ವಿಷಯಕ್ಕೆ ಹೋಗಿ

ನಿಧನ : ಉಪನ್ಯಾಸಕ ಎಸ್.ಕೆ.ಜಯಣ್ಣ

ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಎಸ್.ಕೆ.ಜಯಣ್ಣ (೪೫) ಗುರುವಾರ ತಮ್ಮ ಸ್ವಗೃಹದಲ್ಲಿ ನಿಧನರಾದರು.
ಎಸ್.ಕೆ.ಜಯಣ್ಣ.
ಮೃತರು ಪಿಯು ಕಾಲೇಜಿನಲ್ಲಿ ಕಳೆದ ೧೫ ವರ್ಷಗಳಿಂದ ಅರ್ಥಶಾಸ್ತ್ರ ಉಪನ್ಯಾಸಕರಾಗಿ ಕೆಲಸ ನಿರ್ವಹಿಸುತ್ತಿದ್ದರು. ಕಳೆದ ಮೂರು ತಿಂಗಳಿಂದ ಹಲವಾರು ಸಮಸ್ಯೆಗಳಿಂದ ತೀವ್ರ ಆನಾರೋಗ್ಯಕ್ಕೀಡಾಗಿದ್ದ ಅವರನ್ನು ಬೆಂಗಳೂರಿನ ಅಪೋಲೋ , ತುಮಕೂರಿನ ಟಿ.ಎಚ್.ಎಸ್ ಆಸ್ಪತ್ರೆಗಳಲ್ಲಿ ಚಿಕಿತ್ಸೆಕೊಡಿಸಲಾಗಿತ್ತು. ಬುಧವಾರವಷ್ಟೆ ಆಸ್ಪತ್ರೆಯಿಂದ ಮನೆಗೆ ವಾಪಸ್ ಕರೆತರಲಾಗಿದ್ದ ಅವರು ಗುರುವಾರ ಬೆಳಿಗ್ಗೆ ನಿಧನರಾದರು. ಮೃತರು ಪತ್ನಿ, ೨ ಹೆಣ್ಣುಮಕ್ಕಳನ್ನು ಅಗಲಿದ್ದಾರೆ. ಪಿಯುಕಾಲೇಜಿನ ಪ್ರಾಂಶುಪಾಲ ನಟರಾಜ್ , ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಬೆಳಗ್ಗೆಯಿಂದಲೇ ಮೃತರ ಮನೆಗೆ ತೆರಳಿ ಅಂತಿಮ ದರ್ಶನ ಪಡೆದರು. ಅಂತ್ಯಕ್ರಿಯೆ ಸ್ವಗ್ರಾಮ ಅರಸೀಕೆರೆ ತಾಲ್ಲೂಕು ಸೊಪ್ಪಿನಹಳ್ಳಿಯಲ್ಲಿ ಶುಕ್ರವಾರ ನಡೆಯಲಿದೆ. ಹೆಚ್ಚಿನ ವಿವರಗಳಿಗೆ ೮೧೫೦೯೨೬೨೯೪ ಮೊಬೈಲ್ ಸಂಖ್ಯೆ ಸಂಪರ್ಕಿಸಬಹುದು.

ಕಾಮೆಂಟ್‌ಗಳು