ವಿಷಯಕ್ಕೆ ಹೋಗಿ

ಕಳಪೆ ಈರುಳ್ಳಿ ಬೀಜ ಮಾರಾಟ ಅಂಗಡಿಗೆ ರೈತರ ಘೇರಾವ್

ಕಳಪೆ ಈರುಳ್ಳಿ ಬೀಜ ಮಾರಾಟ ಮಾಡಿದ್ದರಿಂದ ಬೆಳೆನಷ್ಟವಾಗಿ ಲಕ್ಷಾಂತರ ರೂಪಾಯಿ ಲುಕ್ಸಾನಾಗಿದೆ ಎಂದು ಆರೋಪಿಸಿ ಹಿರಿಯೂರು ತಾಲ್ಲೂಕಿನ ಯಲ್ಲದಕೆರೆ, ಕೆಂಚಯ್ಯನಹಟ್ಟಿ, ಬಡಗೊಲ್ಲರಹಟ್ಟಿ. ಪಿಲಾಜನಹಳ್ಳಿ, ಹಾಲ್ ಮಾದೇನಹಳ್ಳಿ, ನಾಯ್ಕರಕೊಟ್ಟಿಗೆ, ಶೇಷಪ್ಪನಹಳ್ಳಿ ಸೇರಿದಂತೆ
ಹುಳಿಯಾರು ಹೋಬಳಿ ದಸೂಡಿ ಗ್ರಾಮದ ಲಕ್ಷ್ಮೀವೆಂಕಟೇಶ್ವರ ಪರ್ಟಿಲೈಸರ್ಸ್ ವತಿಯಿಂದ ನಕಲಿ ಈರುಳ್ಳಿ ಬೀಜ ಮಾರಾಟ ಮಾಡಲಾಗಿದೆ ಎಂದು ಆರೋಪಿಸಿ ಭಾನುವಾರ ನೂರಾರು ರೈತರು ಪ್ರತಿಭಟನೆ ನಡೆಸಿದರು.
ಅನೇಕ ಗ್ರಾಮಗಳ ನೂರಾರು ರೈತರು ಪರಿಹಾರ ನೀಡಲು ಒತ್ತಾಯಿಸಿ ಹೋಬಳಿಯ ದಸೂಡಿ ಗ್ರಾಮದ ಲಕ್ಷ್ಮೀವೆಂಕಟೇಶ್ವರ ಪರ್ಟಿಲೈಸರ್ಸ್ ಎದುರು ಭಾನುವಾರ ಅಂಗಡಿ ಮಾಲೀಕನಿಗೆ ಘೇರಾವು ಮಾಡಿದರು.
ಆರೋಪ: ಈರುಳ್ಳಿ ಬೀಜಕ್ಕೆ ಹಿರಿಯೂರು ಹೆಸರುವಾಸಿಯಾಗಿದ್ದು ಕಳೆದ ಜುಲೈನಲ್ಲಿ ಹಿರಿಯೂರಿನಲ್ಲಿ ಬೀಜ ದೊರೆಯದ ಕಾರಣ ಹುಳಿಯಾರು ಹೋಬಳಿಯ ದಸೂಡಿ ಗ್ರಾಮದ ಲಕ್ಷ್ಮೀವೆಂಕಟೇಶ್ವರ ಪರ್ಟಿಲೈಸರ್ಸ್ ಅಂಗಡಿಯಲ್ಲಿ ಸಿಕ್ಕ ಜಿಂದಾಲ್ ಕಂಪನಿಯ ಬೀಜಕ್ಕೆ ದುಬಾರಿ ಬೆಲೆ ತೆತ್ತಿದ್ದೆವು. ಬೀಜ ಉತ್ತಮವಾಗಿ ಮೊಳಕೆಯೊಡೆದು ಬೆಳೆದಿದ್ದರೂ ಫಸಲು ಮಾತ್ರ ಕಮ್ಮಿ ಹಾಗೂ ಕಳಪೆಯದಾಗಿದೆ ಎಂಬುದು ರೈತರ ಆರೋಪ.
ಈರುಳ್ಳಿ ಗಡ್ಡೆ ರೋಗ ಪೀಡಿತವಾಗಿದ್ದು ಕೆಂಪು ಬಣ್ಣಕ್ಕೆ ತಿರುಗಿದೆ ಅಲ್ಲದೆ ಗಾತ್ರ ತೀರ ಕಿರಿದಾಗಿದೆ. ಈ ಈರುಳ್ಳಿ ಪಕೋಡಕ್ಕೂ ಲಾಯಕ್ಕಾಗದೆ ಬಂದಿದ್ದ ಅಲ್ಪಸ್ವಲ್ಪ ಬೆಳೆಯನ್ನು ಮಾರಾಟಕ್ಕೆ ಬೆಂಗಳೂರಿಗೆ ಹೋಗಿ ಅಲ್ಲಿನ ವರ್ತಕರು ಕೂಡ ಕೊಳ್ಳದೆ ಲಾರಿ ಬಾಡಿಗೆಗೂ ಸಮಸ್ಯೆಯಾಯಿತು ಎಂದು ಯಲ್ಲದಕೆರೆ ರೈತ ಹೊರಕೇರಪ್ಪ ಆಕ್ರೋಶವ್ಯಕ್ತಪಡಿಸಿದರು. ಕಳಪೆ ಬೀಜ ಇದಕ್ಕೆ ಕಾರಣವಾಗಿದ್ದು ಅಂಗಡಿಯವರು ನಮ್ಮ ನಷ್ಟವನ್ನು ಭರಿಸಬೇಕೆಂದು ಒತ್ತಾಯಿಸಿದರು.
ಅಂಗಡಿ ಮಾಲೀಕ ಡಿ.ಎ.ವೆಂಕಟಾಚಲ ಈ ಬಗ್ಗೆ ಸ್ಪಷ್ಠನೆ ನೀಡಿದ್ದು, ಬಳ್ಳಾರಿಯ ಭಾರ್ಗವ ಏಜನ್ಸಿಯಿಂದ ಜಿಂದಾಲ್, ಜೆ.ಎಸ್.ಸಿ-ಎನ್-53 ತಳಿಯ ಬೀಜಗಳು ಇದಾಗಿದ್ದು , ಈ ಹಿಂದೆ ಉತ್ತಮ ಬೆಳೆ ಬಂದಿದ್ದ ಕಾರಣ ಮತ್ತೆ ಇದೇ ಬೀಜವನ್ನು ತಂದು ಮಾರಾಟ ಮಾಡಲಾಗಿತ್ತು. ಇದೀಗ ತಲೆದೊರಿರುವ ಸಮಸ್ಯೆಯ ಬಗ್ಗೆ ರೈತರ ಎದುರಿಗೆ ಕಂಪನಿಯ ಮಾರಾಟ ಪ್ರತಿನಿಧಿ ಗೋಪಾಲ್ ಅವರೊಂದಿಗೆ ಮಾತನಾಡಿದ್ದು, ಇದೇ 25 ರಂದು ರೈತರ ಜಮೀನುಗಳಿಗೆ ಭೇಟಿ ನೀಡಿ ನಷ್ಟವಾಗಿದ್ದಲ್ಲಿ ಪರಿಹಾರ ನೀಡುವ ಭರವಸೆ ನೀಡಿದ್ದಾರೆ ಎಂದರು.
ಇದಕ್ಕೊಪ್ಪದ ರೈತರು ಅದುವರಗೂ ಹಣಕ್ಕೆ ಗ್ಯಾರಂಟಿ ನೀಡಿ ಎಂದಾಗ ಅಂಗಡಿ ಮಾಲೀಕನೇ ಮುಖಂಡರಿಗೆ ಖಾಲಿಚಕ್ ನೀಡುವುದರ ಮುಖಾಂತರ ಸಮಸ್ಯೆಗೆ ತೆರೆ ಎಳೆದಿದರು.

ಪ್ರತಿಭಟನೆಯಲ್ಲಿ ದ್ಯಾಮಣ್ಣ, ಅನಂದ್ ಕುಮಾರ್, ಮಧುಸೂದನ್, ಮಂಜುನಾಥ್, ಗಜೇಂದ್ರ, ಸಿ.ಅವಿನಾಶ್ ಸೇರಿದಂತೆ ನೂರಾರು ರೈತರು ಭಾಗವಹಿಸಿದ್ದರು.  

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...