ವಿಷಯಕ್ಕೆ ಹೋಗಿ

ಈರಬೊಮ್ಮಕ್ಕನ ಈಚಲು ಸೇವೆ

         ಹುಳಿಯಾರು  ಹೋಬಳಿಯ ದಮ್ಮಡಿಹಟ್ಟಿಯಲ್ಲಿ ಈರಬೊಮ್ಮಕ್ಕ ದೇವಿಯ ಕಾರ್ತಿಕದ ಅಂಗವಾಗಿ ಪೂಜಾರಿಯಿಂದ ಈಚಲು ಸೇವೆ ನೆರವೇರಿತು.
ಈರಬೊಮ್ಮಕ್ಕನ ಈಚಲು ಸೇವೆಗೆ ಮರ ಹತ್ತುವ ಮುನ್ನಾ ನಡೆದ ಮಣೇವು ಸೇವೆ.



ಕಾರ್ತೀಕದ ಮೊದಲ ದಿನವಾದ ಪಾಡ್ಯ ದಮ್ಮಡಿಹಟ್ಟಿಯಲ್ಲಿ ವಿಶೇಷ ದಿನವಾಗಿದ್ದು , ಈರಬೊಮ್ಮಕ್ಕನ ಕೊಂಡ ಸೇವೆ ನಡೆಯುವುದಲ್ಲದೆ, ದೇವಿಯ ಅವಾಹನೆಗೆ ಒಳಗಾದ ಭಕ್ತನೊಬ್ಬ ಈಚಲು ಮರ ಏರುವ ಸೇವೆ ಸಹ ನಡೆಯುತ್ತದೆ. ಈರಬೊಮ್ಮಕ್ಕ ರಾಂಪುರ ಬಳಿಯ ಶಶಿವಾಳದ ದೇವತೆಯಾಗಿದ್ದು
ಅನಾದಿಕಾಲದಿಂದಲೂ ದಮ್ಮಡಿಹಟ್ಟಿಯಲ್ಲಿ ಬಂದು ನೆಲೆಸಿದ್ದಾಳೆ ಎಂಬ ಪ್ರತೀತಿ ಇದೆ. ಇಲ್ಲಿಗೆ ಬಂದು ನೆಲೆಸಿರುವ ಅಮ್ಮನವರಿಗಾಗಿ ಭಕ್ತಾಧಿಗಳೆಲ್ಲಾ ಸೇರಿ ಗ್ರಾಮದಲ್ಲಿ ದೇವಾಲಯಕಟ್ಟಿಸಿದ್ದು , ಅಮ್ಮನವರು ಹೇಳುವ ಹೇಳಿಕೆಗಳು ಸತ್ಯವಾದವೆಂದು ನಂಬಿರುವ ಅನೇಕ ಮಂದಿ ಇಲ್ಲಿಗೆ ನಡೆದುಕೊಳ್ಳುತ್ತಾರೆ.
ಕಾರ್ತೀಕದ ಸಮಯದಲ್ಲಿ ಕಳೆದ ಮೂರುವರ್ಷದಿಂದ ಈ ಆಚರಣೆ ನಡೆಸಿಕೊಂಡು ಬರುತ್ತಿದ್ದು, ಅಂತಯೇ ಈಬಾರಿಯೂ ಸಹ ಇದಕ್ಕೆ ಸಿದ್ದತೆ ನಡೆದಿದ್ದು , ದಮ್ಮಡಿಹಟ್ಟಿಯ ಈರಬೊಮ್ಮಕ್ಕದೇವಿ ಹಾಗೂ ಮಲ್ಲಮ್ಮ ದೇವತೆಗಳ ಸಮ್ಮುಖದಲ್ಲಿ ಅಮ್ಮನವರ ಆಹಾವನೆಯಾದ ಪೂಜಾರಿಗಳಿಬ್ಬರು ಈಚಲು ಮರವನ್ನೇರುತ್ತಾರೆ.

ದೇವಿ ಆವಾಹನೆಯಾದ ಪೂಜಾರಿಗಳು ಈಚಲು ಮರ ಏರುತ್ತಾರೆ. ಅಂತಯೇ ಅದಕ್ಕೆ ಬೇಕಾದ ಪೂರಕ ಸಿದ್ದತೆಯನ್ನು ಗ್ರಾಮದವರು ಮಾಡಿಕೊಳ್ಳುತ್ತಾರೆ. ದಮ್ಮಡಿಹಟ್ಟಿಯ ಈರಬೊಮ್ಮಕ್ಕ ದೇವಿ ಹಾಗೂ ಮಲ್ಲಮ್ಮನವರನ್ನು ಪೂಜಿಸಿ ನಡೆಮುಡಿಯಲ್ಲಿ ಆರತಿ ಹಾಗೂ ಮಂಗಳವಾದ್ಯದೊಂದಿಗೆ ಲಿಂಗಪ್ಪನಪಾಳ್ಯ ಹಾಗೂ ಗೌಡಗೆರೆ ಮಧ್ಯದಲ್ಲಿರುವ ಈಚಲು ಮರವಿರುವ ಕೊಂಡದೋಣಿ ಸ್ಥಳದ ಬಳಿಗೆ ಕರೆತರುತ್ತಾರೆ. ನಂತರ ಅಲ್ಲಿ ಪೂಜೆ, ಪನಿವಾರ, ಮಣೇವು ಸಲ್ಲಿಸಿದ ಬಳಿಕ ಅಮ್ಮನವರ ಅವಾಹನೆಯಾದ ಇಬ್ಬರು ಪೂಜಾರಿಗಳು ಭಕ್ತರ ಉದ್ಘೋಷ ಹಾಗೂ ವಾದ್ಯದ ನಾದದೊಂದಿಗೆ ಮುಳ್ಳಿನಿಂದ ಅವೃತವಾದ ಈಚಲು ಮರವನ್ನು ಸರಸರನೇ ಏರಿ ಅದರ ತುದಿವರೆಗೆ ಹತ್ತಿ ಜನರತ್ತ ಒಮ್ಮೆ ನೋಡಿ ದೇವಿಯ ಜೈಕಾರ ಹಾಕಿ ಭಕ್ತರಿಗೆ ಆಶಿರ್ವದಿಸಿ ಬಳಿಕ ವಾಪಸ್ಸ್ ಇಳಿದು ಅಮ್ಮನವರ ತೀರ್ಥ ಪ್ರಸಾದ ಸ್ವೀಕರಿಸುವ ಮೂಲಕ ಕೊನೆಗೊಳ್ಳುತ್ತದೆ. ಮುಳ್ಳಿನಿಂದ ಅವೃತವಾದ ಈಚಲು ಮರ ಹತ್ತುವ ಕೌತುಕವನ್ನು ನೋಡಲು ಗೌಡಗೆರೆ,ದಮ್ಮಡಿಹಟ್ಟಿ,ಕುರಿಹಟ್ಟಿ,ಲಿಂಗಪ್ಪನಪಾಳ್ಯ ಕೋಡಿಪಾಳ್ಯ ಸೇರಿದಂತೆ ಸುತ್ತಮುತ್ತ ಹಳ್ಳಿಗಳ ಅಪಾರ ಸಂಖ್ಯೆ ಭಕ್ತರು ಇಲ್ಲಿ ಸೇರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...