ವಿಷಯಕ್ಕೆ ಹೋಗಿ

ಹಾಡು, ಕೀರ್ತನೆಗಳಿಂದ ಸಮಾಜದ ಪರಿರ್ವನೆ ಬಯಸಿದವನು ಕನಕ

          ಅಂದಿನ ಸಮಾಜದಲ್ಲಿದ್ದ ಜಾತಿ ಪದ್ದತಿಯ ನಿರ್ಮೂಲನೆ ಹಾಗೂ ಸಮಾಜದಲ್ಲಿನ ಜನರ ಪರಿವರ್ತನೆಗಾಗಿ ಹಾಡು, ಕೀರ್ತನೆಗಳನು ರಚಿಸಿದ ಮಹಾನ್ ವ್ಯಕ್ತಿ ಕನಕದಾಸರೇ ಆಗಿದ್ದಾರೆಂದು ಬೆಸ್ಕಾಂನ ಗವಿರಂಗಯ್ಯ ಅಭಿಮತ ವ್ಯಕ್ತಪಡಿಸಿದರು.
        ಹುಳಿಯಾರು ಹೋಬಳಿ ಕನಕ ಯುವ ವೇದಿಕೆ ಹಾಗೂ ಸೇವಾ ಛಾರಿಟಬಲ್ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಕನಕ ಜಯಂತಿ ಆಚರಣೆಯ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಹುಳಿಯಾರು ಹೋಬಳಿ ಕನಕ ಯುವ ವೇದಿಕೆಯಿಂದ ನಡೆದ ಕನಕ ಜಯಂತಿಯಲ್ಲಿ ಗವಿರಂಗಯ್ಯ ಮಾತನಾಡಿದರು. 
         ಕನಕ ಯಾವುದೇ ಸಂಘವನ್ನು ಕಟ್ಟಿಕೊಳ್ಳದೇ ಎಲ್ಲರನ್ನೂ ಒಗ್ಗೂಡಿಸುವ ಕಾರ್ಯ ಮಾಡಿ, ಸಮಾಜದಲ್ಲಿ ಬೇರೂರಿದ್ದ ಜಾತಿಪದ್ಧತಿಯ ನಿವಾರಣೆಗೆ ಮುಂದಾಗಿದ್ದರು. ಪ್ರಸ್ತುತದಲ್ಲಿ ಒಂದೊಂದು ಸಮುದಾಯದವರು ತಮ್ಮದೇ ಆದ ಸಂಘಗಳನ್ನು ಕಟ್ಟಿಕೊಂಡು ತಮ್ಮತಮ್ಮಲ್ಲೇ ಬಿರುಕನ್ನುಂಟು ಮಾಡಿಕೊಳ್ಳುತ್ತಿದ್ದಾರೆ ಹೊರತು ಅಭಿವೃದ್ಧಿಯಾಗುತ್ತಿಲ್ಲ ಎಂದರು. ಕನಕ ಜಯಂತಿಯನ್ನು ಒಂದು ದಿನ ನೆಪಮಾತ್ರಕ್ಕೆ ಆಚರಿಸುವ ಬದಲು ಕನಕರ ವಿಚಾರಧಾರೆಗಳನ್ನು ಜನಸಾಮಾನ್ಯರಿಗೆ ತಿಳಿಸುವ ಕಾರ್ಯವಾಗಬೇಕು. ಎಲ್ಲಾ ಸಮುದಾಯದವರೂ ಒಗ್ಗಟ್ಟಾಗಬೇಕು ಹಾಗೂ ಪ್ರತಿ ಸಂಘದಿಂದ ಸಮಾಜಮುಖಿ ಕಾರ್ಯಗಳಾಗಬೇಕು ಎಂದರು.
          ಮುಖಂಡರಾದ ನಂದಿಹಳ್ಳಿ ಶಿವಣ್ಣ ಮಾತನಾಡಿ, ಅನೇಕ ದುಷ್ಟಪದ್ಧತಿಗಳ ಬಾಯಿಗೆ ಸಿಲುಕಿದ್ದ ಜನಸಾಮಾನ್ಯರನ್ನು ಮೇಲೆತ್ತುವ ಕಾರ್ಯಕ್ಕೆ ಮುಂದಾದವರು ಕನಕದಾಸರಾಗಿದ್ದಾರೆ. ಅವರ ಈ ಕಾರ್ಯದಲ್ಲಿ ಅನೇಕ ತೊಡಕು,ಅವಮಾನಗಳು ಎದುರಾದರೂ ಸಹ ಅವರು ಕುಗ್ಗದೆ ತಮ್ಮಕಾರ್ಯವನ್ನು ಶ್ರದ್ಧೆವಹಿಸಿ ಮಾಡಿದ್ದರ ಫಲವಾಗಿ ಇಂದು ನಾವೆಲ್ಲಾ ಅವರನ್ನು ಆರಾಧಿಸುತ್ತಿದ್ದೇವೆ ಎಂದರು.



          ಈ ವೇಳೆಗೆ ವೃಷಭಾದ್ರಿ ಭಜನಾ ಮಂಡಳಿಯ ಮಹಿಳೆಯರು ಕನಕದಾಸರ ಹಾಡುಗಳನ್ನು ಗಾಯನ ಮಾಡಿದರು. ಕನಕ ಯುವ ವೇದಿಕೆಯ ಅಧ್ಯಕ್ಷ ಕೆ.ಪಿ.ಮಂಜುನಾಥ್, ಜಿ.ಪಂ.ಸದಸ್ಯೆ ಮಂಜುಳಾ , ಕನಕ ಸಂಘದ ಅಧ್ಯಕ್ಷ ಅಶೋಕ್, ಸಿದ್ದಗಂಗಮ್ಮ, ಶಿಕ್ಷಕ ಕೃಷ್ಣಮೂರ್ತಿ,ರಮೇಶ್,ಬೋರಲಿಂಗಯ್ಯ, ಬಾಳೆಕಾಯಿ ಲಕ್ಷ್ಮಿಕಾಂತ್,ರಂಗಸ್ವಾಮಿ ಸೇರಿದಂತೆ ಯುವ ವೇದಿಕೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು. ಕನಕ ಯುವ ವೇದಿಕೆ ಪದಾಧಿಕಾರಿಗಳಿಂದ ಬೈಕ್ ರ್ಯಾಲಿ ನಡೆದು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸುತ್ತಾ ಕನಕದಾಸರಿಗೆ ಜೈಕಾರ ಹಾಕುವ ಮೂಲಕ ಜಯಂತಿ ಆಚರಣೆ ನಡೆಸಿದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...