ವಿಷಯಕ್ಕೆ ಹೋಗಿ

12ವರ್ಷದಿಂದ ಟೀ ಅಂಗಡಿಯಲ್ಲಿ ರಾಜ್ಯೋತ್ಸವ ಆಚರಣೆ

            ನವಂಬರ್ 1 ಬಂತೆಂದರೆ ಈ ಅಂಗಡಿಯಲ್ಲಿ ಹಬ್ಬದ ಸಡಗರ. ಅಂದು ಪಟ್ಟಣದಲ್ಲಿ ಕನ್ನಡಪರ ಸಂಘಟನೆಗಳು, ಇನ್ನಿತರ ಸಂಸ್ಥೆಗಳು ರಾಜ್ಯೋತ್ಸವ ಆಚರಿಸಲಿ ಬಿಡಲಿ ಈತನ ಟೀ ಅಂಗಡಿಯ ಮುಂದೆ ಧ್ವಜಾರೋಹಣ ಮಾತ್ರ ಕಡ್ಡಾಯವಾಗಿ ನಡೆದಿರುತ್ತದೆ. ಹಾಗಂತ ಇದು ಹತ್ತಾರು ಜನ ಸೇರಿ ಮಾಡುವ ಸಮಾರಂಭವಲ್ಲ ಕೇವಲ ಬೋಂಡಾ,ಟೀ ಅಂಗಡಿ ಇಟ್ಟಿರುವ ಪರಪ್ಪ ಒಬ್ಬನೇ ಆಚರಿಸುವ ರಾಜ್ಯೋತ್ಸವ.
ಹೌದು, ಪಟ್ಟಣದ ರಾಜ್ ಕುಮಾರ್ ರಸ್ತೆಯ ಕರವೇ ವೃತ್ತದಲ್ಲಿನ ಟೀ ಅಂಗಡಿಯ ಪರಪ್ಪ ಕಳೆದ 12ವರ್ಷದಿಂದ ತಪ್ಪದೇ ಕನ್ನಡರಾಜ್ಯೋತ್ಸವವನ್ನು ಆಚರಿಸಿಕೊಂಡು ಬರುವ ಮೂಲಕ ತನ್ನ ಕನ್ನಡಾಭಿಮಾನ ಮೆರೆಯುತ್ತಿದ್ದಾರೆ.
ಹುಳಿಯಾರಿನ ಟೀ ಅಂಗಡಿ ಪರಪ್ಪ ಅಂಗಡಿಯಲ್ಲಿ ನಡೆದ ರಾಜ್ಯೋತ್ಸವದಲ್ಲಿ ಪಾಲ್ಗೊಂಡಿರುವ ಅಭಿಮಾನಿಗಳು. 
        ಪರಪ್ಪನಿಗೂ ಕನ್ನಡರಾಜ್ಯೋತ್ಸವಕ್ಕೂ ಏನು ನಂಟೂ ಗೊತ್ತಿಲ್ಲ ಆದರೆ ಈತ ರಾಜ್ ಕುಮಾರ್ ಅಭಿಮಾನಿಯಾಗಿದ್ದು ತಾನು ಅಂಗಡಿ ತೆರೆದಾಗಿನಿಂದ ರಾಜ್ಯೋತ್ಸವ ಆಚರಿಸಿಕೊಂಡು ಬರುತ್ತಿದ್ದಾನೆ. ಇಂದು ಕೂಡ ರಾಜ್ಯೋತ್ಸವದ ಆಚರಣೆಗಾಗಿ ತನ್ನ ಅಂಗಡಿಯನ್ನು ಹೂ, ಬಾಳೆಕಂದು, ಮಾವಿನ ತಳಿರಿಂದ ಸಿಂಗರಿಸಿದ್ದಲ್ಲದೆ ತಾಯಿ ಭುವನೇಶ್ವರಿ ಪೋಟೋಕ್ಕೆ ಪೂಜಿ ಸಲ್ಲಿಸಿದನು. ಇದರೊಂದಿಗೆ ಡಾ||ರಾಜ್, ವಿಷ್ಣುವರ್ಧನ್,ಶಂಕರ್ ನಾಗ್,ಕುವೆಂಪು ಸೇರಿದಂತೆ ಇನ್ನಿತರ ಕನ್ನಡದ ಕಟ್ಟಾಳುಗಳ ಭಾವಚಿತ್ರ ಹಾಗೂ ಅವರು ಅಭಿನಯಿಸಿದ ಪೌರಾಣಿಕ ಪಾತ್ರಗಳ ಚಿತ್ರಗಳನ್ನು ಅಂಗಡಿ ತುಂಬ ಪ್ರದರ್ಶಿಸಿದ್ದು, ಅಂಗಡಿಯ ಇಕ್ಕೆಲದಲ್ಲಿ ಕರ್ನಾಟಕ ಭೂಪಟದ ದೊಡ್ಡ ಕಟೌಟರ್ ಗಳನ್ನು ನಿಲ್ಲಿಸಿ, ಕನ್ನಡ ನಾಡುನುಡಿಗೆ ಸಂಬಂಧಿಸಿದ ಹಾಡುಗಳನ್ನು ಹಾಕಿ, ಅಂಗಡಿಯ ಮುಂಭಾಗದಲ್ಲಿ ಧ್ವಜಾರೋಹಣವನ್ನು ನೆರವೇರಿಸಿ ನಂತರ ಸಾರ್ವಜನಿಕರಿಗೆ ಸಿಹಿ ಮತ್ತು ಹುಸ್ಲಿ ಹಂಚುವ ಮೂಲಕ ರಾಜ್ಯೋತ್ಸವವನ್ನು ಸಂಭ್ರಮಿಸಿದನು.

          ಟೀ ಅಂಗಡಿ ಪರಪ್ಪ ಒಬ್ಬಂಟಿಯಾಗಿ ತಾನು ಆಚರಿಸುವುದರ ಬಗ್ಗೆ ತಿಳಿಸುತ್ತಾ, ನವಂಬರ್ ತಿಂಗಳಲ್ಲಿ ರಾಜ್ಯೋತ್ಸವದ ಆಚರಣೆಯನ್ನು ತಿಂಗಳ ಪೂರ್ತಿ ಮಾಡುವುದರಿಂದ ನವಂಬರ್ 1ರಂದೇ ಮಾಡಲು ಹೆಚ್ಚಿನವರು ಮುಂದಾಗದ ಪ್ರಯುಕ್ತ ನವಂಬರ್ 1 ರಂದು ಆಚರಣೆ ಪ್ರತೀತಿಯನ್ನು ತಾನು ಮುಂದುವರೆಸಿಕೊಂಡು ಬಂದೆ ಎನ್ನುತ್ತಾನೆ. ನನಗೆ ಕನ್ನಡ ಚಿತ್ರರಂಗದ ಕಲಾವಿದರ ಬಗ್ಗೆ ಅಭಿಮಾನವಿದ್ದು ಅದರಲ್ಲೂ ರಾಜ್‍ಕುಮಾರ್ ಎಂದರೆ ಹೆಚ್ಚಿನ ಅಭಿಮಾನವಿದೆ. ಈ ಆಚರಣೆಯನ್ನು ತಾನು ಸ್ವಹಿಚ್ಚೆಯಿಂದ ನಡೆಸಿಕೊಂಡು ಬರುತ್ತಿದ್ದು, ತನ್ನ ಅಂಗಡಿಯ ಆದಾಯದಲ್ಲಿ ಸ್ವಲ್ಪ ಖರ್ಚು ಮಾಡಿ ಆಚರಿಸುತ್ತಿದ್ದು ಮುಂದಿನ ದಿನಗಳಲ್ಲಿ ಇನ್ನೂ ಅದ್ದೂರಿಯಾಗಿ ಮಾಡಬೇಕೆಂಬ ತನ್ನ ಬಯಕೆ ವ್ಯಕ್ತಪಡಿಸಿದನು.





          ಪ್ರಸ್ತುತದಲ್ಲಿ ಶಾಲಾ-ಕಾಲೇಜುಗಳನ್ನು ಹೊರತುಪಡಿಸಿದರೆ ಅನೇಕ ಸರ್ಕಾರಿ ಕಛೇರಿಗಳಲ್ಲಿ ರಾಜ್ಯೋತ್ಸವದ ಆಚರಣೆ ನೆಪಮಾತ್ರಕ್ಕೆ ನಡೆಯುತ್ತಿದೆ ಹೊರತು ನಮ್ಮ ನಾಡು-ನುಡಿಯ ಬಗ್ಗೆ ಇತರರಿಗೆ ತಿಳಿಸುವ ಕಾರ್ಯಮಾತ್ರ ನಡೆಯುತ್ತಿಲ್ಲ.ಇಂತಹ ಸನ್ನಿವೇಶದಲ್ಲಿ ಪರಪ್ಪ ಈರೀತಿ ಆಚರಣೆ ಮಾಡಿಕೊಂಡು ಬರುತ್ತಿರುವುದು ಸಾರ್ವಜನಿಕರಿಗೆ,ಸರ್ಕಾರಿ ಅಧಿಕಾರಿಗಳಿಗೆ ಮಾದರಿಯಾಗಬೇಕಿದೆ.

         ಒಟ್ಟಾರೆ ಸಣ್ಣ ಟೀ ಅಂಗಡಿಯಾತನ ರಾಜ್ಯೋತ್ಸವ ಆಚರಿಸುವ ಮೂಲಕ ತನ್ನ ಭಾಷಾಭಿಮಾನ ಮೆರೆಯುತ್ತಿರುವುದು ನೋಡುಗರನ್ನು ನಿಬ್ಬೆರಗಾಗುವಂತೆ ಮಾಡಿದ್ದು, ಈತ ತನ್ನ ಅಂಗಡಿಗೆ ಮಾಡಿದ್ದ ಅಲಂಕಾರ, ನಡೆಸಿದ ಧ್ವಜಾರೋಹಣ, ಹಾಕಿದ್ದ ಕನ್ನಡದ ಹಾಡುಗಳಿಂದಾಗಿ ರಸ್ತೆಯಲ್ಲಿ ಹೋಗುವರೆಲ್ಲಾ ಒಮ್ಮೆ ಇಲ್ಲಿನಿಂತು ನೋಡಿ ಮುಂದೆ ಹೋಗುವಂತೆ ಮಾಡಿದ್ದವು.
ಕನ್ನಡ ಕಾಳಜಿ ಮೆರೆಯುವ ಪರಪ್ಪ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...