ವಿಷಯಕ್ಕೆ ಹೋಗಿ

ವಿವಿಧ ಇಲಾಖಾ ಅಧಿಕಾರಿಗಳಿಗೆ ಚುರುಕು ಮುಟ್ಟಿಸಿದ ರೈತಸಂಘ

 ರೈತರಿಗೆ ಹಾಗೂ ಸಾರ್ವಜನಿಕರಿಗೆ ದೊರೆಯಬೇಕಾದ ಸೌಲಭ್ಯಗಳನ್ನು ಸಮರ್ಪಕವಾಗಿ ಕಲ್ಪಿಸುವಂತೆ ಒತ್ತಾಯಿಸಿ ಪುಟ್ಟಣ್ಣಯ್ಯ ಬಣದ ರೈತ ಸಂಘದ ಪದಾಧಿಕಾರಿಗಳು ಪಟ್ಟಣದ ವಿವಿಧ ಇಲಾಖೆಗಳಿಗೆ ತೆರಳಿ ಚುರುಕು ಮುಟ್ಟಿಸಿದ ಪ್ರಸಂಗ ಬುಧವಾರ ನಡೆಯಿತು.
 ಹುಳಿಯಾರು ಪಟ್ಟಣದ ಪರಿವೀಕ್ಷಣಾ ಮಂದಿರದಲ್ಲಿ ತಾಲ್ಲೂಕು ಅಧ್ಯಕ್ಷ ಹೊಸಳ್ಳಿ ಚಂದ್ರಪ್ಪ ಅವರ ನೇತೃತ್ವದಲ್ಲಿ ಸಭೆ ನಡೆಸಿದರು
ಪಟ್ಟಣದ ಪರಿವೀಕ್ಷಣ ಮಂದಿರಲ್ಲಿ ತಾಲ್ಲೂಕು ಅಧ್ಯಕ್ಷ ಹೊಸಳ್ಳಿ ಚಂದ್ರಪ್ಪ ಅವರ ನೇತೃತ್ವದಲ್ಲಿ ಸಭೆ ಸೇರಿದ ಪದಾಧಿಕಾರಿಗಳು ರೈತರಿಗಾಗುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚಿಸಿ ಬಳಿಕ ಕೃಷಿಉತ್ಪನ್ನ ಮಾರುಕಟ್ಟೆ,ಪಶುಆಸ್ಪತ್ರೆ, ಬೆಸ್ಕಾಂ ಕಛೇರಿ, ರೈತಸಂಪರ್ಕ ಕೇಂದ್ರಕ್ಕೆ ತೆರಳಿ ತಮಗಾಗುತ್ತಿರುವ ಸಮಸ್ಯೆಗಳ ಬಗ್ಗೆ ಅಧಿಕಾರಿಗಳೊಂದಿಗೆ ಮಾತಿನ ಚಕಮುಕಿ ನಡೆಸಿದರು.
ಪಟ್ಟಣದ ಪಶು ಆಸ್ಪತ್ರೆಯಲ್ಲಿ ಖಾಯಂ ವೈದ್ಯರಿಲ್ಲದೆ ಇಲ್ಲಿಗೆ ರಾಸುಗಳನ್ನು ಹೊಡೆದುಕೊಂಡು ಬರುವ ರೈತರು ನಿತ್ಯ ಪರದಾಡುವಂತಾಗಿದೆ. ಜೊತೆಗೆ ರಾಸುಗಳಿಗೆ ಬರುವ ರೋಗಗಳಿಗೆ ಹಾಕಿಸುವ ಲಸಿಕಗಳ ಬಗ್ಗೆ ತಿಳಿಸಲು ಯಾರು ಇಲ್ಲದ ಕಾರಣ ರೈತರಿಗೆ ತೊಂದರೆಯಾಗುತ್ತಿದೆ. ಇಲ್ಲಿರುವ ವೈದ್ಯರಲ್ಲಿ ಒಬ್ಬ ವೈದ್ಯ ಕಳೆದ ಮೂರು ತಿಂಗಳಿಂದ ಆಸ್ಪತ್ರೆಗೆ ಬಂದಿಲ್ಲ ಅದರೂ ಸಹ ಈ ಬಗ್ಗೆ ಮೇಲಾಧಿಕಾರಿಗಳು ಯಾವ ಕ್ರಮ ಕೈಗೊಂಡಿದ್ದಾರೆ ಎಂಬುದು ತಿಳಿದಿಲ್ಲ. ಈ ಹಿಂದೆ ಇದ್ದ ವೈದ್ಯ ಮಂಜುನಾಥ್ ಅವರು ವರ್ಗಾವಣೆಯಾಗಿ ಮೂರುತಿಂಗಳು ಕಳೆಯುತ್ತಿದ್ದರೂ ಸಹ ಅವರ ಸ್ಥಾನಕ್ಕೆ ಯಾವೊಬ್ಬ ವೈದ್ಯರನ್ನು ನೇಮಕ ಮಾಡಿಲ್ಲ ಎಂದು ದೂರಿ, ಸದ್ಯ ಒಬ್ಬ ವೈದ್ಯರನ್ನಾದರೂ ಇಲ್ಲಿ ಖಾಯಂ ಆಗಿ ಹಾಕುವಂತೆ ಒತ್ತಾಯಿಸಿದರು.
ನಂತರ ರೈತಸಂಪರ್ಕ ಇಲಾಖೆಗೆ ತೆರಳಿ ಇಲಾಖೆಗೆ ಬರುವ ಸೌಲಭ್ಯಗಳ ಬಗೆಗಿನ ಮಾಹಿತಿ ರೈತರಿಗೆ ತಿಳಿಯುತ್ತಿಲ್ಲ, ರೈತ ಅನುವುಗಾರರ ಮೂಲಕ ಇಲಾಖೆಯಲ್ಲಿ ದೊರೆಯಲ್ಲಿನ ಮಾಹಿತಿಯನ್ನು ತಿಳಿಸುವ ಕಾರ್ಯವಾಗಬೇಕು. ರಾಗಿ ಬೆಳೆಗೆ ಬಿದ್ದಿರುವ ಹಸಿರುಹುಳುಗಳ ನಿವಾರಣೆಗೆ ಸಬ್ಸಿಡಿ ದರದಲ್ಲಿ ಔಷಧಿ ನೀಡುವಂತೆ ಮನವಿ ಮಾಡಿದರು.
ಎಪಿಎಂಸಿ ಕಛೇರಿಗೆ ತೆರಳಿದ್ದ ರೈತರ ತಂಡ ಸಹಕಾರ್ಯದರ್ಶಿ ಅವರೊಂದಿಗೆ ಮಾತುಕತೆ ನಡೆಸಿ ಈ ಹಿಂದೆ ವಾರಕ್ಕೆ ಎರಡು ಬಾರಿ ಕೊಬ್ಬರಿ ಟೆಂಡರ್ ಮಾಡುತ್ತಿತ್ತು ಆದರೆ ಈಗ ವಾರಕ್ಕೊಮ್ಮೆ ಟೆಂಡರ್ ಮಾಡುತ್ತಿದ್ದು ವಾರಪೂರ್ತಿ ಒಂದೇ ಮೌಲ್ಯದಲ್ಲಿ ಕೊಬ್ಬರಿ ಮಾರುವಂತಾಗಿದೆ.
ತಿಪಟೂರು,ಅರಸೀಕೆರೆ ಎಪಿಎಂಸಿಯಲ್ಲಿ ವಾರಕ್ಕೆ ಎರಡು ಬಾರಿ ಟೆಂಡರ್ ಮಡುವಂತೆ ಇಲ್ಲೂ ಸಹ ಮಾಡಿ ಎಂದು ಪಟ್ಟು ಹಿಡಿದರು.
ಎಪಿಎಂಸಿ ಅಧಿಕಾರಿಯೊಂದಿಗೆ ವಾರಕ್ಕೆರಡು ಬಾರಿ ಕೊಬ್ಬರಿ ಟೆಂಡರ್ ಮಾಡುವಂತೆ ಚರ್ಚೆಗಿಳಿದ ರೈತ ಸಂಘದವರು.
ಬೆಸ್ಕಾಂ ಕಛೇರಿಯಲ್ಲಿನ ಎಸ್‍ಓ ಅವರೊಂದಿಗೆ ಚರ್ಚಿಸಿ, ಕಳೆದ 7 ವರ್ಷಗಳಿಂದ ಹುಳಿಯಾರು ಪಕ್ಕದ ಕೆಸಿ ಪಾಳ್ಯಕ್ಕೆ ಟೌನ್ ಲಿಮಿಟ್ ವಿದ್ಯುತ್ ನೀಡುತ್ತಿದ್ದು ಇದೀಗ ಏಕಾಏಕಿ ಕಡಿತ ಮಾಡಿದ್ದೀರಾ ಏಕೆ ಎಂದು ಪ್ರಶ್ನಿಸಿದರಲ್ಲದೆ, ಕೆಸಿಪಾಳ್ಯದ ಪಕ್ಕದ ಲಿಂಗಪ್ಪನ ಪಾಳ್ಯಕ್ಕೂ ಟೌನ್ ಲಿಮಿಟ್ ವಿದ್ಯುತ್ ನೀಡುವಂತೆ ಕೇಳಿಕೊಂಡರು. ಎಸ್‍ಓ ಉಮೇಶ್ ನಾಯಕ್ ಇದಕ್ಕೆ ಪ್ರತಿಕ್ರಿಯಿಸಿ ಈ ಹಿಂದೆ ಟೌನ್ ಲಿಮಿಟ್ ವಿದ್ಯುತ್ ನೀಡುತ್ತಿತ್ತು ಇದೀಗ ಬಳಕೆ ಪ್ರಮಾಣ ಹೆಚ್ಚಾದ ಪರಿಣಾಮ ಓವರ್ ಲೋಡ್ ನಿಂದ ಟಿ.ಸಿ. ಗಳು ಕೆಟ್ಟು ಹೋಗುತ್ತಿವೆ ಆ ಹಿನ್ನಲೆಯಲ್ಲಿ ಕಡಿತ ಮಾಡಲಾಗಿದೆ. ಮುಂದಿನವರ್ಷದಿಂದ ಎಲ್ಲಾ ಹಳ್ಳಿಗಳಿಗೂ ನಿರಂತರ ವಿದ್ಯುತ್ ಸಂಪರ್ಕದ ವ್ಯವಸ್ಥೆಯಾಗಿದ್ದು, ಕಾಮಗಾರಿ ಮಾತ್ರ ನಡೆಯಬೇಕಿದೆ ಎಂದರು.
ಈ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸುವಂತೆ ಪುಟ್ಟಣ್ಣಯ್ಯ ಅವರನ್ನು ಪೋನ್ ಮುಖಾಂತರ ಸಂಪರ್ಕಿಸಿದ ಅವರುಗಳು ಇದೀ ತಿಂಗಳ 21ರಂದು ಬೆಂಗಳೂರಿಗೆ ತೆರಳಿ ಆಯಾ ಇಲಾಖಾ ಮಂತ್ರಿಗಳನ್ನು ಭೇಟಿ ಮಾಡುವ ಕಾರ್ಯಕ್ರಮ ನಿಗದಿಮಾಡಿಕೊಂಡರು.

ಈ ವೇಳೆ ಹೋಬಳಿಯ ಕೆಂಕೆರೆ,ಲಿಂಗಪ್ಪನಪಾಳ್ಯ, ಸೂರಗೊಂಡನಹಳ್ಳಿ,ಹೊಸಳ್ಳಿ, ಬರಕನಹಾಲ್ ಸೇರಿದಂತೆ ವಿವಿಧ ಹಳ್ಳಿಗಳ ಪದಾಧಿಕಾರಿಗಳ ಜೊತೆ ಮಹಿಳಾ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.