಗಿ ವಸ್ತುಗಳು ಬೆಂಕಿಯಿಂದ ಸಂಪೂರ್ಣ ಸುಟ್ಟುಹೋಗಿವೆ. ತೀವ್ರಗಾಯಗಳಾಗಿದ್ದ ರಾಜಣ್ಣನನ್ನು ತಿಪಟೂರು ಆಸ್ಪತ್ರೆಗೆ ಚಿಕಿತ್ಸೆಗೆ ಕಳುಹಿಸಲಾಗಿದೆ.
ಸ್ಥಳಕ್ಕೆ ಸಿಪಿಐ ಜಯಕುಮಾರ್, ಪಿಎಸೈ ಘೋರ್ಪಡೆ ಭೇಟಿ ನೀಡಿದ್ದು, ಹುಳಿಯಾರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಿಡಿಲಿನಿಂದ ಮೃತಪಟ್ಟ ವ್ಯಕ್ತಿಯ ಕುಟುಂಬದವರಿಗೆ ತಹಶೀಲ್ದಾರ್ ಕಾಮಾಕ್ಷಮ್ಮ ಒಂದೂವರೆಲಕ್ಷ ಪರಿಹಾರ ಘೋಷಿಸಿದರು.

ತಹಶೀಲ್ದಾರರಿಂದ ಪರಿಶೀಲನೆ: ಘಟನಾ ಸ್ಥಳ ಪರಿಶೀಲಿಸಿದ ತಹಶೀಲ್ದಾರ್ ಕಾಮಾಕ್ಷಮ್ಮ ಮೃತ ಕುಟುಂಬದವರಿಗೆ ಸಾಂತ್ವಾನ ಹೇಳಿದರಲ್ಲದೆ ಮೃತ ವ್ಯಕ್ತಿಗೆ ಸರ್ಕಾದರದಿಂದ ಒಂದೂವರೆ ಲಕ್ಷ ರೂ ನ ಪರಿಹಾರ ಘೋಷಿಸಿದ್ದಾರೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...