ವಿಷಯಕ್ಕೆ ಹೋಗಿ

ಕೊನೆಗೂ ಎತ್ತಂಗಡಿಯಾಗಲಿದೆ ವಿವಾದಿತ ಲಿಕ್ಕರ್ ಶಾಪ್ : ಡಿಸೆಂಬರ್ 28 ರವರೆಗೆ ಮಾತ್ರ ಗಡುವು

        ಕಳೆದ ಅನೇಕ ವರ್ಷಗಳಿಂದ ಪಟ್ಟಣದ ಹೃದಯಭಾಗದಲ್ಲಿದ್ದ ಶ್ರೀರಂಗನಾಥ ಲಿಕ್ಕರ್ ಶಾಪ್‍ನ ಸ್ಥಳಾಂತರಕ್ಕೆ ನಡೆದಿದ್ದ ಕಾನೂನು ಹೋರಾಟಗಳೆಲ್ಲಾ ಅಂತೂ ಕೊನೆಗೊಂಡಿದ್ದು ಇದೀಗ ಅಬಕಾರಿ ಉಪ ಆಯುಕ್ತರು ಸ್ಥಳಾಂತರಕ್ಕೆ ಅಂತಿಮ ಆದೇಶ ಹೊರಡಿಸಿದ್ದು, ಸ್ಥಳಾಂತರಕ್ಕೆ ಕ್ಷಣಗಣನೆ ನಡೆದಿದೆ.
      ಏನಿದು ವಿವಾದ : ಪಟ್ಟಣದ ಹುಳಿಯಾರಮ್ಮ ದೇವಾಲಯದ ಹತ್ತಿರದ ದಿಟೌನ್ ಕೋಪರೇಟಿವ್ ಸೊಸೈಟಿಯ ಕಟ್ಟಡದಲ್ಲಿ ಎನ್.ಜಿ.ನಾಗರಾಜರಾವ್ ಅವರಿಗೆ ಸೇರಿದ್ದ ಮದ್ಯದಂಗಡಿ ಕಳೆದ 40 ವರ್ಷಗಳಿಂದ ಇದ್ದು, ಅಬಕಾರಿ ನಿಯಮ ಉಲ್ಲಂಘಿಸಿ ಆಕ್ಷೇಪಣಾರ್ಹ ಸ್ಥಳದಲ್ಲಿರುವ ಇದನ್ನು ತೆರವುಗೊಳಿಸುವಂತೆ ಕಟ್ಟಡದ ಮಾಲೀಕರಾದ ಟೌನ್ ಕೋಅಪರೇಟಿವ್ ಸೊಸೈಟಿಯವರು 2002 ರಿಂದ ಕಾನೂನು ಹೋರಾಟ ನಡೆಸುತ್ತಾ ಬಂದಿದ್ದರು.
ಹುಳಿಯಾರು ಪಟ್ಟಣದಲ್ಲಿ ವಿವಾದಿತ ಸ್ಥಳದಲ್ಲಿರುವ ರಂಗನಾಥ ಲಿಕ್ಕರ್ ಶಾಪ್.
ಸನ್ನದು ಸ್ಥಳವು ಜನನಿಬಿಡ ಸ್ಥಳವಾಗಿದ್ದು,ಪಕ್ಕದಲ್ಲೇ ನಾಲ್ಕು ದೇವಾಲಯಗಳು,ಸಾರ್ವಜನಿಕ ಆಸ್ಪತ್ರೆ ಅಲ್ಲದೆ ಹೆದ್ದಾರಿಯು ಹಾದುಹೋಗಿದ್ದು ಅಬಕಾರಿ ನಿಯಮದ ಷರತ್ತುಗಳು ಉಲ್ಲಂಘಿಸಿ ಲಿಕ್ಕರ್ ಶಾಪ್ ನಡೆಯುತ್ತಿದ್ದು ಅದನ್ನು ಸ್ಥಳಾಂತರಿಸುವಂತೆ ಪಟ್ಟುಹಿಡಿದಿದ್ದರು.
       ಹುಳಿಯಾರಮ್ಮ ದೇವಸ್ಥಾನ ಸಮಿತಿ,ರಂಗನಾಥಸ್ವಾಮಿ ದೇವಾಲಯ ಟ್ರಸ್ಟ್,ಬೀರಲಿಂಗೇಶ್ವರ ದೇವಾಲಯ ಸಮಿತಿ , ಸೀತಾರಾಮ ಪ್ರತಿಷ್ಠಾನ ಟ್ರಸ್ಟ್, ಕರ್ನಾಟಕ ರಕ್ಷಣಾ ವೇದಿಕೆ ಘಟಕ,ಜಯಕರ್ನಾಟಕ ಘಟಕ, ರೈತಸಂಘದವರು, ಪಂಚಾಯ್ತಿ ಸದಸ್ಯರು ಸಹ ಸೊಸೈಟಿಯ ಹೋರಾಟಕ್ಕೆ ಕೈಜೋಡಿಸಿ ಲಿಕ್ಕರ್ ಶಾಪ್ ಸ್ಥಳಾಂತರಿಸುವಂತೆ ಒತ್ತಾಯಿಸಿದ್ದರು.
ಅಬಕಾರಿ ನಿಯಮದ ಅನ್ವಯ ದೇವಾಲಯಗಳಿಂದ 100 ಮೀ ಒಳಗೆ ಹಾಗೂ ರಾಷ್ಟ್ರೀಯಹೆದ್ದಾರಿಯಿಂದ 220 ಮೀ ಒಳಗೆ ಯಾವುದೇ ಮದ್ಯದಂಗಡಿ ಇರಬಾರದೆಂಬ ನಿಯಮವನ್ನು ಎತ್ತಿ ಹಿಡಿದು ಸನ್ನದನ್ನೇ ರದ್ದು ಪಡಿಸಬೇಕೆಂದು ಅಬಕಾರಿ ಸಚಿವರವರೆಗೂ ಪ್ರಕರಣ ಸಾಗಿತ್ತು.
       ಆ ದೂರಿನ ಅನ್ವಯ ವಿಚಾರಣೆಗಳೂ ಸಹ ನಡೆಯುತ್ತಾ ಸಾಗಿ, ವಿವಾದ ತಾರಕಕ್ಕೇರಿ ಅಬಕಾರಿ ಡಿಸಿಯವರೇ ಖುದ್ದು ಸ್ಥಳಕ್ಕೆ ಬಂದು ಆಳತೆ ಮಾಡಿ ಹೋಗುವಂತಾಗಿದ್ದರೂ ಸಹ ಒಂದಲ್ಲ ಒಂದು ತಕರಾರು ನಡೆದು ಸ್ಥಳಾಂತರ ಕಾರ್ಯ ನಡೆಯದೆ ಹಾಗೆಯೇ ಮುಂದೋಗುತ್ತಿತ್ತು.ಇದೀಗ ಕೊನೆಗೂ ವಿವಾದಿತ ಸ್ಥಳದಲ್ಲಿದ್ದ ಮದ್ಯದಂಗಡಿಗೆ ಕೊನೆಗಾಲ ಬಂದಿದೆ.
ಸನ್ನದನ್ನು ಸ್ಥಳಾಂತರಿಸುವಂತೆ ಹೊರಡಿಸಿರುವ ಆದೇಶ ಪ್ರತಿ.
         ದೂರು ಪ್ರತಿದೂರು, ಹೇಳಿಕೆ ಪ್ರತಿಹೇಳಿಕೆ ಇವುಗಳೆಲ್ಲಾ ವಿಚಾರಣೆ ನಡೆದು ತಹಸೀಲ್ದಾರ್ ವರದಿ, ತಾಲ್ಲೂಕು ಹಾಗೂ ಜಿಲ್ಲಾ ನೊಂದಣಾಧಿಕಾರಿಗಳ ವರದಿ, ಚಿ.ನಾ.ಹಳ್ಳಿ ಅಬಕಾರಿ ನಿರೀಕ್ಷಕರ ವರದಿ,ತಿಪಟೂರು ಅಬಕಾರಿ ಉಪಅಧೀಕ್ಷಕರ ವರದಿ, ಹೆದ್ದಾರಿ ಸಹಾಯಕ ಕಾರ್ಯಪಾಲಕ ಇಂಜಿನಿಯರ್, ಲೋಕೋಪಯೋಗಿ ಇಲಾಖೆ ಇವರುಗಳ ವರದಿ ಆದರಿಸಿ ಅಂತಿಮವಾಗಿ ಜಿಲ್ಲಾ ಅಬಕಾರಿ ಉಪ ಆಯುಕ್ತರು ಡಿಸೆಂಬರ್ 28ರ ಒಳಗೆ ಬೇರೊಂದು ನಿರಾಕ್ಷೇಪಣಾ ಸ್ಥಳಕ್ಕೆ ಸ್ಥಳಾಂತರಿಸಲು ಆದೇಶ ಹೊರಡಿಸಿದ್ದಾರೆ.
        ಸಾರ್ವಜನಿಕ ಸ್ಥಳದಲ್ಲಿದ್ದ ಮದ್ಯದಂಗಡಿ ತೆರವಿಗೆ ಅಬಕಾರಿ ಡಿಸಿಯವರು ಹೊರಡಿಸಿರುವ ಆದೇಶವನ್ನು ಪಟ್ಟಣದ ದೇವಾಲಯ ಸಮಿತಿಯವರು, ಸಂಘ ಸಂಸ್ಥೆಯವರು ,ಸಾರ್ವಜನಿಕರು ಶ್ಲಾಘಿಸಿದ್ದಾರೆ. ಅಬಕಾರಿ ನಿರೀಕ್ಷಕ ವಿಜಯ್ ಕುಮಾರ್, ಉಪನಿರೀಕ್ಷಕ ಜಗದೀಶ್ ಮತ್ತು ಸಿಬ್ಬಂದಿಯವರು ಶುಕ್ರವಾರ ಖುದ್ದಾಗಿ ಬಂದು ಲಿಖಿತ ಆದೇಶ ಪ್ರತಿಯನ್ನು ಜಾರಿ ಮಾಡಿ ಹೋಗಿದ್ದಾರೆ.
---------
       ವಿವಾದಿತ ಸ್ಥಳದಲ್ಲಿದ್ದ ಈ ಮದ್ಯದಂಗಡಿಯಿಂದ 46.4 ಮೀ ಅಂತರದಲ್ಲಿ ಗ್ರಾಮದೇವತೆ ಹುಳಿಯಾರಮ್ಮ ದೇವಿ ದೇವಾಲಯ, 96.3 ಮೀ ಅಂತರದಲ್ಲಿ ಮುಜರಾಯಿಗೆ ಸೇರಿದ ಪುರಾಣ ಪ್ರಸಿದ್ದ ಶ್ರೀರಂಗನಾಥಸ್ವಾಮಿ ಸನ್ನಿಧಿ, 93.7 ಮೀ ದೂರದಲ್ಲಿ ಬೀರಲಿಂಗೇಶ್ವರ ಸ್ವಾಮಿ ದೇವಾಲಯ ಹಾಗೂ 116 ಮೀ ಅಂತರದಲ್ಲಿ ಸರ್ಕಾರಿ ಆಸ್ಪತ್ರೆ ಹಾಗೂ ಬೀದರ್ ಶ್ರೀರಂಗಪಟ್ಟಣ ಹೆದ್ದಾರಿಯಿಂದ 116 ಮೀ ಅಂತರದಲ್ಲಿದ್ದು ಕರ್ನಾಟಕ ಅಬಕಾರಿ ಸನ್ನದುಗಳು 1967 ನಿಯಮ 5ರಂತೆ ಅಕ್ಷೇಪಣಾ ಸ್ಥಳದಲ್ಲಿರುತ್ತದೆ.

------------ 

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...