ವಿಷಯಕ್ಕೆ ಹೋಗಿ

ಕನ್ನಡ ನಾಡು-ನುಡಿ ರಕ್ಷಣೆಗೆ ವಿದ್ಯಾರ್ಥಿಗಳು ಮುಂದಾಗಬೇಕು: ಸಾಹಿತಿಗಳಾದ ಬಿಳಿಗೆರೆ ಕೃಷ್ಣಮೂರ್ತಿ

ಕರ್ನಾಟಕದಲ್ಲಿ ಶ್ರೀಮಂತ ಭಾಷೆಯಾಗಿರುವ ಕನ್ನಡ ಇತರೆ ಭಾಷೆಗಳ ಹಾವಳಿ ಹಾಗೂ ನಮ್ಮ ಭಾಷೆಯ ಮೇಲೆ ಕನ್ನಡಿಗರ ನಿರಾಸಕ್ತಿಯಿಂದ ಕನ್ನಡದ ಬಳಕೆ ಕ್ಷೀಣಿಸುತ್ತಿದ್ದು ಕನ್ನಡ ನಾಡುನುಡಿಯನ್ನು ಕಟ್ಟಿಬೆಳೆಸಬೇಕಾಗಿದ್ದು ಅದು ಇಂದಿನ ವಿದ್ಯಾರ್ಥಿಗಳಿಂದ ಸಾಧ್ಯ ಎಂದು ಬಿಎಂಎಸ್ ಕಾಲೇಜಿನ ಪ್ರಾಚಾರ್ಯ ಹಾಗೂ ಸಾಹಿತಿಗಳಾದ ಬಿಳಿಗೆರೆ ಕೃಷ್ಣಮೂರ್ತಿಯವರು ತಿಳಿಸಿದರು.
ಹುಳಿಯಾರು-ಕೆಂಕೆರೆ ಪದವಿಪೂರ್ವ ಕಾಲೇಜಿನಲ್ಲಿ ಹೋಬಳಿ ಕಸಾಪ ವತಿಯಿಂದ ಆಯೋಜಿಸಿದ್ದ ಕನ್ನಡನುಡಿಹಬ್ಬದಲ್ಲಿ ಸಾಹಿತಿ ಬಿಳಿಗೆರೆ ಕೃಷ್ಣಮೂರ್ತಿ ಉಪನ್ಯಾಸ ನೀಡಿದರು.
ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಶತಮಾನೋತ್ಸವ ಸ್ಮರಣೆ ಅಂಗವಾಗಿ ಹುಳಿಯಾರು ಹೋಬಳಿ ಕಸಾಪ ವತಿಯಿಂದ ಹುಳಿಯಾರು-ಕೆಂಕೆರೆ ಪದವಿಪೂರ್ವ ಕಾಲೇಜಿನಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕನ್ನಡ ನುಡಿಹಬ್ಬ ಕಾರ್ಯಕ್ರಮದಲ್ಲಿ ಕನ್ನಡನಾಡು ಕುರಿತು ಉಪನ್ಯಾಸ ನೀಡಿದರು.
ಪ್ರಸ್ತುತದಲ್ಲಿ ಕನ್ನಡವನ್ನು ಉಳಿಸಿ ಎಂದು ಹೇಳುತ್ತಾ ಹಲವಾರು ಸಂಘಟನೆಗಳನ್ನು ಕಟ್ಟಿಕೊಂಡಿರುವ ಪ್ರಮುಖರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಕಳುಹಿಸದೆ ಖಾಸಗಿ ಶಾಲೆಗೆ ಕಳುಹಿಸುತ್ತಿದ್ದಾರೆ ಎಂದು ವಿಷಾದಿಸಿದರು. ಕನ್ನಡದ ರಕ್ಷಣೆ ಎಂದರೆ ಕನ್ನಡ ಭಾಷೆಯ ರಕ್ಷಣೆ ಮಾತ್ರವಲ್ಲ ಅದು ಕರ್ನಾಟಕದ ನೆಲ,ಜಲ,ಮರ ಎಲ್ಲವನ್ನು ರಕ್ಷಿಸುವುದಾಗಬೇಕು ಎಂದರು. ಕನ್ನಡಸಾಹಿತ್ಯಕ್ಕೆ ಸಾವಿರಾರು ವರ್ಷದ ಇತಿಹಾಸವಿದ್ದರೂ ಸಹ ಅದನ್ನು ಹೇಳಿಕೆಗೆ ಮಾತ್ರ ಬಳಸುತ್ತಿದ್ದಾರೆಯೇ ಹೊರತು ಅದರ ಆಚರಣೆ ನಡೆಯುತ್ತಿಲ್ಲ. ಉನ್ನತ ವ್ಯಾಸಂಗ ಮಾಡುತ್ತಾ ಹೋದರೆ ಕನ್ನಡಕ್ಕಿಂತ ಹೆಚ್ಚಾಗಿ ಆಂಗ್ಲಭಾಷೆಯೇ ತುಂಬಿಕೊಂಡಿದೆ ಎಂದರು. ಕನ್ನಡ ಭಾಷೆಯನ್ನು ಉಳಿಸಬೇಕೆಂದರೆ ನಮಗೆ ಇತರ ಭಾಷೆಯ ಅವಶ್ಯಕತೆ ಇದೆ , ಆದರೆ ಅದನ್ನೇ ನಮ್ಮ ಭಾಷೆಯನ್ನಾಗಿ ಮಾಡಿಕೊಂಡು ನಡೆಯಬಾರದು ಎಂದು ಕಿವಿಮಾತು ಹೇಳಿದರು. ಶೈಕ್ಷಣಿಕ,ರಾಜಕಿಯ,ಆರ್ಥಿಕ ರಂಗದಲ್ಲಿ ಹೆಚ್ಚಿನ ಬದಲಾವಣೆಗಳಾಗಬೇಕು ಪ್ರತಿಕ್ಷೇತ್ರದಲ್ಲೂ ಕನ್ನಡ ಭಾಷೆಯ ಬಳಕೆಯಾಗಬೇಕು ಆ ನಿಟ್ಟಿನಲ್ಲಿ ಇಂದಿನ ವಿದ್ಯಾರ್ಥಿಗಳು ನಡೆಯಬೇಕು ಎಂದು ತಿಳಿಸಿದರು.
ಹೋಬಳಿ ಕನ್ನಡ ಸಾಹಿತ್ಯ ಪರಿಷತ್ ನ ಸದಸ್ಯರು ಹಾಗೂ ಸಾಹಿತಿಗಳಾದ ತ.ಶಿ.ಬಸವಮೂರ್ತಿಯವರು ಗಮಕವಾಚನ ಮಾಡಿದ ನಂತರ ಮಾತನಾಡಿ ಶಿಕ್ಷಕನಾದವನು ತಾನು ಅರಿತ ಜ್ಞಾನವನ್ನು ವಿದ್ಯಾರ್ಥಿಗಳಿಗೆ ಸಂಪೂರ್ಣವಾಗಿ ನೀಡಿದಾಗ ಮಾತ್ರ ಆತನ ಕಾರ್ಯ ಯಶಸ್ವಿಯಾಗುತ್ತದೆ ಎಂದರು. ವಿದ್ಯಾರ್ಥಿಗಳು ಗುರುಗಳ ಮಾರ್ಗದರ್ಶನದ ಜೊತೆ ತಮ್ಮದೇ ಆದ ಗುರಿಯೊಂದನ್ನು ಹೊಂದಿ ಸಾಗಿದಾಗ ಯಶಸ್ಸು ಸಿಗುತ್ತದೆ ಎಂದರು.

ಚಿಕ್ಕನಾಯಕನಹಳ್ಳಿಯ ನಿವೃತ್ತ ಕನ್ನಡ ಉಪನ್ಯಾಸಕ ಮಾ.ಚಿ.ಕೈಲಾಸನಾಥ್ ಕಾರ್ಯಕ್ರಮ ಉದ್ಘಾಟಿಸಿದರು.ಉಪನ್ಯಾಸಕರಾದ ಶಶಿಭೂಷಣ್, ಶಿವರುದ್ರಯ್ಯ,ಮಂಜುನಾಥ್ ಕಸಾಪದ ಚಂದ್ರಪ್ಪ, ಬಸವರಾಜು, ಸುದರ್ಶನ್, ರಾಮಯ್ಯ ಸೇರಿದಂತೆ ಇತರರು ಉಪಸ್ಥಿತರಿದ್ದರು. ಇದೇ ವೇಳೆ ೨೦೧೪ನೇ ಸಾಲಿನ ಹತ್ತನೇ ತರಗತಿ ಹಾಗೂ ಪಿಯುಸಿಯ ಕನ್ನಡ ವಿಷಯದಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಿಸಲಾಯಿತು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್...

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...