ವಿಷಯಕ್ಕೆ ಹೋಗಿ

ಕಳಪೆ ಈರುಳ್ಳಿ ಬೀಜ ಮಾರಾಟ ಅಂಗಡಿಗೆ ರೈತರ ಘೇರಾವ್

ಕಳಪೆ ಈರುಳ್ಳಿ ಬೀಜ ಮಾರಾಟ ಮಾಡಿದ್ದರಿಂದ ಬೆಳೆನಷ್ಟವಾಗಿ ಲಕ್ಷಾಂತರ ರೂಪಾಯಿ ಲುಕ್ಸಾನಾಗಿದೆ ಎಂದು ಆರೋಪಿಸಿ ಹಿರಿಯೂರು ತಾಲ್ಲೂಕಿನ ಯಲ್ಲದಕೆರೆ, ಕೆಂಚಯ್ಯನಹಟ್ಟಿ, ಬಡಗೊಲ್ಲರಹಟ್ಟಿ. ಪಿಲಾಜನಹಳ್ಳಿ, ಹಾಲ್ ಮಾದೇನಹಳ್ಳಿ, ನಾಯ್ಕರಕೊಟ್ಟಿಗೆ, ಶೇಷಪ್ಪನಹಳ್ಳಿ ಸೇರಿದಂತೆ
ಹುಳಿಯಾರು ಹೋಬಳಿ ದಸೂಡಿ ಗ್ರಾಮದ ಲಕ್ಷ್ಮೀವೆಂಕಟೇಶ್ವರ ಪರ್ಟಿಲೈಸರ್ಸ್ ವತಿಯಿಂದ ನಕಲಿ ಈರುಳ್ಳಿ ಬೀಜ ಮಾರಾಟ ಮಾಡಲಾಗಿದೆ ಎಂದು ಆರೋಪಿಸಿ ಭಾನುವಾರ ನೂರಾರು ರೈತರು ಪ್ರತಿಭಟನೆ ನಡೆಸಿದರು.
ಅನೇಕ ಗ್ರಾಮಗಳ ನೂರಾರು ರೈತರು ಪರಿಹಾರ ನೀಡಲು ಒತ್ತಾಯಿಸಿ ಹೋಬಳಿಯ ದಸೂಡಿ ಗ್ರಾಮದ ಲಕ್ಷ್ಮೀವೆಂಕಟೇಶ್ವರ ಪರ್ಟಿಲೈಸರ್ಸ್ ಎದುರು ಭಾನುವಾರ ಅಂಗಡಿ ಮಾಲೀಕನಿಗೆ ಘೇರಾವು ಮಾಡಿದರು.
ಆರೋಪ: ಈರುಳ್ಳಿ ಬೀಜಕ್ಕೆ ಹಿರಿಯೂರು ಹೆಸರುವಾಸಿಯಾಗಿದ್ದು ಕಳೆದ ಜುಲೈನಲ್ಲಿ ಹಿರಿಯೂರಿನಲ್ಲಿ ಬೀಜ ದೊರೆಯದ ಕಾರಣ ಹುಳಿಯಾರು ಹೋಬಳಿಯ ದಸೂಡಿ ಗ್ರಾಮದ ಲಕ್ಷ್ಮೀವೆಂಕಟೇಶ್ವರ ಪರ್ಟಿಲೈಸರ್ಸ್ ಅಂಗಡಿಯಲ್ಲಿ ಸಿಕ್ಕ ಜಿಂದಾಲ್ ಕಂಪನಿಯ ಬೀಜಕ್ಕೆ ದುಬಾರಿ ಬೆಲೆ ತೆತ್ತಿದ್ದೆವು. ಬೀಜ ಉತ್ತಮವಾಗಿ ಮೊಳಕೆಯೊಡೆದು ಬೆಳೆದಿದ್ದರೂ ಫಸಲು ಮಾತ್ರ ಕಮ್ಮಿ ಹಾಗೂ ಕಳಪೆಯದಾಗಿದೆ ಎಂಬುದು ರೈತರ ಆರೋಪ.
ಈರುಳ್ಳಿ ಗಡ್ಡೆ ರೋಗ ಪೀಡಿತವಾಗಿದ್ದು ಕೆಂಪು ಬಣ್ಣಕ್ಕೆ ತಿರುಗಿದೆ ಅಲ್ಲದೆ ಗಾತ್ರ ತೀರ ಕಿರಿದಾಗಿದೆ. ಈ ಈರುಳ್ಳಿ ಪಕೋಡಕ್ಕೂ ಲಾಯಕ್ಕಾಗದೆ ಬಂದಿದ್ದ ಅಲ್ಪಸ್ವಲ್ಪ ಬೆಳೆಯನ್ನು ಮಾರಾಟಕ್ಕೆ ಬೆಂಗಳೂರಿಗೆ ಹೋಗಿ ಅಲ್ಲಿನ ವರ್ತಕರು ಕೂಡ ಕೊಳ್ಳದೆ ಲಾರಿ ಬಾಡಿಗೆಗೂ ಸಮಸ್ಯೆಯಾಯಿತು ಎಂದು ಯಲ್ಲದಕೆರೆ ರೈತ ಹೊರಕೇರಪ್ಪ ಆಕ್ರೋಶವ್ಯಕ್ತಪಡಿಸಿದರು. ಕಳಪೆ ಬೀಜ ಇದಕ್ಕೆ ಕಾರಣವಾಗಿದ್ದು ಅಂಗಡಿಯವರು ನಮ್ಮ ನಷ್ಟವನ್ನು ಭರಿಸಬೇಕೆಂದು ಒತ್ತಾಯಿಸಿದರು.
ಅಂಗಡಿ ಮಾಲೀಕ ಡಿ.ಎ.ವೆಂಕಟಾಚಲ ಈ ಬಗ್ಗೆ ಸ್ಪಷ್ಠನೆ ನೀಡಿದ್ದು, ಬಳ್ಳಾರಿಯ ಭಾರ್ಗವ ಏಜನ್ಸಿಯಿಂದ ಜಿಂದಾಲ್, ಜೆ.ಎಸ್.ಸಿ-ಎನ್-53 ತಳಿಯ ಬೀಜಗಳು ಇದಾಗಿದ್ದು , ಈ ಹಿಂದೆ ಉತ್ತಮ ಬೆಳೆ ಬಂದಿದ್ದ ಕಾರಣ ಮತ್ತೆ ಇದೇ ಬೀಜವನ್ನು ತಂದು ಮಾರಾಟ ಮಾಡಲಾಗಿತ್ತು. ಇದೀಗ ತಲೆದೊರಿರುವ ಸಮಸ್ಯೆಯ ಬಗ್ಗೆ ರೈತರ ಎದುರಿಗೆ ಕಂಪನಿಯ ಮಾರಾಟ ಪ್ರತಿನಿಧಿ ಗೋಪಾಲ್ ಅವರೊಂದಿಗೆ ಮಾತನಾಡಿದ್ದು, ಇದೇ 25 ರಂದು ರೈತರ ಜಮೀನುಗಳಿಗೆ ಭೇಟಿ ನೀಡಿ ನಷ್ಟವಾಗಿದ್ದಲ್ಲಿ ಪರಿಹಾರ ನೀಡುವ ಭರವಸೆ ನೀಡಿದ್ದಾರೆ ಎಂದರು.
ಇದಕ್ಕೊಪ್ಪದ ರೈತರು ಅದುವರಗೂ ಹಣಕ್ಕೆ ಗ್ಯಾರಂಟಿ ನೀಡಿ ಎಂದಾಗ ಅಂಗಡಿ ಮಾಲೀಕನೇ ಮುಖಂಡರಿಗೆ ಖಾಲಿಚಕ್ ನೀಡುವುದರ ಮುಖಾಂತರ ಸಮಸ್ಯೆಗೆ ತೆರೆ ಎಳೆದಿದರು.

ಪ್ರತಿಭಟನೆಯಲ್ಲಿ ದ್ಯಾಮಣ್ಣ, ಅನಂದ್ ಕುಮಾರ್, ಮಧುಸೂದನ್, ಮಂಜುನಾಥ್, ಗಜೇಂದ್ರ, ಸಿ.ಅವಿನಾಶ್ ಸೇರಿದಂತೆ ನೂರಾರು ರೈತರು ಭಾಗವಹಿಸಿದ್ದರು.  

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.