ವಿಷಯಕ್ಕೆ ಹೋಗಿ

ಆಯುಧಪೂಜೆ: ಖರೀದಿಗೆ ಮುಂದಾದ ಗ್ರಾಹಕರು ಪಟ್ಟಣದೆಲ್ಲೆಡೆ ರಾಶಿರಾಶಿ ಬೂದುಗುಂಬಳ

ಪಟ್ಟಣದಲ್ಲಿ ಆಯುಧಪೂಜೆಯ ಹಿನ್ನಲ್ಲೆಯಲ್ಲಿ ಗುರುವಾರದಂದು ಹಬ್ಬದಸಂತೆ ನಡೆಯಿತು. ಸಂತೆಗೆ ಆಗಮಿಸಿದ ಪಟ್ಟಣದ ಸುತ್ತಮುತ್ತಲಿನ ಹಳ್ಳಿಗಳ ರೈತರು ಹಬ್ಬಕ್ಕೆ ಬೇಕಾದ ಹೂ,ಹಣ್ಣು ಸೇರಿದಂತೆ ಇನ್ನಿತರ ವಸ್ತುಗಳನ್ನು ಕೊಂಡೊಯ್ಯುತ್ತಿದುದ್ದು ಸಾಮಾನ್ಯವಾಗಿತ್ತು. ಆಯುಧಪೂಜೆ ಪ್ರಯುಕ್ತ ಎಲ್ಲೆಡೆ ರಾಶಿರಾಶಿ ಬೂದುಗುಂಬಳ ಕಂಡುಬಂತು.
 ಹುಳಿಯಾರಿನ ಬಸ್ ನಿಲ್ದಾಣದಲ್ಲಿ ಆಯುಧಪೂಜೆ ಅಂಗವಾಗಿ ಬಂದಿದ್ದ ಕುಂಬಳಕಾಯಿ ಕೊಂಡುಕೊಳ್ಳುತ್ತಿರುವ ಗ್ರಾಹಕರು.

ಹುಳಿಯಾರು ಬಸ್ ನಿಲ್ದಾಣದ ಅಂಗಡಿಯೊಂದರಲ್ಲಿ ವಾಹನ ಅಲಂಕಾರಕ್ಕೆ ಬೇಕಾದ ಅಲಂಕಾರಿಕ ವಸ್ತುಗಳ ಖರೀದಿಯಲ್ಲಿ ಮಗ್ನರಾಗಿರುವ ಗ್ರಾಹಕರು.


ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಶಾವಂತಿಗೆ,ಬಟನ್ಸ್,ಕುಂಬಳಕಾಯಿ ಬೆಲೆ ತುಸು ಕಡಿಮೆಯಾಗಿತ್ತು, ಶಾವಂತಿಗೆ ಮಾರೊಂದಕ್ಕೆ 50-60 ಇದ್ದರೆ, ಕುಂಬಳಕಾಯಿಬೆಲೆ ಕಳೆದ ಬಾರಿಗಿಂತ ಕಡಿಮೆಯಾಗಿದ್ದು ಸಣ್ಣ ಗಾತ್ರದವಕ್ಕೆ 20 ರಿಂದ 30 ಇದ್ದರೆ, ಭಾರಿ ಗಾತ್ರದವಕ್ಕೆ 50-80 ರೂ ಇತ್ತು. ಈ ಹಿಂದಿನ ವರ್ಷದಂತೆ ಈ ಸಲವೂ ಉತ್ತಮ ಬೆಲೆ ಇರುತ್ತದೆಂದು ಹಬ್ಬಕ್ಕೆ ಎರಡುದಿನ ಮುಂಚಿತವಾಗಿಯೇ ರೈತರು ಕುಂಬಳಕಾಯಿಯನ್ನು ಮಾರಲು ತಂದಿದ್ದರು. ಪಟ್ಟಣದ ಅನೇಕ ಕಡೆ ಕುಂಬಳಕಾಯಿಯ ರಾಶಿರಾಶಿಯೇ ಇದ್ದು ಗ್ರಾಹಕರಿಗಾಗಿ ಕಾದುಕೂರುವಂತೆ ಪರಿಸ್ಥಿತಿ ಮಾರಾಟಗಾರನದಾಗಿತ್ತು. ಬಾಳೆಕಂದು ಜೊತೆಒಂದಕ್ಕೆ 10-30ರೂ, ಚೆಂಡು ಹೂ ಕೆ.ಜಿ 30ರೂಗೆ ಮಾರಾಟವಾಗುತ್ತಿದ್ದವು. ಪುಟ್ಟಬಾಳೆಹಣ್ಣನ್ನು ಹೊರತುಪಡಿಸಿದರೆ ಸೇಬು,ದ್ರಾಕ್ಷಿ,ಮೊಸುಂಬೆ ಸೇರಿದಂತೆ ಇತರೆ ಹಣ್ಣುಗಳ ಬೆಲೆ ಎಂದಿನಂತೆ ಇದ್ದು ಪುಟ್ಟಬಾಳೆಹಣ್ಣು ಮಾತ್ರ ಕೆ.ಜಿ 60 ರೂಗೆ ಬಿಕರಿಯಾಗುತ್ತಿತ್ತು.
ಮೂರ್ನಾಲ್ಕು ದಿನ ರಜೆ ಇರುವುದರಿಂದ ಬೆಂಗಳೂರು ಸೇರಿದಂತೆ ಇನ್ನಿತರ ಊರುಗಳಲ್ಲಿ ಕೆಲಸ ಮಾಡಿಕೊಂಡಿದ್ದ ಜನ ತಮ್ಮ ತಮ್ಮ ಊರುಗಳಿಗೆ ಬರುತ್ತಿದ್ದು ಬಸ್ ಗಳೆಲ್ಲಾ ರಷಾಗಿದ್ದವಲ್ಲದೆ, ಪಟ್ಟಣದ ಬಸ್ ನಿಲ್ದಾಣ ಜನಜಂಗುಳಿಯಿಂದ ಕೂಡಿತ್ತು.

ಹುಳಿಯಾರಿನ ಮ್ಯಾಕಾನಿಕ್ ಅಂಗಡಿಯೊಂದರಲ್ಲಿ ಹಳೆಯವಸ್ತುಗಳನ್ನು ಹೊರಹಾಕಿ ಆಯುಧಪೂಜೆಗೆ ಸಿದ್ದತೆ ಮಾಡಿಕೊಳ್ಳುತ್ತಿರುವುದು.
ಮಕ್ಕಳು ಹಾಗೂ ವಾಹನ ಮಾಲೀಕರು ತಮ್ಮ ವಾಹನವನ್ನು ಅಲಂಕರಿಸಲು ಬೇಕಾದ ಮಿಂಚಿನ ಹಾರ, ಟೇಪ್,ಬಲೂನು ಸೇರಿದಂತೆ ಇತರ ಅಲಂಕಾರಿಕ ವಸ್ತುಗಳನ್ನು ಕೊಂಡುಕೊಳ್ಳಲು ಮುಗಿಬಿಳುತ್ತಿದ್ದರೆ, ಗ್ಯಾರೇಜ್, ಮ್ಯಾಕಾನಿಕ್ ಅಂಗಡಿಯವರು, ಲೇತ್ ನವರು, ವೆಲ್ಡಿಂಗ್ ಶಾಪ್ ನವರು ತಮ್ಮ ಅಂಗಡಿಯಲ್ಲಿನ ಹಳೆವಸ್ತುಗಳನ್ನು ಒಂದೆಡೆ ಹಾಕಿ ಅಂಗಡಿಗಳನ್ನು ಸ್ವಚ್ಚ ಮಾಡಿಕೊಳ್ಳುತ್ತಿರುವುದರಲ್ಲಿ ಮಗ್ನರಾಗಿದ್ದರು. ಒಟ್ಟಾರೆ ಪಟ್ಟಣದೆಲ್ಲೆಡೆ ಆಯುಧಪೂಜೆಯ ಸಂಭ್ರಮ ತುಂಬಿತುಳುಕುತ್ತಿತ್ತು.  

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...