ವಿಷಯಕ್ಕೆ ಹೋಗಿ

ಕೆಂಕೆರೆಯಲ್ಲಿ ಶ್ರದ್ದಾಭಕ್ತಿಯಿಂದ ನಡೆದ ಮೊಹರಂ

       ದೇಹ ದಂಡನೆ, ತ್ಯಾಗ ಬಲಿದಾನ ಹಾಗೂ ಶೋಕದ ಸಂಕೇತವಾಗಿ ಮುಸ್ಲಿಂ ಸಮುದಾಯದವರು ಆಚರಿಸಿಕೊಂಡು ಬಂದಿರುವ ಮೊಹರಂ ಹಬ್ಬವನ್ನು ಹೋಬಳಿಯ ಕೆಂಕೆರೆ,ವೈ.ಎಸ್.ಪಾಳ್ಯ,ದಲ್ಲಿ ಶ್ರದ್ಧಾಭಕ್ತಿಯಿಂದ ಆಚರಿಸಿದರು.
ಹುಳಿಯಾರು ಹೋಬಳಿ ಕೆಂಕೆರೆಯಲ್ಲಿ ಮೊಹರಂ ಆಚರಣೆಯ ಅಂಗವಾಗಿ ಅಗ್ನಿಕುಂಡ ಹಾಯುವ ಕಾರ್ಯ ನಡೆಯಿತು.

ಮಹಮ್ಮದ್ ಪೈಗಂಬರ್ ರ ಮೊಮ್ಮಕ್ಕಳಾದ ಹಸೇನ್ ಹುಸೇನ್‍ರ ಹತ್ಯೆಯ ನೆನಪಿನ ಪ್ರತೀಕವಾಗಿ ಹತ್ತುದಿನಗಳ ಕಾಲ ಹಬ್ಬದ ಆಚರಣೆ ನಡೆಯಲಿದ್ದು, ಮೊದಲು ಚಂದ್ರನನ್ನು ನೋಡಿ ಅಂದು ಅಗ್ನಿಕುಂಡ ಹಾಯುವ ಸ್ಥಳ ಗುರ್ತಿಸಿ, ಪೂಜೆ ಸಲ್ಲಿಸಿ ಅಗ್ನಿ ಹಾಕುತ್ತಾರೆ. ನಂತರ ಹಸೇನ್-ಹುಸೇನ್‍ರ ಪ್ರತೀಕವಾಗಿ ತಮ್ಮ ದೇವರ ಬಿರುದುಗಳನ್ನು ಪ್ರತಿಷ್ಠಾಪಿಸಿ ಮಂಟಪ ಕಟ್ಟಿರುತ್ತಾರೆ. ಅದರ ಜೊತೆಗೆ ಪೀರ್ ದೇವರನ್ನು ಸಹ ಪ್ರತಿಷ್ಠಾಪಿಸಿ ಪೂಜೆ ಪ್ರಾರಂಭಿಸಿ ನಿತ್ಯ ಊರಿನ ಬೀದಿಗಳಲ್ಲಿ ಧೂಪದ ಹಾಗೂ ಫೀರ್ ದೇವರ ಮೆರವಣಿಗೆ ಹಾಗೂ ಅಳ್ಳೆಬೊವ ವೇಷತೊಟ್ಟ ವ್ಯಕ್ತಿಯೊಂದಿಗೆ ಗ್ರಾಮದ ಮನೆಮನೆಗಳಿಗೆ ತೆರಳಿ ಕಾಣಿಕೆ,ತೆಂಗಿನಕಾಯಿ ಪಡೆಯುವ ಕಾರ್ಯ ಮಾಡುತ್ತಾರೆ.
      ಇದೇ ಸಂಪ್ರದಾಯದಂತೆ ಮೊಹರಂ ಕಡೇದಿನದ ಮುನ್ನಾದಿನವಾದ ಸೋಮವಾರ ಸಂಜೆ ಅಗ್ನಿಕುಂಡ ಹಾಯುವುದು ಹಾಗೂ ಚಾಟಿಯಿಂದ ಹೊಡೆಸಿಕೊಳ್ಳುವ ಮೂಲಕ ತಮ್ಮ ಭಕ್ತಿಭಾವ ವ್ಯಕ್ತಪಡಿಸಿದರು. ತಮಗೆ ಒಳ್ಳೆಯದಾಗಲಿ ಎಂಬ ನಂಬಿಕೆಯಿಂದ ಹರಕೆಯೊತ್ತ ಯುವಕರು ಫಕೀರರಾಗಿ ಅಗ್ನಿಕುಂಡ ಹಾಯುವಲ್ಲಿ ಮುಂದಾಗಿ, ತಮ್ಮ ದೇವರ ಬಿರುದುಗಳನ್ನು ಹಿಡಿದು ಹಸೇನ್ ಹುಸೇನ್‍ರನ್ನು ಪ್ರತಿಷ್ಠಾಪಿಸಿದ್ದ ಮಂಟಪದ ಜೊತೆ ಅಗ್ನಿಕುಂಡದ ಜಾಗದಲ್ಲಿಗೆ ಬಂದು ಪೂಜೆ ಸಲ್ಲಿಸಿ, ಜಯಕಾರ ಹಾಕುತ್ತಾ ಅಗ್ನಿಕುಂಡವನ್ನು ಮೂರು ಸುತ್ತು ಪ್ರದಕ್ಷಿಣೆ ಹಾಕಿ ನಂತರ ತಮಟೆಯ ಜೋರಾದ ಎರಡೇಟಿನ ನಾದದೊಂದಿಗೆ ಅಗ್ನಿಕುಂಡ ಹಾಯ್ದರು. ಆದರೆ ಮಹಿಳೆಯರು ಮಾತ್ರ ಅಗ್ನಿ ಹಾಯದೆ, ಹಿಂದಿನ ಸಂಪ್ರದಾಯದಂತೆ ಅಗ್ನಿಕುಂಡಕ್ಕೆ ಉಪ್ಪು ಹಾಕಿ ನಮಸ್ಕರಿಸಿಕೊಂಡರು.
          ಅಗ್ನಿಕುಂಡ ಹಾಯ್ದ ನಂತರ ಮೆರವಣಿಗೆ ಪ್ರಾರಂಭಿಸಿ ಊರಿನ ಹಿಂದೂ ದೇವಾಲಯದಲ್ಲಿಗೆ ಹೋಗಿ ಅಲ್ಲಿ ಕೆಲಕಾಲ ಚಾಟಿಯಿಂದ ಮೈಗೆ ಹೊಡೆದುಕೊಳ್ಳುವ ಮೂಲಕ ದೇಹದಂಡನೆ ಮಾಡಿ ನಂತರ ಮಕ್ಕಳು,ಯುವಕರೆಲ್ಲಾ ಸೇರಿ ಕುಣಿಯುತ್ತಾ ಊರಿನ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದರು. ಈ ವೇಳೆ ಕೆಲ ಹಿಂದೂಗಳ ಮನೆಯವರು ಸಕ್ಕರೆ,ಕಡ್ಲೆ, ಪುರಿಯನ್ನು ಎಡೆಯಾಗಿ ನೀಡಿ ಮುಸ್ಲಿಂ ಗುರುಗಳಿಂದ ತಿದ್ದಿಸಿಕೊಂಡಿದ್ದು ಕಂಡು ಬಂತು.

ಈವೇಳೆ ಗ್ರಾಮದ ಮುಸ್ಲಿಂ ಮುಖಂಡರು,ಯುವಕರು ಹಾಗೂ ಹುಳಿಯಾರಿನ ಕೆಲ ಮುಸ್ಲಿಂ ಯುವಕರು ಉತ್ಸಾಹದಿಂದ ಪಾಲ್ಗೊಂಡಿದ್ದು, ಸಡಗರದಿಂದ ಹಬ್ಬದ ಆಚರಣೆ ನಡೆಸಿದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...