ವಿಷಯಕ್ಕೆ ಹೋಗಿ

ಮಕ್ಕಳಿಗೆ ಮೊದಲು ವಿದ್ಯಾಭ್ಯಾಸ ಕೊಡಿಸಿ : ಶ್ರೀರಂಗಯ್ಯ

ಸಮಾಜದಲ್ಲಿ ಹಿಂದುಳಿದ ವರ್ಗವೆಂದು ಬಿಂಬಿತವಾಗಿರುವ ದಲಿತ ಸಮುದಾಯದವರು ತಮ್ಮ ಮಕ್ಕಳಿಗೆ ಮೊದಲು ವಿದ್ಯಾಭ್ಯಾಸ ಕೊಡಿಸಿಸುವ ಮೂಲಕ ಅವರನ್ನು ಉತ್ತಮ ಪ್ರಜೆಗಳಾಗಿ ರೂಪುಗೊಳ್ಳುವಂತೆ ಮಾಡಿ ಎಂದು ಹೆಚ್.ಮೇಲನಹಳ್ಳಿಯವರಾಗಿರುವ ಹಾಗೂ ಚಿತ್ರದುರ್ಗದ ಹೆಚ್ಚುವರಿ ಜಿಲ್ಲಾಧಿಕಾರಿಗಳಾದ ಶ್ರೀರಂಗಯ್ಯ ಅವರು ಕರೆ ನೀಡಿದರು.
ಹುಳಿಯಾರಿನಲ್ಲಿ ತಾಲ್ಲೂಕು ದಲಿತ ಸಹಾಯವಾಣಿ ಹಾಗೂ ದಲಿತಪರ ಸಂಘಟನೆಗಳ ಒಕ್ಕೂಟದಡಿಯಲ್ಲಿ ನಡೆದ ಅಂಬೇಡ್ಕರ್ ಪರಿನಿರ್ವಾಣದ ದಿನದ ಕಾರ್ಯಕ್ರಮವನ್ನು ಶ್ರೀರಂಗಯ್ಯ ಅವರು ಉದ್ಘಾಟಿಸಿದರು.
ತಾಲ್ಲೂಕು ದಲಿತ ಸಹಾಯವಾಣಿ ಹಾಗೂ ದಲಿತಪರ ಸಂಘಟನೆಗಳ ಒಕ್ಕೂಟದಡಿಯಲ್ಲಿ ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಭಾನುವಾರ ಆಯೋಜಿಸಿದ್ದ ಅಂಬೇಡ್ಕರ್ ಪರಿನಿರ್ವಾಣದ ದಿನ , ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ಹಾಗೂ ತಮಟೆ ಸ್ಪರ್ಧೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ದಲಿತ ಸಮುದಾಯದವರು ಇಂದಿಗೂ ಸಹ ಶೈಕ್ಷಣಿಕ ರಂಗದಿಂದ ಹಿಂದುಳಿದಿದ್ದು ಸಮಾಜಮುಖಿಗೆ ಬರುವುದರಲ್ಲಿ ವಿಫಲರಾಗುತ್ತಿದ್ದಾರೆಂದು ವಿಷಾದಿಸಿದರು. ಗ್ರಾಮೀಣ ಭಾಗದ ಅನೇಕ ಜನರು ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸುವುದರ ಬದಲು ತಮ್ಮ ಜೊತೆ ಕೂಲಿ ಮಾಡಲು ಕರೆದೊಯ್ಯುತ್ತಾರೆ ಇದರಿಂದ ಮಕ್ಕಳ ಉಜ್ವಲಭವಿಷ್ಯ ಹಾಳಾಗುತ್ತಿದೆ ಎಂದರು.
ಹುಳಿಯಾರಿನಲ್ಲಿ ತಾಲ್ಲೂಕು ದಲಿತ ಸಹಾಯವಾಣಿ ಹಾಗೂ ದಲಿತಪರ ಸಂಘಟನೆಗಳ ಒಕ್ಕೂಟದಡಿಯಲ್ಲಿ ನಡೆದ ತಾಲ್ಲೂಕು ಮಟ್ಟದ ತಮಟೆ ಸ್ಪರ್ಧೆಯಲ್ಲಿ ಕವಿ ಕೆ.ಬಿ.ಸಿದ್ದಯ್ಯ ಅವರನ್ನು ಸನ್ಮಾನಿಸಲಾಯಿತು.
ದಲಿತರ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಹಲವಾರು ಸಂಘಟನೆಗಳಿವೆ ಆದರೆ ಅವುಗಳ ನಡುವೆ ಬಿರುಕುಂಟಾಗಿ ಒಗ್ಗಟ್ಟಿಲ್ಲದಂತಾಗಿದೆ. ಮೊದಲು ಸಂಘಟನೆಗಳು ಬಲಯುತವಾಗಬೇಕು ಎಂದು ತಿಳಿಸಿದರಲ್ಲದೆ, ಹಿಂದುಳಿದವರ ಏಳ್ಗೆಗಾಗಿ ಸರ್ಕಾರ ಅನೇಕ ಸೌಲಭ್ಯಗಳನ್ನು ಕಲ್ಪಿಸಿದ್ದು ಅವುಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಿ ಹಾಗೂ ತಮ್ಮ ಸಮುದಾಯದಲ್ಲಿ ತಿಳಿದವರು ಯಾರೊ ಒಬ್ಬರು ಈ ಸವಲತ್ತುಗಳನ್ನು ಪಡೆಯುವ ಬದಲು ಎಲ್ಲರಿಗೂ ಇವುಗಳನ್ನು ದೊರೆಯುವಂತೆ ಮಾಡಿ ಎಂದು ಕಿವಿಮಾತು ಹೇಳಿದರು.
ಖ್ಯಾತ ಕವಿಗಳಾದ ಕೆ.ಬಿ.ಸಿದ್ದಯ್ಯನವರು ಮಾತನಾಡಿ, ಅಂಬೇಡ್ಕರ್ ಅವರ ಆದರ್ಶಗಳ ಪಾಲನೆಯ ಜೊತೆಗೆ, ದಲಿತ ಸಮುದಾಯದಲ್ಲಿ ಹಿಂದುಳಿದವರನ್ನು ವಿದ್ಯಾವಂತರಾದ ನಾವುಗಳು ನಮ್ಮ ಜೊತೆ ಕರೆದೊಯ್ಯಬೇಕು ಎಂದರು. ಸಮಾಜದಲ್ಲಿ ಹಿಂದುಳಿದ ಎಲ್ಲಾ ಸಮುದಾಯದವರ ಅಭಿವೃದ್ಧಿಗಾಗಿ ಅಂಬೇಡ್ಕರ್ ಸಂವಿಧಾನ ರಚಿಸಿದ್ದು,ಅವರ ಚಿಂತನೆ ನಿಲುವುಗಳ ಅಳವಡಿಕೆಯಾಗಬೇಕಿದೆ ಎಂದು ತಿಳಿಸಿದರು.
ಜಿ.ಪಂ.ಅಧ್ಯಕ್ಷ ವೈ.ಎಚ್. ಹುಚ್ಚಯ್ಯ , ಜಿ.ಪಂ.ಸದಸ್ಯೆ ಮಂಜುಳಾ, ಗ್ರಾ.ಪಂ.ಅಧ್ಯಕ್ಷೆ ಕಾಳಮ್ಮ,ಜಿಲ್ಲಾ ದಲಿತ ಸಾಹಿತ್ಯ ಪರಿಷತ್ ನ ಡಾ.ಜಿ.ಸಂಜಿವರಾಯ, ದಲಿತ ಹೋರಾಟಗಾರ ನಾರಾಯಣರಾಜು, ಚನ್ನಬಸವಯ್ಯ,ಲಿಂಗರಾಜು, ವಕೀಲರಾದ ರಾಮಚಂದ್ರಯ್ಯ, ಸದಾಶಿವಯ್ಯ,ಗ್ರಾ.ಪಂ.ಸದಸ್ಯೆ ದಾಕ್ಷಾಯಿಣಿ, ಡಿ.ಎಸ್.ಎಸ್.ನ ಹನುಮಂತಯ್ಯ, ಹಾಗಲವಾಡಿ ಚಿಕ್ಕಣ್ಣ, ಎ.ಎಸ್.ಐ .ರಾಜಣ್ಣ , ಬೆಸ್ಕಾಂನ ಗವಿರಂಗಯ್ಯ, ಶಿಕ್ಷಕರಾದ ನಂದವಾಡಗಿ,ಮಲ್ಲೇಶ್ ಸೇರಿದಂತೆ ಇತರರಿದ್ದರು.

ಇದೇ ವೇಳೆ ಪರಿಶಿಷ್ಟ ಜಾತಿ ಮತ್ತು ವರ್ಗಗಳ ೨೦೧೩-೧೪ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿಯಲ್ಲಿ ಹೆಚ್ಚು ಅಂಕಪಡೆದ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.