ವಿಷಯಕ್ಕೆ ಹೋಗಿ

ಹುಳಿಯಾರು ರಸ್ತೆ ಅವ್ಯವಸ್ಥೆ: ಅನಾಹುತಕ್ಕೆ ರಹದಾರಿ

ಪಟ್ಟಣದ ರಸ್ತೆ ಮಾರ್ಗ ಹದಗೆಟ್ಟಿದ್ದು ಸಂಚಾರ ದುಸ್ತರವಾಗಿದೆ. ಹದಗೆಟ್ಟಿರುವ ರಸ್ತೆಯಲ್ಲಿ ಸರಿ ದಾರಿ ಎಲ್ಲಿದೆ ಎಂದು ಹುಡುಕಿ ಸಂಚರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ.ಈವರೆಗೂ ಗುಂಡಿ ಬಿದ್ದಿರುವ ರಸ್ತೆಗೆ ತೇಪೆ ಭಾಗ್ಯವೂ ದಕ್ಕಿಲ್ಲ. ಅಲಲ್ಲಿ ಗ್ರಾ.ಪಂ ನಿಂದ ಕಲ್ಲು ಜೆಲ್ಲಿ ಹಾಕಿರುವುದು ಬಿಟ್ಟರೆ ಸರಿಯಾಗಿ ಎಲ್ಲೂ ಗುಂಡಿಗಳನ್ನು ಮುಚ್ಚುವ ಕಾರ್ಯ ಮಾತ್ರ ಆಗಿಲ್ಲ.
ಹುಳಿಯಾರಿನ ಯೂಸೂಪ್ ಖಾನ್ ಪೆಟ್ರೋಲ್ ಬಂಕ್ ಬಳಿ ತಿಪಟೂರು ಕಡೆ ಹೋಗುವ ರಸ್ತೆ ತುಂಬ ಬಿದ್ದಿರುವ ಗುಂಡಿಗಳು.
ಹುಳಿಯಾರು ಮಾರ್ಗವಾಗಿ ಪ್ರಮುಖ ಎರಡು ಹೆದ್ದಾರಿಗಳು ಹಾದು ಹೋಗಲಿದ್ದು ಅವುಗಳ ಕಾಮಗಾರಿಗೆ ಚಾಲನೆ ಸಿಕ್ಕಿದ್ದರೂ ಸಹ ಕಾಮಗಾರಿ ಮಾತ್ರ ಆಮೆಗತಿಯಲ್ಲಿ ಸಾಗುತ್ತಿದ್ದೆ. ರಸ್ತೆ ಅಭಿವೃದ್ದಿ ಹೆಸರಲ್ಲಿ ಬಂದು ಪಟ್ಟಣದ ಕೆಲವೆಡೆ ಸೇತುವೆಗಳ ನಿರ್ಮಾಣ ಮಾಡಿರುವುದನ್ನು ಬಿಟ್ಟರೆ ಮತ್ಯಾವುದೇ ಕಾರ್ಯ ಕೈಗೊಂಡಿಲ್ಲ. ಪಟ್ಟಣದಲ್ಲಿನ ತಿಪಟೂರು ರಸ್ತೆಯ ಒಣಕಾಲುವೆ ಬಳಿ, ಯೂಸೂಪ್ ಖಾನ್ ಪೆಟ್ರೋಲ್ ಬಂಕ್ ಬಳಿ, ರಾಂಗೋಪಾಲ್ ಸರ್ಕಲ್ ಹತ್ತಿರ, ಎಪಿಎಂಸಿ ಹತ್ತಿರ, ಬಸ್ ನಿಲ್ದಾಣ ಬಳಿ, ಗಾಂಧೀಪೇಟೆ ತಿರುವಿನ ಬಳಿ ಆಳುದ್ದ ಗುಂಡಿಗಳು ಬಿದ್ದಿದ್ದು, ರಸ್ತೆಯಾವುದು ಎಂದು ತಿಳಿಯದಿದ್ದು, ವಾಹನ ಸವಾರರಿಗೆ ಇಲ್ಲಿ ಸಂಚರಿಸುವುದು ಸವಾಲಾಗಿದೆ. ಮಳೆ ಬಂದರಂತೂ ಈ ಸಮಸ್ಯೆ ಹೇಳತೀರದಾಗಿದ್ದು ನೀರು ನಿಂತು ರಸ್ತೆಯಾವುದು, ಗುಂಡಿ ಎಲ್ಲಿದೆ ಎಂಬುದೇ ತಿಳಿಯದಂತಾಗಿ ಕೆಲ ಅಪಘಾತಗಳು ಸಹ ಸಂಭವಿಸುತ್ತಿರುತ್ತವೆ..
ರಸ್ತೆಯಲ್ಲಿ ದೊಡ್ಡದೊಡ್ಡ ಗುಂಡಿಗಳು ಬಿದಿದ್ದು ವಾಹನಗಳು ಆ ಗುಂಡಿಗಳನ್ನು ಇಳಿದು ಹತ್ತಿ ಹೋಗಬೇಕಿದ್ದು, ಹಲವಾರು ಬಾರಿ ಗುಂಡಿಗಿಳಿದ ವಾಹನಗಳು ಆಕ್ಸೆಲ್ ಮುರಿದುಕೊಂಡರೆ ಮತ್ತೆ ಕೆಲ ವಾಹನಗಳ ಮುಂಭಾಗಕ್ಕೆ ಗುಂಡಿಯ ಅಂಚು ತಕುತ್ತದೆ. ಅಲ್ಲದೆ ಬೈಕ್, ಆಟೋದಂತಹ ವಾಹನದವರು ತಮ್ಮ ವಾಹನ ಚಲಾಯಿಸಲು ಪ್ರಯಾಸಪಡುವಂತಾಗಿದೆ.
ಗಮನಕೊಡದ ಪಿಡಬ್ಯೂಡಿ : ಹೆದ್ದಾರಿ ರಸ್ತೆಗಳ ದುರಸ್ತಿಕಾರ್ಯ ಕೈಗೊಳ್ಳಬೇಕಾದ ಪಿಡಬ್ಯೂಡಿ ಇಲಾಖೆಯವರು ತಮಗೂ ಇದಕ್ಕೂ ಯಾವುದೇ ಸಂಬಂಧವಿಲ್ಲವೇನೋ ಎಂಬಂತೆ ಮೌನವಹಿಸಿದ್ದಾರೆ. ಈ ಬಗ್ಗೆ ಸಾರ್ವಜನಿಕರು ತಿಳಿಸಿದರೆ ಈಗಾಗಲೇ ಅಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದೆ ಅವರೇ ಅದನ್ನು ಸರಿ ಮಾಡುತ್ತಾರೆ ಎಂಬ ಹಾರಿಕೆ ಉತ್ತರ ನೀಡುತ್ತಾ ಜಾರಿಕೊಳ್ಳುತ್ತಿದ್ದಾರೆ. ಸದಾ ಇಲ್ಲೇ ಸಂಚರಿಸುವ ಸ್ಥಳೀಯ ಗ್ರಾ.ಪಂ.ನವರು ಸಹ ಈ ಬಗ್ಗೆ ಯಾವುದೇ ಕ್ರಮಕೆಗೊಳ್ಳುವವಲ್ಲಿ ವಿಫಲವಾಗಿದ್ದಾರೆ. ಅಲ್ಲದೆ ನೆಪಮಾತ್ರಕ್ಕೆ ಕೆಲ ಗುಂಡಿಗಳಿಗೆ ಕಲ್ಲು,ಮಣ್ಣು ಹಾಕಿಸಿರುವುದನ್ನು ಬಿಟ್ಟರೆ , ರಸ್ತೆ ಮತ್ತೆ ಹದಗೆಡದಂತೆ ಯಾವುದೇ ಕ್ರಮ ಕೈಗೊಂಡಿಲ್ಲ.
ಕಳೆದ ಮೂರ್ನಾಲ್ಕು ದಿನಗಳಿಂದ ಹೋಬಳಿಯಾದ್ಯಂತ ಉತ್ತಮ ಮಳೆಯಾಗಿದ್ದು, ರಸ್ತೆಯಲ್ಲಿನ ಗುಂಡಿಗಳೆಲ್ಲಾ ತುಂಬಿಕೊಂಡಿದ್ದು ವಾಹನಸವಾರರು ರಸ್ತೆ ಬಿಟ್ಟು ಪಕ್ಕದಲ್ಲಿ ವಾಹನ ಚಲಾಯಿಸುವಂತಾಗಿದೆ. ಅಲ್ಲದೆ ರಸ್ತೆ ಬದಿ ಸಂಚರಿಸುವ ಪಾದಾಚಾರಿಗಳಿಗೆ ಇದರಿಂದ ತೊಂದರೆಯಾಗಿದ್ದು ಪಾದಾಚಾರಿಗಳು,ಪ್ರಯಾಣಿಕರು,ವಾಹನಚಾಲಕರು ಸೇರಿದಂತೆ ಸಾರ್ವಜನಿಕರು ರಸ್ತೆ ದುರಸ್ತಿ ಬಗ್ಗೆ ಗಮನಕೊಡದ ಅಧಿಕಾರಿಗಳ ಕಾರ್ಯವೈಖರಿಗೆ ಛೀಮಾರಿ ಹಾಕುತ್ತಿದ್ದಾರಲ್ಲದೆ , ಶೀಘ್ರವೇ ರಸ್ತೆಯಲ್ಲಿನ ಗುಂಡಿಗಳ ದುರಸ್ತಿ ಮಾಡುವಂತೆ ಒತ್ತಾಯಿಸಿದ್ದಾರೆ.

ಸಾರ್ವಜನಿಕರ ಒತ್ತಾಯದ ಹಿನ್ನಲೆಯಲ್ಲಿ ಗ್ರಾ.ಪಂ.ನವರು ರಾಂಗೋಪಾಲ್ ಸರ್ಕಲ್ ನ ಗುಂಡಿಗೆ ಮಾತ್ರ ಕಲ್ಲು.ಜೆಲ್ಲಿ ಹಾಕಿರುವುದನ್ನು ಬಿಟ್ಟರೆ ಉಳಿದ ಕಡೆ ಬಿದ್ದಿರುವ ಗುಂಡಿಗಳ ಬಗ್ಗೆ ಲಕ್ಷ್ಯ ತೋರದಿರುವುದು ಎಂದಿನಂತೆ ಆ ಗುಂಡಿಗಳು ಆಗೆಯೇ ಇದ್ದು ಸಂಚರಿಸುವವರ ಪಾಲಿಗೆ ಮುಳುವಾಗಿವೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...