ವಿಷಯಕ್ಕೆ ಹೋಗಿ

ಆಯುಧಪೂಜೆ: ಖರೀದಿಗೆ ಮುಂದಾದ ಗ್ರಾಹಕರು ಪಟ್ಟಣದೆಲ್ಲೆಡೆ ರಾಶಿರಾಶಿ ಬೂದುಗುಂಬಳ

ಪಟ್ಟಣದಲ್ಲಿ ಆಯುಧಪೂಜೆಯ ಹಿನ್ನಲ್ಲೆಯಲ್ಲಿ ಗುರುವಾರದಂದು ಹಬ್ಬದಸಂತೆ ನಡೆಯಿತು. ಸಂತೆಗೆ ಆಗಮಿಸಿದ ಪಟ್ಟಣದ ಸುತ್ತಮುತ್ತಲಿನ ಹಳ್ಳಿಗಳ ರೈತರು ಹಬ್ಬಕ್ಕೆ ಬೇಕಾದ ಹೂ,ಹಣ್ಣು ಸೇರಿದಂತೆ ಇನ್ನಿತರ ವಸ್ತುಗಳನ್ನು ಕೊಂಡೊಯ್ಯುತ್ತಿದುದ್ದು ಸಾಮಾನ್ಯವಾಗಿತ್ತು. ಆಯುಧಪೂಜೆ ಪ್ರಯುಕ್ತ ಎಲ್ಲೆಡೆ ರಾಶಿರಾಶಿ ಬೂದುಗುಂಬಳ ಕಂಡುಬಂತು.
 ಹುಳಿಯಾರಿನ ಬಸ್ ನಿಲ್ದಾಣದಲ್ಲಿ ಆಯುಧಪೂಜೆ ಅಂಗವಾಗಿ ಬಂದಿದ್ದ ಕುಂಬಳಕಾಯಿ ಕೊಂಡುಕೊಳ್ಳುತ್ತಿರುವ ಗ್ರಾಹಕರು.

ಹುಳಿಯಾರು ಬಸ್ ನಿಲ್ದಾಣದ ಅಂಗಡಿಯೊಂದರಲ್ಲಿ ವಾಹನ ಅಲಂಕಾರಕ್ಕೆ ಬೇಕಾದ ಅಲಂಕಾರಿಕ ವಸ್ತುಗಳ ಖರೀದಿಯಲ್ಲಿ ಮಗ್ನರಾಗಿರುವ ಗ್ರಾಹಕರು.


ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಶಾವಂತಿಗೆ,ಬಟನ್ಸ್,ಕುಂಬಳಕಾಯಿ ಬೆಲೆ ತುಸು ಕಡಿಮೆಯಾಗಿತ್ತು, ಶಾವಂತಿಗೆ ಮಾರೊಂದಕ್ಕೆ 50-60 ಇದ್ದರೆ, ಕುಂಬಳಕಾಯಿಬೆಲೆ ಕಳೆದ ಬಾರಿಗಿಂತ ಕಡಿಮೆಯಾಗಿದ್ದು ಸಣ್ಣ ಗಾತ್ರದವಕ್ಕೆ 20 ರಿಂದ 30 ಇದ್ದರೆ, ಭಾರಿ ಗಾತ್ರದವಕ್ಕೆ 50-80 ರೂ ಇತ್ತು. ಈ ಹಿಂದಿನ ವರ್ಷದಂತೆ ಈ ಸಲವೂ ಉತ್ತಮ ಬೆಲೆ ಇರುತ್ತದೆಂದು ಹಬ್ಬಕ್ಕೆ ಎರಡುದಿನ ಮುಂಚಿತವಾಗಿಯೇ ರೈತರು ಕುಂಬಳಕಾಯಿಯನ್ನು ಮಾರಲು ತಂದಿದ್ದರು. ಪಟ್ಟಣದ ಅನೇಕ ಕಡೆ ಕುಂಬಳಕಾಯಿಯ ರಾಶಿರಾಶಿಯೇ ಇದ್ದು ಗ್ರಾಹಕರಿಗಾಗಿ ಕಾದುಕೂರುವಂತೆ ಪರಿಸ್ಥಿತಿ ಮಾರಾಟಗಾರನದಾಗಿತ್ತು. ಬಾಳೆಕಂದು ಜೊತೆಒಂದಕ್ಕೆ 10-30ರೂ, ಚೆಂಡು ಹೂ ಕೆ.ಜಿ 30ರೂಗೆ ಮಾರಾಟವಾಗುತ್ತಿದ್ದವು. ಪುಟ್ಟಬಾಳೆಹಣ್ಣನ್ನು ಹೊರತುಪಡಿಸಿದರೆ ಸೇಬು,ದ್ರಾಕ್ಷಿ,ಮೊಸುಂಬೆ ಸೇರಿದಂತೆ ಇತರೆ ಹಣ್ಣುಗಳ ಬೆಲೆ ಎಂದಿನಂತೆ ಇದ್ದು ಪುಟ್ಟಬಾಳೆಹಣ್ಣು ಮಾತ್ರ ಕೆ.ಜಿ 60 ರೂಗೆ ಬಿಕರಿಯಾಗುತ್ತಿತ್ತು.
ಮೂರ್ನಾಲ್ಕು ದಿನ ರಜೆ ಇರುವುದರಿಂದ ಬೆಂಗಳೂರು ಸೇರಿದಂತೆ ಇನ್ನಿತರ ಊರುಗಳಲ್ಲಿ ಕೆಲಸ ಮಾಡಿಕೊಂಡಿದ್ದ ಜನ ತಮ್ಮ ತಮ್ಮ ಊರುಗಳಿಗೆ ಬರುತ್ತಿದ್ದು ಬಸ್ ಗಳೆಲ್ಲಾ ರಷಾಗಿದ್ದವಲ್ಲದೆ, ಪಟ್ಟಣದ ಬಸ್ ನಿಲ್ದಾಣ ಜನಜಂಗುಳಿಯಿಂದ ಕೂಡಿತ್ತು.

ಹುಳಿಯಾರಿನ ಮ್ಯಾಕಾನಿಕ್ ಅಂಗಡಿಯೊಂದರಲ್ಲಿ ಹಳೆಯವಸ್ತುಗಳನ್ನು ಹೊರಹಾಕಿ ಆಯುಧಪೂಜೆಗೆ ಸಿದ್ದತೆ ಮಾಡಿಕೊಳ್ಳುತ್ತಿರುವುದು.
ಮಕ್ಕಳು ಹಾಗೂ ವಾಹನ ಮಾಲೀಕರು ತಮ್ಮ ವಾಹನವನ್ನು ಅಲಂಕರಿಸಲು ಬೇಕಾದ ಮಿಂಚಿನ ಹಾರ, ಟೇಪ್,ಬಲೂನು ಸೇರಿದಂತೆ ಇತರ ಅಲಂಕಾರಿಕ ವಸ್ತುಗಳನ್ನು ಕೊಂಡುಕೊಳ್ಳಲು ಮುಗಿಬಿಳುತ್ತಿದ್ದರೆ, ಗ್ಯಾರೇಜ್, ಮ್ಯಾಕಾನಿಕ್ ಅಂಗಡಿಯವರು, ಲೇತ್ ನವರು, ವೆಲ್ಡಿಂಗ್ ಶಾಪ್ ನವರು ತಮ್ಮ ಅಂಗಡಿಯಲ್ಲಿನ ಹಳೆವಸ್ತುಗಳನ್ನು ಒಂದೆಡೆ ಹಾಕಿ ಅಂಗಡಿಗಳನ್ನು ಸ್ವಚ್ಚ ಮಾಡಿಕೊಳ್ಳುತ್ತಿರುವುದರಲ್ಲಿ ಮಗ್ನರಾಗಿದ್ದರು. ಒಟ್ಟಾರೆ ಪಟ್ಟಣದೆಲ್ಲೆಡೆ ಆಯುಧಪೂಜೆಯ ಸಂಭ್ರಮ ತುಂಬಿತುಳುಕುತ್ತಿತ್ತು.  

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್...

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...