ವಿಷಯಕ್ಕೆ ಹೋಗಿ

ಸಿಸಿ ಟಿವಿಯಲ್ಲಿ ಬಯಲಾಯ್ತು ವಂಚಕಿಯ ಕೈಚಳಕ

ಹುಳಿಯಾರು ಪಟ್ಟಣದ ಬಂಗಾರದ ಅಂಗಡಿಯೊಂದಕ್ಕೆ ಕಾಲುಂಗುರ ಕೊಳ್ಳಲು ಬಂದ ಮಹಿಳೆಯೊಬ್ಬಳು ಡಬ್ಬಿಯಲ್ಲಿನ ಬೆಳ್ಳಿಯ ಆಭರಣಗಳನ್ನು ಕೈಚಳಕ ತೋರಿ ಬಚ್ಚಿಟ್ಟುಕೊಂಡಿದ್ದನ್ನು ಸಿಸಿ ಟಿವಿ ಮೂಲಕ ಪತ್ತೆ ಮಾಡಿ ವಾಪಸ್ ಪಡೆದ ಪ್ರಕರಣ ಮಂಗಳವಾರ ನಡೆದಿದೆ.
ಹುಳಿಯಾರಿನ ಶ್ರೀದುರ್ಗಾಂಬ ಜ್ಯೂಯಲರಿ ಅಂಗಡಿಯಲ್ಲಿ ಬೆಳ್ಳಿ ಆಭರಣ ಕದಿಯಲು ಮುಂದಾಗಿ ಸಿಕ್ಕಿ ಬಿದ್ದ ಮಹಿಳೆ.
ಪಟ್ಟಣದ ರಾಜ್ ಕುಮಾರ್ ರಸ್ತೆಯಲ್ಲಿನ ಹೆಚ್.ಆರ್. ಶಂಕರ್ ಅವರ ಶ್ರೀದುರ್ಗಾಂಬ ಜ್ಯೂಯಲರಿ ಅಂಗಡಿಗೆ ಬೆಳ್ಳಿ ಕಾಲುಂಗುರ ಕೊಳ್ಳುವ ನೆಪದಲ್ಲಿ ಮಹಿಳೆಯೊಬ್ಬಳು ನಾನಾ ರೀತಿಯ ಬೆಳ್ಳಿಯ ಕಾಲುಂಗುರಗಳನ್ನು ತೋರಿಸಲು ಕೇಳಿದಳು. ಅಂಗಡಿಯಲ್ಲಿ ಸಾಕಷ್ಟು ದಟ್ಟಣೆ ಇದ್ದುದರಿಂದ ಕಾಲುಂಗುರ ಗೆಜ್ಜೆಯ ಬಾಕ್ಸನ್ನು ತೂಕ ಮಾಡಿ ಇಡಿ ಪೆಟ್ಟಿಗೆಯನ್ನೇ ಅಂಗಡಿಯಾತ ಆಕೆಗೆ ನೀಡಿದ್ದಾನೆ. ಆಭರಣದ ಬಾಕ್ಸ್ ಪಡೆದ ಆಕೆ , ಅಂಗಡಿಯಲ್ಲಿ ಹೆಚ್ಚು ಜನರಿದ್ದುದನ್ನು ಗಮನಿಸಿ ತನ್ನ ಕೈಚಳಕದಿಂದ ಅದರಲ್ಲಿದ್ದ ಕೆಲ ಕಾಲುಂಗುರಗಳನ್ನು ತನ್ನ ರವಿಕೆಯಲ್ಲಿ ಬಚ್ಚಿಟ್ಟುಕೊಂಡು ನಂತರ ತನಗೆ ಯಾವುದೇ ಆಭರಣ ಬೇಡವೆಂದು ಬಾಕ್ಸ್ ವಾಪಸ್ ಅಂಗಡಿಯಾತನಿಗೆ ನೀಡಿದ್ದಾಳೆ.

ಬಾಕ್ಸ್ ಪಡೆದ ಆಂಗಡಿಯಾತ ತೂಕ ಹಾಕಿದಾಗ ತೂಕದಲ್ಲಿ ವ್ಯತ್ಯಯ ಕಂಡು ಬಂದಿದ್ದು, ಆಕೆಯನ್ನು ಕೇಳಿದಾಗ ತಾನು ಅದರಿಂದ ಏನನ್ನು ತೆಗೆದುಕೊಂಡಿಲ್ಲ ನೀವು ಹೇಗೇ ಕೊಟ್ಟರೋ ಹಾಗೇ ಇದೆ ಸುಮ್ಮನೇ ನನ್ನನ್ನು ಅಪಾದಿಸಬೇಡಿ ಎಂದಿದ್ದಾಳೆ. ಎಷ್ಟೇ ಬಾರಿ ಕೇಳಿದರೂ ಮಹಿಳೆ ಒಪ್ಪದಿದ್ದಾಗ ಅಂಗಡಿಯಲ್ಲಿ ಅಳವಡಿಸಿದ್ದ ಸಿಸಿ ಟಿವಿಯಲ್ಲಿ ನೋಡಿದಾಗ ಆಕೆ ಆಭರಣದ ಬಾಕ್ಸ್ ನಿಂದ ಕಾಲುಂಗುರಗಳನ್ನು ತನ್ನ ರವಿಕೆಯಲ್ಲಿ ಹಾಕಿಕೊಳ್ಳುವ ದೃಶ್ಯ ಕಂಡು ಬಂದು, ಆಕೆಯ ಕೈಚಳಕ ಬಯಲಾಗಿದೆ. ಮಹಿಳೆ ತಾನು ಹುಳಿಯಾರು ಸಮೀಪದ ಟಿ.ತಾಂಡ್ಯದ ಪಕ್ಕದ ಬಸವಾಪಟ್ಟಣದ ರಾಧಮ್ಮ ಎಂದು ಆಕೆ ಹೇಳಿಕೊಂಡಿದ್ದು ವಿಚಾರಣೆಗಾಗಿ ಪೋಲಿಸ್ ಆಕೆಯನ್ನು ಠಾಣೆಯಲ್ಲಿಗೆ ಕರೆದೊಯ್ದಿದ್ದಾರೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.