ವಿಷಯಕ್ಕೆ ಹೋಗಿ

ಕೊನೆಗೂ ಎತ್ತಂಗಡಿಯಾಗಲಿದೆ ವಿವಾದಿತ ಲಿಕ್ಕರ್ ಶಾಪ್ : ಡಿಸೆಂಬರ್ 28 ರವರೆಗೆ ಮಾತ್ರ ಗಡುವು

        ಕಳೆದ ಅನೇಕ ವರ್ಷಗಳಿಂದ ಪಟ್ಟಣದ ಹೃದಯಭಾಗದಲ್ಲಿದ್ದ ಶ್ರೀರಂಗನಾಥ ಲಿಕ್ಕರ್ ಶಾಪ್‍ನ ಸ್ಥಳಾಂತರಕ್ಕೆ ನಡೆದಿದ್ದ ಕಾನೂನು ಹೋರಾಟಗಳೆಲ್ಲಾ ಅಂತೂ ಕೊನೆಗೊಂಡಿದ್ದು ಇದೀಗ ಅಬಕಾರಿ ಉಪ ಆಯುಕ್ತರು ಸ್ಥಳಾಂತರಕ್ಕೆ ಅಂತಿಮ ಆದೇಶ ಹೊರಡಿಸಿದ್ದು, ಸ್ಥಳಾಂತರಕ್ಕೆ ಕ್ಷಣಗಣನೆ ನಡೆದಿದೆ.
      ಏನಿದು ವಿವಾದ : ಪಟ್ಟಣದ ಹುಳಿಯಾರಮ್ಮ ದೇವಾಲಯದ ಹತ್ತಿರದ ದಿಟೌನ್ ಕೋಪರೇಟಿವ್ ಸೊಸೈಟಿಯ ಕಟ್ಟಡದಲ್ಲಿ ಎನ್.ಜಿ.ನಾಗರಾಜರಾವ್ ಅವರಿಗೆ ಸೇರಿದ್ದ ಮದ್ಯದಂಗಡಿ ಕಳೆದ 40 ವರ್ಷಗಳಿಂದ ಇದ್ದು, ಅಬಕಾರಿ ನಿಯಮ ಉಲ್ಲಂಘಿಸಿ ಆಕ್ಷೇಪಣಾರ್ಹ ಸ್ಥಳದಲ್ಲಿರುವ ಇದನ್ನು ತೆರವುಗೊಳಿಸುವಂತೆ ಕಟ್ಟಡದ ಮಾಲೀಕರಾದ ಟೌನ್ ಕೋಅಪರೇಟಿವ್ ಸೊಸೈಟಿಯವರು 2002 ರಿಂದ ಕಾನೂನು ಹೋರಾಟ ನಡೆಸುತ್ತಾ ಬಂದಿದ್ದರು.
ಹುಳಿಯಾರು ಪಟ್ಟಣದಲ್ಲಿ ವಿವಾದಿತ ಸ್ಥಳದಲ್ಲಿರುವ ರಂಗನಾಥ ಲಿಕ್ಕರ್ ಶಾಪ್.
ಸನ್ನದು ಸ್ಥಳವು ಜನನಿಬಿಡ ಸ್ಥಳವಾಗಿದ್ದು,ಪಕ್ಕದಲ್ಲೇ ನಾಲ್ಕು ದೇವಾಲಯಗಳು,ಸಾರ್ವಜನಿಕ ಆಸ್ಪತ್ರೆ ಅಲ್ಲದೆ ಹೆದ್ದಾರಿಯು ಹಾದುಹೋಗಿದ್ದು ಅಬಕಾರಿ ನಿಯಮದ ಷರತ್ತುಗಳು ಉಲ್ಲಂಘಿಸಿ ಲಿಕ್ಕರ್ ಶಾಪ್ ನಡೆಯುತ್ತಿದ್ದು ಅದನ್ನು ಸ್ಥಳಾಂತರಿಸುವಂತೆ ಪಟ್ಟುಹಿಡಿದಿದ್ದರು.
       ಹುಳಿಯಾರಮ್ಮ ದೇವಸ್ಥಾನ ಸಮಿತಿ,ರಂಗನಾಥಸ್ವಾಮಿ ದೇವಾಲಯ ಟ್ರಸ್ಟ್,ಬೀರಲಿಂಗೇಶ್ವರ ದೇವಾಲಯ ಸಮಿತಿ , ಸೀತಾರಾಮ ಪ್ರತಿಷ್ಠಾನ ಟ್ರಸ್ಟ್, ಕರ್ನಾಟಕ ರಕ್ಷಣಾ ವೇದಿಕೆ ಘಟಕ,ಜಯಕರ್ನಾಟಕ ಘಟಕ, ರೈತಸಂಘದವರು, ಪಂಚಾಯ್ತಿ ಸದಸ್ಯರು ಸಹ ಸೊಸೈಟಿಯ ಹೋರಾಟಕ್ಕೆ ಕೈಜೋಡಿಸಿ ಲಿಕ್ಕರ್ ಶಾಪ್ ಸ್ಥಳಾಂತರಿಸುವಂತೆ ಒತ್ತಾಯಿಸಿದ್ದರು.
ಅಬಕಾರಿ ನಿಯಮದ ಅನ್ವಯ ದೇವಾಲಯಗಳಿಂದ 100 ಮೀ ಒಳಗೆ ಹಾಗೂ ರಾಷ್ಟ್ರೀಯಹೆದ್ದಾರಿಯಿಂದ 220 ಮೀ ಒಳಗೆ ಯಾವುದೇ ಮದ್ಯದಂಗಡಿ ಇರಬಾರದೆಂಬ ನಿಯಮವನ್ನು ಎತ್ತಿ ಹಿಡಿದು ಸನ್ನದನ್ನೇ ರದ್ದು ಪಡಿಸಬೇಕೆಂದು ಅಬಕಾರಿ ಸಚಿವರವರೆಗೂ ಪ್ರಕರಣ ಸಾಗಿತ್ತು.
       ಆ ದೂರಿನ ಅನ್ವಯ ವಿಚಾರಣೆಗಳೂ ಸಹ ನಡೆಯುತ್ತಾ ಸಾಗಿ, ವಿವಾದ ತಾರಕಕ್ಕೇರಿ ಅಬಕಾರಿ ಡಿಸಿಯವರೇ ಖುದ್ದು ಸ್ಥಳಕ್ಕೆ ಬಂದು ಆಳತೆ ಮಾಡಿ ಹೋಗುವಂತಾಗಿದ್ದರೂ ಸಹ ಒಂದಲ್ಲ ಒಂದು ತಕರಾರು ನಡೆದು ಸ್ಥಳಾಂತರ ಕಾರ್ಯ ನಡೆಯದೆ ಹಾಗೆಯೇ ಮುಂದೋಗುತ್ತಿತ್ತು.ಇದೀಗ ಕೊನೆಗೂ ವಿವಾದಿತ ಸ್ಥಳದಲ್ಲಿದ್ದ ಮದ್ಯದಂಗಡಿಗೆ ಕೊನೆಗಾಲ ಬಂದಿದೆ.
ಸನ್ನದನ್ನು ಸ್ಥಳಾಂತರಿಸುವಂತೆ ಹೊರಡಿಸಿರುವ ಆದೇಶ ಪ್ರತಿ.
         ದೂರು ಪ್ರತಿದೂರು, ಹೇಳಿಕೆ ಪ್ರತಿಹೇಳಿಕೆ ಇವುಗಳೆಲ್ಲಾ ವಿಚಾರಣೆ ನಡೆದು ತಹಸೀಲ್ದಾರ್ ವರದಿ, ತಾಲ್ಲೂಕು ಹಾಗೂ ಜಿಲ್ಲಾ ನೊಂದಣಾಧಿಕಾರಿಗಳ ವರದಿ, ಚಿ.ನಾ.ಹಳ್ಳಿ ಅಬಕಾರಿ ನಿರೀಕ್ಷಕರ ವರದಿ,ತಿಪಟೂರು ಅಬಕಾರಿ ಉಪಅಧೀಕ್ಷಕರ ವರದಿ, ಹೆದ್ದಾರಿ ಸಹಾಯಕ ಕಾರ್ಯಪಾಲಕ ಇಂಜಿನಿಯರ್, ಲೋಕೋಪಯೋಗಿ ಇಲಾಖೆ ಇವರುಗಳ ವರದಿ ಆದರಿಸಿ ಅಂತಿಮವಾಗಿ ಜಿಲ್ಲಾ ಅಬಕಾರಿ ಉಪ ಆಯುಕ್ತರು ಡಿಸೆಂಬರ್ 28ರ ಒಳಗೆ ಬೇರೊಂದು ನಿರಾಕ್ಷೇಪಣಾ ಸ್ಥಳಕ್ಕೆ ಸ್ಥಳಾಂತರಿಸಲು ಆದೇಶ ಹೊರಡಿಸಿದ್ದಾರೆ.
        ಸಾರ್ವಜನಿಕ ಸ್ಥಳದಲ್ಲಿದ್ದ ಮದ್ಯದಂಗಡಿ ತೆರವಿಗೆ ಅಬಕಾರಿ ಡಿಸಿಯವರು ಹೊರಡಿಸಿರುವ ಆದೇಶವನ್ನು ಪಟ್ಟಣದ ದೇವಾಲಯ ಸಮಿತಿಯವರು, ಸಂಘ ಸಂಸ್ಥೆಯವರು ,ಸಾರ್ವಜನಿಕರು ಶ್ಲಾಘಿಸಿದ್ದಾರೆ. ಅಬಕಾರಿ ನಿರೀಕ್ಷಕ ವಿಜಯ್ ಕುಮಾರ್, ಉಪನಿರೀಕ್ಷಕ ಜಗದೀಶ್ ಮತ್ತು ಸಿಬ್ಬಂದಿಯವರು ಶುಕ್ರವಾರ ಖುದ್ದಾಗಿ ಬಂದು ಲಿಖಿತ ಆದೇಶ ಪ್ರತಿಯನ್ನು ಜಾರಿ ಮಾಡಿ ಹೋಗಿದ್ದಾರೆ.
---------
       ವಿವಾದಿತ ಸ್ಥಳದಲ್ಲಿದ್ದ ಈ ಮದ್ಯದಂಗಡಿಯಿಂದ 46.4 ಮೀ ಅಂತರದಲ್ಲಿ ಗ್ರಾಮದೇವತೆ ಹುಳಿಯಾರಮ್ಮ ದೇವಿ ದೇವಾಲಯ, 96.3 ಮೀ ಅಂತರದಲ್ಲಿ ಮುಜರಾಯಿಗೆ ಸೇರಿದ ಪುರಾಣ ಪ್ರಸಿದ್ದ ಶ್ರೀರಂಗನಾಥಸ್ವಾಮಿ ಸನ್ನಿಧಿ, 93.7 ಮೀ ದೂರದಲ್ಲಿ ಬೀರಲಿಂಗೇಶ್ವರ ಸ್ವಾಮಿ ದೇವಾಲಯ ಹಾಗೂ 116 ಮೀ ಅಂತರದಲ್ಲಿ ಸರ್ಕಾರಿ ಆಸ್ಪತ್ರೆ ಹಾಗೂ ಬೀದರ್ ಶ್ರೀರಂಗಪಟ್ಟಣ ಹೆದ್ದಾರಿಯಿಂದ 116 ಮೀ ಅಂತರದಲ್ಲಿದ್ದು ಕರ್ನಾಟಕ ಅಬಕಾರಿ ಸನ್ನದುಗಳು 1967 ನಿಯಮ 5ರಂತೆ ಅಕ್ಷೇಪಣಾ ಸ್ಥಳದಲ್ಲಿರುತ್ತದೆ.

------------ 

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...