ವಿಷಯಕ್ಕೆ ಹೋಗಿ

ಹೆಚ್.ಮೇಲನಹಳ್ಳಿಯಲ್ಲಿ ಮರೀಚಿಕೆಯಾದ ಸ್ವಚ್ಚತೆ

ದೇಶದೆಲ್ಲೆಡೆ ನರೇಂದ್ರ ಮೋದಿಯವರ ಸ್ವಚ್ಚ ಭಾರತ ಅಭಿಯಾನ ನಡೆಯುತ್ತಾ ಸ್ವಚ್ಚತಾ ಕಾರ್ಯಗಳು ಸಾಗುತ್ತಿದ್ದರೆ ಹೋಬಳಿಯ ಗಾಣಧಾಳು ಗ್ರಾ.ಪಂ.ವ್ಯಾಪ್ತಿಯ ಹೆಚ್.ಮೇಲನಹಳ್ಳಿ ಮಾತ್ರ ಇದಕ್ಕೆ ಹೊರತಾಗಿ ಯಾವುದೇ ರೀತಿಯ ಸ್ವಚ್ಚತಾಕಾರ್ಯ ಕಾಣದೆ ಬಣಗುಡುತ್ತಿದೆ.
ಹುಳಿಯಾರು ಹೋಬಳಿ ಹೆಚ್.ಮೇಲನಹಳ್ಳಿ ಗ್ರಾಮದಲ್ಲಿ ಹೂಳು ತುಂಬಿರುವ ಚರಂಡಿ.

ಗ್ರಾಮದಲ್ಲಿ ಕುಡಿಯುವ ನೀರು ಸರಬರಾಜು ಮಾಡುವ ಸಿಸ್ಟನ್ ಸುತ್ತ ನೀರು ನಿಂತ್ತು ಕೆಸರಾಗಿರುವುದು.

ಗ್ರಾಮದಲ್ಲಿನ ಐದಾರು ಬೀದಿಗಳಿದ್ದು ಅಲ್ಲಿನ ಚರಂಡಿಗಳ ತುಂಬೆಲ್ಲಾ ಹೂಳು ತುಂಬಿಕೊಂಡು ತಿಂಗಳುಗಳೇ ಕಳೆದರೂ ಈ ಬಗ್ಗೆ ಗ್ರಾ.ಪಂ.ಸದಸ್ಯರಾಗಲಿ ಗಮನಮಾಡಿಲ್ಲ. ಅಲ್ಲದೆ ಕುಡಿಯುವ ನೀರು ಸರಬರಾಜಿನ ಸಿಸ್ಟನ್ ನಲ್ಲಿ ಅಧಿಕ ಪ್ರಮಾಣದಲ್ಲಿ ನೀರು ಸೋರಿಕೆಯಾಗಿ ಸಿಸ್ಟನ್ ಸುತ್ತಮುತ್ತ ಕೆಸರುಂಟಾಗಿದ್ದು ಅದರ ನಡುವೆಯೇ ನೀರು ಹಿಡಿದು ತರುವಂತಹ ದುಸ್ಥಿತಿ ಇಲ್ಲಿನ ನಿವಾಸಿಗಳದ್ದಾಗಿದೆ. ಚರಂಡಿಯಲ್ಲಿ ನೀರು ಹರಿಯದೆ ನಿಂತಿರುವುದು ಸೊಳ್ಳೆಗಳ ಹೆಚ್ಚಳಕ್ಕೆ ಕಾರಣವಾಗಿದೆ. ಈ ಬಗ್ಗೆ ಗ್ರಾ.ಪಂ. ಅಧಿಕಾರಿಗಳಿಗೆ ತಿಳಿಸಿದರು ಅವರು ಸಹ ಕ್ರಮಕೈಗೊಂಡಿಲ್ಲದಿರುವುದು ನಿವಾಸಿಗಳಲ್ಲಿ ಅಸಮಾಧಾನ ಮೂಡಿಸಿದೆ.
ಜಿಲ್ಲೆಯ ಗಡಿಭಾಗದಲ್ಲಿರುವ ಈ ಗ್ರಾಮದಲ್ಲಿ ಸುಮಾರು ೩೫೦ಕ್ಕೂ ಹೆಚ್ಚು ಮನೆಗಳಿದ್ದು ಮೂವರು ಗ್ರಾ.ಪಂ.ಸದಸ್ಯರಿದ್ದಾರೆ .ಆದರೂ ಸಹ ಗ್ರಾಮದ ಸ್ವಚ್ಚತೆ ಬಗ್ಗೆ ತಿರುಗಿನೋಡಿಲ್ಲ. ಈ ಹಿಂದೆ ಇದೇ ಗ್ರಾಮದಲ್ಲಿ ಡೆಂಗ್ಯೂ ಕಾಣಿಸಿಕೊಂಡು ಹಲವರು ಜ್ವರದಿಂದ ಬಳಲಿದ್ದು ಆಗ ಮಾತ್ರ ಧಾವಿಸಿ ಬಂದ ಗ್ರಾ.ಪಂ.ಯವರು ಅಲ್ಪಸ್ವಲ್ಪ ಸ್ವಚ್ಚತೆ ಮಾಡಿದ್ದು ಬಿಟ್ಟರೆ ಇದುವರೆಗೂ ಇತ್ತ ತಲೆಹಾಕದಿರುವುದು ನಿವಾಸಿಗಳಲ್ಲಿ ಆಕ್ರೋಶವನ್ನುಂಟುಮಾಡಿದೆ. ಪಂಚಾಯ್ತಿಗೆ ಬರುವ ಕಾಮಗಾರಿಗಳನ್ನು ಮಾಡಿಸಲು ತಾನು ಮೊದಲು ಎಂದು ಮುಂದಾಗುವ ಸದಸ್ಯರುಗಳು ತಮ್ಮ ವ್ಯಾಪ್ತಿಯ ಗ್ರಾಮಗಳ ಸ್ವಚ್ಚತೆ ಮಾಡಿಸಲು ಮಾತ್ರ ಹಿಂದೇಟಾಕುತ್ತಾರೆ ಎಂಬುದು ಇಲ್ಲಿನ ನಿವಾಸಿಗಳ ಪ್ರಶ್ನೆಯಾಗಿದೆ.
ಇನ್ನಾದರೂ ಸ್ವಚ್ಚತಾ ಕಾರ್ಯ ನಡೆಯದೇ ಹೋದರೆ ಆನೈರ್ಮಲ್ಯದಿಂದ ಕೀಟಗಳ ಪ್ರಮಾಣ ಅಧಿಕವಾಗಿ ಮಾರಕ ರೋಗಗಳು ಉಲ್ಭಟಿಸುವ ಮೊದಲೇ ಸ್ಥಳೀಯ ಆಡಳಿತದವರು ಎಚ್ಚೆತ್ತು ಸ್ವಚ್ಚತಾಕಾರ್ಯ ಮಾಡಿಸಿ ಎಂದು ಸಾರ್ವಜನಿಕರು ಮನವಿ ಮಾಡಿದ್ದಾರೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...