ವಿಷಯಕ್ಕೆ ಹೋಗಿ

ಸಂಸದರ ಮುಂದೆ ಸಮಸ್ಯೆಗಳ ಸರಮಾಲೆ ಬಿಚ್ಚಿಟ್ಟ ಜನತೆ

          ಹುಳಿಯಾರು ಪಟ್ಟಣಕ್ಕೆ ಸುಸ್ಸಜ್ಜಿತ ಬಸ್ ನಿಲ್ದಾಣ, ವಿಜ್ಞಾನ ಕಾಲೇಜು, ಗ್ರಾ.ಪಂ ನ್ನು ಪಟ್ಟಣ ಪಂಚಾಯ್ತಿಯಾಗಿಸುವಂತೆ, ಕೆರೆ ಅಂಗಳದ ನಿರಾಶ್ರಿತರಿಗೆ ವಸತಿ ಕಲ್ಪಿಸಿಕೊಡುವಂತೆ, ರೈತಸಂಘಕ್ಕೆ ನಿವೇಶನ ಮಂಜೂರು ಮಾಡಿಸುವಂತೆ, ಪೋಲಿಸ್ ವಸತಿಗೃಹಗಳ ನಿರ್ಮಾಣ, ಗಾಂಧಿಭವನಕ್ಕೆ ಬೋಜನಶಾಲೆ ನಿರ್ಮಾಣ,ಅಲೆಮಾರಿ ಜನಾಂಗಕ್ಕೆ ನಿವೇಶನ ಸೇರಿದಂತೆ ಇನ್ನಿತರ ಬೇಡಿಕೆಗಳ ಹಾಗೂ ಅನೇಕ ಸಮಸ್ಯೆಗಳ ಸರಮಾಲೆಯನ್ನೇ ಸಂಸದ ಮುದ್ದಹನುಮೇಗೌಡರ ಮುಂದೆ ಸಾರ್ವಜನಿಕರು ಬಿಚ್ಚಿಟ್ಟರು.
ಹುಳಿಯಾರಿನಲ್ಲಿ ನಡೆದ ಕಾರ್ಯಕ್ರಮವನ್ನು ಸಂಸದ ಮುದ್ದಹನುಮೇಗೌಡರು ಉದ್ಘಾಟಿಸಿದರು.
              ಸಂಸರದ ನಡೆ ಹಳ್ಳಿಯಡೆಗೆ ಕಾರ್ಯಕ್ರಮದಂತೆ ಹುಳಿಯಾರಿಗೆ ಗುರುವಾರ ಸಂಜೆ ಆಗಮಿಸಿದ್ದ ಸಂಸದರಿಗೆ ಇಲ್ಲಿನ ಸಂಘಸಂಸ್ಥೆಯವರು, ಸಾರ್ವಜನಿಕರು ತಮ್ಮ ಹತ್ತಾರು ಸಮಸ್ಯೆಗಳನ್ನೊಳಗೊಂಡ ಅಹವಾಲುಗಳನ್ನು ಸಲ್ಲಿಸಿದರು.
           ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ಸಂಸದರು ಮಾತನಾಡಿ, ಹುಳಿಯಾರಿನಲ್ಲಿನ ಸಮಸ್ಯೆಗಳ ಬಗ್ಗೆ ತಮಗೆ ತಿಳಿದಿದೆ ಅವುಗಳನ್ನು ಹಂತಹಂತವಾಗಿ ಬಗೆಹರಿಸುವ ಕಡೆ ಹೆಚ್ಚು ಗಮನ ನೀಡುವುದಾಗಿ ತಿಳಿಸಿದರು. ಸಂಸದರಾಗಿ ಗೆದ್ದಮೇಲೆ ಜನರ ಸಂಪರ್ಕಕ್ಕೆ ಸಿಗುವುದಿಲ್ಲ ಎಂಬ     ಮಾತನ್ನು ಸುಳ್ಳು ಮಾಡಲು ತಾವು ಹೊರಟಿದ್ದು, ಇದೇನಪ್ಪಾ ಮುದ್ದುಹನುಮೇಗೌಡರು ಈರೀತಿ ತಮ್ಮ ಗ್ರಾಮಕ್ಕೆ ಬರುತ್ತಾರೆ ಎಂಬಂತಾಗುವಂತೆ ಸದಾ ನಿಮ್ಮ ಗ್ರಾಮಗಳಿಗೆ ಬರುತ್ತೇನೆ, ನಿಮ್ಮಗಳ ಸಮಸ್ಯೆಗಳನ್ನು ಆಲಿಸಿ ಅದಕ್ಕೆ ತಕ್ಕ ಪರಿಹಾರಗಳನ್ನು ಮಾಡಿಕೊಡುವೆ ಎಂಬ ಭರವಸೆ ನೀಡಿದರು.
        ಸಂಸದರಾದವರು ದೆಹಲಿಯಲ್ಲಿರದೇ ಕ್ಷೇತ್ರದ ಹಳ್ಳಿಗಳಿಗೂ ಬಂದು ಕೆಲಸ ಮಾಡಬಹುದು ಎಂಬುದನ್ನು ತೋರಿಸುವ ಕಾರ್ಯಕ್ಕೆ ತಾನು ಮುಂದಾಗಿದ್ದು ಸರ್ಕಾರವೆ ಜನರ ಮುಂದೆ ಬರಬೇಕೆ ಹೊರತು ಜನಗಳು ಅಧಿಕಾರಿಗಳ ಹಿಂದೆ ಸುತ್ತಸುತ್ತುವುದಲ್ಲ ಎಂದರು. ನಿಮ್ಮಿಂದ ಸ್ವೀಕರಿಸಿದ ಅರ್ಜಿಗಳನ್ನು ಪರಿಶೀಲಿಸಿ ಅಯಾಯಾ ಇಲಾಖೆಗಳಿಗೆ ಅವುಗಳನ್ನು ಕಳುಹಿಸಿ ಅದಕ್ಕೆ ಸಂಬಂಧಿಸಿದ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. ಅಲ್ಲದೆ ಜೊತೆಯಲ್ಲೇ ಇದ್ದ ವಿವಿಧ ಇಲಾಖೆಯ ಅಧಿಕಾರಿಗಳಿಗೆ ತಮಗೆ ಬರುವ ಸಮಸ್ಯೆಗಳ ಅರ್ಜಿಗಳನ್ನು ಶೀಘ್ರದಲ್ಲೇ ಬಗೆಹರಿಸುವಂತೆ ಸೂಚಿಸಿದರು.

           ಈ ವೇಳೆ ತಹಶೀಲ್ದಾರ್ ಕಾಮಾಕ್ಷಮ್ಮ, ಇಓ ಕೃಷ್ಣಮೂರ್ತಿ, ಪಿಡಿಓ ರಮೇಶ್, ಜಿ.ಪಂ.ಸದಸ್ಯೆ ಮಂಜುಳಾ,ಸ್ವಾತಂತ್ರ್ಯ ಹೋರಾಟಗಾರರ ಸಂಘದ ಅಧ್ಯಕ್ಷ ವೆಂಕಟಾಛಲಪತಿಶೆಟ್ರು, ಮುಖಂಡರಾದ ಸಾಸಲು ಸತೀಶ್, ಸಿದ್ರಾಮಣ್ಣ, ರಹಮತ್ತುಲ್ಲಾ, ಹೊಸಳ್ಳಿ ಅಶೋಕ್, ಪ್ರಸನ್ನಕುಮಾರ್ ಸೇರಿದಂತೆ ಇತರರಿದ್ದರು. ಹುಳಿಯಾರು ಪಟ್ಟಣ ಸೇರಿದಂತೆ ದೊಡ್ಡಬಿದರೆ, ಬರಕನಹಾಲ್, ಗಾಣಧಾಳು, ಕೆಂಕೆರೆ,ಯಳನಡು, ಕೋರಗೆರೆ, ತಿರುವiಲಾಪುರ ಗ್ರಾಮಗಳಿಗೆ ಭೇಟಿಯಿತ್ತ ಸಂಸದರಿಗೆ ಎಲ್ಲೆಡೆ ಕಾದಿದ್ದ ಜನರು ನೂರಾರು ಸಮಸ್ಯೆಗಳನ್ನೊಳಗೊಂಡ ಅನೇಕ ಅಹವಾಲುಗಳು ನೀಡಿದ್ದು, ಅವುಗಳ ಬಗ್ಗೆ ಶೀಘ್ರ ಗಮನಹರಿಸಿ ಪರಿಹರಿಸುವ ಭರವಸೆ ನೀಡಿದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.