ವಿಷಯಕ್ಕೆ ಹೋಗಿ

ಈರಬೊಮ್ಮಕ್ಕನ ಈಚಲು ಸೇವೆ

         ಹುಳಿಯಾರು  ಹೋಬಳಿಯ ದಮ್ಮಡಿಹಟ್ಟಿಯಲ್ಲಿ ಈರಬೊಮ್ಮಕ್ಕ ದೇವಿಯ ಕಾರ್ತಿಕದ ಅಂಗವಾಗಿ ಪೂಜಾರಿಯಿಂದ ಈಚಲು ಸೇವೆ ನೆರವೇರಿತು.
ಈರಬೊಮ್ಮಕ್ಕನ ಈಚಲು ಸೇವೆಗೆ ಮರ ಹತ್ತುವ ಮುನ್ನಾ ನಡೆದ ಮಣೇವು ಸೇವೆ.



ಕಾರ್ತೀಕದ ಮೊದಲ ದಿನವಾದ ಪಾಡ್ಯ ದಮ್ಮಡಿಹಟ್ಟಿಯಲ್ಲಿ ವಿಶೇಷ ದಿನವಾಗಿದ್ದು , ಈರಬೊಮ್ಮಕ್ಕನ ಕೊಂಡ ಸೇವೆ ನಡೆಯುವುದಲ್ಲದೆ, ದೇವಿಯ ಅವಾಹನೆಗೆ ಒಳಗಾದ ಭಕ್ತನೊಬ್ಬ ಈಚಲು ಮರ ಏರುವ ಸೇವೆ ಸಹ ನಡೆಯುತ್ತದೆ. ಈರಬೊಮ್ಮಕ್ಕ ರಾಂಪುರ ಬಳಿಯ ಶಶಿವಾಳದ ದೇವತೆಯಾಗಿದ್ದು
ಅನಾದಿಕಾಲದಿಂದಲೂ ದಮ್ಮಡಿಹಟ್ಟಿಯಲ್ಲಿ ಬಂದು ನೆಲೆಸಿದ್ದಾಳೆ ಎಂಬ ಪ್ರತೀತಿ ಇದೆ. ಇಲ್ಲಿಗೆ ಬಂದು ನೆಲೆಸಿರುವ ಅಮ್ಮನವರಿಗಾಗಿ ಭಕ್ತಾಧಿಗಳೆಲ್ಲಾ ಸೇರಿ ಗ್ರಾಮದಲ್ಲಿ ದೇವಾಲಯಕಟ್ಟಿಸಿದ್ದು , ಅಮ್ಮನವರು ಹೇಳುವ ಹೇಳಿಕೆಗಳು ಸತ್ಯವಾದವೆಂದು ನಂಬಿರುವ ಅನೇಕ ಮಂದಿ ಇಲ್ಲಿಗೆ ನಡೆದುಕೊಳ್ಳುತ್ತಾರೆ.
ಕಾರ್ತೀಕದ ಸಮಯದಲ್ಲಿ ಕಳೆದ ಮೂರುವರ್ಷದಿಂದ ಈ ಆಚರಣೆ ನಡೆಸಿಕೊಂಡು ಬರುತ್ತಿದ್ದು, ಅಂತಯೇ ಈಬಾರಿಯೂ ಸಹ ಇದಕ್ಕೆ ಸಿದ್ದತೆ ನಡೆದಿದ್ದು , ದಮ್ಮಡಿಹಟ್ಟಿಯ ಈರಬೊಮ್ಮಕ್ಕದೇವಿ ಹಾಗೂ ಮಲ್ಲಮ್ಮ ದೇವತೆಗಳ ಸಮ್ಮುಖದಲ್ಲಿ ಅಮ್ಮನವರ ಆಹಾವನೆಯಾದ ಪೂಜಾರಿಗಳಿಬ್ಬರು ಈಚಲು ಮರವನ್ನೇರುತ್ತಾರೆ.

ದೇವಿ ಆವಾಹನೆಯಾದ ಪೂಜಾರಿಗಳು ಈಚಲು ಮರ ಏರುತ್ತಾರೆ. ಅಂತಯೇ ಅದಕ್ಕೆ ಬೇಕಾದ ಪೂರಕ ಸಿದ್ದತೆಯನ್ನು ಗ್ರಾಮದವರು ಮಾಡಿಕೊಳ್ಳುತ್ತಾರೆ. ದಮ್ಮಡಿಹಟ್ಟಿಯ ಈರಬೊಮ್ಮಕ್ಕ ದೇವಿ ಹಾಗೂ ಮಲ್ಲಮ್ಮನವರನ್ನು ಪೂಜಿಸಿ ನಡೆಮುಡಿಯಲ್ಲಿ ಆರತಿ ಹಾಗೂ ಮಂಗಳವಾದ್ಯದೊಂದಿಗೆ ಲಿಂಗಪ್ಪನಪಾಳ್ಯ ಹಾಗೂ ಗೌಡಗೆರೆ ಮಧ್ಯದಲ್ಲಿರುವ ಈಚಲು ಮರವಿರುವ ಕೊಂಡದೋಣಿ ಸ್ಥಳದ ಬಳಿಗೆ ಕರೆತರುತ್ತಾರೆ. ನಂತರ ಅಲ್ಲಿ ಪೂಜೆ, ಪನಿವಾರ, ಮಣೇವು ಸಲ್ಲಿಸಿದ ಬಳಿಕ ಅಮ್ಮನವರ ಅವಾಹನೆಯಾದ ಇಬ್ಬರು ಪೂಜಾರಿಗಳು ಭಕ್ತರ ಉದ್ಘೋಷ ಹಾಗೂ ವಾದ್ಯದ ನಾದದೊಂದಿಗೆ ಮುಳ್ಳಿನಿಂದ ಅವೃತವಾದ ಈಚಲು ಮರವನ್ನು ಸರಸರನೇ ಏರಿ ಅದರ ತುದಿವರೆಗೆ ಹತ್ತಿ ಜನರತ್ತ ಒಮ್ಮೆ ನೋಡಿ ದೇವಿಯ ಜೈಕಾರ ಹಾಕಿ ಭಕ್ತರಿಗೆ ಆಶಿರ್ವದಿಸಿ ಬಳಿಕ ವಾಪಸ್ಸ್ ಇಳಿದು ಅಮ್ಮನವರ ತೀರ್ಥ ಪ್ರಸಾದ ಸ್ವೀಕರಿಸುವ ಮೂಲಕ ಕೊನೆಗೊಳ್ಳುತ್ತದೆ. ಮುಳ್ಳಿನಿಂದ ಅವೃತವಾದ ಈಚಲು ಮರ ಹತ್ತುವ ಕೌತುಕವನ್ನು ನೋಡಲು ಗೌಡಗೆರೆ,ದಮ್ಮಡಿಹಟ್ಟಿ,ಕುರಿಹಟ್ಟಿ,ಲಿಂಗಪ್ಪನಪಾಳ್ಯ ಕೋಡಿಪಾಳ್ಯ ಸೇರಿದಂತೆ ಸುತ್ತಮುತ್ತ ಹಳ್ಳಿಗಳ ಅಪಾರ ಸಂಖ್ಯೆ ಭಕ್ತರು ಇಲ್ಲಿ ಸೇರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.