ವಿಷಯಕ್ಕೆ ಹೋಗಿ

ಠಾಣೆಯ ಬ್ಲಾಕ್ ಲಿಸ್ಟ್ ನಲ್ಲಿದ್ದವರಿಗೆ ಮನಪರಿವರ್ತನಾ ಸಭೆ

ಈ ಹಿಂದೆ ಕಳ್ಳತನ ಸೇರಿದಂತೆ ಇನ್ನಿತರ ಕಾನೂನು ಬಾಹಿರ ಕೃತ್ಯಗಳಡಿಯಲ್ಲಿ ದೂರು ದಾಖಲಾಗಿ ಶಿಕ್ಷೆ ಅನುಭವಿಸಿ ಪೊಲೀಸ್ ಠಾಣೆಯ ಬ್ಲಾಕ್ ಲಿಸ್ಟ್ ನಲ್ಲಿದ್ದವರನ್ನು ಅಪರಾಧ ಮಾಸಾಚರಣೆಯ ಅಂಗವಾಗಿ ಗುರುವಾರದಂದು ಠಾಣೆಯಲ್ಲಿಗೆ ಕರೆಸಿ ಎಂಓಬಿ ಪಿರೇಡ್ ಅನ್ವಯ ಮನಪರಿವರ್ತನೆ ಹಾಗೂ ತಿಳುವಳಿಕೆ ಸಭೆ ನಡೆಸಲಾಯಿತು.
ಹುಳಿಯಾರು ಪೊಲೀಸ್ ಠಾಣೆಯ ಬ್ಲಾಕ್ ಲಿಸ್ಟ್ ನಲ್ಲಿದ್ದವರನ್ನು ಗುರುವಾರದಂದು ಠಾಣೆಗೆ ಕರೆಸಿ ಸಿಪಿಐ ಜಯಕುಮಾರ್ ಹಾಗೂ ಪಿಎಸೈ ಘೋರ್ಪಡೆ ಮನಪರಿವರ್ತನಾ ಸಭೆ ನಡೆಸಿದರು.
ಪಿಎಸೈ ಘೋರ್ಪಡೆ ಮಾತನಾಡಿ ನಮ್ಮ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳ್ಳತನ, ರಾಬರಿ ಸೇರಿದಂತೆ ಇನ್ನಿತರ ಚಟುವಟಿಕೆಗಳನ್ನು ಮಾಡಿ ಸಿಕ್ಕಿಬಿದ್ದು ಅಪರಾಧಿಗಳಾಗಿ ಶಿಕ್ಷೆಗೊಳಪಟ್ಟವರ ಪಟ್ಟಿಯಿದ್ದು, ಅವರನ್ನು ಠಾಣೆಯಲ್ಲಿಗೆ ಕರೆಸಿ ಅವರ ಮನಪರಿವರ್ತನೆ ಹಾಗೂ ತಿಳುವಳಿಕೆ ಹೇಳುವ ದೃಷ್ಠಿಯಿಂದ ಈ ಸಭೆ ನಡೆಸಿರುವುದಾಗಿ ತಿಳಿಸಿದರು. ಶಿಕ್ಷೆ ಅನುಭವಿಸಿ ಬಂದವರ ಮೇಲೆ ತಾವು ಸದಾಗಮನ ಮಾಡುತ್ತಿರುತ್ತೇವೆ. ಇಂತಹ ಕೃತ್ಯಗಳನ್ನು ಮಾಡಿದವರು ಮುಂದೆಯೂ ಸಹ ಇಂತಹ ಕೆಲಸದಲ್ಲಿ ತೊಡಗಿಕೊಳ್ಳುವ ಸಾಧ್ಯತೆಗಳು ಹೆಚ್ಚಿದ್ದು, ಆ ನಿಟ್ಟಿನಲ್ಲಿ ಒಂದು ಪಟ್ಟಿಯನ್ನು ಸಿದ್ದ ಮಾಡಿ, ಎಲ್ಲಾದರೂ ಕಾನೂನು ಬಾಹಿರ ಕೃತ್ಯಗಳು ನಡೆದರೆ ಇಅವರನ್ನು ಕರೆಸಿ ವಿಚಾರಿಸುತ್ತೇವೆ ಎಂದರು. ತಮ್ಮ ಠಾಣಾ ವ್ಯಾಪ್ತಿಯಲ್ಲಿ ಈ ರೀತಿಯ ೫೯ ಜನರಿದ್ದು ಅವರನ್ನು ಕರೆಸಿ ಸಭೆ ನಡೆಸಿದ್ದು ಮುಂದೆ ಯಾವುದೇ ರೀತಿಯ ಅಪರಾಧ ಮಾಡದಂತೆ ಎಚ್ಚರಿಸಲು ಹಾಗೂ ಶಿಕ್ಷೆ ಮುಗಿದ ಬಳಿಕ ಇದುವರೆಗೂ ಯಾವುದೇ ಕೇಸುಗಳಲ್ಲಿ ಫಿಟ್ ಆಗದವರನ್ನು ಪಟ್ಟಿಯಿಂದ ತಾತ್ಕಾಲಿಕವಾಗಿ ತೆಗೆಯುತ್ತೇವೆ ಮುಂದೆ ಏನಾದರೂ ಪುನ: ತಪ್ಪೆಸಗಿದರೆ ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಈ ಹಿಂದೆ ವಿವಿಧ ಕೇಸ್ ಗಳಲ್ಲಿ ಅಪರಾಧಿಗಳಾಗಿದ್ದವರ ಮಾಹಿತಿ ಪಡೆದ ಸಿಪಿಐ ಜಯಕುಮಾರ್ ಪಟ್ಟಿಯಲ್ಲಿ ನಮೋದಾಗಿದ್ದವರ ಹೆಸರನ್ನು ಹೇಳಿ ಅವರು ಮಾಡಿದ ತಪ್ಪು ಹಾಗೂ ಅದಕ್ಕೆ ಅನುಭವಿಸಿದ ಶಿಕ್ಷೆ, ಇದುವರೆಗೂ ಯಾವುದೇ ತಪ್ಪು ಮಾಡಿಲ್ಲ ಎಂಬುದನ್ನು ಖಾಚಿತ ಪಡಿಸಿಕೊಂಡು ಅವರ ಫೈಲನ್ನು ತಾತ್ಕಾಲಿಕವಾಗಿ ತೆಗೆದಿಡುವುದಾಗಿ ತಿಳಿಸಿದರು. ಮುಂದಿನ ದಿನಗಳಲ್ಲಿ ಯಾವುದೇ ರೀತಿಯ ತಪ್ಪುಗಳನ್ನು ಎಸಗದೆ ಉತ್ತಮ ರೀತಿಯಲ್ಲಿ ನಡೆದುಕೊಂಡರೆ ಅಂತಹವರ ಫೈಲನ್ನು ಸಹ ತಮ್ಮ ಬ್ಲಾಕ್ ಲಿಸ್ಟ್ ನಿಂದ ತೆಗೆದಿಡುವುದಾಗಿ ತಿಳಿಸಿದರು. ಯಾವುದೇ ರೀತಿಯ ಅಪರಾಧ ಹಾಗೂ ಅರಪಾಧಿಗಳ ಬಗ್ಗೆ ತಮಗೆ ತಿಳಿದರೆ ಠಾಣೆಗೆ ತಕ್ಷಣ ತಿಳಿಸಬೇಕು ಹಾಗೂ ತಮ್ಮ ಗ್ರಾಮಗಳನ್ನು ಬಿಟ್ಟು ಬೇರೆಡೆ ಹೋಗುವುದಾದರೆ ಠಾಣೆಗೆ ಬಂದು ತಾವು ಎಲ್ಲಿಗೆ ಹೋಗುತ್ತಿದ್ದಿರಾ ಎಂಬುದರ ಮಾಹಿತಿ ನೀಡಿ ಹೋಗಬೇಕು ಎಂದರು.ಈ ವೇಳೆ ಎ.ಎಸ್.ಐ ರಾಜಣ್ಣ , ಸಿಬ್ಬಂದಿಗಳಾದ ಕುಮಾರ್,ಅನಿಲ್ ಹಾಗೂ ಇತರರಿದ್ದರು. 

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.