ವಿಷಯಕ್ಕೆ ಹೋಗಿ

16 ಸಾವಿರಕ್ಕೆ ಸ್ಥಿರವಾಯ್ತು ಕೊಬ್ಬರಿ ಬೆಲೆ

       ಕೆಲವು ತಿಂಗಳುಗಳಿಂದ ಏರಿಕೆ ಕಂಡು 19ಸಾವಿರದ ಗಡಿಯಾಚೆಗೆ ಜಿಗಿತಗೊಂಡಿದ್ದ ಕೊಬ್ಬರಿ ಧಾರಣೆ ಇಳಿಮುಖಗೊಂಡು ಕಳೆದೆರಡು ವಾರದಿಂದ 16ಸಾವಿರ ಆಸುಪಾಸಿನ ಬೆಲೆಯಲ್ಲಿ ಸ್ಥಿರವಾಗಿದೆ.
ಇಲ್ಲಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಕ್ಷಿಂಟಲ್ ಕೊಬ್ಬರಿಗೆ 16,200ರೂಪಾಯಿಗೆ ಮಾರಾಟವಾಗುವ ಮೂಲಕ ದಾಖಲೆ ಬೆಲೆಯ 19ಸಾವಿರದ ಗಡಿದಾಟಿ , 20ಸಾವಿರಕ್ಕೆ ಏರಿಕೆಯಾಗುತ್ತದೆಂಬ ರೈತರ ಊಹೆ ಬುಡಮೇಲಾಗುವಂತಾಗಿದೆ.

ಕೊಬ್ಬರಿ ಬೆಲೆ ಇದುವರೆಗೂ ಹೆಚ್ಚೆಂದರೆ 8ಸಾವಿರ ತಲುಪಿದ್ದೇ ಗರಿಷ್ಠ ಬೆಲೆಯಾಗಿದ್ದು, ಪ್ರತಿಬಾರಿಯೂ 5 ರಿಂದ 6 ಸಾವಿರ ಬೆಲೆಯಿದ್ದು ನಫೆಡ್ ಮೂಲಕ ಬೆಂಬಲ ಬೆಲೆಯಲ್ಲಿ ಮಾರುವ ಪರಿಸ್ಥಿತಿಯಿತ್ತು. ಸದಾ ನಿರಾಸೆಯ ಮಡುವಿನಲ್ಲೇ ನಿಟ್ಟುಸಿರು ಬಿಡುತ್ತಿದ್ದ ರೈತನಿಗೆ ಪ್ರಸ್ತುತ ಬೆಲೆ ಸಂತಸ ತಂದಿದೆ.
ಕೊಬ್ಬರಿಯ ಇತಿಹಾಸದಲ್ಲೇ 10ಸಾವಿರದ ಗಡಿದಾಟದಿದ್ದ ಕೊಬ್ಬರಿಗೆ ಈ ಬಾರಿ ಶುಕ್ರದೆಸೆ ತಿರುಗಿ ಉತ್ತಮ ಬೆಲೆ ಬಂದು 19 ಸಾವಿರದ ಗಡಿ ದಾಟಿ ರೈತರ ಮೊಗದಲ್ಲಿ ಮಂದಹಾಸ ಮೂಡುವಂತೆ ಮಾಡಿದ್ದಲ್ಲದೆ ದೀಪಾವಳಿ ಸಮಯದಲ್ಲಿ 20 ಸಾವಿರ ಗಡಿದಾಟಲಿದೆ ಎಂಬ ಮಾತೆ ರೈತರನ್ನು ಮತ್ತು ವರ್ತಕರನ್ನು ಆಶ್ಚರ್ಯ ಪುಳುಕಿತರನ್ನಾಗಿ ಮಾಡಿತ್ತು.
ಕೊಬ್ಬರಿ ಬೆಲೆ ಮತ್ತಷ್ಟು ಇಳಿಕೆಯಾಗುತ್ತದೆಂಬ ಆತಂಕದಲ್ಲಿ ಕೊಬ್ಬರಿ ಸುಲಿಯಲು ಮುಂದಾಗಿರುವ ರೈತರು. 

ಆದರೆ ಇದೀಗ ಅದರ ಬೆನ್ನಲ್ಲೇ ಕಳೆದ ಮೂರ್ನಾಲ್ಕು ವಾರದಿಂದ ಕೊಬ್ಬರಿ ಬೆಲೆಯಲ್ಲಿ ಇಳಿಕೆಯಾಗುತ್ತಾ ಸಾಗಿ 16ಸಾವಿರದಲ್ಲಿಗೆ ಬಂದಿದ್ದು, ಬೆಲೆ ಹೆಚ್ಚಾಗುತ್ತದೆ ಎಂದುಕೊಂಡಿದ್ದ ತೆಂಗುಬೆಳೆಗಾರರಿಗೆ ಈ ರೀತಿ ಬೆಲೆ ಇಳಿಕೆಯಾಗುತ್ತಿರುವುದು ಆತಂಕ ಉಂಟುಮಾಡಿದೆ.

ಸದ್ಯ ಹಬ್ಬಹರಿದಿನಗಳ ಸಾಲೆಲ್ಲಾ ಮುಗಿದು ಮುಂದಿನ ಸಂಕ್ರಾಂತಿ ವರೆಗೆ ಇನ್ನಾವುದೇ ಹಬ್ಬ ಇಲ್ಲದಿದ್ದು ನಾಗಾಲೋಟದಲ್ಲಿದ್ದ ಬೆಲೆ ಸ್ಥಿರವಾಗಿ 16ಸಾವಿರ ಅಸುಪಾಸಿನಲ್ಲಿ ಮಾರಾಟವಾಗುತ್ತಿದೆ.

ಏರಿಕೆ ಏನಕ್ಕೆ: ಪ್ರಸಕ್ತ ವರ್ಷ ಉತ್ಪಾದೆನೆ ಕುಂಠಿತವಾಗಿದ್ದೇ ಬೆಲೆ ಏರಿಕೆಗೆ ಕಾರಣವಾಗಿತ್ತು. ಸುಡುಬಿಸಿಲು ಹಾಗೂ ಅಂತರ್ಜಲ ಬತ್ತಿ ಹೋದ ಕಾರಣ ನೀರಿನ ಸಮಸ್ಯೆ ತಲೆದೂರಿದ್ದಲ್ಲದೆ, ತೆಂಗಿನ ಮರಗಳಿಗೆ ನುಸಿರೋಗ, ಕಾಂಡಸೋರುವ ರೋಗ ಹಾಗೂ ಸುಳಿ ಒಣಗುವ ರೋಗ ವ್ಯಾಪಿಸಿ ಸುಳಿ ಒಣಗಿ ನೆಲಕ್ಕುರುಳುವ ತೆಂಗನ್ನು ಉಳಿಸಿಕೊಳ್ಳುವುದೇ ರೈತರಿಗೆ ದುಸ್ಥರವಾಗಿತ್ತು. ತೆಂಗನ್ನು ತೊರೆದು ಇನ್ನಿತರ ಬೆಳೆಗಳತ್ತ ಮುಖಮಾಡುವಂತಾಗಿತ್ತು. ತೆಂಗಿನ ಸ್ಥಾನ ದಾಳಿಂಬೆ ಆಕ್ರಮಿಸಿ ತೆಂಗು ಕಡಿಮೆಯಗುವಂತೆ ಸ್ಥಿತಿಯಲ್ಲಿ ಕೊಬ್ಬರಿ ಕೈಹಿಡಿದಿದ್ದು ರೈತರಲ್ಲಿ ಸಂತಸ ಮೂಡಿಸಿದೆ.

ಇಂತಹ ವಿಷಮ ಸ್ಥಿತಿಯಲ್ಲಿ ಕೊಬ್ಬರಿಗೆ ಉತ್ತಮ ಬೆಲೆ ಬಂದ ಹಿನ್ನಲೆಯಲ್ಲಿ ಮತ್ತೆ ತೆಂಗಿನ ಮರಗಳ ಆರೈಕೆಗೆ ಬೆಳೆಗಾರರು ಮತ್ತೆ ಮುಂದಾಗಿದ್ದು, ಇದೀಗ ಮತ್ತೆ ಕೊಬ್ಬರಿಗೆ ಬೆಲೆ ಇಳಿಕೆಯಾಗುತ್ತಾ ಸಾಗುತ್ತಿದ್ದು, ಮತ್ತೆಲ್ಲಿ ಈ ಹಿಂದೆಯಿದ್ದ ನಾಲ್ಕೈದು ಸಾವಿರ ರೂನತ್ತ ಬಂದು ಬಿಡುತ್ತದೆ ಎಂಬ ಭಯ ಮೂಡುವಂತಾಗಿದೆ.

ಕೊಟ್ಯಾಂತರ ರೂಪಾಯಿ ವಹಿವಾಟಿನ ಕೊಬ್ಬರಿ ಮಾರುಕಟ್ಟೆಯ ಬೆಲೆ ನಿಯಂತ್ರಣ ಹೆಚ್ಚುಕಮ್ಮಿ ರವಾನೆದಾರರ ಕೈಯಲ್ಲೇ ಇದ್ದು,ಇತ್ತೀಚೆಗೆ ಇ-ಟೆಂಡರ್ ಮೂಲಕ ವಹಿವಾಟು ಪ್ರಾರಂಭವಾಗಿದ್ದೇ ಕೊಬ್ಬರಿ ಬೆಲೆ ದಿಢೀರ್ ಹೆಚ್ಚಳಕ್ಕೆ ಮೂಲ ಕಾರಣ ಎನ್ನಲಾಗುತ್ತಿದೆ.


ಒಟ್ಟಾರೆ ಒಂದು ಸಮಯದಲ್ಲಿ ಉತ್ತಮ ಬೆಲೆಯಿಲ್ಲದೆ ಸೂರಗಿದ್ದ ಕೊಬ್ಬರಿಗೆ ಅದೃಷ್ಠವೆಂಬಂತೆ ಉತ್ತಮ ಬೆಲೆ ಬಂದಿರುವುದು ಆಶಾದಾಯಕ ಬೆಳೆಣಿಗೆಯಾಗಿದ್ದರೂ ಸಹ ಮುಂದಿನ ದಿನಗಳಲ್ಲಿ ಮತ್ತಷ್ಟು ಬೆಲೆ ಏರಿಕೆಯಾಗಲಿದೆಯೇ ಎಂದು ಕಾಯುವ ಸ್ಥಿತಿ ರೈತರದ್ದಾಗಿದೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.