ವಿಷಯಕ್ಕೆ ಹೋಗಿ

ಬೀಗಹಾಕಿದ್ದ ಮನೆಗಳ ಬೀಗ ಮುರಿದು ಕಳ್ಳತನ

ಹುಳಿಯಾರು ಹೋಬಳಿಯ ಕೆಂಕೆರೆ ಹಾಗೂ ಲಿಂಗಪ್ಪನಪಾಳ್ಯದಲ್ಲಿ ಬೀಗಹಾಕಿದ್ದ ಕೆಲವು ಮನೆಗಳ ಬೀಗ ಮುರಿದು ಸರಣಿ ಮನೆಗಳ್ಳತನ ಮಾಡಿ, ನಗ-ನಾಣ್ಯ ದೋಚಿರುವ ಘಟನೆ ಶನಿವಾರ ತಡರಾತ್ರಿ ನಡೆದಿದ್ದು, ಭಾನುವಾರ ಬೆಳಕಿಗೆ ಬಂದಿದೆ.
ಕೆಂಕೆರೆ ಗ್ರಾಮದ ರಾಮಲಿಂಗಯ್ಯ, ಚನ್ನಬಸವಯ್ಯ ಹಾಗೂ ಬುಡೇನ್ ಸಾಬ್ ಅವರ ಮನೆ ಹಾಗೂ ಪುರದಮಠಗೇಟ್ ನ ಗೌರಮ್ಮ ಅವರ ಚಿಲ್ಲರೆ ಅಂಗಡಿಯ ಬೀಗ ಮುರಿದು ಕಳವು ಮಾಡಲಾಗಿದೆ. ಲಿಂಗಪ್ಪನಪಾಳ್ಯದಲ್ಲಿ ದನದ ಕೊಟ್ಟಿಗೆ ಸೇರಿದಂತೆ 4 ಖಾಲಿಮನೆಗಳ ಬೀಗ ಮುರಿದು ಕಳವಿಗೆ ಯತ್ನಿಸಿದ್ದಾರೆ. ಮನೆಗಳಿಗೆ ಬೀಗ ಹಾಕಿರುವುದನ್ನು ಗಮನಿಸಿದ್ದ ಕಳ್ಳರು ಈ ಕೃತ್ಯ ಮಾಡಿದ್ದಾರೆ ಎಂದು ಶಂಕಿಸಲಾಗಿದ್ದು, ಮನೆಯವರು ಮನೆಗೆ ಬೀಗ ಹಾಕಿಕೊಂಡು ಬೇರೆಡೆಗೆ ಹೋಗಿದ್ದರಿಂದ ಇಂತಹ ಘಟನೆ ನಡೆದಿದೆ. ರಾಮಲಿಂಗಯ್ಯ ಅವರ ಮನೆಯ ಬಾಗಿಲ ಡೋರ್ ಲಾಕ್ ಕಿತ್ತು ಒಳನುಗ್ಗಿರುವ ಕಳ್ಳರು ಗಾಡ್ರೇಜ್ ಬೀರ್ ನ ಬೀಗ ಸಹ ಮುರಿದು ಅದರಲ್ಲಿದ್ದ ನಗದು ಹಾಗೂ ಒಡವೆಯನ್ನು ದೊಚಿದ್ದಾರೆಂದು ದೂರು ನೀಡಿದ್ದಾರೆ. ಚನ್ನಬಸವಯ್ಯ ಅವರ ಮನೆಯ ಬೀಗ ಕಿತ್ತಿರುವ ಕಳ್ಳರು ಒಡವೆಯೊಂದಿಗೆ ಪರಾರಿಯಾಗಿದ್ದರೆ, ಗೌರಮ್ಮನವರ ಚಿಲ್ಲರೆ ಅಂಗಡಿಯಲ್ಲಿ ಚಿಲ್ಲರೆ ಹಣ, ಸಿಗರೇಟ್ ಪ್ಯಾಕ್ ಸೇರಿದಂತೆ ಇನ್ನಿತ ವಸ್ತುಗಳನ್ನು ಹೊತ್ತೊಯ್ದಿದ್ದಾರೆ. ವಿಷಯ ತಿಳಿದ ಸಿಪಿಐ ಜಿ.ಎಸ್.ಜಯಕುಮಾರ್ ,ಪಿಎಸೈ ವೈ.ಘೋರ್ಪಡೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಕಳೆದ ಮೂರ್ನಾಲ್ಕು ದಿನಗಳ ಹಿಂದೆಯಷ್ಟೇ ಕೆಂಕೆರೆ ಸಮೀಪದ ಹೊನ್ನಯ್ಯನಪಾಳ್ಯದಲ್ಲಿ ಮನೆಯೊಂದರ ಹತ್ತಿರ ಬೆಳೆದಿದ್ದ ಗಂಧದಮರ ಕಳ್ಳತನವಾದ ಬೆನ್ನಲ್ಲೇ , ಈಗ ಮತ್ತೆ ಈರೀತಿ ಸರಣಿ ಕಳ್ಳತನವಾಗಿರುವುದು ಪೊಲೀಸರ ಕಾರ್ಯ ವೈಖರಿ ಬಗ್ಗೆ ಪ್ರಶ್ನೆ ಮೂಡುವಂತೆ ಮಾಡಿದೆ ಎಂದು ತಾ.ಪಂ.ಸದಸ್ಯ ನವೀನ್ ತಿಳಿಸಿದ್ದಾರೆ. ನೈಟ್ ಬೀಟ್ ಗೆ ಸರಿಯಾಗಿ ಬರುತ್ತಾರೋ ಇಲ್ಲವೋ ಎಂಬುದು ಸಹ ತಿಳಿಯುತ್ತಿಲ್ಲ, ಪ್ರತಿ ಗ್ರಾಮಗಳಿಗೆ ನೈಟ್ ಬೀಟ್ ಗಾಗಿ ಹೆಚ್ಚುವರಿ ಸಿಬ್ಬಂದಿಯನ್ನು ಹಾಕುವಂತೆ ಒತ್ತಾಯಿಸಿದ್ದಾರೆ.

ಜಾಗೃತರಾಗುವಂತೆ ಮನವಿ: ಇತ್ತೀಚಿನ ದಿನಗಳಲ್ಲಿ ಕಳ್ಳತನದ ಪ್ರಕರಣಗಳು ಹೆಚ್ಚಾಗುತ್ತಿದ್ದು, ಅದರಲ್ಲೂ ಬೀಗಹಾಕಿದ ಮನೆ, ಅಂಗಡಿಗಳ ಬೀಗ ಮುರಿದು ಕೈಗೆ ಸಿಕ್ಕಿದನ್ನು ದೋಚುತ್ತಿದ್ದಾರೆ. ಈ ಬಗ್ಗೆ ನಾಗರೀಕರು ಎಚ್ಚೆತ್ತು ಕೊಳ್ಳಬೇಕು. ತಾವು ಮನೆಬಿಟ್ಟು ಸಂಬಂಧಿಕರ ಮನೆಗೆ ಅಥವಾ ಪ್ರವಾಸಗಳಿಗೆ ಹೋಗುವ ಸಂದರ್ಭದಲ್ಲಿ ಅಕ್ಕಪಕ್ಕದವರಿಗೆ ತಿಳಿಸಿ ಹೋಗಿ, ಇಲ್ಲವಾದರೆ ಮನೆಯಲ್ಲಿ ಒಬ್ಬರಾದರೂ ಇರಬೇಕು. ತಮ್ಮ ಗ್ರಾಮದಲ್ಲಿ ಅಥವಾ ಮನೆಯ ಅಕ್ಕಪಕ್ಕದಲ್ಲಿ ಅನುಮಾನಸ್ಪದ ವ್ಯಕ್ತಿಗಳು, ಕೆಲ ಉಪಕಸುಬನ್ನು ಮಾಡುವ ಕುಟುಂಬದವರು ಕಂಡುಬಂದರೆ ಠಾಣೆಗೆ ತಿಳಿಸಬೇಕು ಎಂದು ಸಿಪಿಐ ಜಯಕುಮಾರ್ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...