ವಿಷಯಕ್ಕೆ ಹೋಗಿ

ಹುಳಿಯಾರು ರಸ್ತೆ ಅವ್ಯವಸ್ಥೆ: ಅನಾಹುತಕ್ಕೆ ರಹದಾರಿ

ಪಟ್ಟಣದ ರಸ್ತೆ ಮಾರ್ಗ ಹದಗೆಟ್ಟಿದ್ದು ಸಂಚಾರ ದುಸ್ತರವಾಗಿದೆ. ಹದಗೆಟ್ಟಿರುವ ರಸ್ತೆಯಲ್ಲಿ ಸರಿ ದಾರಿ ಎಲ್ಲಿದೆ ಎಂದು ಹುಡುಕಿ ಸಂಚರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ.ಈವರೆಗೂ ಗುಂಡಿ ಬಿದ್ದಿರುವ ರಸ್ತೆಗೆ ತೇಪೆ ಭಾಗ್ಯವೂ ದಕ್ಕಿಲ್ಲ. ಅಲಲ್ಲಿ ಗ್ರಾ.ಪಂ ನಿಂದ ಕಲ್ಲು ಜೆಲ್ಲಿ ಹಾಕಿರುವುದು ಬಿಟ್ಟರೆ ಸರಿಯಾಗಿ ಎಲ್ಲೂ ಗುಂಡಿಗಳನ್ನು ಮುಚ್ಚುವ ಕಾರ್ಯ ಮಾತ್ರ ಆಗಿಲ್ಲ.
ಹುಳಿಯಾರಿನ ಯೂಸೂಪ್ ಖಾನ್ ಪೆಟ್ರೋಲ್ ಬಂಕ್ ಬಳಿ ತಿಪಟೂರು ಕಡೆ ಹೋಗುವ ರಸ್ತೆ ತುಂಬ ಬಿದ್ದಿರುವ ಗುಂಡಿಗಳು.
ಹುಳಿಯಾರು ಮಾರ್ಗವಾಗಿ ಪ್ರಮುಖ ಎರಡು ಹೆದ್ದಾರಿಗಳು ಹಾದು ಹೋಗಲಿದ್ದು ಅವುಗಳ ಕಾಮಗಾರಿಗೆ ಚಾಲನೆ ಸಿಕ್ಕಿದ್ದರೂ ಸಹ ಕಾಮಗಾರಿ ಮಾತ್ರ ಆಮೆಗತಿಯಲ್ಲಿ ಸಾಗುತ್ತಿದ್ದೆ. ರಸ್ತೆ ಅಭಿವೃದ್ದಿ ಹೆಸರಲ್ಲಿ ಬಂದು ಪಟ್ಟಣದ ಕೆಲವೆಡೆ ಸೇತುವೆಗಳ ನಿರ್ಮಾಣ ಮಾಡಿರುವುದನ್ನು ಬಿಟ್ಟರೆ ಮತ್ಯಾವುದೇ ಕಾರ್ಯ ಕೈಗೊಂಡಿಲ್ಲ. ಪಟ್ಟಣದಲ್ಲಿನ ತಿಪಟೂರು ರಸ್ತೆಯ ಒಣಕಾಲುವೆ ಬಳಿ, ಯೂಸೂಪ್ ಖಾನ್ ಪೆಟ್ರೋಲ್ ಬಂಕ್ ಬಳಿ, ರಾಂಗೋಪಾಲ್ ಸರ್ಕಲ್ ಹತ್ತಿರ, ಎಪಿಎಂಸಿ ಹತ್ತಿರ, ಬಸ್ ನಿಲ್ದಾಣ ಬಳಿ, ಗಾಂಧೀಪೇಟೆ ತಿರುವಿನ ಬಳಿ ಆಳುದ್ದ ಗುಂಡಿಗಳು ಬಿದ್ದಿದ್ದು, ರಸ್ತೆಯಾವುದು ಎಂದು ತಿಳಿಯದಿದ್ದು, ವಾಹನ ಸವಾರರಿಗೆ ಇಲ್ಲಿ ಸಂಚರಿಸುವುದು ಸವಾಲಾಗಿದೆ. ಮಳೆ ಬಂದರಂತೂ ಈ ಸಮಸ್ಯೆ ಹೇಳತೀರದಾಗಿದ್ದು ನೀರು ನಿಂತು ರಸ್ತೆಯಾವುದು, ಗುಂಡಿ ಎಲ್ಲಿದೆ ಎಂಬುದೇ ತಿಳಿಯದಂತಾಗಿ ಕೆಲ ಅಪಘಾತಗಳು ಸಹ ಸಂಭವಿಸುತ್ತಿರುತ್ತವೆ..
ರಸ್ತೆಯಲ್ಲಿ ದೊಡ್ಡದೊಡ್ಡ ಗುಂಡಿಗಳು ಬಿದಿದ್ದು ವಾಹನಗಳು ಆ ಗುಂಡಿಗಳನ್ನು ಇಳಿದು ಹತ್ತಿ ಹೋಗಬೇಕಿದ್ದು, ಹಲವಾರು ಬಾರಿ ಗುಂಡಿಗಿಳಿದ ವಾಹನಗಳು ಆಕ್ಸೆಲ್ ಮುರಿದುಕೊಂಡರೆ ಮತ್ತೆ ಕೆಲ ವಾಹನಗಳ ಮುಂಭಾಗಕ್ಕೆ ಗುಂಡಿಯ ಅಂಚು ತಕುತ್ತದೆ. ಅಲ್ಲದೆ ಬೈಕ್, ಆಟೋದಂತಹ ವಾಹನದವರು ತಮ್ಮ ವಾಹನ ಚಲಾಯಿಸಲು ಪ್ರಯಾಸಪಡುವಂತಾಗಿದೆ.
ಗಮನಕೊಡದ ಪಿಡಬ್ಯೂಡಿ : ಹೆದ್ದಾರಿ ರಸ್ತೆಗಳ ದುರಸ್ತಿಕಾರ್ಯ ಕೈಗೊಳ್ಳಬೇಕಾದ ಪಿಡಬ್ಯೂಡಿ ಇಲಾಖೆಯವರು ತಮಗೂ ಇದಕ್ಕೂ ಯಾವುದೇ ಸಂಬಂಧವಿಲ್ಲವೇನೋ ಎಂಬಂತೆ ಮೌನವಹಿಸಿದ್ದಾರೆ. ಈ ಬಗ್ಗೆ ಸಾರ್ವಜನಿಕರು ತಿಳಿಸಿದರೆ ಈಗಾಗಲೇ ಅಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದೆ ಅವರೇ ಅದನ್ನು ಸರಿ ಮಾಡುತ್ತಾರೆ ಎಂಬ ಹಾರಿಕೆ ಉತ್ತರ ನೀಡುತ್ತಾ ಜಾರಿಕೊಳ್ಳುತ್ತಿದ್ದಾರೆ. ಸದಾ ಇಲ್ಲೇ ಸಂಚರಿಸುವ ಸ್ಥಳೀಯ ಗ್ರಾ.ಪಂ.ನವರು ಸಹ ಈ ಬಗ್ಗೆ ಯಾವುದೇ ಕ್ರಮಕೆಗೊಳ್ಳುವವಲ್ಲಿ ವಿಫಲವಾಗಿದ್ದಾರೆ. ಅಲ್ಲದೆ ನೆಪಮಾತ್ರಕ್ಕೆ ಕೆಲ ಗುಂಡಿಗಳಿಗೆ ಕಲ್ಲು,ಮಣ್ಣು ಹಾಕಿಸಿರುವುದನ್ನು ಬಿಟ್ಟರೆ , ರಸ್ತೆ ಮತ್ತೆ ಹದಗೆಡದಂತೆ ಯಾವುದೇ ಕ್ರಮ ಕೈಗೊಂಡಿಲ್ಲ.
ಕಳೆದ ಮೂರ್ನಾಲ್ಕು ದಿನಗಳಿಂದ ಹೋಬಳಿಯಾದ್ಯಂತ ಉತ್ತಮ ಮಳೆಯಾಗಿದ್ದು, ರಸ್ತೆಯಲ್ಲಿನ ಗುಂಡಿಗಳೆಲ್ಲಾ ತುಂಬಿಕೊಂಡಿದ್ದು ವಾಹನಸವಾರರು ರಸ್ತೆ ಬಿಟ್ಟು ಪಕ್ಕದಲ್ಲಿ ವಾಹನ ಚಲಾಯಿಸುವಂತಾಗಿದೆ. ಅಲ್ಲದೆ ರಸ್ತೆ ಬದಿ ಸಂಚರಿಸುವ ಪಾದಾಚಾರಿಗಳಿಗೆ ಇದರಿಂದ ತೊಂದರೆಯಾಗಿದ್ದು ಪಾದಾಚಾರಿಗಳು,ಪ್ರಯಾಣಿಕರು,ವಾಹನಚಾಲಕರು ಸೇರಿದಂತೆ ಸಾರ್ವಜನಿಕರು ರಸ್ತೆ ದುರಸ್ತಿ ಬಗ್ಗೆ ಗಮನಕೊಡದ ಅಧಿಕಾರಿಗಳ ಕಾರ್ಯವೈಖರಿಗೆ ಛೀಮಾರಿ ಹಾಕುತ್ತಿದ್ದಾರಲ್ಲದೆ , ಶೀಘ್ರವೇ ರಸ್ತೆಯಲ್ಲಿನ ಗುಂಡಿಗಳ ದುರಸ್ತಿ ಮಾಡುವಂತೆ ಒತ್ತಾಯಿಸಿದ್ದಾರೆ.

ಸಾರ್ವಜನಿಕರ ಒತ್ತಾಯದ ಹಿನ್ನಲೆಯಲ್ಲಿ ಗ್ರಾ.ಪಂ.ನವರು ರಾಂಗೋಪಾಲ್ ಸರ್ಕಲ್ ನ ಗುಂಡಿಗೆ ಮಾತ್ರ ಕಲ್ಲು.ಜೆಲ್ಲಿ ಹಾಕಿರುವುದನ್ನು ಬಿಟ್ಟರೆ ಉಳಿದ ಕಡೆ ಬಿದ್ದಿರುವ ಗುಂಡಿಗಳ ಬಗ್ಗೆ ಲಕ್ಷ್ಯ ತೋರದಿರುವುದು ಎಂದಿನಂತೆ ಆ ಗುಂಡಿಗಳು ಆಗೆಯೇ ಇದ್ದು ಸಂಚರಿಸುವವರ ಪಾಲಿಗೆ ಮುಳುವಾಗಿವೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...