ವಿಷಯಕ್ಕೆ ಹೋಗಿ

ಠಾಣೆಯ ಬ್ಲಾಕ್ ಲಿಸ್ಟ್ ನಲ್ಲಿದ್ದವರಿಗೆ ಮನಪರಿವರ್ತನಾ ಸಭೆ

ಈ ಹಿಂದೆ ಕಳ್ಳತನ ಸೇರಿದಂತೆ ಇನ್ನಿತರ ಕಾನೂನು ಬಾಹಿರ ಕೃತ್ಯಗಳಡಿಯಲ್ಲಿ ದೂರು ದಾಖಲಾಗಿ ಶಿಕ್ಷೆ ಅನುಭವಿಸಿ ಪೊಲೀಸ್ ಠಾಣೆಯ ಬ್ಲಾಕ್ ಲಿಸ್ಟ್ ನಲ್ಲಿದ್ದವರನ್ನು ಅಪರಾಧ ಮಾಸಾಚರಣೆಯ ಅಂಗವಾಗಿ ಗುರುವಾರದಂದು ಠಾಣೆಯಲ್ಲಿಗೆ ಕರೆಸಿ ಎಂಓಬಿ ಪಿರೇಡ್ ಅನ್ವಯ ಮನಪರಿವರ್ತನೆ ಹಾಗೂ ತಿಳುವಳಿಕೆ ಸಭೆ ನಡೆಸಲಾಯಿತು.
ಹುಳಿಯಾರು ಪೊಲೀಸ್ ಠಾಣೆಯ ಬ್ಲಾಕ್ ಲಿಸ್ಟ್ ನಲ್ಲಿದ್ದವರನ್ನು ಗುರುವಾರದಂದು ಠಾಣೆಗೆ ಕರೆಸಿ ಸಿಪಿಐ ಜಯಕುಮಾರ್ ಹಾಗೂ ಪಿಎಸೈ ಘೋರ್ಪಡೆ ಮನಪರಿವರ್ತನಾ ಸಭೆ ನಡೆಸಿದರು.
ಪಿಎಸೈ ಘೋರ್ಪಡೆ ಮಾತನಾಡಿ ನಮ್ಮ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳ್ಳತನ, ರಾಬರಿ ಸೇರಿದಂತೆ ಇನ್ನಿತರ ಚಟುವಟಿಕೆಗಳನ್ನು ಮಾಡಿ ಸಿಕ್ಕಿಬಿದ್ದು ಅಪರಾಧಿಗಳಾಗಿ ಶಿಕ್ಷೆಗೊಳಪಟ್ಟವರ ಪಟ್ಟಿಯಿದ್ದು, ಅವರನ್ನು ಠಾಣೆಯಲ್ಲಿಗೆ ಕರೆಸಿ ಅವರ ಮನಪರಿವರ್ತನೆ ಹಾಗೂ ತಿಳುವಳಿಕೆ ಹೇಳುವ ದೃಷ್ಠಿಯಿಂದ ಈ ಸಭೆ ನಡೆಸಿರುವುದಾಗಿ ತಿಳಿಸಿದರು. ಶಿಕ್ಷೆ ಅನುಭವಿಸಿ ಬಂದವರ ಮೇಲೆ ತಾವು ಸದಾಗಮನ ಮಾಡುತ್ತಿರುತ್ತೇವೆ. ಇಂತಹ ಕೃತ್ಯಗಳನ್ನು ಮಾಡಿದವರು ಮುಂದೆಯೂ ಸಹ ಇಂತಹ ಕೆಲಸದಲ್ಲಿ ತೊಡಗಿಕೊಳ್ಳುವ ಸಾಧ್ಯತೆಗಳು ಹೆಚ್ಚಿದ್ದು, ಆ ನಿಟ್ಟಿನಲ್ಲಿ ಒಂದು ಪಟ್ಟಿಯನ್ನು ಸಿದ್ದ ಮಾಡಿ, ಎಲ್ಲಾದರೂ ಕಾನೂನು ಬಾಹಿರ ಕೃತ್ಯಗಳು ನಡೆದರೆ ಇಅವರನ್ನು ಕರೆಸಿ ವಿಚಾರಿಸುತ್ತೇವೆ ಎಂದರು. ತಮ್ಮ ಠಾಣಾ ವ್ಯಾಪ್ತಿಯಲ್ಲಿ ಈ ರೀತಿಯ ೫೯ ಜನರಿದ್ದು ಅವರನ್ನು ಕರೆಸಿ ಸಭೆ ನಡೆಸಿದ್ದು ಮುಂದೆ ಯಾವುದೇ ರೀತಿಯ ಅಪರಾಧ ಮಾಡದಂತೆ ಎಚ್ಚರಿಸಲು ಹಾಗೂ ಶಿಕ್ಷೆ ಮುಗಿದ ಬಳಿಕ ಇದುವರೆಗೂ ಯಾವುದೇ ಕೇಸುಗಳಲ್ಲಿ ಫಿಟ್ ಆಗದವರನ್ನು ಪಟ್ಟಿಯಿಂದ ತಾತ್ಕಾಲಿಕವಾಗಿ ತೆಗೆಯುತ್ತೇವೆ ಮುಂದೆ ಏನಾದರೂ ಪುನ: ತಪ್ಪೆಸಗಿದರೆ ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಈ ಹಿಂದೆ ವಿವಿಧ ಕೇಸ್ ಗಳಲ್ಲಿ ಅಪರಾಧಿಗಳಾಗಿದ್ದವರ ಮಾಹಿತಿ ಪಡೆದ ಸಿಪಿಐ ಜಯಕುಮಾರ್ ಪಟ್ಟಿಯಲ್ಲಿ ನಮೋದಾಗಿದ್ದವರ ಹೆಸರನ್ನು ಹೇಳಿ ಅವರು ಮಾಡಿದ ತಪ್ಪು ಹಾಗೂ ಅದಕ್ಕೆ ಅನುಭವಿಸಿದ ಶಿಕ್ಷೆ, ಇದುವರೆಗೂ ಯಾವುದೇ ತಪ್ಪು ಮಾಡಿಲ್ಲ ಎಂಬುದನ್ನು ಖಾಚಿತ ಪಡಿಸಿಕೊಂಡು ಅವರ ಫೈಲನ್ನು ತಾತ್ಕಾಲಿಕವಾಗಿ ತೆಗೆದಿಡುವುದಾಗಿ ತಿಳಿಸಿದರು. ಮುಂದಿನ ದಿನಗಳಲ್ಲಿ ಯಾವುದೇ ರೀತಿಯ ತಪ್ಪುಗಳನ್ನು ಎಸಗದೆ ಉತ್ತಮ ರೀತಿಯಲ್ಲಿ ನಡೆದುಕೊಂಡರೆ ಅಂತಹವರ ಫೈಲನ್ನು ಸಹ ತಮ್ಮ ಬ್ಲಾಕ್ ಲಿಸ್ಟ್ ನಿಂದ ತೆಗೆದಿಡುವುದಾಗಿ ತಿಳಿಸಿದರು. ಯಾವುದೇ ರೀತಿಯ ಅಪರಾಧ ಹಾಗೂ ಅರಪಾಧಿಗಳ ಬಗ್ಗೆ ತಮಗೆ ತಿಳಿದರೆ ಠಾಣೆಗೆ ತಕ್ಷಣ ತಿಳಿಸಬೇಕು ಹಾಗೂ ತಮ್ಮ ಗ್ರಾಮಗಳನ್ನು ಬಿಟ್ಟು ಬೇರೆಡೆ ಹೋಗುವುದಾದರೆ ಠಾಣೆಗೆ ಬಂದು ತಾವು ಎಲ್ಲಿಗೆ ಹೋಗುತ್ತಿದ್ದಿರಾ ಎಂಬುದರ ಮಾಹಿತಿ ನೀಡಿ ಹೋಗಬೇಕು ಎಂದರು.ಈ ವೇಳೆ ಎ.ಎಸ್.ಐ ರಾಜಣ್ಣ , ಸಿಬ್ಬಂದಿಗಳಾದ ಕುಮಾರ್,ಅನಿಲ್ ಹಾಗೂ ಇತರರಿದ್ದರು. 

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...