ವಿಷಯಕ್ಕೆ ಹೋಗಿ

ಕೆಂಕೆರೆಯಲ್ಲಿ ಶ್ರದ್ದಾಭಕ್ತಿಯಿಂದ ನಡೆದ ಮೊಹರಂ

       ದೇಹ ದಂಡನೆ, ತ್ಯಾಗ ಬಲಿದಾನ ಹಾಗೂ ಶೋಕದ ಸಂಕೇತವಾಗಿ ಮುಸ್ಲಿಂ ಸಮುದಾಯದವರು ಆಚರಿಸಿಕೊಂಡು ಬಂದಿರುವ ಮೊಹರಂ ಹಬ್ಬವನ್ನು ಹೋಬಳಿಯ ಕೆಂಕೆರೆ,ವೈ.ಎಸ್.ಪಾಳ್ಯ,ದಲ್ಲಿ ಶ್ರದ್ಧಾಭಕ್ತಿಯಿಂದ ಆಚರಿಸಿದರು.
ಹುಳಿಯಾರು ಹೋಬಳಿ ಕೆಂಕೆರೆಯಲ್ಲಿ ಮೊಹರಂ ಆಚರಣೆಯ ಅಂಗವಾಗಿ ಅಗ್ನಿಕುಂಡ ಹಾಯುವ ಕಾರ್ಯ ನಡೆಯಿತು.

ಮಹಮ್ಮದ್ ಪೈಗಂಬರ್ ರ ಮೊಮ್ಮಕ್ಕಳಾದ ಹಸೇನ್ ಹುಸೇನ್‍ರ ಹತ್ಯೆಯ ನೆನಪಿನ ಪ್ರತೀಕವಾಗಿ ಹತ್ತುದಿನಗಳ ಕಾಲ ಹಬ್ಬದ ಆಚರಣೆ ನಡೆಯಲಿದ್ದು, ಮೊದಲು ಚಂದ್ರನನ್ನು ನೋಡಿ ಅಂದು ಅಗ್ನಿಕುಂಡ ಹಾಯುವ ಸ್ಥಳ ಗುರ್ತಿಸಿ, ಪೂಜೆ ಸಲ್ಲಿಸಿ ಅಗ್ನಿ ಹಾಕುತ್ತಾರೆ. ನಂತರ ಹಸೇನ್-ಹುಸೇನ್‍ರ ಪ್ರತೀಕವಾಗಿ ತಮ್ಮ ದೇವರ ಬಿರುದುಗಳನ್ನು ಪ್ರತಿಷ್ಠಾಪಿಸಿ ಮಂಟಪ ಕಟ್ಟಿರುತ್ತಾರೆ. ಅದರ ಜೊತೆಗೆ ಪೀರ್ ದೇವರನ್ನು ಸಹ ಪ್ರತಿಷ್ಠಾಪಿಸಿ ಪೂಜೆ ಪ್ರಾರಂಭಿಸಿ ನಿತ್ಯ ಊರಿನ ಬೀದಿಗಳಲ್ಲಿ ಧೂಪದ ಹಾಗೂ ಫೀರ್ ದೇವರ ಮೆರವಣಿಗೆ ಹಾಗೂ ಅಳ್ಳೆಬೊವ ವೇಷತೊಟ್ಟ ವ್ಯಕ್ತಿಯೊಂದಿಗೆ ಗ್ರಾಮದ ಮನೆಮನೆಗಳಿಗೆ ತೆರಳಿ ಕಾಣಿಕೆ,ತೆಂಗಿನಕಾಯಿ ಪಡೆಯುವ ಕಾರ್ಯ ಮಾಡುತ್ತಾರೆ.
      ಇದೇ ಸಂಪ್ರದಾಯದಂತೆ ಮೊಹರಂ ಕಡೇದಿನದ ಮುನ್ನಾದಿನವಾದ ಸೋಮವಾರ ಸಂಜೆ ಅಗ್ನಿಕುಂಡ ಹಾಯುವುದು ಹಾಗೂ ಚಾಟಿಯಿಂದ ಹೊಡೆಸಿಕೊಳ್ಳುವ ಮೂಲಕ ತಮ್ಮ ಭಕ್ತಿಭಾವ ವ್ಯಕ್ತಪಡಿಸಿದರು. ತಮಗೆ ಒಳ್ಳೆಯದಾಗಲಿ ಎಂಬ ನಂಬಿಕೆಯಿಂದ ಹರಕೆಯೊತ್ತ ಯುವಕರು ಫಕೀರರಾಗಿ ಅಗ್ನಿಕುಂಡ ಹಾಯುವಲ್ಲಿ ಮುಂದಾಗಿ, ತಮ್ಮ ದೇವರ ಬಿರುದುಗಳನ್ನು ಹಿಡಿದು ಹಸೇನ್ ಹುಸೇನ್‍ರನ್ನು ಪ್ರತಿಷ್ಠಾಪಿಸಿದ್ದ ಮಂಟಪದ ಜೊತೆ ಅಗ್ನಿಕುಂಡದ ಜಾಗದಲ್ಲಿಗೆ ಬಂದು ಪೂಜೆ ಸಲ್ಲಿಸಿ, ಜಯಕಾರ ಹಾಕುತ್ತಾ ಅಗ್ನಿಕುಂಡವನ್ನು ಮೂರು ಸುತ್ತು ಪ್ರದಕ್ಷಿಣೆ ಹಾಕಿ ನಂತರ ತಮಟೆಯ ಜೋರಾದ ಎರಡೇಟಿನ ನಾದದೊಂದಿಗೆ ಅಗ್ನಿಕುಂಡ ಹಾಯ್ದರು. ಆದರೆ ಮಹಿಳೆಯರು ಮಾತ್ರ ಅಗ್ನಿ ಹಾಯದೆ, ಹಿಂದಿನ ಸಂಪ್ರದಾಯದಂತೆ ಅಗ್ನಿಕುಂಡಕ್ಕೆ ಉಪ್ಪು ಹಾಕಿ ನಮಸ್ಕರಿಸಿಕೊಂಡರು.
          ಅಗ್ನಿಕುಂಡ ಹಾಯ್ದ ನಂತರ ಮೆರವಣಿಗೆ ಪ್ರಾರಂಭಿಸಿ ಊರಿನ ಹಿಂದೂ ದೇವಾಲಯದಲ್ಲಿಗೆ ಹೋಗಿ ಅಲ್ಲಿ ಕೆಲಕಾಲ ಚಾಟಿಯಿಂದ ಮೈಗೆ ಹೊಡೆದುಕೊಳ್ಳುವ ಮೂಲಕ ದೇಹದಂಡನೆ ಮಾಡಿ ನಂತರ ಮಕ್ಕಳು,ಯುವಕರೆಲ್ಲಾ ಸೇರಿ ಕುಣಿಯುತ್ತಾ ಊರಿನ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದರು. ಈ ವೇಳೆ ಕೆಲ ಹಿಂದೂಗಳ ಮನೆಯವರು ಸಕ್ಕರೆ,ಕಡ್ಲೆ, ಪುರಿಯನ್ನು ಎಡೆಯಾಗಿ ನೀಡಿ ಮುಸ್ಲಿಂ ಗುರುಗಳಿಂದ ತಿದ್ದಿಸಿಕೊಂಡಿದ್ದು ಕಂಡು ಬಂತು.

ಈವೇಳೆ ಗ್ರಾಮದ ಮುಸ್ಲಿಂ ಮುಖಂಡರು,ಯುವಕರು ಹಾಗೂ ಹುಳಿಯಾರಿನ ಕೆಲ ಮುಸ್ಲಿಂ ಯುವಕರು ಉತ್ಸಾಹದಿಂದ ಪಾಲ್ಗೊಂಡಿದ್ದು, ಸಡಗರದಿಂದ ಹಬ್ಬದ ಆಚರಣೆ ನಡೆಸಿದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.