ವಿಷಯಕ್ಕೆ ಹೋಗಿ

ಕೆಂಕೆರೆಗೆ ಪಶುಆಸ್ಪತ್ರೆ, ಅಂಗನವಾಡಿಗೆ ಅನುದಾನ : ಸಂಸದ ಮುದ್ದಹನುಮೇಗೌಡ

ಗ್ರಾಮದಲ್ಲಿ ಅತಿ ಅವಶ್ಯಕವಿರುವ ಪಶುಆಸ್ಪತ್ರೆ ,ಅಂಗನವಾಡಿ ಕೇಂದ್ರ ಹಾಗೂ ಸೊಸೈಟಿ ನಿರ್ಮಾಣಕ್ಕೆ ತಮ್ಮ ನಿಧಿಯಿಂದ ಅನುದಾನ ಬಿಡುಗÀಡೆ ಮಾಡುವುದಾಗಿ ಸಂಸದ ಮುದ್ದಹನುಮೇಗೌಡ ಭರವಸೆ ನೀಡಿದರು.
 ಹುಳಿಯಾರು ಹೋಬಳಿ ಕೆಂಕರೆ ಗ್ರಾಮದಲ್ಲಿ ನಡೆದ ಕಾರ್ಯಕ್ರಮವನ್ನು ಸಂಸದ ಮುದ್ದಹನುಮೇಗೌಡ ಉದ್ಘಾಟಿಸಿದರು.
ಸಂಸದ ನಡಿಗೆ , ಜನಸಾಮಾನ್ಯರೆಡೆಗೆ ಕಾರ್ಯಕ್ರಮದಂತೆ ಹೋಬಳಿಯ ಕೆಂಕೆರೆ ಗ್ರಾಮಕ್ಕೆ ಗುರುವಾರ ಭೇಟಿ ನೀಡಿದ್ದ ಅವರು ಕಾರ್ಯಕ್ರಮ ಉದ್ಘಾಟಿಸಿ ಗ್ರಾಮಸ್ಥರ ಅಹವಾಲು ಸ್ವೀಕರಿಸಿ ಮಾತನಾಡಿದರು.
ತಾನು ಈ ಕಾರ್ಯಕ್ರಮ ಕೈಗೊಂಡಿರುವುದು ಪಕ್ಷದ ಪ್ರಚಾರಕ್ಕಲ್ಲ, ಕ್ಷೇತ್ರದ ಅಭಿವೃದ್ದಿಯ ನಿಟ್ಟಿನಲ್ಲಿ, ಇಲ್ಲಿ ಯಾವುದೇ ರಾಜಕೀಯ ತರಬೇಡಿ ಎಂದರು. ತಾನು ಹೋಗಿದ್ದ ಹಳ್ಳಿಗಳಿಗೆ ಹೋಲಿಸಿದ ಈ ಗ್ರಾಮದಲ್ಲಿ ಮಾತ್ರ ಮಹಿಳೆಯರು ನಿವೇಶನಕ್ಕಾಗಿ ಹೆಚ್ಚು ಅರ್ಜಿಗಳನ್ನು ಸಲ್ಲಿಸಿದ್ದಾರೆ, ಇವರಿಗೆ ಇದುವರೆಗೆ ನಿವೇಶನ ನೀಡದಿರುವುದು ಇಲ್ಲಿನ ಅಧಿಕಾರಿಗಳು ಯಾವ ರೀತಿ ತಮ್ಮ ಕಾರ್ಯನಿರ್ವಹಿಸಿದ್ದಾರೆ ಎಂಬುದನ್ನು ಎತ್ತಿಹಿಡಿಯುತ್ತಿದೆ.
ಒಬ್ಬ ಸಂಸದರಿಗೆ ಗ್ರಾಮಕ್ಕೆ ಅವಶ್ಯಕ ಸೌಲಭ್ಯಗಳು ಬೇಕೆಂದು ಅರ್ಜಿಸಲ್ಲಿಸುವುದು ಸಹಜ ಆದರೆ ಈ ಗ್ರಾಮದಲ್ಲಿ ನಿವೇಶನಕ್ಕಾಗಿ ಅರ್ಜಿಗಳು ಬಂದಿರುವುದು ವಸತಿರಹಿತರ ಸಮಸ್ಯೆ ಬಿಂಬಿಸುತ್ತಿದೆ. ಈ ಬಗ್ಗೆ ಶೀಘ್ರದಲ್ಲೇ ಗ್ರಾ.ಪಂ ವ್ಯಾಪ್ತಿಯಲ್ಲಿರುವ ಜಾಗದ ಜೊತೆಗೆ ಅವಶ್ಯಕ ಮತ್ತಷ್ಟು ಜಾಗವನ್ನು ಖಾಸಗಿಯವರಿಂದ ಖರೀದಿಸುವಂತೆ ತಹಶೀಲ್ದಾರ್ ಅವರಿಗೆ ಸೂಚಿಸಿದರಲ್ಲದೆ, ಅದಕ್ಕೆ ತಗುಲುವ ವೆಚ್ಚವನ್ನು ನೀಡುವುದಾಗಿ ತಿಳಿಸಿದರು.
ಒಬ್ಬ ಸಂಸದ ದಿಲ್ಲಿಯಿಂದ ಹಳ್ಳಿವರೆಗೆ ಹೋಗಿ ಜನರ ಸಮಸ್ಯೆಗಳನ್ನು ಆಲಿಸಿ ಹೇಗೆ ಬಗೆಹರಿಸಬಹುದೆಂಬುದನ್ನು ತೋರಿಸಿ, ಒಂದು ಸಾಧನೆ ಮಾಡಬೇಕೆಂದು ತಾವು ಈ ಕಾರ್ಯ ಕೈಗೊಂಡಿರುವುದಾಗಿ ತಿಳಿಸಿದರು. ಸಂಸದರಿಗೆ ಕೊಟ್ಟ ಅರ್ಜಿ ಕಾಟಾಚಾರಕ್ಕೆ ಎಂಬ ಮನೋಭಾವ ಮೂಡಿಸಿಕೊಳ್ಳಬೇಡಿ, ನಿಮ್ಮಗಳ ಕುಂದುಕೊರತೆಗಳ ನಿವಾರಣೆಗಾಗಿ ಜಿಲ್ಲಾಧಿಕಾರಿ ಕಛೇರಿಯಲ್ಲಿ ಸಂಸದರ ಕೊಠಡಿಯನ್ನು ತೆರೆದಿದ್ದು ತಾನು ಅಲ್ಲೇ ಲಭ್ಯವಿರುವುದಾಗಿ ಇರುವುದಾಗಿ ಹಾಗೂ ತಾವಿಲ್ಲದ ವೇಳೆ ಅರ್ಜಿಯನ್ನು ನೀಡಿ ಬಂದಲ್ಲಿ ಅದನ್ನು ತಾವು ಗಮನಿಸಿ ಪರಿಹರಿಸುವುದಾಗಿ ತಿಳಿಸಿದರು.
ಒಟ್ಟಾರೆ ಗ್ರಾಮಕ್ಕೆ ತಾಲ್ಲೂಕು ವiಟ್ಟದ ಅಧಿಕಾರಿಗಳ ತಂಡದೊಂದಿಗೆ ಬಂದ ಸಂಸದರಿಗೆ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿದ್ದು , ಸಮಸ್ಯೆಗಳ ಸುರಿಮಳೆಗೈದು ನೂರಾರು ಅರ್ಜಿಗಳು ಸಲ್ಲಿಕೆಯಾದವು.

ಈ ವೇಳೆ ತಹಶೀಲ್ದಾರ್ ಕಾಮಾಕ್ಷಮ್ಮ, ಇಓ ಕೃಷ್ಣಮೂರ್ತಿ, ಕಂದಾಯ ಇಲಾಖೆಯ ಸತ್ಯನಾರಾಯಣ್,ಹನುಮತಪ್ಪ, ಕೃಷಿ ಇಲಾಖೆಯ ನೂರುಲ್ಲಾ, ಶಿಕ್ಷಣ ಇಲಾಖೆಯ ಸಾಚಿ ನಾಗೇಶ್, ಮುಖಂಡರಾದ ಸಾಸಲುಸತೀಶ್, ಸಿದ್ರಾಮಣ್ಣ , ಕೃಷ್ಣೇಗೌಡ,ಅಶೋಕ್, ಗ್ರಾಮಸ್ಥರಾದ ಶಿವಕುಮಾರ್,ಯೋಗೀಶ್,ಈಶ್ವರಯ್ಯ, ಬಸವನಗುಡಿ ಕುಮಾರ್, ಶಾಂತಪ್ಪ, ನಟರಾಜ್, ಭದ್ರೇಶ್,ಶೇಖರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.