ವಿಷಯಕ್ಕೆ ಹೋಗಿ

12ವರ್ಷದಿಂದ ಟೀ ಅಂಗಡಿಯಲ್ಲಿ ರಾಜ್ಯೋತ್ಸವ ಆಚರಣೆ

            ನವಂಬರ್ 1 ಬಂತೆಂದರೆ ಈ ಅಂಗಡಿಯಲ್ಲಿ ಹಬ್ಬದ ಸಡಗರ. ಅಂದು ಪಟ್ಟಣದಲ್ಲಿ ಕನ್ನಡಪರ ಸಂಘಟನೆಗಳು, ಇನ್ನಿತರ ಸಂಸ್ಥೆಗಳು ರಾಜ್ಯೋತ್ಸವ ಆಚರಿಸಲಿ ಬಿಡಲಿ ಈತನ ಟೀ ಅಂಗಡಿಯ ಮುಂದೆ ಧ್ವಜಾರೋಹಣ ಮಾತ್ರ ಕಡ್ಡಾಯವಾಗಿ ನಡೆದಿರುತ್ತದೆ. ಹಾಗಂತ ಇದು ಹತ್ತಾರು ಜನ ಸೇರಿ ಮಾಡುವ ಸಮಾರಂಭವಲ್ಲ ಕೇವಲ ಬೋಂಡಾ,ಟೀ ಅಂಗಡಿ ಇಟ್ಟಿರುವ ಪರಪ್ಪ ಒಬ್ಬನೇ ಆಚರಿಸುವ ರಾಜ್ಯೋತ್ಸವ.
ಹೌದು, ಪಟ್ಟಣದ ರಾಜ್ ಕುಮಾರ್ ರಸ್ತೆಯ ಕರವೇ ವೃತ್ತದಲ್ಲಿನ ಟೀ ಅಂಗಡಿಯ ಪರಪ್ಪ ಕಳೆದ 12ವರ್ಷದಿಂದ ತಪ್ಪದೇ ಕನ್ನಡರಾಜ್ಯೋತ್ಸವವನ್ನು ಆಚರಿಸಿಕೊಂಡು ಬರುವ ಮೂಲಕ ತನ್ನ ಕನ್ನಡಾಭಿಮಾನ ಮೆರೆಯುತ್ತಿದ್ದಾರೆ.
ಹುಳಿಯಾರಿನ ಟೀ ಅಂಗಡಿ ಪರಪ್ಪ ಅಂಗಡಿಯಲ್ಲಿ ನಡೆದ ರಾಜ್ಯೋತ್ಸವದಲ್ಲಿ ಪಾಲ್ಗೊಂಡಿರುವ ಅಭಿಮಾನಿಗಳು. 
        ಪರಪ್ಪನಿಗೂ ಕನ್ನಡರಾಜ್ಯೋತ್ಸವಕ್ಕೂ ಏನು ನಂಟೂ ಗೊತ್ತಿಲ್ಲ ಆದರೆ ಈತ ರಾಜ್ ಕುಮಾರ್ ಅಭಿಮಾನಿಯಾಗಿದ್ದು ತಾನು ಅಂಗಡಿ ತೆರೆದಾಗಿನಿಂದ ರಾಜ್ಯೋತ್ಸವ ಆಚರಿಸಿಕೊಂಡು ಬರುತ್ತಿದ್ದಾನೆ. ಇಂದು ಕೂಡ ರಾಜ್ಯೋತ್ಸವದ ಆಚರಣೆಗಾಗಿ ತನ್ನ ಅಂಗಡಿಯನ್ನು ಹೂ, ಬಾಳೆಕಂದು, ಮಾವಿನ ತಳಿರಿಂದ ಸಿಂಗರಿಸಿದ್ದಲ್ಲದೆ ತಾಯಿ ಭುವನೇಶ್ವರಿ ಪೋಟೋಕ್ಕೆ ಪೂಜಿ ಸಲ್ಲಿಸಿದನು. ಇದರೊಂದಿಗೆ ಡಾ||ರಾಜ್, ವಿಷ್ಣುವರ್ಧನ್,ಶಂಕರ್ ನಾಗ್,ಕುವೆಂಪು ಸೇರಿದಂತೆ ಇನ್ನಿತರ ಕನ್ನಡದ ಕಟ್ಟಾಳುಗಳ ಭಾವಚಿತ್ರ ಹಾಗೂ ಅವರು ಅಭಿನಯಿಸಿದ ಪೌರಾಣಿಕ ಪಾತ್ರಗಳ ಚಿತ್ರಗಳನ್ನು ಅಂಗಡಿ ತುಂಬ ಪ್ರದರ್ಶಿಸಿದ್ದು, ಅಂಗಡಿಯ ಇಕ್ಕೆಲದಲ್ಲಿ ಕರ್ನಾಟಕ ಭೂಪಟದ ದೊಡ್ಡ ಕಟೌಟರ್ ಗಳನ್ನು ನಿಲ್ಲಿಸಿ, ಕನ್ನಡ ನಾಡುನುಡಿಗೆ ಸಂಬಂಧಿಸಿದ ಹಾಡುಗಳನ್ನು ಹಾಕಿ, ಅಂಗಡಿಯ ಮುಂಭಾಗದಲ್ಲಿ ಧ್ವಜಾರೋಹಣವನ್ನು ನೆರವೇರಿಸಿ ನಂತರ ಸಾರ್ವಜನಿಕರಿಗೆ ಸಿಹಿ ಮತ್ತು ಹುಸ್ಲಿ ಹಂಚುವ ಮೂಲಕ ರಾಜ್ಯೋತ್ಸವವನ್ನು ಸಂಭ್ರಮಿಸಿದನು.

          ಟೀ ಅಂಗಡಿ ಪರಪ್ಪ ಒಬ್ಬಂಟಿಯಾಗಿ ತಾನು ಆಚರಿಸುವುದರ ಬಗ್ಗೆ ತಿಳಿಸುತ್ತಾ, ನವಂಬರ್ ತಿಂಗಳಲ್ಲಿ ರಾಜ್ಯೋತ್ಸವದ ಆಚರಣೆಯನ್ನು ತಿಂಗಳ ಪೂರ್ತಿ ಮಾಡುವುದರಿಂದ ನವಂಬರ್ 1ರಂದೇ ಮಾಡಲು ಹೆಚ್ಚಿನವರು ಮುಂದಾಗದ ಪ್ರಯುಕ್ತ ನವಂಬರ್ 1 ರಂದು ಆಚರಣೆ ಪ್ರತೀತಿಯನ್ನು ತಾನು ಮುಂದುವರೆಸಿಕೊಂಡು ಬಂದೆ ಎನ್ನುತ್ತಾನೆ. ನನಗೆ ಕನ್ನಡ ಚಿತ್ರರಂಗದ ಕಲಾವಿದರ ಬಗ್ಗೆ ಅಭಿಮಾನವಿದ್ದು ಅದರಲ್ಲೂ ರಾಜ್‍ಕುಮಾರ್ ಎಂದರೆ ಹೆಚ್ಚಿನ ಅಭಿಮಾನವಿದೆ. ಈ ಆಚರಣೆಯನ್ನು ತಾನು ಸ್ವಹಿಚ್ಚೆಯಿಂದ ನಡೆಸಿಕೊಂಡು ಬರುತ್ತಿದ್ದು, ತನ್ನ ಅಂಗಡಿಯ ಆದಾಯದಲ್ಲಿ ಸ್ವಲ್ಪ ಖರ್ಚು ಮಾಡಿ ಆಚರಿಸುತ್ತಿದ್ದು ಮುಂದಿನ ದಿನಗಳಲ್ಲಿ ಇನ್ನೂ ಅದ್ದೂರಿಯಾಗಿ ಮಾಡಬೇಕೆಂಬ ತನ್ನ ಬಯಕೆ ವ್ಯಕ್ತಪಡಿಸಿದನು.





          ಪ್ರಸ್ತುತದಲ್ಲಿ ಶಾಲಾ-ಕಾಲೇಜುಗಳನ್ನು ಹೊರತುಪಡಿಸಿದರೆ ಅನೇಕ ಸರ್ಕಾರಿ ಕಛೇರಿಗಳಲ್ಲಿ ರಾಜ್ಯೋತ್ಸವದ ಆಚರಣೆ ನೆಪಮಾತ್ರಕ್ಕೆ ನಡೆಯುತ್ತಿದೆ ಹೊರತು ನಮ್ಮ ನಾಡು-ನುಡಿಯ ಬಗ್ಗೆ ಇತರರಿಗೆ ತಿಳಿಸುವ ಕಾರ್ಯಮಾತ್ರ ನಡೆಯುತ್ತಿಲ್ಲ.ಇಂತಹ ಸನ್ನಿವೇಶದಲ್ಲಿ ಪರಪ್ಪ ಈರೀತಿ ಆಚರಣೆ ಮಾಡಿಕೊಂಡು ಬರುತ್ತಿರುವುದು ಸಾರ್ವಜನಿಕರಿಗೆ,ಸರ್ಕಾರಿ ಅಧಿಕಾರಿಗಳಿಗೆ ಮಾದರಿಯಾಗಬೇಕಿದೆ.

         ಒಟ್ಟಾರೆ ಸಣ್ಣ ಟೀ ಅಂಗಡಿಯಾತನ ರಾಜ್ಯೋತ್ಸವ ಆಚರಿಸುವ ಮೂಲಕ ತನ್ನ ಭಾಷಾಭಿಮಾನ ಮೆರೆಯುತ್ತಿರುವುದು ನೋಡುಗರನ್ನು ನಿಬ್ಬೆರಗಾಗುವಂತೆ ಮಾಡಿದ್ದು, ಈತ ತನ್ನ ಅಂಗಡಿಗೆ ಮಾಡಿದ್ದ ಅಲಂಕಾರ, ನಡೆಸಿದ ಧ್ವಜಾರೋಹಣ, ಹಾಕಿದ್ದ ಕನ್ನಡದ ಹಾಡುಗಳಿಂದಾಗಿ ರಸ್ತೆಯಲ್ಲಿ ಹೋಗುವರೆಲ್ಲಾ ಒಮ್ಮೆ ಇಲ್ಲಿನಿಂತು ನೋಡಿ ಮುಂದೆ ಹೋಗುವಂತೆ ಮಾಡಿದ್ದವು.
ಕನ್ನಡ ಕಾಳಜಿ ಮೆರೆಯುವ ಪರಪ್ಪ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.