ವಿಷಯಕ್ಕೆ ಹೋಗಿ

ವಾಸವಿ ನಿಜಪಾದುಕೆಯ ಭವ್ಯ ಮೆರವಣಿಗೆ

ಶ್ರೀವಾಸವಿದೇವಿಯ ನಿಜಪಾದ ಹೊತ್ತ ಸುವರ್ಣರಥವು ಭಾನುವಾರ ಸಂಜೆ ಹುಳಿಯಾರಿಗೆ ಆಗಮಿಸಿದ್ದು, ಆರ್ಯವೈಶ್ಯ ಸಮುದಾಯದವರು ಪೂರ್ಣಾಕುಂಭ ಸ್ವಾಗತಿ ನೀಡಿ, ಸೋಮವಾರ ಬೆಳಿಗ್ಗೆ ಪಾದುಕೆಯನ್ನು ಕನ್ನಿಕಾಪರಮೇಶ್ವರಿಯ ಸಮ್ಮುಖದಲ್ಲಿ ಭವ್ಯ ಮೆರವಣಿಗೆ ನಡೆಸಲಾಯಿತು.
ಹುಳಿಯಾರು ಪಟ್ಟಣಕ್ಕೆ ಆಗಮಿಸಿದ್ದ ವಾಸವಿ ದೇವಿಯ ನಿಜಪಾದುಕೆಗಳ ಮೆರವಣಿಗೆ ನಡೆಸಲಾಯಿತು.
ಭಾನುವಾರ ಸಂಜೆ ಆಗಮಿಸಿದ ಪಾದುಕೆಯನ್ನು ಪಟ್ಟಣದ ಎಪಿಎಂಸಿ ಹತ್ತಿರ ಸ್ವಾಗತಿಸಿ ನಂತರ ಕನ್ನಿಕಾಪರವೇಶ್ವರಿ ದೇವಾಲಯದಲ್ಲಿಗೆ ಕರೆದೊಯ್ದು ವಿಶೇಷ ಪೂಜೆ ಸಲ್ಲಿಸಿದರು.ಸೋಮವಾರ ಬೆಳಿಗ್ಗೆ ಹಾಲಿನ ಅಭಿಷೇಕ,ಅರ್ಚನೆ ನಡೆದು ವಿವಿಧ ಹೂಗಳಿಂದ ಅಲಂಕರಿಸಿ ಪೂಜೆ ಸಲ್ಲಿಸಲಾಯಿತು. ನಿಜಪಾದ ಹೊತ್ತ ಸುವರ್ಣರಥವನ್ನು ಸಮುದಾಯದವರೆಲ್ಲಾ ಸೇರಿ ಅಲಂಕರಿಸಿ ಪಟ್ಟಣದ ರಾಮ್ ಗೋಪಾಲ್ ಸರ್ಕಲ್, ಬಿ.ಎಚ್.ರಸ್ತೆ,ರಾಜ್ ಕುಮಾರ್ ರಸ್ತೆ ,ಬಸ್ ನಿಲ್ದಾಣದ ಮೂಲಕ ಮೆರವಣಿಗೆ ನಡೆಸಿದರು. ಮಹಿಳಾ ಡೊಳ್ಳುಕುಣಿತ ಹಾಗೂ ವೀರಗಾಸೆ ನೃತ್ಯ ಮೆರವಣಿಗೆಗೆ ರಂಗು ತಂದಿದ್ದವು.







ಈ ವೇಳೆ ಆರ್ಯವೈಶ್ಯ ಮಂಡಳಿಯ ಅಧ್ಯಕ್ಷ ಎಂ.ಎಸ್.ನಟರಾಜ್ ಮಾತನಾಡಿ, ಆರ್ಯವೈಶ್ಯರ ಪುಣ್ಯ ಕ್ಷೇತ್ರ ಹಾಗೂ ವಾಸವಿ ಮಾತೆಯ ಜನ್ಮ ಸ್ಥಳವೂ ಆಗಿರುವ ಆಂಧ್ರಪ್ರದೇಶದ ಗೋದಾವರಿ ಜೆಲ್ಲೆಯ ಪೆನುಗೊಂಡ ಕ್ಷೇತ್ರದಲ್ಲಿ ೧೪೫ ಅಡಿ ಎತ್ತರದ ಭವ್ಯವಾದ ವಾಸವಿ ಋಷಿಗೋತ್ರ ಸುವರ್ಣ ಮಂದಿರ ನಿರ್ಮಾಣವಾಗುತ್ತಿದ್ದು, ಆ ಮಂದಿರದಲ್ಲಿ ೯೦ ಅಡಿ ಎತ್ತರದ ಸುಮಾರು ೪೫ ಟನ್ ತೂಕದ ವಾಸವಿ ಮಾತೆಯ ಪಂಚಲೋಹ ವಿಗ್ರಹ ಪ್ರತಿಷ್ಠಾಪಿಸಲಾಗುತ್ತದೆ ಆನಿಟ್ಟಿನಲ್ಲಿ ಅಖಿಲ ಭಾರತ್ ಶ್ರೀವಾಸವಿ ಪೆನುಗೊಂಡ ಟ್ರಸ್ಟ್ ಮತ್ತು ಕರ್ನಾಟಕ ಆರ್ಯವೈಶ್ಯ ಮಹಾಸಭಾದ ಸಂಯುಕ್ತಾಶ್ರಯದಲ್ಲಿ ಸುಮಾರು ೧೨೦ ದಿನಗಳ ಕಾಲ ಶ್ರೀವಾಸವಿ ನಿಜಪಾದಯಾತ್ರೆಯು ಕರ್ನಾಟಕದಾದ್ಯಂತ ಸಂಚರಿಸುತ್ತಿದ್ದು, ವಿಶ್ವದ ಅತ್ಯಂತ ಎತ್ತರದ ಪಂಚಲೋಹದ ವಿಗ್ರಹವಾಗಿರುವ ಇದನ್ನು ಪ್ರತಿಷ್ಠಾಪನೆಗೂ ಮುನ್ನಾ ಆರ್ಯವೈಶ್ಯ ಸಮುದಾಯದವರಿಗೆ ವಾಸವಿಮಾತೆಯ ಪಾದುಕೆಗಳ ದರ್ಶನ ಮಾಡಿಸುವ ಅಂಗವಾಗಿ ಈ ನಿಜಪಾದುಕೆಗಳ ಯಾತ್ರೆ ನಡೆಯುತ್ತಿರುವುದಾಗಿ ತಿಳಿಸಿದರು.

ರಥಯಾತ್ರೆಯಲ್ಲಿ ಕರ್ನಾಟಕ ಆರ್ಯವೈಶ್ಯ ಮಂಡಳಿ ಜಿಲ್ಲಾಧ್ಯಕ್ಷ ಬಾಗೇಪಲ್ಲಿ ನಟರಾಜ್ , ಜಿಲ್ಲಾಕಾರ್ಯದರ್ಶಿ ಎಲ್.ಆರ್.ಚಂದ್ರಶೇಖರ್, ನಿರ್ದೇಶಕರಾದ ದ್ವಾರಕನಾಥ್, ಎಸ್.ಎಲ್.ಆರ್.ಗೋವಿಂದರಾಜ್ , ಸಂಪಂಗ್ಗಿ ಕೃಷ್ಣಯ್ಯ ಶೆಟ್ಟಿ ,ಕಾರ್ಯದರ್ಶಿ ಟಿ.ಆರ್.ರಾಮಮೂರ್ತಿ, ಸೇರಿದಂತೆ ಇತರರಿದ್ದರು. ಆರ್ಯವೈಶ್ಯ ಮಹಿಳಾಮಂಡಳಿ, ವಾಸವಿ ಯುವಜನ ಸಂಘದ ಪದಾಧಿಕಾರಿ ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು. ಮೆರವಣಿಗೆಯಲ್ಲಿ ಸಾಗಿದ ಪಾದುಕೆಗಳನ್ನು ಪಟ್ಟಣದ ಶ್ರೀನಿವಾಸ ಶೆಟ್ಟಿ, ಗೋವಿಂದರಾಜ್, ನಟರಾಜ್,ಗುರುನಾಥ್, ರಂಗನಾಥ್, ನಾಗಭೂಷಣ್, ಪ್ರದೀಪ್ ಅವರುಗಳು ತಮ್ಮ ಮನೆಗೆ ಕರೆದೊಯ್ದು, ಅಭಿಷೇಕ ನಡೆಸಿ ಪೂಜೆಸಿ ಮಡಿಲಕ್ಕಿ ಹಾಕಿದರು. ಆಗಮಿಸಿದ ಭಕ್ತರಿಗಾಗಿ ಪ್ರಸಾದವಿನಿಯೋಗ ಏರ್ಪಡಿಸಿದ್ದರು. ಮೆರವಣಿಗೆಯ ನಂತರ ನಿಜಪಾದುಕೆಹೊತ್ತ ಸುವರ್ಣರತಥ ದಸೂಡಿ ಗ್ರಾಮಕ್ಕೆ ತೆರಳಿತು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.