ವಿಷಯಕ್ಕೆ ಹೋಗಿ

ಅಮವಾಸ್ಯೆ ಅಂಗವಾಗಿ ಗಣೇಶನಿಗೆ ವಿಶೇಷ ಅಲಂಕಾರ

ಹುಳಿಯಾರು ಪಟ್ಟಣದ ಪುರಾಣಪ್ರಸಿದ್ಧ ಶ್ರೀಪಸನ್ನ ಗಣಪತಿ ದೇವಾಲಯದಲ್ಲಿ ಶನಿವಾರದಂದು ಕಾರ್ತಿಕ ಅಮವಾಸ್ಯೆಯ ಅಂಗವಾಗಿ ಗಣೇಶವಿಗ್ರಹಕ್ಕೆವಿಶೇಷ ಅಲಂಕಾರ ಮಾಡಿದ್ದು ಆಕರ್ಷಕವಾಗಿತ್ತು.
ಹುಳಿಯಾರಿನ ಪುರಾಣಪ್ರಸಿದ್ದ ಗಣೇಶನನ್ನು ವಿಶೇಷವಾಗಿ ಅಲಂಕರಿಸಿರುವುದು.
ಅಮವಾಸ್ಯೆ ಅಂಗವಾಗಿ ಮುಂಜಾನೆಯಿಂದ ಸ್ವಾಮಿ ಅಭಿಷೇಕ,ಅರ್ಚನೆ ಸೇರಿದಂತೆ ವಿವಿಧ ಪೂಜೆಗಳನ್ನು ನಡೆಸಿ, ಅರ್ಚಕ ರಾಜಣ್ಣ ಅವರು ಸ್ವಾಮಿಯನ್ನು ವಿಶೇಷವಾಗಿ ಅಲಂಕರಿಸಿದ್ದರು. ಅಲಂಕೃತ ಸ್ವಾಮಿ ದರ್ಶನ ಪಡೆಯಲು ಅಪಾರ ಸಂಖ್ಯೆ ಭಕ್ತರು ಆಗಮಿಸಿ, ಹಣ್ಣುಕಾಯಿ ಮಾಡಿಸಿದರು. ಈ ವೇಳೆ ದೇವಾಲಯ ಸಮಿತಿಯವರು ಸೇರಿದಂತೆ ಇತರರು ಉಪಸ್ಥಿತರಿದ್ದರು.

ಕಾಮೆಂಟ್‌ಗಳು