ವಿಷಯಕ್ಕೆ ಹೋಗಿ

ಸಂಸದರ ಮುಂದೆ ಸಮಸ್ಯೆಗಳ ಸರಮಾಲೆ ಬಿಚ್ಚಿಟ್ಟ ಜನತೆ

          ಹುಳಿಯಾರು ಪಟ್ಟಣಕ್ಕೆ ಸುಸ್ಸಜ್ಜಿತ ಬಸ್ ನಿಲ್ದಾಣ, ವಿಜ್ಞಾನ ಕಾಲೇಜು, ಗ್ರಾ.ಪಂ ನ್ನು ಪಟ್ಟಣ ಪಂಚಾಯ್ತಿಯಾಗಿಸುವಂತೆ, ಕೆರೆ ಅಂಗಳದ ನಿರಾಶ್ರಿತರಿಗೆ ವಸತಿ ಕಲ್ಪಿಸಿಕೊಡುವಂತೆ, ರೈತಸಂಘಕ್ಕೆ ನಿವೇಶನ ಮಂಜೂರು ಮಾಡಿಸುವಂತೆ, ಪೋಲಿಸ್ ವಸತಿಗೃಹಗಳ ನಿರ್ಮಾಣ, ಗಾಂಧಿಭವನಕ್ಕೆ ಬೋಜನಶಾಲೆ ನಿರ್ಮಾಣ,ಅಲೆಮಾರಿ ಜನಾಂಗಕ್ಕೆ ನಿವೇಶನ ಸೇರಿದಂತೆ ಇನ್ನಿತರ ಬೇಡಿಕೆಗಳ ಹಾಗೂ ಅನೇಕ ಸಮಸ್ಯೆಗಳ ಸರಮಾಲೆಯನ್ನೇ ಸಂಸದ ಮುದ್ದಹನುಮೇಗೌಡರ ಮುಂದೆ ಸಾರ್ವಜನಿಕರು ಬಿಚ್ಚಿಟ್ಟರು.
ಹುಳಿಯಾರಿನಲ್ಲಿ ನಡೆದ ಕಾರ್ಯಕ್ರಮವನ್ನು ಸಂಸದ ಮುದ್ದಹನುಮೇಗೌಡರು ಉದ್ಘಾಟಿಸಿದರು.
              ಸಂಸರದ ನಡೆ ಹಳ್ಳಿಯಡೆಗೆ ಕಾರ್ಯಕ್ರಮದಂತೆ ಹುಳಿಯಾರಿಗೆ ಗುರುವಾರ ಸಂಜೆ ಆಗಮಿಸಿದ್ದ ಸಂಸದರಿಗೆ ಇಲ್ಲಿನ ಸಂಘಸಂಸ್ಥೆಯವರು, ಸಾರ್ವಜನಿಕರು ತಮ್ಮ ಹತ್ತಾರು ಸಮಸ್ಯೆಗಳನ್ನೊಳಗೊಂಡ ಅಹವಾಲುಗಳನ್ನು ಸಲ್ಲಿಸಿದರು.
           ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ಸಂಸದರು ಮಾತನಾಡಿ, ಹುಳಿಯಾರಿನಲ್ಲಿನ ಸಮಸ್ಯೆಗಳ ಬಗ್ಗೆ ತಮಗೆ ತಿಳಿದಿದೆ ಅವುಗಳನ್ನು ಹಂತಹಂತವಾಗಿ ಬಗೆಹರಿಸುವ ಕಡೆ ಹೆಚ್ಚು ಗಮನ ನೀಡುವುದಾಗಿ ತಿಳಿಸಿದರು. ಸಂಸದರಾಗಿ ಗೆದ್ದಮೇಲೆ ಜನರ ಸಂಪರ್ಕಕ್ಕೆ ಸಿಗುವುದಿಲ್ಲ ಎಂಬ     ಮಾತನ್ನು ಸುಳ್ಳು ಮಾಡಲು ತಾವು ಹೊರಟಿದ್ದು, ಇದೇನಪ್ಪಾ ಮುದ್ದುಹನುಮೇಗೌಡರು ಈರೀತಿ ತಮ್ಮ ಗ್ರಾಮಕ್ಕೆ ಬರುತ್ತಾರೆ ಎಂಬಂತಾಗುವಂತೆ ಸದಾ ನಿಮ್ಮ ಗ್ರಾಮಗಳಿಗೆ ಬರುತ್ತೇನೆ, ನಿಮ್ಮಗಳ ಸಮಸ್ಯೆಗಳನ್ನು ಆಲಿಸಿ ಅದಕ್ಕೆ ತಕ್ಕ ಪರಿಹಾರಗಳನ್ನು ಮಾಡಿಕೊಡುವೆ ಎಂಬ ಭರವಸೆ ನೀಡಿದರು.
        ಸಂಸದರಾದವರು ದೆಹಲಿಯಲ್ಲಿರದೇ ಕ್ಷೇತ್ರದ ಹಳ್ಳಿಗಳಿಗೂ ಬಂದು ಕೆಲಸ ಮಾಡಬಹುದು ಎಂಬುದನ್ನು ತೋರಿಸುವ ಕಾರ್ಯಕ್ಕೆ ತಾನು ಮುಂದಾಗಿದ್ದು ಸರ್ಕಾರವೆ ಜನರ ಮುಂದೆ ಬರಬೇಕೆ ಹೊರತು ಜನಗಳು ಅಧಿಕಾರಿಗಳ ಹಿಂದೆ ಸುತ್ತಸುತ್ತುವುದಲ್ಲ ಎಂದರು. ನಿಮ್ಮಿಂದ ಸ್ವೀಕರಿಸಿದ ಅರ್ಜಿಗಳನ್ನು ಪರಿಶೀಲಿಸಿ ಅಯಾಯಾ ಇಲಾಖೆಗಳಿಗೆ ಅವುಗಳನ್ನು ಕಳುಹಿಸಿ ಅದಕ್ಕೆ ಸಂಬಂಧಿಸಿದ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. ಅಲ್ಲದೆ ಜೊತೆಯಲ್ಲೇ ಇದ್ದ ವಿವಿಧ ಇಲಾಖೆಯ ಅಧಿಕಾರಿಗಳಿಗೆ ತಮಗೆ ಬರುವ ಸಮಸ್ಯೆಗಳ ಅರ್ಜಿಗಳನ್ನು ಶೀಘ್ರದಲ್ಲೇ ಬಗೆಹರಿಸುವಂತೆ ಸೂಚಿಸಿದರು.

           ಈ ವೇಳೆ ತಹಶೀಲ್ದಾರ್ ಕಾಮಾಕ್ಷಮ್ಮ, ಇಓ ಕೃಷ್ಣಮೂರ್ತಿ, ಪಿಡಿಓ ರಮೇಶ್, ಜಿ.ಪಂ.ಸದಸ್ಯೆ ಮಂಜುಳಾ,ಸ್ವಾತಂತ್ರ್ಯ ಹೋರಾಟಗಾರರ ಸಂಘದ ಅಧ್ಯಕ್ಷ ವೆಂಕಟಾಛಲಪತಿಶೆಟ್ರು, ಮುಖಂಡರಾದ ಸಾಸಲು ಸತೀಶ್, ಸಿದ್ರಾಮಣ್ಣ, ರಹಮತ್ತುಲ್ಲಾ, ಹೊಸಳ್ಳಿ ಅಶೋಕ್, ಪ್ರಸನ್ನಕುಮಾರ್ ಸೇರಿದಂತೆ ಇತರರಿದ್ದರು. ಹುಳಿಯಾರು ಪಟ್ಟಣ ಸೇರಿದಂತೆ ದೊಡ್ಡಬಿದರೆ, ಬರಕನಹಾಲ್, ಗಾಣಧಾಳು, ಕೆಂಕೆರೆ,ಯಳನಡು, ಕೋರಗೆರೆ, ತಿರುವiಲಾಪುರ ಗ್ರಾಮಗಳಿಗೆ ಭೇಟಿಯಿತ್ತ ಸಂಸದರಿಗೆ ಎಲ್ಲೆಡೆ ಕಾದಿದ್ದ ಜನರು ನೂರಾರು ಸಮಸ್ಯೆಗಳನ್ನೊಳಗೊಂಡ ಅನೇಕ ಅಹವಾಲುಗಳು ನೀಡಿದ್ದು, ಅವುಗಳ ಬಗ್ಗೆ ಶೀಘ್ರ ಗಮನಹರಿಸಿ ಪರಿಹರಿಸುವ ಭರವಸೆ ನೀಡಿದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...