ವಿಷಯಕ್ಕೆ ಹೋಗಿ

ಕೆಂಕೆರೆಗೆ ಪಶುಆಸ್ಪತ್ರೆ, ಅಂಗನವಾಡಿಗೆ ಅನುದಾನ : ಸಂಸದ ಮುದ್ದಹನುಮೇಗೌಡ

ಗ್ರಾಮದಲ್ಲಿ ಅತಿ ಅವಶ್ಯಕವಿರುವ ಪಶುಆಸ್ಪತ್ರೆ ,ಅಂಗನವಾಡಿ ಕೇಂದ್ರ ಹಾಗೂ ಸೊಸೈಟಿ ನಿರ್ಮಾಣಕ್ಕೆ ತಮ್ಮ ನಿಧಿಯಿಂದ ಅನುದಾನ ಬಿಡುಗÀಡೆ ಮಾಡುವುದಾಗಿ ಸಂಸದ ಮುದ್ದಹನುಮೇಗೌಡ ಭರವಸೆ ನೀಡಿದರು.
 ಹುಳಿಯಾರು ಹೋಬಳಿ ಕೆಂಕರೆ ಗ್ರಾಮದಲ್ಲಿ ನಡೆದ ಕಾರ್ಯಕ್ರಮವನ್ನು ಸಂಸದ ಮುದ್ದಹನುಮೇಗೌಡ ಉದ್ಘಾಟಿಸಿದರು.
ಸಂಸದ ನಡಿಗೆ , ಜನಸಾಮಾನ್ಯರೆಡೆಗೆ ಕಾರ್ಯಕ್ರಮದಂತೆ ಹೋಬಳಿಯ ಕೆಂಕೆರೆ ಗ್ರಾಮಕ್ಕೆ ಗುರುವಾರ ಭೇಟಿ ನೀಡಿದ್ದ ಅವರು ಕಾರ್ಯಕ್ರಮ ಉದ್ಘಾಟಿಸಿ ಗ್ರಾಮಸ್ಥರ ಅಹವಾಲು ಸ್ವೀಕರಿಸಿ ಮಾತನಾಡಿದರು.
ತಾನು ಈ ಕಾರ್ಯಕ್ರಮ ಕೈಗೊಂಡಿರುವುದು ಪಕ್ಷದ ಪ್ರಚಾರಕ್ಕಲ್ಲ, ಕ್ಷೇತ್ರದ ಅಭಿವೃದ್ದಿಯ ನಿಟ್ಟಿನಲ್ಲಿ, ಇಲ್ಲಿ ಯಾವುದೇ ರಾಜಕೀಯ ತರಬೇಡಿ ಎಂದರು. ತಾನು ಹೋಗಿದ್ದ ಹಳ್ಳಿಗಳಿಗೆ ಹೋಲಿಸಿದ ಈ ಗ್ರಾಮದಲ್ಲಿ ಮಾತ್ರ ಮಹಿಳೆಯರು ನಿವೇಶನಕ್ಕಾಗಿ ಹೆಚ್ಚು ಅರ್ಜಿಗಳನ್ನು ಸಲ್ಲಿಸಿದ್ದಾರೆ, ಇವರಿಗೆ ಇದುವರೆಗೆ ನಿವೇಶನ ನೀಡದಿರುವುದು ಇಲ್ಲಿನ ಅಧಿಕಾರಿಗಳು ಯಾವ ರೀತಿ ತಮ್ಮ ಕಾರ್ಯನಿರ್ವಹಿಸಿದ್ದಾರೆ ಎಂಬುದನ್ನು ಎತ್ತಿಹಿಡಿಯುತ್ತಿದೆ.
ಒಬ್ಬ ಸಂಸದರಿಗೆ ಗ್ರಾಮಕ್ಕೆ ಅವಶ್ಯಕ ಸೌಲಭ್ಯಗಳು ಬೇಕೆಂದು ಅರ್ಜಿಸಲ್ಲಿಸುವುದು ಸಹಜ ಆದರೆ ಈ ಗ್ರಾಮದಲ್ಲಿ ನಿವೇಶನಕ್ಕಾಗಿ ಅರ್ಜಿಗಳು ಬಂದಿರುವುದು ವಸತಿರಹಿತರ ಸಮಸ್ಯೆ ಬಿಂಬಿಸುತ್ತಿದೆ. ಈ ಬಗ್ಗೆ ಶೀಘ್ರದಲ್ಲೇ ಗ್ರಾ.ಪಂ ವ್ಯಾಪ್ತಿಯಲ್ಲಿರುವ ಜಾಗದ ಜೊತೆಗೆ ಅವಶ್ಯಕ ಮತ್ತಷ್ಟು ಜಾಗವನ್ನು ಖಾಸಗಿಯವರಿಂದ ಖರೀದಿಸುವಂತೆ ತಹಶೀಲ್ದಾರ್ ಅವರಿಗೆ ಸೂಚಿಸಿದರಲ್ಲದೆ, ಅದಕ್ಕೆ ತಗುಲುವ ವೆಚ್ಚವನ್ನು ನೀಡುವುದಾಗಿ ತಿಳಿಸಿದರು.
ಒಬ್ಬ ಸಂಸದ ದಿಲ್ಲಿಯಿಂದ ಹಳ್ಳಿವರೆಗೆ ಹೋಗಿ ಜನರ ಸಮಸ್ಯೆಗಳನ್ನು ಆಲಿಸಿ ಹೇಗೆ ಬಗೆಹರಿಸಬಹುದೆಂಬುದನ್ನು ತೋರಿಸಿ, ಒಂದು ಸಾಧನೆ ಮಾಡಬೇಕೆಂದು ತಾವು ಈ ಕಾರ್ಯ ಕೈಗೊಂಡಿರುವುದಾಗಿ ತಿಳಿಸಿದರು. ಸಂಸದರಿಗೆ ಕೊಟ್ಟ ಅರ್ಜಿ ಕಾಟಾಚಾರಕ್ಕೆ ಎಂಬ ಮನೋಭಾವ ಮೂಡಿಸಿಕೊಳ್ಳಬೇಡಿ, ನಿಮ್ಮಗಳ ಕುಂದುಕೊರತೆಗಳ ನಿವಾರಣೆಗಾಗಿ ಜಿಲ್ಲಾಧಿಕಾರಿ ಕಛೇರಿಯಲ್ಲಿ ಸಂಸದರ ಕೊಠಡಿಯನ್ನು ತೆರೆದಿದ್ದು ತಾನು ಅಲ್ಲೇ ಲಭ್ಯವಿರುವುದಾಗಿ ಇರುವುದಾಗಿ ಹಾಗೂ ತಾವಿಲ್ಲದ ವೇಳೆ ಅರ್ಜಿಯನ್ನು ನೀಡಿ ಬಂದಲ್ಲಿ ಅದನ್ನು ತಾವು ಗಮನಿಸಿ ಪರಿಹರಿಸುವುದಾಗಿ ತಿಳಿಸಿದರು.
ಒಟ್ಟಾರೆ ಗ್ರಾಮಕ್ಕೆ ತಾಲ್ಲೂಕು ವiಟ್ಟದ ಅಧಿಕಾರಿಗಳ ತಂಡದೊಂದಿಗೆ ಬಂದ ಸಂಸದರಿಗೆ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿದ್ದು , ಸಮಸ್ಯೆಗಳ ಸುರಿಮಳೆಗೈದು ನೂರಾರು ಅರ್ಜಿಗಳು ಸಲ್ಲಿಕೆಯಾದವು.

ಈ ವೇಳೆ ತಹಶೀಲ್ದಾರ್ ಕಾಮಾಕ್ಷಮ್ಮ, ಇಓ ಕೃಷ್ಣಮೂರ್ತಿ, ಕಂದಾಯ ಇಲಾಖೆಯ ಸತ್ಯನಾರಾಯಣ್,ಹನುಮತಪ್ಪ, ಕೃಷಿ ಇಲಾಖೆಯ ನೂರುಲ್ಲಾ, ಶಿಕ್ಷಣ ಇಲಾಖೆಯ ಸಾಚಿ ನಾಗೇಶ್, ಮುಖಂಡರಾದ ಸಾಸಲುಸತೀಶ್, ಸಿದ್ರಾಮಣ್ಣ , ಕೃಷ್ಣೇಗೌಡ,ಅಶೋಕ್, ಗ್ರಾಮಸ್ಥರಾದ ಶಿವಕುಮಾರ್,ಯೋಗೀಶ್,ಈಶ್ವರಯ್ಯ, ಬಸವನಗುಡಿ ಕುಮಾರ್, ಶಾಂತಪ್ಪ, ನಟರಾಜ್, ಭದ್ರೇಶ್,ಶೇಖರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...