ವಿಷಯಕ್ಕೆ ಹೋಗಿ

ತೊರೆಸೂರಗೊಂಡನಹಳ್ಳಿಯಲ್ಲಿ ಮಹಾಚಂಡಿಕಾ ಹೋಮ

ಹುಳಿಯಾರು ಹೋಬಳಿ ತೊರೆಸೂರಗೊಂಡನಹಳ್ಳಿಯ ಆದಿಶಕ್ತಿ ಶ್ರೀಚೌಡೇಶ್ವರಿ ದೇವಾಲಯದಲ್ಲಿ ಚೌಡೇಶ್ವರಿ ದೇವಿ , ಶ್ರೀಬಸವೇಶ್ವರ ಸ್ವಾಮಿ ಹಾಗೂ ಮೈಲಾರದೇವರ ಬೆಟ್ಟದ ಚೌಡಮ್ಮನವರ ಸಮ್ಮುಖದಲ್ಲಿ ಮಂಗಳವಾರದಂದು ಅಪಾರ ಸಂಖ್ಯೆ ಭಕ್ತರ ಶ್ರದ್ಧಾಭಕ್ತಿಯ ನಡುವೆ ವಿಶೇಷವಾಗಿ ಮಹಾಚಂಡಿಕಾ ಹೋಮ ನಡೆಯಿತು.
ಹುಳಿಯಾರು ಹೋಬಳಿ ಟಿ.ಎಸ್.ಹಳ್ಳಿ ಯಲ್ಲಿ ನಡೆದ ಮಹಾಚಂಡಿಕಾ ಹೋಮಕ್ಕೆ ಒಣಮೆಣಸಿನಕಾಯಿಯನ್ನು ಸಮರ್ಪಿಸುತ್ತಿರುವುದು.


ಹುಳಿಯಾರು ಹೋಬಳಿ ಟಿ.ಎಸ್.ಹಳ್ಳಿ ಯಲ್ಲಿ ನಡೆದ ಮಹಾಚಂಡಿಕಾ ಹೋಮದ ಪೂರ್ಣಾಹುತಿಗೆ ಪೂಜಾದ್ರವ್ಯಗಳನ್ನು ಸಮರ್ಪಿಸಲು ಗ್ರಾಮಸ್ಥರು ಸರತಿ ಸಾಲಿನಲ್ಲಿ ನಿಂತಿರುವುದು.
ಚೌಡೇಶ್ವರಿದೇವಿಯ ದುರ್ಗಿಹೋಮದ ಮಂಡಲ ಪೂಜೆ ಅಂಗವಾಗಿ ಕಳೆದ 48 ದಿನದಿಂದಲೂ ವಿಶೇಷ ಪೂಜೆ ನಡೆಯುತ್ತ ಬಂದಿದ್ದು, ಸೋಮವಾರದಂದು ಗಣಪತಿಹೋಮ,ರುದ್ರಹೋಮ ನಡೆದಿತ್ತು. ಚಂಡಿಕಾ ಮಾತೆಯನ್ನು ಶ್ರದ್ಧಾಭಕ್ತಿಯಿಂದ ನಿಷ್ಕಲ್ಮಶ ಮನಸ್ಸು ಹಾಗೂ ಏಕಾಗ್ರಚಿತ್ತದಿಂದ ಧ್ಯಾನಿಸಿದರೆ ಭಕ್ತರಿಗೆ ಮಾತ್ರವಲ್ಲ ಈಡಿ ಲೋಕಕ್ಕೆ ಒಳಿತಾಗುತ್ತದೆ ಎಂಬ ನಂಬಿಕೆಯ ಹಿನ್ನಲೆಯಲ್ಲಿ ಈ ದಿನ ಮಹಾಚಂಡಿಕಾಹೋಮ ಆಯೋಜಿಸಲಾಗಿತ್ತು. ಹೋಮಕ್ಕೆ ಎಲ್ಲೆಡೆ ವಿವಿಧ ಬಗೆಯ ತೈಲ, ತುಪ್ಪಾ, ಎಲ್ಲಾ ರೀತಿಯ ದವಸ ಧಾನ್ಯ, ವಿವಿಧರೀತಿಯ ಹಣ್ಣು ಹೂ ಸೇರಿದಂತೆ ಇನ್ನಿತರ ಪರಿಕರಗಳನ್ನು ಉಪಯೋಗಿಸುತ್ತಾರೆ. ಆದರೆ ಇಲ್ಲಿ ನಡೆದ ಹೋಮದಲ್ಲಿ ಈ ಎಲ್ಲಾ ವಸ್ತುಗಳ ಜೊತೆಗೆ ಅರ್ಧ ಕ್ವಿಂಟಾಲ್ ಒಣಮೆಣಸಿನಕಾಯಿಯನ್ನು ಬಳಸಿ ಹೋಮಕುಂಡಕ್ಕೆ ಸಮರ್ಪಿಸಿದ್ದು ವಿಶೇಷವಾಗಿತ್ತು. ಹೋಮಕ್ಕೆ ವೈದಿಕರು ಮೆಣಸಿನಕಾಯಿ ಸಮರ್ಪಿಸುತ್ತಿದ್ದರೆ ಅದನ್ನು ಕಂಡ ಭಕ್ತರಲ್ಲಿ ಒಂದೆಡೆ ಆಶ್ಚರ್ಯ ಹಾಗೂ ಕುತೂಹಲ ಮನೆ ಮಾಡಿತ್ತು.

ಹೋಮದ ಅಂಗವಾಗಿ ಕಳೆದ ಮೂರ್ನಾಲ್ಕು ದಿನಗಳಿಂದ ದೇವಿಗೆ ಕುಂಕುಮಾರ್ಚನೆ, ಬಿಲ್ವಾರ್ಚನೆ ಸೇರಿದಂತೆ ವಿವಿಧ ಪೂಜಾ ವಿದಿವಿಧಾನಗಳನ್ನು ನಡೆಸಲಾಗಿತ್ತು. ಸೀಗೇಹಳ್ಳಿ ನಾಗರಾಜಚಾರ್ ಹಾಗೂ ಸಂಗಡಿಗರ ಪೌರೋಹಿತ್ಯದಲ್ಲಿ ಮಹಾಚಂಡಿಕಾ ಹೋಮ ಪ್ರಾರಂಭಗೊಂಡು ವಿವಿಧ ಹೋಮಾದಿ ಸಹಿತ ಪೂಜಾಕೈಂಕರ್ಯ ನಡೆಸಲಾಯಿತು. ನಂತರ ದೇವಾಲಯದ ಮುಂಭಾಗದಲ್ಲಿ ಕುಂಬಳಕಾಯಿ ಹೊಡೆದು ಹೋಮಕ್ಕೆ ಪೂರ್ಣಾಹುತಿ ಸಮರ್ಪಿಸಲಾಯಿತು. ಮುತೈದೆಯರಿಗೆ ಬಾಗೀನ ನೀಡಿ,ನಂತರ ಮಹಾಮಂಗಳಾರತಿ ನಡೆಸಲಾಯಿತು. ಆಗಮಿಸಿದ್ದ ಭಕ್ತರಿಗಾಗಿ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು. ಗುಡಿಗೌಡರಾದ ಪರಮೇಶ್ವರಯ್ಯ,ಚಂದ್ರಯ್ಯ,ದೊಡ್ಡಯ್ಯ,ಜಗದೀಶಯ್ಯ,ಹನುಮಯ್ಯ , ಕೆಂಚಪ್ಪ , ತಾಂಡವಾಚಾರ್ , ನಾಗರಾಜಚಾರ್ ಸೇರಿದಂತೆ ಗ್ರಾಮದ ಮುಖಂಡರುಗಳು ಉಪಸ್ಥಿತರಿದ್ದರು. 

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್...

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...