ವಿಷಯಕ್ಕೆ ಹೋಗಿ

ಕಳಪೆ ಈರುಳ್ಳಿ ಬೀಜ ಮಾರಾಟ ಅಂಗಡಿಗೆ ರೈತರ ಘೇರಾವ್

ಕಳಪೆ ಈರುಳ್ಳಿ ಬೀಜ ಮಾರಾಟ ಮಾಡಿದ್ದರಿಂದ ಬೆಳೆನಷ್ಟವಾಗಿ ಲಕ್ಷಾಂತರ ರೂಪಾಯಿ ಲುಕ್ಸಾನಾಗಿದೆ ಎಂದು ಆರೋಪಿಸಿ ಹಿರಿಯೂರು ತಾಲ್ಲೂಕಿನ ಯಲ್ಲದಕೆರೆ, ಕೆಂಚಯ್ಯನಹಟ್ಟಿ, ಬಡಗೊಲ್ಲರಹಟ್ಟಿ. ಪಿಲಾಜನಹಳ್ಳಿ, ಹಾಲ್ ಮಾದೇನಹಳ್ಳಿ, ನಾಯ್ಕರಕೊಟ್ಟಿಗೆ, ಶೇಷಪ್ಪನಹಳ್ಳಿ ಸೇರಿದಂತೆ
ಹುಳಿಯಾರು ಹೋಬಳಿ ದಸೂಡಿ ಗ್ರಾಮದ ಲಕ್ಷ್ಮೀವೆಂಕಟೇಶ್ವರ ಪರ್ಟಿಲೈಸರ್ಸ್ ವತಿಯಿಂದ ನಕಲಿ ಈರುಳ್ಳಿ ಬೀಜ ಮಾರಾಟ ಮಾಡಲಾಗಿದೆ ಎಂದು ಆರೋಪಿಸಿ ಭಾನುವಾರ ನೂರಾರು ರೈತರು ಪ್ರತಿಭಟನೆ ನಡೆಸಿದರು.
ಅನೇಕ ಗ್ರಾಮಗಳ ನೂರಾರು ರೈತರು ಪರಿಹಾರ ನೀಡಲು ಒತ್ತಾಯಿಸಿ ಹೋಬಳಿಯ ದಸೂಡಿ ಗ್ರಾಮದ ಲಕ್ಷ್ಮೀವೆಂಕಟೇಶ್ವರ ಪರ್ಟಿಲೈಸರ್ಸ್ ಎದುರು ಭಾನುವಾರ ಅಂಗಡಿ ಮಾಲೀಕನಿಗೆ ಘೇರಾವು ಮಾಡಿದರು.
ಆರೋಪ: ಈರುಳ್ಳಿ ಬೀಜಕ್ಕೆ ಹಿರಿಯೂರು ಹೆಸರುವಾಸಿಯಾಗಿದ್ದು ಕಳೆದ ಜುಲೈನಲ್ಲಿ ಹಿರಿಯೂರಿನಲ್ಲಿ ಬೀಜ ದೊರೆಯದ ಕಾರಣ ಹುಳಿಯಾರು ಹೋಬಳಿಯ ದಸೂಡಿ ಗ್ರಾಮದ ಲಕ್ಷ್ಮೀವೆಂಕಟೇಶ್ವರ ಪರ್ಟಿಲೈಸರ್ಸ್ ಅಂಗಡಿಯಲ್ಲಿ ಸಿಕ್ಕ ಜಿಂದಾಲ್ ಕಂಪನಿಯ ಬೀಜಕ್ಕೆ ದುಬಾರಿ ಬೆಲೆ ತೆತ್ತಿದ್ದೆವು. ಬೀಜ ಉತ್ತಮವಾಗಿ ಮೊಳಕೆಯೊಡೆದು ಬೆಳೆದಿದ್ದರೂ ಫಸಲು ಮಾತ್ರ ಕಮ್ಮಿ ಹಾಗೂ ಕಳಪೆಯದಾಗಿದೆ ಎಂಬುದು ರೈತರ ಆರೋಪ.
ಈರುಳ್ಳಿ ಗಡ್ಡೆ ರೋಗ ಪೀಡಿತವಾಗಿದ್ದು ಕೆಂಪು ಬಣ್ಣಕ್ಕೆ ತಿರುಗಿದೆ ಅಲ್ಲದೆ ಗಾತ್ರ ತೀರ ಕಿರಿದಾಗಿದೆ. ಈ ಈರುಳ್ಳಿ ಪಕೋಡಕ್ಕೂ ಲಾಯಕ್ಕಾಗದೆ ಬಂದಿದ್ದ ಅಲ್ಪಸ್ವಲ್ಪ ಬೆಳೆಯನ್ನು ಮಾರಾಟಕ್ಕೆ ಬೆಂಗಳೂರಿಗೆ ಹೋಗಿ ಅಲ್ಲಿನ ವರ್ತಕರು ಕೂಡ ಕೊಳ್ಳದೆ ಲಾರಿ ಬಾಡಿಗೆಗೂ ಸಮಸ್ಯೆಯಾಯಿತು ಎಂದು ಯಲ್ಲದಕೆರೆ ರೈತ ಹೊರಕೇರಪ್ಪ ಆಕ್ರೋಶವ್ಯಕ್ತಪಡಿಸಿದರು. ಕಳಪೆ ಬೀಜ ಇದಕ್ಕೆ ಕಾರಣವಾಗಿದ್ದು ಅಂಗಡಿಯವರು ನಮ್ಮ ನಷ್ಟವನ್ನು ಭರಿಸಬೇಕೆಂದು ಒತ್ತಾಯಿಸಿದರು.
ಅಂಗಡಿ ಮಾಲೀಕ ಡಿ.ಎ.ವೆಂಕಟಾಚಲ ಈ ಬಗ್ಗೆ ಸ್ಪಷ್ಠನೆ ನೀಡಿದ್ದು, ಬಳ್ಳಾರಿಯ ಭಾರ್ಗವ ಏಜನ್ಸಿಯಿಂದ ಜಿಂದಾಲ್, ಜೆ.ಎಸ್.ಸಿ-ಎನ್-53 ತಳಿಯ ಬೀಜಗಳು ಇದಾಗಿದ್ದು , ಈ ಹಿಂದೆ ಉತ್ತಮ ಬೆಳೆ ಬಂದಿದ್ದ ಕಾರಣ ಮತ್ತೆ ಇದೇ ಬೀಜವನ್ನು ತಂದು ಮಾರಾಟ ಮಾಡಲಾಗಿತ್ತು. ಇದೀಗ ತಲೆದೊರಿರುವ ಸಮಸ್ಯೆಯ ಬಗ್ಗೆ ರೈತರ ಎದುರಿಗೆ ಕಂಪನಿಯ ಮಾರಾಟ ಪ್ರತಿನಿಧಿ ಗೋಪಾಲ್ ಅವರೊಂದಿಗೆ ಮಾತನಾಡಿದ್ದು, ಇದೇ 25 ರಂದು ರೈತರ ಜಮೀನುಗಳಿಗೆ ಭೇಟಿ ನೀಡಿ ನಷ್ಟವಾಗಿದ್ದಲ್ಲಿ ಪರಿಹಾರ ನೀಡುವ ಭರವಸೆ ನೀಡಿದ್ದಾರೆ ಎಂದರು.
ಇದಕ್ಕೊಪ್ಪದ ರೈತರು ಅದುವರಗೂ ಹಣಕ್ಕೆ ಗ್ಯಾರಂಟಿ ನೀಡಿ ಎಂದಾಗ ಅಂಗಡಿ ಮಾಲೀಕನೇ ಮುಖಂಡರಿಗೆ ಖಾಲಿಚಕ್ ನೀಡುವುದರ ಮುಖಾಂತರ ಸಮಸ್ಯೆಗೆ ತೆರೆ ಎಳೆದಿದರು.

ಪ್ರತಿಭಟನೆಯಲ್ಲಿ ದ್ಯಾಮಣ್ಣ, ಅನಂದ್ ಕುಮಾರ್, ಮಧುಸೂದನ್, ಮಂಜುನಾಥ್, ಗಜೇಂದ್ರ, ಸಿ.ಅವಿನಾಶ್ ಸೇರಿದಂತೆ ನೂರಾರು ರೈತರು ಭಾಗವಹಿಸಿದ್ದರು.  

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...