ವಿಷಯಕ್ಕೆ ಹೋಗಿ

ಹುಳಿಯಾರು ರಸ್ತೆ ಅವ್ಯವಸ್ಥೆ: ಅನಾಹುತಕ್ಕೆ ರಹದಾರಿ

ಪಟ್ಟಣದ ರಸ್ತೆ ಮಾರ್ಗ ಹದಗೆಟ್ಟಿದ್ದು ಸಂಚಾರ ದುಸ್ತರವಾಗಿದೆ. ಹದಗೆಟ್ಟಿರುವ ರಸ್ತೆಯಲ್ಲಿ ಸರಿ ದಾರಿ ಎಲ್ಲಿದೆ ಎಂದು ಹುಡುಕಿ ಸಂಚರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ.ಈವರೆಗೂ ಗುಂಡಿ ಬಿದ್ದಿರುವ ರಸ್ತೆಗೆ ತೇಪೆ ಭಾಗ್ಯವೂ ದಕ್ಕಿಲ್ಲ. ಅಲಲ್ಲಿ ಗ್ರಾ.ಪಂ ನಿಂದ ಕಲ್ಲು ಜೆಲ್ಲಿ ಹಾಕಿರುವುದು ಬಿಟ್ಟರೆ ಸರಿಯಾಗಿ ಎಲ್ಲೂ ಗುಂಡಿಗಳನ್ನು ಮುಚ್ಚುವ ಕಾರ್ಯ ಮಾತ್ರ ಆಗಿಲ್ಲ.
ಹುಳಿಯಾರಿನ ಯೂಸೂಪ್ ಖಾನ್ ಪೆಟ್ರೋಲ್ ಬಂಕ್ ಬಳಿ ತಿಪಟೂರು ಕಡೆ ಹೋಗುವ ರಸ್ತೆ ತುಂಬ ಬಿದ್ದಿರುವ ಗುಂಡಿಗಳು.
ಹುಳಿಯಾರು ಮಾರ್ಗವಾಗಿ ಪ್ರಮುಖ ಎರಡು ಹೆದ್ದಾರಿಗಳು ಹಾದು ಹೋಗಲಿದ್ದು ಅವುಗಳ ಕಾಮಗಾರಿಗೆ ಚಾಲನೆ ಸಿಕ್ಕಿದ್ದರೂ ಸಹ ಕಾಮಗಾರಿ ಮಾತ್ರ ಆಮೆಗತಿಯಲ್ಲಿ ಸಾಗುತ್ತಿದ್ದೆ. ರಸ್ತೆ ಅಭಿವೃದ್ದಿ ಹೆಸರಲ್ಲಿ ಬಂದು ಪಟ್ಟಣದ ಕೆಲವೆಡೆ ಸೇತುವೆಗಳ ನಿರ್ಮಾಣ ಮಾಡಿರುವುದನ್ನು ಬಿಟ್ಟರೆ ಮತ್ಯಾವುದೇ ಕಾರ್ಯ ಕೈಗೊಂಡಿಲ್ಲ. ಪಟ್ಟಣದಲ್ಲಿನ ತಿಪಟೂರು ರಸ್ತೆಯ ಒಣಕಾಲುವೆ ಬಳಿ, ಯೂಸೂಪ್ ಖಾನ್ ಪೆಟ್ರೋಲ್ ಬಂಕ್ ಬಳಿ, ರಾಂಗೋಪಾಲ್ ಸರ್ಕಲ್ ಹತ್ತಿರ, ಎಪಿಎಂಸಿ ಹತ್ತಿರ, ಬಸ್ ನಿಲ್ದಾಣ ಬಳಿ, ಗಾಂಧೀಪೇಟೆ ತಿರುವಿನ ಬಳಿ ಆಳುದ್ದ ಗುಂಡಿಗಳು ಬಿದ್ದಿದ್ದು, ರಸ್ತೆಯಾವುದು ಎಂದು ತಿಳಿಯದಿದ್ದು, ವಾಹನ ಸವಾರರಿಗೆ ಇಲ್ಲಿ ಸಂಚರಿಸುವುದು ಸವಾಲಾಗಿದೆ. ಮಳೆ ಬಂದರಂತೂ ಈ ಸಮಸ್ಯೆ ಹೇಳತೀರದಾಗಿದ್ದು ನೀರು ನಿಂತು ರಸ್ತೆಯಾವುದು, ಗುಂಡಿ ಎಲ್ಲಿದೆ ಎಂಬುದೇ ತಿಳಿಯದಂತಾಗಿ ಕೆಲ ಅಪಘಾತಗಳು ಸಹ ಸಂಭವಿಸುತ್ತಿರುತ್ತವೆ..
ರಸ್ತೆಯಲ್ಲಿ ದೊಡ್ಡದೊಡ್ಡ ಗುಂಡಿಗಳು ಬಿದಿದ್ದು ವಾಹನಗಳು ಆ ಗುಂಡಿಗಳನ್ನು ಇಳಿದು ಹತ್ತಿ ಹೋಗಬೇಕಿದ್ದು, ಹಲವಾರು ಬಾರಿ ಗುಂಡಿಗಿಳಿದ ವಾಹನಗಳು ಆಕ್ಸೆಲ್ ಮುರಿದುಕೊಂಡರೆ ಮತ್ತೆ ಕೆಲ ವಾಹನಗಳ ಮುಂಭಾಗಕ್ಕೆ ಗುಂಡಿಯ ಅಂಚು ತಕುತ್ತದೆ. ಅಲ್ಲದೆ ಬೈಕ್, ಆಟೋದಂತಹ ವಾಹನದವರು ತಮ್ಮ ವಾಹನ ಚಲಾಯಿಸಲು ಪ್ರಯಾಸಪಡುವಂತಾಗಿದೆ.
ಗಮನಕೊಡದ ಪಿಡಬ್ಯೂಡಿ : ಹೆದ್ದಾರಿ ರಸ್ತೆಗಳ ದುರಸ್ತಿಕಾರ್ಯ ಕೈಗೊಳ್ಳಬೇಕಾದ ಪಿಡಬ್ಯೂಡಿ ಇಲಾಖೆಯವರು ತಮಗೂ ಇದಕ್ಕೂ ಯಾವುದೇ ಸಂಬಂಧವಿಲ್ಲವೇನೋ ಎಂಬಂತೆ ಮೌನವಹಿಸಿದ್ದಾರೆ. ಈ ಬಗ್ಗೆ ಸಾರ್ವಜನಿಕರು ತಿಳಿಸಿದರೆ ಈಗಾಗಲೇ ಅಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದೆ ಅವರೇ ಅದನ್ನು ಸರಿ ಮಾಡುತ್ತಾರೆ ಎಂಬ ಹಾರಿಕೆ ಉತ್ತರ ನೀಡುತ್ತಾ ಜಾರಿಕೊಳ್ಳುತ್ತಿದ್ದಾರೆ. ಸದಾ ಇಲ್ಲೇ ಸಂಚರಿಸುವ ಸ್ಥಳೀಯ ಗ್ರಾ.ಪಂ.ನವರು ಸಹ ಈ ಬಗ್ಗೆ ಯಾವುದೇ ಕ್ರಮಕೆಗೊಳ್ಳುವವಲ್ಲಿ ವಿಫಲವಾಗಿದ್ದಾರೆ. ಅಲ್ಲದೆ ನೆಪಮಾತ್ರಕ್ಕೆ ಕೆಲ ಗುಂಡಿಗಳಿಗೆ ಕಲ್ಲು,ಮಣ್ಣು ಹಾಕಿಸಿರುವುದನ್ನು ಬಿಟ್ಟರೆ , ರಸ್ತೆ ಮತ್ತೆ ಹದಗೆಡದಂತೆ ಯಾವುದೇ ಕ್ರಮ ಕೈಗೊಂಡಿಲ್ಲ.
ಕಳೆದ ಮೂರ್ನಾಲ್ಕು ದಿನಗಳಿಂದ ಹೋಬಳಿಯಾದ್ಯಂತ ಉತ್ತಮ ಮಳೆಯಾಗಿದ್ದು, ರಸ್ತೆಯಲ್ಲಿನ ಗುಂಡಿಗಳೆಲ್ಲಾ ತುಂಬಿಕೊಂಡಿದ್ದು ವಾಹನಸವಾರರು ರಸ್ತೆ ಬಿಟ್ಟು ಪಕ್ಕದಲ್ಲಿ ವಾಹನ ಚಲಾಯಿಸುವಂತಾಗಿದೆ. ಅಲ್ಲದೆ ರಸ್ತೆ ಬದಿ ಸಂಚರಿಸುವ ಪಾದಾಚಾರಿಗಳಿಗೆ ಇದರಿಂದ ತೊಂದರೆಯಾಗಿದ್ದು ಪಾದಾಚಾರಿಗಳು,ಪ್ರಯಾಣಿಕರು,ವಾಹನಚಾಲಕರು ಸೇರಿದಂತೆ ಸಾರ್ವಜನಿಕರು ರಸ್ತೆ ದುರಸ್ತಿ ಬಗ್ಗೆ ಗಮನಕೊಡದ ಅಧಿಕಾರಿಗಳ ಕಾರ್ಯವೈಖರಿಗೆ ಛೀಮಾರಿ ಹಾಕುತ್ತಿದ್ದಾರಲ್ಲದೆ , ಶೀಘ್ರವೇ ರಸ್ತೆಯಲ್ಲಿನ ಗುಂಡಿಗಳ ದುರಸ್ತಿ ಮಾಡುವಂತೆ ಒತ್ತಾಯಿಸಿದ್ದಾರೆ.

ಸಾರ್ವಜನಿಕರ ಒತ್ತಾಯದ ಹಿನ್ನಲೆಯಲ್ಲಿ ಗ್ರಾ.ಪಂ.ನವರು ರಾಂಗೋಪಾಲ್ ಸರ್ಕಲ್ ನ ಗುಂಡಿಗೆ ಮಾತ್ರ ಕಲ್ಲು.ಜೆಲ್ಲಿ ಹಾಕಿರುವುದನ್ನು ಬಿಟ್ಟರೆ ಉಳಿದ ಕಡೆ ಬಿದ್ದಿರುವ ಗುಂಡಿಗಳ ಬಗ್ಗೆ ಲಕ್ಷ್ಯ ತೋರದಿರುವುದು ಎಂದಿನಂತೆ ಆ ಗುಂಡಿಗಳು ಆಗೆಯೇ ಇದ್ದು ಸಂಚರಿಸುವವರ ಪಾಲಿಗೆ ಮುಳುವಾಗಿವೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.