ವಿಷಯಕ್ಕೆ ಹೋಗಿ

ವಾಸವಿ ನಿಜಪಾದುಕೆಯ ಭವ್ಯ ಮೆರವಣಿಗೆ

ಶ್ರೀವಾಸವಿದೇವಿಯ ನಿಜಪಾದ ಹೊತ್ತ ಸುವರ್ಣರಥವು ಭಾನುವಾರ ಸಂಜೆ ಹುಳಿಯಾರಿಗೆ ಆಗಮಿಸಿದ್ದು, ಆರ್ಯವೈಶ್ಯ ಸಮುದಾಯದವರು ಪೂರ್ಣಾಕುಂಭ ಸ್ವಾಗತಿ ನೀಡಿ, ಸೋಮವಾರ ಬೆಳಿಗ್ಗೆ ಪಾದುಕೆಯನ್ನು ಕನ್ನಿಕಾಪರಮೇಶ್ವರಿಯ ಸಮ್ಮುಖದಲ್ಲಿ ಭವ್ಯ ಮೆರವಣಿಗೆ ನಡೆಸಲಾಯಿತು.
ಹುಳಿಯಾರು ಪಟ್ಟಣಕ್ಕೆ ಆಗಮಿಸಿದ್ದ ವಾಸವಿ ದೇವಿಯ ನಿಜಪಾದುಕೆಗಳ ಮೆರವಣಿಗೆ ನಡೆಸಲಾಯಿತು.
ಭಾನುವಾರ ಸಂಜೆ ಆಗಮಿಸಿದ ಪಾದುಕೆಯನ್ನು ಪಟ್ಟಣದ ಎಪಿಎಂಸಿ ಹತ್ತಿರ ಸ್ವಾಗತಿಸಿ ನಂತರ ಕನ್ನಿಕಾಪರವೇಶ್ವರಿ ದೇವಾಲಯದಲ್ಲಿಗೆ ಕರೆದೊಯ್ದು ವಿಶೇಷ ಪೂಜೆ ಸಲ್ಲಿಸಿದರು.ಸೋಮವಾರ ಬೆಳಿಗ್ಗೆ ಹಾಲಿನ ಅಭಿಷೇಕ,ಅರ್ಚನೆ ನಡೆದು ವಿವಿಧ ಹೂಗಳಿಂದ ಅಲಂಕರಿಸಿ ಪೂಜೆ ಸಲ್ಲಿಸಲಾಯಿತು. ನಿಜಪಾದ ಹೊತ್ತ ಸುವರ್ಣರಥವನ್ನು ಸಮುದಾಯದವರೆಲ್ಲಾ ಸೇರಿ ಅಲಂಕರಿಸಿ ಪಟ್ಟಣದ ರಾಮ್ ಗೋಪಾಲ್ ಸರ್ಕಲ್, ಬಿ.ಎಚ್.ರಸ್ತೆ,ರಾಜ್ ಕುಮಾರ್ ರಸ್ತೆ ,ಬಸ್ ನಿಲ್ದಾಣದ ಮೂಲಕ ಮೆರವಣಿಗೆ ನಡೆಸಿದರು. ಮಹಿಳಾ ಡೊಳ್ಳುಕುಣಿತ ಹಾಗೂ ವೀರಗಾಸೆ ನೃತ್ಯ ಮೆರವಣಿಗೆಗೆ ರಂಗು ತಂದಿದ್ದವು.







ಈ ವೇಳೆ ಆರ್ಯವೈಶ್ಯ ಮಂಡಳಿಯ ಅಧ್ಯಕ್ಷ ಎಂ.ಎಸ್.ನಟರಾಜ್ ಮಾತನಾಡಿ, ಆರ್ಯವೈಶ್ಯರ ಪುಣ್ಯ ಕ್ಷೇತ್ರ ಹಾಗೂ ವಾಸವಿ ಮಾತೆಯ ಜನ್ಮ ಸ್ಥಳವೂ ಆಗಿರುವ ಆಂಧ್ರಪ್ರದೇಶದ ಗೋದಾವರಿ ಜೆಲ್ಲೆಯ ಪೆನುಗೊಂಡ ಕ್ಷೇತ್ರದಲ್ಲಿ ೧೪೫ ಅಡಿ ಎತ್ತರದ ಭವ್ಯವಾದ ವಾಸವಿ ಋಷಿಗೋತ್ರ ಸುವರ್ಣ ಮಂದಿರ ನಿರ್ಮಾಣವಾಗುತ್ತಿದ್ದು, ಆ ಮಂದಿರದಲ್ಲಿ ೯೦ ಅಡಿ ಎತ್ತರದ ಸುಮಾರು ೪೫ ಟನ್ ತೂಕದ ವಾಸವಿ ಮಾತೆಯ ಪಂಚಲೋಹ ವಿಗ್ರಹ ಪ್ರತಿಷ್ಠಾಪಿಸಲಾಗುತ್ತದೆ ಆನಿಟ್ಟಿನಲ್ಲಿ ಅಖಿಲ ಭಾರತ್ ಶ್ರೀವಾಸವಿ ಪೆನುಗೊಂಡ ಟ್ರಸ್ಟ್ ಮತ್ತು ಕರ್ನಾಟಕ ಆರ್ಯವೈಶ್ಯ ಮಹಾಸಭಾದ ಸಂಯುಕ್ತಾಶ್ರಯದಲ್ಲಿ ಸುಮಾರು ೧೨೦ ದಿನಗಳ ಕಾಲ ಶ್ರೀವಾಸವಿ ನಿಜಪಾದಯಾತ್ರೆಯು ಕರ್ನಾಟಕದಾದ್ಯಂತ ಸಂಚರಿಸುತ್ತಿದ್ದು, ವಿಶ್ವದ ಅತ್ಯಂತ ಎತ್ತರದ ಪಂಚಲೋಹದ ವಿಗ್ರಹವಾಗಿರುವ ಇದನ್ನು ಪ್ರತಿಷ್ಠಾಪನೆಗೂ ಮುನ್ನಾ ಆರ್ಯವೈಶ್ಯ ಸಮುದಾಯದವರಿಗೆ ವಾಸವಿಮಾತೆಯ ಪಾದುಕೆಗಳ ದರ್ಶನ ಮಾಡಿಸುವ ಅಂಗವಾಗಿ ಈ ನಿಜಪಾದುಕೆಗಳ ಯಾತ್ರೆ ನಡೆಯುತ್ತಿರುವುದಾಗಿ ತಿಳಿಸಿದರು.

ರಥಯಾತ್ರೆಯಲ್ಲಿ ಕರ್ನಾಟಕ ಆರ್ಯವೈಶ್ಯ ಮಂಡಳಿ ಜಿಲ್ಲಾಧ್ಯಕ್ಷ ಬಾಗೇಪಲ್ಲಿ ನಟರಾಜ್ , ಜಿಲ್ಲಾಕಾರ್ಯದರ್ಶಿ ಎಲ್.ಆರ್.ಚಂದ್ರಶೇಖರ್, ನಿರ್ದೇಶಕರಾದ ದ್ವಾರಕನಾಥ್, ಎಸ್.ಎಲ್.ಆರ್.ಗೋವಿಂದರಾಜ್ , ಸಂಪಂಗ್ಗಿ ಕೃಷ್ಣಯ್ಯ ಶೆಟ್ಟಿ ,ಕಾರ್ಯದರ್ಶಿ ಟಿ.ಆರ್.ರಾಮಮೂರ್ತಿ, ಸೇರಿದಂತೆ ಇತರರಿದ್ದರು. ಆರ್ಯವೈಶ್ಯ ಮಹಿಳಾಮಂಡಳಿ, ವಾಸವಿ ಯುವಜನ ಸಂಘದ ಪದಾಧಿಕಾರಿ ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು. ಮೆರವಣಿಗೆಯಲ್ಲಿ ಸಾಗಿದ ಪಾದುಕೆಗಳನ್ನು ಪಟ್ಟಣದ ಶ್ರೀನಿವಾಸ ಶೆಟ್ಟಿ, ಗೋವಿಂದರಾಜ್, ನಟರಾಜ್,ಗುರುನಾಥ್, ರಂಗನಾಥ್, ನಾಗಭೂಷಣ್, ಪ್ರದೀಪ್ ಅವರುಗಳು ತಮ್ಮ ಮನೆಗೆ ಕರೆದೊಯ್ದು, ಅಭಿಷೇಕ ನಡೆಸಿ ಪೂಜೆಸಿ ಮಡಿಲಕ್ಕಿ ಹಾಕಿದರು. ಆಗಮಿಸಿದ ಭಕ್ತರಿಗಾಗಿ ಪ್ರಸಾದವಿನಿಯೋಗ ಏರ್ಪಡಿಸಿದ್ದರು. ಮೆರವಣಿಗೆಯ ನಂತರ ನಿಜಪಾದುಕೆಹೊತ್ತ ಸುವರ್ಣರತಥ ದಸೂಡಿ ಗ್ರಾಮಕ್ಕೆ ತೆರಳಿತು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...