ವಿಷಯಕ್ಕೆ ಹೋಗಿ

ವಿವಿಧ ಇಲಾಖಾ ಅಧಿಕಾರಿಗಳಿಗೆ ಚುರುಕು ಮುಟ್ಟಿಸಿದ ರೈತಸಂಘ

 ರೈತರಿಗೆ ಹಾಗೂ ಸಾರ್ವಜನಿಕರಿಗೆ ದೊರೆಯಬೇಕಾದ ಸೌಲಭ್ಯಗಳನ್ನು ಸಮರ್ಪಕವಾಗಿ ಕಲ್ಪಿಸುವಂತೆ ಒತ್ತಾಯಿಸಿ ಪುಟ್ಟಣ್ಣಯ್ಯ ಬಣದ ರೈತ ಸಂಘದ ಪದಾಧಿಕಾರಿಗಳು ಪಟ್ಟಣದ ವಿವಿಧ ಇಲಾಖೆಗಳಿಗೆ ತೆರಳಿ ಚುರುಕು ಮುಟ್ಟಿಸಿದ ಪ್ರಸಂಗ ಬುಧವಾರ ನಡೆಯಿತು.
 ಹುಳಿಯಾರು ಪಟ್ಟಣದ ಪರಿವೀಕ್ಷಣಾ ಮಂದಿರದಲ್ಲಿ ತಾಲ್ಲೂಕು ಅಧ್ಯಕ್ಷ ಹೊಸಳ್ಳಿ ಚಂದ್ರಪ್ಪ ಅವರ ನೇತೃತ್ವದಲ್ಲಿ ಸಭೆ ನಡೆಸಿದರು
ಪಟ್ಟಣದ ಪರಿವೀಕ್ಷಣ ಮಂದಿರಲ್ಲಿ ತಾಲ್ಲೂಕು ಅಧ್ಯಕ್ಷ ಹೊಸಳ್ಳಿ ಚಂದ್ರಪ್ಪ ಅವರ ನೇತೃತ್ವದಲ್ಲಿ ಸಭೆ ಸೇರಿದ ಪದಾಧಿಕಾರಿಗಳು ರೈತರಿಗಾಗುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚಿಸಿ ಬಳಿಕ ಕೃಷಿಉತ್ಪನ್ನ ಮಾರುಕಟ್ಟೆ,ಪಶುಆಸ್ಪತ್ರೆ, ಬೆಸ್ಕಾಂ ಕಛೇರಿ, ರೈತಸಂಪರ್ಕ ಕೇಂದ್ರಕ್ಕೆ ತೆರಳಿ ತಮಗಾಗುತ್ತಿರುವ ಸಮಸ್ಯೆಗಳ ಬಗ್ಗೆ ಅಧಿಕಾರಿಗಳೊಂದಿಗೆ ಮಾತಿನ ಚಕಮುಕಿ ನಡೆಸಿದರು.
ಪಟ್ಟಣದ ಪಶು ಆಸ್ಪತ್ರೆಯಲ್ಲಿ ಖಾಯಂ ವೈದ್ಯರಿಲ್ಲದೆ ಇಲ್ಲಿಗೆ ರಾಸುಗಳನ್ನು ಹೊಡೆದುಕೊಂಡು ಬರುವ ರೈತರು ನಿತ್ಯ ಪರದಾಡುವಂತಾಗಿದೆ. ಜೊತೆಗೆ ರಾಸುಗಳಿಗೆ ಬರುವ ರೋಗಗಳಿಗೆ ಹಾಕಿಸುವ ಲಸಿಕಗಳ ಬಗ್ಗೆ ತಿಳಿಸಲು ಯಾರು ಇಲ್ಲದ ಕಾರಣ ರೈತರಿಗೆ ತೊಂದರೆಯಾಗುತ್ತಿದೆ. ಇಲ್ಲಿರುವ ವೈದ್ಯರಲ್ಲಿ ಒಬ್ಬ ವೈದ್ಯ ಕಳೆದ ಮೂರು ತಿಂಗಳಿಂದ ಆಸ್ಪತ್ರೆಗೆ ಬಂದಿಲ್ಲ ಅದರೂ ಸಹ ಈ ಬಗ್ಗೆ ಮೇಲಾಧಿಕಾರಿಗಳು ಯಾವ ಕ್ರಮ ಕೈಗೊಂಡಿದ್ದಾರೆ ಎಂಬುದು ತಿಳಿದಿಲ್ಲ. ಈ ಹಿಂದೆ ಇದ್ದ ವೈದ್ಯ ಮಂಜುನಾಥ್ ಅವರು ವರ್ಗಾವಣೆಯಾಗಿ ಮೂರುತಿಂಗಳು ಕಳೆಯುತ್ತಿದ್ದರೂ ಸಹ ಅವರ ಸ್ಥಾನಕ್ಕೆ ಯಾವೊಬ್ಬ ವೈದ್ಯರನ್ನು ನೇಮಕ ಮಾಡಿಲ್ಲ ಎಂದು ದೂರಿ, ಸದ್ಯ ಒಬ್ಬ ವೈದ್ಯರನ್ನಾದರೂ ಇಲ್ಲಿ ಖಾಯಂ ಆಗಿ ಹಾಕುವಂತೆ ಒತ್ತಾಯಿಸಿದರು.
ನಂತರ ರೈತಸಂಪರ್ಕ ಇಲಾಖೆಗೆ ತೆರಳಿ ಇಲಾಖೆಗೆ ಬರುವ ಸೌಲಭ್ಯಗಳ ಬಗೆಗಿನ ಮಾಹಿತಿ ರೈತರಿಗೆ ತಿಳಿಯುತ್ತಿಲ್ಲ, ರೈತ ಅನುವುಗಾರರ ಮೂಲಕ ಇಲಾಖೆಯಲ್ಲಿ ದೊರೆಯಲ್ಲಿನ ಮಾಹಿತಿಯನ್ನು ತಿಳಿಸುವ ಕಾರ್ಯವಾಗಬೇಕು. ರಾಗಿ ಬೆಳೆಗೆ ಬಿದ್ದಿರುವ ಹಸಿರುಹುಳುಗಳ ನಿವಾರಣೆಗೆ ಸಬ್ಸಿಡಿ ದರದಲ್ಲಿ ಔಷಧಿ ನೀಡುವಂತೆ ಮನವಿ ಮಾಡಿದರು.
ಎಪಿಎಂಸಿ ಕಛೇರಿಗೆ ತೆರಳಿದ್ದ ರೈತರ ತಂಡ ಸಹಕಾರ್ಯದರ್ಶಿ ಅವರೊಂದಿಗೆ ಮಾತುಕತೆ ನಡೆಸಿ ಈ ಹಿಂದೆ ವಾರಕ್ಕೆ ಎರಡು ಬಾರಿ ಕೊಬ್ಬರಿ ಟೆಂಡರ್ ಮಾಡುತ್ತಿತ್ತು ಆದರೆ ಈಗ ವಾರಕ್ಕೊಮ್ಮೆ ಟೆಂಡರ್ ಮಾಡುತ್ತಿದ್ದು ವಾರಪೂರ್ತಿ ಒಂದೇ ಮೌಲ್ಯದಲ್ಲಿ ಕೊಬ್ಬರಿ ಮಾರುವಂತಾಗಿದೆ.
ತಿಪಟೂರು,ಅರಸೀಕೆರೆ ಎಪಿಎಂಸಿಯಲ್ಲಿ ವಾರಕ್ಕೆ ಎರಡು ಬಾರಿ ಟೆಂಡರ್ ಮಡುವಂತೆ ಇಲ್ಲೂ ಸಹ ಮಾಡಿ ಎಂದು ಪಟ್ಟು ಹಿಡಿದರು.
ಎಪಿಎಂಸಿ ಅಧಿಕಾರಿಯೊಂದಿಗೆ ವಾರಕ್ಕೆರಡು ಬಾರಿ ಕೊಬ್ಬರಿ ಟೆಂಡರ್ ಮಾಡುವಂತೆ ಚರ್ಚೆಗಿಳಿದ ರೈತ ಸಂಘದವರು.
ಬೆಸ್ಕಾಂ ಕಛೇರಿಯಲ್ಲಿನ ಎಸ್‍ಓ ಅವರೊಂದಿಗೆ ಚರ್ಚಿಸಿ, ಕಳೆದ 7 ವರ್ಷಗಳಿಂದ ಹುಳಿಯಾರು ಪಕ್ಕದ ಕೆಸಿ ಪಾಳ್ಯಕ್ಕೆ ಟೌನ್ ಲಿಮಿಟ್ ವಿದ್ಯುತ್ ನೀಡುತ್ತಿದ್ದು ಇದೀಗ ಏಕಾಏಕಿ ಕಡಿತ ಮಾಡಿದ್ದೀರಾ ಏಕೆ ಎಂದು ಪ್ರಶ್ನಿಸಿದರಲ್ಲದೆ, ಕೆಸಿಪಾಳ್ಯದ ಪಕ್ಕದ ಲಿಂಗಪ್ಪನ ಪಾಳ್ಯಕ್ಕೂ ಟೌನ್ ಲಿಮಿಟ್ ವಿದ್ಯುತ್ ನೀಡುವಂತೆ ಕೇಳಿಕೊಂಡರು. ಎಸ್‍ಓ ಉಮೇಶ್ ನಾಯಕ್ ಇದಕ್ಕೆ ಪ್ರತಿಕ್ರಿಯಿಸಿ ಈ ಹಿಂದೆ ಟೌನ್ ಲಿಮಿಟ್ ವಿದ್ಯುತ್ ನೀಡುತ್ತಿತ್ತು ಇದೀಗ ಬಳಕೆ ಪ್ರಮಾಣ ಹೆಚ್ಚಾದ ಪರಿಣಾಮ ಓವರ್ ಲೋಡ್ ನಿಂದ ಟಿ.ಸಿ. ಗಳು ಕೆಟ್ಟು ಹೋಗುತ್ತಿವೆ ಆ ಹಿನ್ನಲೆಯಲ್ಲಿ ಕಡಿತ ಮಾಡಲಾಗಿದೆ. ಮುಂದಿನವರ್ಷದಿಂದ ಎಲ್ಲಾ ಹಳ್ಳಿಗಳಿಗೂ ನಿರಂತರ ವಿದ್ಯುತ್ ಸಂಪರ್ಕದ ವ್ಯವಸ್ಥೆಯಾಗಿದ್ದು, ಕಾಮಗಾರಿ ಮಾತ್ರ ನಡೆಯಬೇಕಿದೆ ಎಂದರು.
ಈ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸುವಂತೆ ಪುಟ್ಟಣ್ಣಯ್ಯ ಅವರನ್ನು ಪೋನ್ ಮುಖಾಂತರ ಸಂಪರ್ಕಿಸಿದ ಅವರುಗಳು ಇದೀ ತಿಂಗಳ 21ರಂದು ಬೆಂಗಳೂರಿಗೆ ತೆರಳಿ ಆಯಾ ಇಲಾಖಾ ಮಂತ್ರಿಗಳನ್ನು ಭೇಟಿ ಮಾಡುವ ಕಾರ್ಯಕ್ರಮ ನಿಗದಿಮಾಡಿಕೊಂಡರು.

ಈ ವೇಳೆ ಹೋಬಳಿಯ ಕೆಂಕೆರೆ,ಲಿಂಗಪ್ಪನಪಾಳ್ಯ, ಸೂರಗೊಂಡನಹಳ್ಳಿ,ಹೊಸಳ್ಳಿ, ಬರಕನಹಾಲ್ ಸೇರಿದಂತೆ ವಿವಿಧ ಹಳ್ಳಿಗಳ ಪದಾಧಿಕಾರಿಗಳ ಜೊತೆ ಮಹಿಳಾ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...